ಕೋಲಾರ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಹಾಗೂ ಸಂಕ್ರಾಂತಿ ಹಬ್ಬದ ಪ್ರಯುಕ್ತವಾಗಿ ಹಾಕಲಾಗಿದ್ದ ಶ್ರೀರಾಮನ ಕಟೌಟ್ ಹಾಗೂ ಫ್ಲೆಕ್ಸ್ಗಳನ್ನು ಕತ್ತರಿಸಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.
![](https://pratidhvani.com/wp-content/uploads/2024/01/WhatsApp-Image-2024-01-17-at-13.14.23-1.jpeg)
ಕೋಲಾರ ಜಿಲ್ಲೆಯ ಮುಳಬಾಗಿಲು ನಗರದ ಗುಣಗಂಟೆಪಾಳ್ಯ ದಲ್ಲಿ ಈ ಘಟನೆ ನಡೆದಿದ್ದು, ಕಳೆದ ರಾತ್ರಿ 10:40ರ ಸುಮಾರಿಗೆ ಬ್ಲೇಡ್ ಹಾಕಿ ಫ್ಲೆಕ್ಸ್ಗಳನ್ನು ದುಷ್ಕರ್ಮಿಗಳು ಹರಿದು ಹಾಕಿದ್ದರು. ಶ್ರೀರಾಮನ ಕಟೌಟ್ಗೆ ಬ್ಲೇಡ್ ಹಾಕಿದ ಹಿನ್ನೆಲೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಮುಳಬಾಗಿಲು ನಗರ ಪೊಲೀಸರ ಭೇಟಿ ಪರಿಶೀಲನೆ ನಡೆಸಿ, ಸ್ಥಳದಲ್ಲಿರುವ ಸಿ.ಸಿ. ಟಿವಿ ಪರೀಶೀಲನೆ ನಡೆಸಿದ್ದರು. ಈ ನಡುವೆ ಸಂಸದ ಮುನಿಸ್ವಾಮಿ ಸೇರಿದಂತೆ ಹಲವು ಮುಖಂಡರು ಮುಳಬಾಗಿಲಿಗೆ ಆಗಮಿಸಿದ್ದರು. ಈ ನಡುವೆ ಫ್ಲೆಕ್ಸ್ ಹರಿದ ಘಟನೆಗೆ ಸಂಬಂಧಿಸಿದಂತೆ ಮುಳಬಾಗಿಲು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
![](https://pratidhvani.com/wp-content/uploads/2024/01/WhatsApp-Image-2024-01-17-at-13.14.22-1024x576.webp)
ಸಂಕ್ರಾಂತಿ ಹಾಗೂ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಮುಳಬಾಗಿಲಿನ ಲವಕುಶ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮತ್ತು ಪುತ್ರ ಅಯೋಧ್ಯೆ ಧ್ರುವ ಚಾರಿಟಬಲ್ ಟ್ರಸ್ಟ್ ವತಿಯಿಂದ ನಗರದಲ್ಲಿ ರಾಮನ ಶೋಭಾಯಾತ್ರೆ, ಸೀತರಾಮ ಕಲ್ಯಾಣೋತ್ಸವ ಮತ್ತು ಮಹಾಸಾಮ್ರಾಜ್ಯ ಪಟ್ಟಾಭಿಷೇಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ದಿನಾಂಕ 21 ಮತ್ತು 22 ರಂದು ಎರಡು ದಿನ ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಗರದಲ್ಲಿ ಬ್ಯಾನರ್ ಮತ್ತು ಶ್ರೀರಾಮ ಕಟೌಟ್ ನಿಲ್ಲಿಸಲಾಗಿತ್ತು.