• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಲಸೆ ನಾಯಕರಿಂದ ಪದೇ ಪದೇ ಮುಜುಗರಕ್ಕೊಳಗಾಗುವ ಬಿಎಸ್ ವೈ ಸರ್ಕಾರ

Any Mind by Any Mind
May 28, 2021
in ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಮೈತ್ರಿ ಸರ್ಕಾರವನ್ನು ಕೆಡವಿ ಅಧಿಕಾರ ವಹಿಸಿಕೊಂಡ ದಿನದಿಂದಲೂ ಬಿಜೆಪಿ ಸರ್ಕಾರಕ್ಕೆ ಒಂದಲ್ಲ ಒಂದು ರೀತಿ ತೊಡಕಾಗಿರುವ ಈ ವಲಸೆ ನಾಯಕರ ವರ್ತನೆ. ಅಧಿಕಾರದ ಆಸೆಗಾಗಿ 17 ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ರಾಜಿನಾಮೆ ನೀಡುವ ಮೂಲಕ ಮೈತ್ರಿ ಸರ್ಕಾರವನ್ನು ಕೆಡವಿದನ್ನು ನಾಡಿನ ಜನ ನೋಡಿದ್ದಾರೆ. ಆದರೆ ರಾಜಿನಾಮೆ ನೀಡಿದ ಬಹುತೇಕ ಜನರು ಸಚಿವ ಸ್ಥಾನಕ್ಕೇರಿದ್ದಾದರು ಎಷ್ಟರ ಮಟ್ಟಿಗೆ ಅವರ ಕೆಲಸವನ್ನು ನಿರ್ವಹಿಸುತ್ತಿದ್ದಾರೆ ಎಂಬುದು ಈಗ ಜನಸಾಮಾನ್ಯರ ಪ್ರಶ್ನೆ.

ADVERTISEMENT

ರಮೇಶ್ ಜಾರಕಿಹೊಳಿಯಿಂದಾಗಿ ಬಿಜೆಪಿ ಸರ್ಕಾರಕ್ಕೆ ಮುಜುಗರ

ಅಧಿಕಾರವನ್ನು ದುರ್ಬಳಕೆ ಮಾಡಿ ಹೆಣ್ಣನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂಬ ಆರೋಪವಿರುವ ರಮೇಶ್ ಜಾರಕಿಹೊಳಿಯರ ಸಿಡಿ ನಾಡಿನಾದ್ಯಂತ ವೈರಲ್ ಆಗಿತ್ತು. ಆದರೆ ಈ ವಿಡಿಯೋದಲ್ಲಿರುವುದು ನಾನಲ್ಲ, ಇದು ಷಡ್ಯಂತ್ರ ಅಂತೆಲ್ಲ ಮೊದಲು ಹೇಳಿ, ಈಗ ಸಿಡಿಯಲ್ಲಿ ಇರುವುದು ನಾನೇ ಎಂದು ಒಪ್ಪಿಕೊಂಡಿರುವ ಸುದ್ದಿ ವರದಿಯಾಗಿದೆ. ಇದು ಬಿಎಸ್‌ವೈ ಸರ್ಕಾರಕ್ಕೆ ದೊಡ್ಡ ಹೊಡೆತದ ಜೊತೆಗೆ ನಾಡಿನ ಜನತೆಯ ಮುಂದೆ ಮುಜುಗರಕ್ಕೊಳಗಾಗಿದ್ದಾರೆ. ಈ ಒಂದು ಪ್ರಕರಣವನ್ನು ದೀರ್ಘಕಾಲ ತೆಗೆದುಕೊಂಡು ಹೋಗದೆ ತನಿಖೆ ಮಾಡಿದರೆ ಯಡಿಯೂರಪ್ಪ ಸರ್ಕಾರ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಲೇಬೇಕು ಎಂಬ ಮಾತು ಜನಸಾಮಾನ್ಯದ್ದು.

ಇನ್ನೂ ಮೊದಲದಿನದಿಂದಲೂ ಹಳ್ಳಿ ಹಕ್ಕಿ ಎಚ್. ವಿಶ್ವನಾಥ್ ಅವರ ಮಾತುಗಳು ಯಡಿಯೂರಪ್ಪ ಸರ್ಕಾರಕ್ಕೆ ನುಂಗಲಾರದ ತುಪ್ಪವಾಗಿರುವುದು ಸುಳ್ಳಲ್ಲ.

ಉಪ ಚುನಾವಣೆಯಲ್ಲಿ ಸೋತ ಹುಣಸೂರು ಮಾಜಿ ಶಾಸಕ ಹಾಲಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರು ಬಿಜೆಪಿಗೆ ಸೇರ್ಪಡೆಯಾದ ದಿನದಿಂದಲು ಅವರ ವಿರುದ್ಧವೇ ಅನೇಕ ಮಾತುಗಳನ್ನಾಡಿರುವುದನ್ನು ಗಮನಿಸಬಹುದು. ಚುನಾವಣೆ ಸೋತ ಮರುದಿನವೇ ನನ್ನ ಸೋಲಿಗೆ ಸಿ.ಪಿ ಯೋಗೇಶ್ವರ್ ಕಾರಣ ಅಂತೆಲ್ಲ ಹೇಳಿದ ವಿಶ್ವನಾಥ ಅವರು ಈಗ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದೆವಲ್ಲ ಎಂದು ವ್ಯಥೆಯಾಗುತ್ತಿದೆ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.

ಜಿಂದಾಲ್ ಕಂಪನಿಗೆ ಭೂಮಿ ನೀಡಬಾರದು ಎಂದು ಇದೇ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಯವರು ವಿಧಾನಸೌದದ ಒಳಗೆ ಧರಣಿ ನಡೆಸಿದರು. ಆದರೆ ಇಂದು ಇದೇ ಬಿಜೆಪಿಯವರು 1 ಕೋಟಿ ರೂ. ಗೆ ಬೆಲೆಬಾಳುವ 3,667 ಎಕರೆ ಜಮೀನನ್ನು ಕೇವಲ 1.12 ಲಕ್ಷ ರೂಗಳಿಗೆ ಮಾರಾಟ ಮಾಡಿರುವುದು ದುರದೃಷ್ಟಕರ. ಇಂತಹ ಸರ್ಕಾರವನ್ನು ನಾವು ಅಧಿಕಾರಕ್ಕೆ ತಂದೆವಲ್ಲ ಎಂಬ ವ್ಯಥೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಲಾಕ್ಡೌನ್ ಮಾಡಿದರೆ ಜನರ ಪರಿಸ್ಥಿತಿ ಏನು ಎಂಬುದನ್ನು ತಿಳಿದಿದ್ದೀರ? ಜನ ಕೋವಿಡ್ ನಿಂದ ಸಾಯುವುದಿಲ್ಲ, ಸಂಸಾರ ನಡೆಸಲು ಆಗದೆ ಸಾಯುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಒಂದು ವೇಳೆ ನೀವು ಲಾಕ್ ಡೌನ್ ಮಾಡಲೇ ಬೇಕು ಎನ್ನುವುದಾದರೆ ಪ್ರತಿ ಕುಟುಂಬಕ್ಕೆ 10 ಸಾವಿರ ರೂ. ನೀಡಿ ನಂತರ ಲಾಕ್ಡೌನ್ ಮಾಡಿ ಎಂದು ತನ್ನ ಸರ್ಕಾರವನ್ನೇ ಒತ್ತಾಯಿಸಿದರು.

ಸಿ.ಪಿ ಯೋಗೇಶ್ವರ್ ನಡಾವಳಿ ರಾಜ್ಯ ಬಿಜೆಪಿ ಸರ್ಕಾರಕ್ಕೆ ಕೆಡಕಾಗಿರುವುದು ಸುಳ್ಳಲ್ಲ

ಮೈತ್ರಿ ಸರ್ಕಾರವನ್ನು ಕೆಡವಲು ಪ್ರಮುಖರಲ್ಲಿ ಒಬ್ಬರಾದವರು ಎನ್ನಲಾದ ಯೋಗೇಶ್ವರ್ ನ ಇತ್ತಿಚಿನ ನಡವಳಿಕೆ ಬಿಜೆಪಿ ಸರ್ಕಾರಕ್ಕೆ ಮುಜುಗರ ತಂದಿದೆ. ನಾಡಿನ ಮುಖ್ಯಮಂತ್ರಿಗಳ ವಿರುದ್ಧ ಹೈಕಮಾಂಡ್ ಗೆ ದೂರು ನೀಡಲು ಹೋಗಿದ್ದಾರೆ ಎನ್ನುವುದನ್ನು ಬಿಜೆಪಿ ಪಕ್ಷದ ಶಾಸಕರು ಸಚಿವರೇ ಬಾಯಿ ಬಿಟ್ಟು ಹೇಳಿರುವುದು ಟಿವಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕುರಿತು ಸಿ.ಪಿ ಯೋಗೇಶ್ವರ್ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ ಕೂಡ. ಅದರಲ್ಲೂ ರೇಣುಕಾಚಾರ್ಯ ಒಂದು ಹೆಜ್ಜೆ ಮುಂದೆ ಹೋಗಿ ಮೆಗಾಸಿಜಿ ಕೇಸಿನ ಯೋಗೇಶ್ವರ್ ಅನ್ನು ಬಂಧಿಸಿ ಎಂದು ಹೇಳಿರುವುದು ಅವರ ಪಕ್ಷಕ್ಕೆ ಅವರೇ ಮಾಡಿಕೊಳ್ಳುತ್ತಿರುವ ದೊಡ್ಡ ಪೆಟ್ಟು ಅನ್ನಬಹುದು. ಕರೋನ ಅಂತಹ ಪರಿಸ್ಥಿತಿಯಲ್ಲಿ ಇವರೆಲ್ಲ ಹೊಲಸು ರಾಜಕೀಯ ಮಾಡುತ್ತಿರುವುದನ್ನು ಜನಸಾಮಾನ್ಯರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Previous Post

ಜಿಂದಾಲ್ಗೆ ಭೂಮಿ ಮಾರಾಟ: ಹಿಂದೆ ಮಾಡಿದ್ದರ ಪಾಪದ ಫಲ ಬಿಜೆಪಿ ಇಂದು ಅನುಭವಿಸುವಂತಾಗಿದೆ –ಹೆಚ್ ಡಿ ಕುಮಾರಸ್ವಾಮಿ

Next Post

ಬೆಂಗಳೂರು: ಯುವತಿಗೆ ಚಿತ್ರಹಿಂಸೆ, ಸಾಮೂಹಿಕ ಅತ್ಯಾಚಾರ-ಮಹಿಳೆ ಸೇರಿ ಒಟ್ಟು ಆರು ಮಂದಿ ಬಂಧನ

Related Posts

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!
Top Story

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

by ಪ್ರತಿಧ್ವನಿ
April 29, 2026
0

ಬೆಳಗಾವಿ : ಜನ ಸಮುದಾಯ ಎಷ್ಟೇ ಮುಂದುವರೆದರೂ, ತಂತ್ರಜ್ಷಾನ ದಿನದಿಂದ ದಿನಕ್ಕೆ ಬೆಳವಣಿಗೆ ಕಂಡರೂ ಅಲ್ಲದೆ ಕಾನೂನುಗಳು ಅದೆಷ್ಟೇ ಬಿಗಿಯಾದರೂ ಸಹ ಜನರ ಮನಸ್ಸುಗಳು, ಯೋಚನೆಗಳು ಮಾತ್ರ...

Read moreDetails
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

April 28, 2026
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
Next Post
ಬೆಂಗಳೂರು: ಯುವತಿಗೆ ಚಿತ್ರಹಿಂಸೆ, ಸಾಮೂಹಿಕ ಅತ್ಯಾಚಾರ-ಮಹಿಳೆ ಸೇರಿ ಒಟ್ಟು ಆರು ಮಂದಿ ಬಂಧನ

ಬೆಂಗಳೂರು: ಯುವತಿಗೆ ಚಿತ್ರಹಿಂಸೆ, ಸಾಮೂಹಿಕ ಅತ್ಯಾಚಾರ-ಮಹಿಳೆ ಸೇರಿ ಒಟ್ಟು ಆರು ಮಂದಿ ಬಂಧನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada