ರಾಮನಗರ: ಮಾಗಡಿ ತಾಲ್ಲೂಕಿನ ಸೋಲೂರು ಬಳಿಯ ರಾಗಿ ಖರೀದಿ ಕೇಂದ್ರದ ಗೋದಾಮಿನಲ್ಲಿ ಗುರುವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ.
ಗೋದಾಮಿನ ಮುಂಭಾಗ ಇದ್ದ ಟ್ರಾನ್ಸ್ ಫಾರ್ಮರ್’ನಿಂದ ಕಿಡಿ ತಗುಲಿ ಬೆಂಕಿ ಹೊತ್ತಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನೂರಾರು ರಾಗಿ ಮೂಟೆಗಳು ಹಾಗೂ 2 ಲಕ್ಷಕ್ಕೂ ಹೆಚ್ಚು ಖಾಲಿ ಚೀಲಗಳು ಬೆಂಕಿಗೆ ಆಹುತಿ ಆಗಿವೆ. ನಾಲ್ಕು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.