• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟಿಗೆ ಸೂಕ್ತವಾಗುವುದೇ ಪಂಜಾಬ್ ಸೂತ್ರ?

Shivakumar A by Shivakumar A
July 31, 2021
in ದೇಶ, ರಾಜಕೀಯ
0
ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟಿಗೆ ಸೂಕ್ತವಾಗುವುದೇ ಪಂಜಾಬ್ ಸೂತ್ರ?
Share on WhatsAppShare on FacebookShare on Telegram

ಪಂಜಾಬ್ ಕಾಂಗ್ರೆಸ್ಸಿನಲ್ಲಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹಾಗೂ ನವಜೋತ್ ಸಿಂಗ್ ಸಿಧು ನಡುವೆ ಬಿಕ್ಕಟ್ಟು ಉಂಟಾದಾಗ, ಕಾಂಗ್ರೆಸ್ ಹೈಕಮಾಂಡ್ ಅನುಸರಿಸಿದ ಸಂಧಾನ ಸೂತ್ರ ಯಶಸ್ವಿಯಾಗಿತ್ತು. ಸಿಧುಗೆ ಪಿಸಿಸಿ ಅಧ್ಯಕ್ಷ ಸ್ಥಾನ ನೀಡಿ, ಇಬ್ಬರೂ ನಾಯಕರು ಸರಿಸಮಾನರು ಅಂತ ಹೈಕಮಾಂಡ್ ಹೇಳಿತ್ತು. ಆದರೆ, ಇದೇ ಸಂಧಾನ ಸೂತ್ರ ರಾಜಸ್ಥಾನದಲ್ಲಿ ಯಶಸ್ವಿಯಾಗುವುದು ಸಂಶಯವಾಗಿದೆ.

ADVERTISEMENT

ಕಳೆದ ವರ್ಷದಿಂದ ಕಾಂಗ್ರೆಸನಪ್ರಭಾವಿ ನಾಯಕರಾದ ರಾಜಸ್ಥಾನ್ ಸಿಎಂ ಅಶೋಕ್ ಗೆಹ್ಲೋಟ್ ಹಾಗೂ ಸಚಿನ್ ಪೈಲಟ್ ನಡುವಿನ ವೈಮನಸ್ಸು ಪಕ್ಷವನ್ನು ಮತ್ತಷ್ಟು ಪಾತಾಳಕ್ಕೆ ಕೊಂಡೊಯ್ಯುತ್ತಿದೆ. ಕಳೆದ ಬಾರಿ ಸರ್ಕಾರ ಪತನವಾಗುವುದರಿಂದ ಕೂದಲೆಳೆಯ ಅಂತರದಲ್ಲಿ ಹೈಕಮಾಂಡ್ ಕಾಪಾಡಿತ್ತು. ಈ ಬಾರಿ ಹಠಕ್ಕೆ ಬಿದ್ದಿರುವ ಗೆಹ್ಲೋಟ್ ಹಾಗು ಪೈಲಟ್ ನಡುವಿನ ಹಗ್ಗಜಗ್ಗಾಟ ಮುಂಬರುವ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್’ನ ಪಾಲಿಗೆ ಬಿಸಿ ತುಪ್ಪವಾಗಿ ಪರಿಣಮಿಸಲಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿಯಾಗಿರುವ ಅಜಯ್ ಮಾಕೆನ್ ಜೈಪುರದಲ್ಲಿ ಬೀಡು ಬಿಟ್ಟು ಕಾಂಗ್ರೆಸ್ ನಾಯಕರೊಂದಿಗೆ ಸತತ ಎರಡು ದಿನಗಳ ಕಾಲ ಸಭೆ ನಡೆಸಿದ್ದಾರೆ. ಈ ವಾರದಲ್ಲಿ ರಾಜ್ಯ ಸಚಿವ ಸಂಪುಟದ ವಿಸ್ತರಣೆಯನ್ನು ಮಾಡಲಾಗುವುದು ಎಂಬ ಆಶ್ವಾಸನೆ ನೀಡಿದ್ದರೂ, ಅದೂ ಸಫಲವಾಗಿಲ್ಲ.

ಈಗಾಗಲೇ ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನ ಪಡೆದಿರುವ ಸಚಿನ್ ಪೈಲಟ್ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ರಾಜಸ್ಥಾನ ಡಿಸಿಎಂ ಕೂಡಾ ಆಗಿದ್ದ ಅವರು, ಗೆಹ್ಲೋಟ್ ನಾಯಕತ್ವದ ವಿರುದ್ದ ಸಿಡಿದೆದ್ದಿದ್ದಾರೆ.
ರಾಜಸ್ಥಾನದ ಕಾಂಗ್ರೆಸ್ ಶಾಸಕರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿರುವ ಹೈಕಮಾಂಡ್ ಪ್ರತಿನಿಧಿಗಳು, ರಾಜ್ಯದ ಆಡಳಿತ ವ್ಯವಸ್ಥೆಯ ಕುರಿತಾಗಿ ಶಾಸಕರ ಅಭಿಪ್ರಾಯವನ್ನು ಕಲೆ ಹಾಕಿದ್ದಾರೆ. ಮುಂದಿನ ಚುನಾವಣೆಗೆ ಯಾವ ರೀತಿ ಸಜ್ಜಾಗಬೇಕೆಂಬುದರ ಕುರಿತಾಗಿಯೂ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

ಇದಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿರುವ ಅಜಯ್ ಮಾಕೆನ್, ಸಚಿವ ಸಂಪುಟ ವಿಸ್ತರಣೆ, ಪಕ್ಷದ ರಾಜ್ಯಾಧ್ಯಕ್ಷ, ಜಿಲ್ಲಾಧ್ಯಕ್ಷ ಹಾಗೂ ಬ್ಲಾಕ್ ಅಧ್ಯಕ್ಷರ ಆಯ್ಕೆ ಮತ್ತು ನಿಗಮ ಮಂಡಳಿಗಳ ಅಧ್ಯಕ್ಷರ ಆಯ್ಕೆ ಕುರಿತು ಚರ್ಚೆ ನಡೆಸಲಾಗಿದೆ. ಎಲ್ಲರೂ ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ದರಾಗಿರುತ್ತೇವೆ ಎಂದು ಭರವಸೆ ನೀಡಿದ್ದಾರೆಂದು ಹೇಳಲಾಗುತ್ತಿದೆ.

ಕಳೆದ ವರ್ಷ ಸರ್ಕಾರ ಉರುಳುವ ಸ್ಥಿತಿ ಎದುರಾಗಿದ್ದಾಗ, ಪಕ್ಷೇತರ ಶಾಸಕರು ಹಾಗೂ ಆರು ಜನ ಬಿ ಎಸ್ ಪಿ ಶಾಸಕರ ಸಹಾಯದಿಂದ ಸರ್ಕಾರವನ್ನು ಉಳಿಸುವಲ್ಲಿ ಗೆಹ್ಲೋಟ್ ಯಶಸ್ವಿಯಾಗಿದ್ದರು. ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಇವರಿಗೂ ಸ್ಥಾನ ನೀಡಬೇಕಾದ ಅನಿವಾರ್ಯತೆ ಗೆಹ್ಲೋಟ್ ಅವರಿಗೆ ಒದಗಿ ಬಂದಿದೆ. ಇದರೊಂದಿಗೆ ಸಚಿನ್ ಪೈಲಟ್ ಬಣದ ಶಾಸಕರು ಕೂಡಾ ಸಿಂಹಪಾಲಿಗೆ ಬೇಡಿಕೆಯಿಟ್ಟಿದ್ದಾರೆ.

ಸದ್ಯಕ್ಕೆ ಹೈಕಮಾಂಡ್, ಹಿರಿಯ ನಾಯಕರಾದ ಅಶೋಕ್ ಗೆಹ್ಲೋಟ್ ಅವರ ತೀರ್ಮಾನಕ್ಕೆ ವಿರುದ್ದವಾಗಿ ಹೋಗುವ ಸೂಚನೆಗಳು ಕಾಣಿಸುತ್ತಿಲ್ಲ. ಹೆಚ್ಚೆಂದರೆ, ಸಚಿನ್ ಪೈಲಟ್ ಬಣದ ಮೂವರು ಶಾಸಕರಿಗೆ ಸಂಪುಟ ಸೇರುವ ಅವಕಾಶ ಒದಗಿ ಬರಲಿದೆ. ಈ ಮೂವರನ್ನು ಕೂಡಾ ಗೆಹ್ಲೋಟ್ ಅವರೇ ಆಯ್ಕೆ ಮಾಡಲಿದ್ದಾರೆ. ಸದ್ಯಕ್ಕೆ ಪೈಲಟ್ ಪರವಾಗಿ ಹೆಚ್ಚಿನ ಬೆಂಬಲ ಇಲ್ಲದ ಕಾರಣ, ಅವರ ಪಾಲು ಕಡಿಮೆಯಾಗಲಿದೆ.

ಹೀಗಾದಲ್ಲಿ, ಸಚಿನ್ ಪೈಲಟ್ ಅವರ ರಾಜಕೀಯ ಬಲ ಮತ್ತಷ್ಟು ಕುಗ್ಗಲಿದೆ. ಕಳೆದ ವರ್ಷ 18 ಶಾಸಕರೊಂದಿಗೆ ಸರ್ಕಾರದ ವಿರುದ್ದ ಹೋದ ಸಂದರ್ಭದಲ್ಲಿ ಅವರು ಉಪ ಮುಖ್ಯಮಂತ್ರಿಯಾಗಿದ್ದರು ಮತ್ತು ಪಿಸಿಸಿ ಅಧ್ಯಕ್ಷ ಸ್ಥಾನವನ್ನೂ ಹೊಂದಿದ್ದರು. ಇವರ ಪಾಳೆಯದ ಇಬ್ಬರು ಶಾಸಕರಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಗಿತ್ತು.
ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆದ ಬಳಿಕ, ಈ ಮೂವರನ್ನೂ ಅವರ ಸ್ಥಾನದಿಂದ ವಜಾಗೊಳಿಸಲಾಗಿತ್ತು.

ಸಚಿನ್ ಪೈಲಟ್ ಅವರಿಗೆ ಹೈಕಮಾಂಡ್ ಯಾವುದೇ ರಾಜಕೀಯ ಅಧಿಕಾರವನ್ನು ಇನ್ನೂ ನೀಡಿಲ್ಲ ಎಂಬುದು ಗಮನಿಸಬೇಕಾದ ವಿಚಾರ. ಪರಿಸ್ಥಿತಿ ಹೀಗಿರುವಾಗ, ಗೆಹ್ಲೋಟ್ ಅವರು ತಮ್ಮ ಪಟ್ಟನ್ನು ಇನ್ನಷ್ಟು ಬಿಗಿಗೊಳಿಸಿದ್ದಲ್ಲಿ, ಪೈಲಟ್ ಅವರು ತಮ್ಮ ರಾಜಕೀಯ ಸಾಮರ್ಥ್ಯವನ್ನು ಮತ್ತಷ್ಟು ಕಳೆದುಕೊಳ್ಳುವ ಸಾಧ್ಯತೆಯಿದೆ.

ಪಂಜಾಬ್ ಕಾಂಗ್ರೆಸ್ಸಿನಲ್ಲಿ ಬಿಕ್ಕಟ್ಟು ಉಂಟಾದಾಗ ಇದ್ದಂತಹ ಬೇಡಿಕೆಗಳು ಮತ್ತು ಈಗ ಇರುವಂತಹ ಬೇಡಿಕೆಗಳು ಸಂಪೂರ್ಣ ಭಿನ್ನವಾಗಿವೆ. ಸಿಧು ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ ನಂತರ ಅಲ್ಲಿನ ಬಿಕ್ಕಟ್ಟು ಶಮನವಾಗಿದೆ. ಆದರೆ, ರಾಜಸ್ಥಾನದಲ್ಲಿ ಸಚಿನ್ ಪೈಲಟ್ ಸಿಎಂ ಸ್ಥಾನದ ಆಕಾಂಕ್ಷಿ. ಪ್ರಸ್ತುತ ನೆರವೇರದಿರುವ ಬೇಡಿಕೆಯೊಂದನ್ನು ಹೈಕಮಾಂಡ್ ಮುಂದೆ ಇಡಲಾಗಿದೆ.

Tags: Amarinder SinghAshok GehlotCongress PartyK C Venugopalnavjot singh sidhuPunjab StateSachin pilot
Previous Post

ರಾಜ್ಯಸಭಾ ಅಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲಿವೆಯೇ ವಿಪಕ್ಷಗಳು?

Next Post

ಕೇರಳ,ಮಹಾರಾಷ್ಟ್ರ ಪ್ರಯಾಣಿಕರು ಲಸಿಕೆ ಪಡೆದರು / ಪಡೆಯದಿದ್ದರೂ RT-PCR ನೆಗೆಟಿವ್ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

Related Posts

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್
Top Story

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
0

ನವದೆಹಲಿ: ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಡಿಸಿಎಂ ಡಿ.ಕೆ....

Read moreDetails
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

December 14, 2025
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
Next Post
ಕೇರಳ,ಮಹಾರಾಷ್ಟ್ರ ಪ್ರಯಾಣಿಕರು ಲಸಿಕೆ ಪಡೆದರು / ಪಡೆಯದಿದ್ದರೂ RT-PCR ನೆಗೆಟಿವ್ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಕೇರಳ,ಮಹಾರಾಷ್ಟ್ರ ಪ್ರಯಾಣಿಕರು ಲಸಿಕೆ ಪಡೆದರು / ಪಡೆಯದಿದ್ದರೂ RT-PCR ನೆಗೆಟಿವ್ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

Please login to join discussion

Recent News

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌
Top Story

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

by ಪ್ರತಿಧ್ವನಿ
December 14, 2025
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್
Top Story

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?
Top Story

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

by ಪ್ರತಿಧ್ವನಿ
December 14, 2025
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್
Top Story

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ
Top Story

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

by ಪ್ರತಿಧ್ವನಿ
December 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

December 14, 2025
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada