• Home
  • About Us
  • ಕರ್ನಾಟಕ
Thursday, June 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟಿಗೆ ಸೂಕ್ತವಾಗುವುದೇ ಪಂಜಾಬ್ ಸೂತ್ರ?

Shivakumar A by Shivakumar A
July 31, 2021
in ದೇಶ, ರಾಜಕೀಯ
0
ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟಿಗೆ ಸೂಕ್ತವಾಗುವುದೇ ಪಂಜಾಬ್ ಸೂತ್ರ?
Share on WhatsAppShare on FacebookShare on Telegram

ಪಂಜಾಬ್ ಕಾಂಗ್ರೆಸ್ಸಿನಲ್ಲಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹಾಗೂ ನವಜೋತ್ ಸಿಂಗ್ ಸಿಧು ನಡುವೆ ಬಿಕ್ಕಟ್ಟು ಉಂಟಾದಾಗ, ಕಾಂಗ್ರೆಸ್ ಹೈಕಮಾಂಡ್ ಅನುಸರಿಸಿದ ಸಂಧಾನ ಸೂತ್ರ ಯಶಸ್ವಿಯಾಗಿತ್ತು. ಸಿಧುಗೆ ಪಿಸಿಸಿ ಅಧ್ಯಕ್ಷ ಸ್ಥಾನ ನೀಡಿ, ಇಬ್ಬರೂ ನಾಯಕರು ಸರಿಸಮಾನರು ಅಂತ ಹೈಕಮಾಂಡ್ ಹೇಳಿತ್ತು. ಆದರೆ, ಇದೇ ಸಂಧಾನ ಸೂತ್ರ ರಾಜಸ್ಥಾನದಲ್ಲಿ ಯಶಸ್ವಿಯಾಗುವುದು ಸಂಶಯವಾಗಿದೆ.

ADVERTISEMENT

ಕಳೆದ ವರ್ಷದಿಂದ ಕಾಂಗ್ರೆಸನಪ್ರಭಾವಿ ನಾಯಕರಾದ ರಾಜಸ್ಥಾನ್ ಸಿಎಂ ಅಶೋಕ್ ಗೆಹ್ಲೋಟ್ ಹಾಗೂ ಸಚಿನ್ ಪೈಲಟ್ ನಡುವಿನ ವೈಮನಸ್ಸು ಪಕ್ಷವನ್ನು ಮತ್ತಷ್ಟು ಪಾತಾಳಕ್ಕೆ ಕೊಂಡೊಯ್ಯುತ್ತಿದೆ. ಕಳೆದ ಬಾರಿ ಸರ್ಕಾರ ಪತನವಾಗುವುದರಿಂದ ಕೂದಲೆಳೆಯ ಅಂತರದಲ್ಲಿ ಹೈಕಮಾಂಡ್ ಕಾಪಾಡಿತ್ತು. ಈ ಬಾರಿ ಹಠಕ್ಕೆ ಬಿದ್ದಿರುವ ಗೆಹ್ಲೋಟ್ ಹಾಗು ಪೈಲಟ್ ನಡುವಿನ ಹಗ್ಗಜಗ್ಗಾಟ ಮುಂಬರುವ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್’ನ ಪಾಲಿಗೆ ಬಿಸಿ ತುಪ್ಪವಾಗಿ ಪರಿಣಮಿಸಲಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿಯಾಗಿರುವ ಅಜಯ್ ಮಾಕೆನ್ ಜೈಪುರದಲ್ಲಿ ಬೀಡು ಬಿಟ್ಟು ಕಾಂಗ್ರೆಸ್ ನಾಯಕರೊಂದಿಗೆ ಸತತ ಎರಡು ದಿನಗಳ ಕಾಲ ಸಭೆ ನಡೆಸಿದ್ದಾರೆ. ಈ ವಾರದಲ್ಲಿ ರಾಜ್ಯ ಸಚಿವ ಸಂಪುಟದ ವಿಸ್ತರಣೆಯನ್ನು ಮಾಡಲಾಗುವುದು ಎಂಬ ಆಶ್ವಾಸನೆ ನೀಡಿದ್ದರೂ, ಅದೂ ಸಫಲವಾಗಿಲ್ಲ.

ಈಗಾಗಲೇ ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನ ಪಡೆದಿರುವ ಸಚಿನ್ ಪೈಲಟ್ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ರಾಜಸ್ಥಾನ ಡಿಸಿಎಂ ಕೂಡಾ ಆಗಿದ್ದ ಅವರು, ಗೆಹ್ಲೋಟ್ ನಾಯಕತ್ವದ ವಿರುದ್ದ ಸಿಡಿದೆದ್ದಿದ್ದಾರೆ.
ರಾಜಸ್ಥಾನದ ಕಾಂಗ್ರೆಸ್ ಶಾಸಕರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿರುವ ಹೈಕಮಾಂಡ್ ಪ್ರತಿನಿಧಿಗಳು, ರಾಜ್ಯದ ಆಡಳಿತ ವ್ಯವಸ್ಥೆಯ ಕುರಿತಾಗಿ ಶಾಸಕರ ಅಭಿಪ್ರಾಯವನ್ನು ಕಲೆ ಹಾಕಿದ್ದಾರೆ. ಮುಂದಿನ ಚುನಾವಣೆಗೆ ಯಾವ ರೀತಿ ಸಜ್ಜಾಗಬೇಕೆಂಬುದರ ಕುರಿತಾಗಿಯೂ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

ಇದಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿರುವ ಅಜಯ್ ಮಾಕೆನ್, ಸಚಿವ ಸಂಪುಟ ವಿಸ್ತರಣೆ, ಪಕ್ಷದ ರಾಜ್ಯಾಧ್ಯಕ್ಷ, ಜಿಲ್ಲಾಧ್ಯಕ್ಷ ಹಾಗೂ ಬ್ಲಾಕ್ ಅಧ್ಯಕ್ಷರ ಆಯ್ಕೆ ಮತ್ತು ನಿಗಮ ಮಂಡಳಿಗಳ ಅಧ್ಯಕ್ಷರ ಆಯ್ಕೆ ಕುರಿತು ಚರ್ಚೆ ನಡೆಸಲಾಗಿದೆ. ಎಲ್ಲರೂ ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ದರಾಗಿರುತ್ತೇವೆ ಎಂದು ಭರವಸೆ ನೀಡಿದ್ದಾರೆಂದು ಹೇಳಲಾಗುತ್ತಿದೆ.

ಕಳೆದ ವರ್ಷ ಸರ್ಕಾರ ಉರುಳುವ ಸ್ಥಿತಿ ಎದುರಾಗಿದ್ದಾಗ, ಪಕ್ಷೇತರ ಶಾಸಕರು ಹಾಗೂ ಆರು ಜನ ಬಿ ಎಸ್ ಪಿ ಶಾಸಕರ ಸಹಾಯದಿಂದ ಸರ್ಕಾರವನ್ನು ಉಳಿಸುವಲ್ಲಿ ಗೆಹ್ಲೋಟ್ ಯಶಸ್ವಿಯಾಗಿದ್ದರು. ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಇವರಿಗೂ ಸ್ಥಾನ ನೀಡಬೇಕಾದ ಅನಿವಾರ್ಯತೆ ಗೆಹ್ಲೋಟ್ ಅವರಿಗೆ ಒದಗಿ ಬಂದಿದೆ. ಇದರೊಂದಿಗೆ ಸಚಿನ್ ಪೈಲಟ್ ಬಣದ ಶಾಸಕರು ಕೂಡಾ ಸಿಂಹಪಾಲಿಗೆ ಬೇಡಿಕೆಯಿಟ್ಟಿದ್ದಾರೆ.

ಸದ್ಯಕ್ಕೆ ಹೈಕಮಾಂಡ್, ಹಿರಿಯ ನಾಯಕರಾದ ಅಶೋಕ್ ಗೆಹ್ಲೋಟ್ ಅವರ ತೀರ್ಮಾನಕ್ಕೆ ವಿರುದ್ದವಾಗಿ ಹೋಗುವ ಸೂಚನೆಗಳು ಕಾಣಿಸುತ್ತಿಲ್ಲ. ಹೆಚ್ಚೆಂದರೆ, ಸಚಿನ್ ಪೈಲಟ್ ಬಣದ ಮೂವರು ಶಾಸಕರಿಗೆ ಸಂಪುಟ ಸೇರುವ ಅವಕಾಶ ಒದಗಿ ಬರಲಿದೆ. ಈ ಮೂವರನ್ನು ಕೂಡಾ ಗೆಹ್ಲೋಟ್ ಅವರೇ ಆಯ್ಕೆ ಮಾಡಲಿದ್ದಾರೆ. ಸದ್ಯಕ್ಕೆ ಪೈಲಟ್ ಪರವಾಗಿ ಹೆಚ್ಚಿನ ಬೆಂಬಲ ಇಲ್ಲದ ಕಾರಣ, ಅವರ ಪಾಲು ಕಡಿಮೆಯಾಗಲಿದೆ.

ಹೀಗಾದಲ್ಲಿ, ಸಚಿನ್ ಪೈಲಟ್ ಅವರ ರಾಜಕೀಯ ಬಲ ಮತ್ತಷ್ಟು ಕುಗ್ಗಲಿದೆ. ಕಳೆದ ವರ್ಷ 18 ಶಾಸಕರೊಂದಿಗೆ ಸರ್ಕಾರದ ವಿರುದ್ದ ಹೋದ ಸಂದರ್ಭದಲ್ಲಿ ಅವರು ಉಪ ಮುಖ್ಯಮಂತ್ರಿಯಾಗಿದ್ದರು ಮತ್ತು ಪಿಸಿಸಿ ಅಧ್ಯಕ್ಷ ಸ್ಥಾನವನ್ನೂ ಹೊಂದಿದ್ದರು. ಇವರ ಪಾಳೆಯದ ಇಬ್ಬರು ಶಾಸಕರಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಗಿತ್ತು.
ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆದ ಬಳಿಕ, ಈ ಮೂವರನ್ನೂ ಅವರ ಸ್ಥಾನದಿಂದ ವಜಾಗೊಳಿಸಲಾಗಿತ್ತು.

ಸಚಿನ್ ಪೈಲಟ್ ಅವರಿಗೆ ಹೈಕಮಾಂಡ್ ಯಾವುದೇ ರಾಜಕೀಯ ಅಧಿಕಾರವನ್ನು ಇನ್ನೂ ನೀಡಿಲ್ಲ ಎಂಬುದು ಗಮನಿಸಬೇಕಾದ ವಿಚಾರ. ಪರಿಸ್ಥಿತಿ ಹೀಗಿರುವಾಗ, ಗೆಹ್ಲೋಟ್ ಅವರು ತಮ್ಮ ಪಟ್ಟನ್ನು ಇನ್ನಷ್ಟು ಬಿಗಿಗೊಳಿಸಿದ್ದಲ್ಲಿ, ಪೈಲಟ್ ಅವರು ತಮ್ಮ ರಾಜಕೀಯ ಸಾಮರ್ಥ್ಯವನ್ನು ಮತ್ತಷ್ಟು ಕಳೆದುಕೊಳ್ಳುವ ಸಾಧ್ಯತೆಯಿದೆ.

ಪಂಜಾಬ್ ಕಾಂಗ್ರೆಸ್ಸಿನಲ್ಲಿ ಬಿಕ್ಕಟ್ಟು ಉಂಟಾದಾಗ ಇದ್ದಂತಹ ಬೇಡಿಕೆಗಳು ಮತ್ತು ಈಗ ಇರುವಂತಹ ಬೇಡಿಕೆಗಳು ಸಂಪೂರ್ಣ ಭಿನ್ನವಾಗಿವೆ. ಸಿಧು ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ ನಂತರ ಅಲ್ಲಿನ ಬಿಕ್ಕಟ್ಟು ಶಮನವಾಗಿದೆ. ಆದರೆ, ರಾಜಸ್ಥಾನದಲ್ಲಿ ಸಚಿನ್ ಪೈಲಟ್ ಸಿಎಂ ಸ್ಥಾನದ ಆಕಾಂಕ್ಷಿ. ಪ್ರಸ್ತುತ ನೆರವೇರದಿರುವ ಬೇಡಿಕೆಯೊಂದನ್ನು ಹೈಕಮಾಂಡ್ ಮುಂದೆ ಇಡಲಾಗಿದೆ.

Tags: Amarinder SinghAshok GehlotCongress PartyK C Venugopalnavjot singh sidhuPunjab StateSachin pilot
Previous Post

ರಾಜ್ಯಸಭಾ ಅಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲಿವೆಯೇ ವಿಪಕ್ಷಗಳು?

Next Post

ಕೇರಳ,ಮಹಾರಾಷ್ಟ್ರ ಪ್ರಯಾಣಿಕರು ಲಸಿಕೆ ಪಡೆದರು / ಪಡೆಯದಿದ್ದರೂ RT-PCR ನೆಗೆಟಿವ್ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

Related Posts

ಅಂಕಣ

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 12, 2025
0

ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಜಾಥಾ ಕಾರ್ಯಕ್ರಮದಲ್ಲಿ ಸಚಿವ ಸಂತೋಷ್‌ ಲಾಡ್‌.ಜಿಲ್ಲಾ ಮಟ್ಟದ ಅಧಿಕಾರಿಗಳು ಜಾಗೃತರಾಗಿ ಕೆಲಸ ಮಾಡಿಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾರ್ಮಿಕ‌ ಇಲಾಖೆಯ...

Read moreDetails

ಡಿಸಿಎಂ DK ಬೆಂಗಳೂರು, ರಾಮನಗರ, ಕನಕಪುರಕ್ಕೆ ಬೇಲಿ ಹಾಕ್ಕೊಂಡವ್ರೆ!

June 12, 2025

ವರ್ಗಾವಣೆಗೊಂಡಿದ್ದ ಐಪಿಎಸ್ ಹೇಮಂತ್ ನಿಂಬಾಳ್ಕರ್ 16ದಿನಗಳ ವಿದೇಶ ಪ್ರವಾಸಕ್ಕೆ ರಜೆ.

June 11, 2025

ರಾಜ್ಯದಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ಸಾವುಗಳಾಗಿಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

June 11, 2025
ಕುಸುಮ್‌ ಸಿಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

ಕುಸುಮ್‌ ಸಿಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

June 11, 2025
Next Post
ಕೇರಳ,ಮಹಾರಾಷ್ಟ್ರ ಪ್ರಯಾಣಿಕರು ಲಸಿಕೆ ಪಡೆದರು / ಪಡೆಯದಿದ್ದರೂ RT-PCR ನೆಗೆಟಿವ್ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಕೇರಳ,ಮಹಾರಾಷ್ಟ್ರ ಪ್ರಯಾಣಿಕರು ಲಸಿಕೆ ಪಡೆದರು / ಪಡೆಯದಿದ್ದರೂ RT-PCR ನೆಗೆಟಿವ್ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

Please login to join discussion

Recent News

Top Story

ಡಿಸಿಎಂ DK ಬೆಂಗಳೂರು, ರಾಮನಗರ, ಕನಕಪುರಕ್ಕೆ ಬೇಲಿ ಹಾಕ್ಕೊಂಡವ್ರೆ!

by ಪ್ರತಿಧ್ವನಿ
June 12, 2025
ಹುಚ್ಚು ರೀಲ್ಸ್ ರಾಣಿಯರ ಜಮಾನದಲ್ಲಿ,ಒಳ್ಳೆಯವರು ಕಾಣುವುದು ಕೆಲವರು
Top Story

ಹುಚ್ಚು ರೀಲ್ಸ್ ರಾಣಿಯರ ಜಮಾನದಲ್ಲಿ,ಒಳ್ಳೆಯವರು ಕಾಣುವುದು ಕೆಲವರು

by ಪ್ರತಿಧ್ವನಿ
June 12, 2025
Top Story

ವರ್ಗಾವಣೆಗೊಂಡಿದ್ದ ಐಪಿಎಸ್ ಹೇಮಂತ್ ನಿಂಬಾಳ್ಕರ್ 16ದಿನಗಳ ವಿದೇಶ ಪ್ರವಾಸಕ್ಕೆ ರಜೆ.

by ಪ್ರತಿಧ್ವನಿ
June 11, 2025
Top Story

ರಾಜ್ಯದಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ಸಾವುಗಳಾಗಿಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

by ಪ್ರತಿಧ್ವನಿ
June 11, 2025
ಕುಸುಮ್‌ ಸಿಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ
Top Story

ಕುಸುಮ್‌ ಸಿಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
June 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಡಿಸಿಎಂ DK ಬೆಂಗಳೂರು, ರಾಮನಗರ, ಕನಕಪುರಕ್ಕೆ ಬೇಲಿ ಹಾಕ್ಕೊಂಡವ್ರೆ!

June 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada