• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಮತದಾರರಿಗೆ ತಲಾ 6000 ರೂ. ಆಮಿಷ ಒಡ್ಡಿದ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ದೂರು

Any Mind by Any Mind
January 25, 2023
in ರಾಜಕೀಯ
0
ಮತದಾರರಿಗೆ ತಲಾ 6000 ರೂ. ಆಮಿಷ ಒಡ್ಡಿದ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ದೂರು
Share on WhatsAppShare on FacebookShare on Telegram

ADVERTISEMENT

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಪ್ರತಿ ಮತದಾರರಿಗೆ 6 ಸಾವಿರ ರೂ. ನೀಡಿ ಮತ ಕೇಳಲಾಗುವುದು. ಎದುರಾಳಿ ಅಭ್ಯರ್ಥಿ ಎಷ್ಟೇ ದುಡ್ಡು ಖರ್ಚು ಮಾಡಿದರೂ ಅದಕ್ಕಿಂತ 10 ಕೋಟಿ ಹೆಚ್ಚಿನ ಹಣ ಖರ್ಚು ಮಾಡಲು ನಾವು ಸಿದ್ಧವಿದ್ದೇವೆ ಎಂಬ ಹೇಳಿಕೆ ನೀಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದ ನಿಯೋಗ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿತು.

ರಮೇಶ್ ಜಾರಕಿಹೊಳಿ, ಪ್ರತಿ ಮತದಾರನಿಗೆ 6000 ರೂಪಾಯಿ ಲಂಚದ ಬಹಿರಂಗ ಆಮಿಷದ ಮೂಲಕ ರಾಜ್ಯದ 5 ಕೋಟಿ ಮತದಾರರನ್ನು 30 ಸಾವಿರ ಕೋಟಿ ಲಂಚದ ಮೂಲಕ ಖರೀದಿ ಮಾಡಲು ಸಂಚು ನಡೆಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಅವರಿಗೆ ಪ್ರೇರಣೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೇಲ್, ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡ ವಿರುದ್ಧ ತನಿಖೆ ನಡೆಸುವಂತೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರಿಗೆ ಈ ನಿಯೋಗ ಬುಧವಾರ ದೂರು ದಾಖಲಿಸಿದೆ.

ದೂರು ದಾಖಲಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು;

‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಿಜೆಪಿ ನಡೆಯನ್ನು ಎಲ್ಲರೂ ಗಮನಿಸುತ್ತಿದ್ದಾರೆ. ಮಾಜಿ ಮಂತ್ರಿಗಳು, ಬಿಜೆಪಿ ಶಾಸಕರು ನಾವು ಮುಂಬರುವ ಚುನಾವಣೆಯಲ್ಲಿ ಗೆಲ್ಲುವುದಿಲ್ಲ, ಆದರೂ ಸರ್ಕಾರ ರಚನೆ ಮಾಡುತ್ತೇವೆ ಎಂಬ ಸಂಕಲ್ಪ ಮಾಡಿಕೊಂಡು ಕೆಲಸ ಮಾಡುತ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಬಿಜೆಪಿಯ ಮೂರ್ನಾಲ್ಕು ಶಾಸಕರ ಹೇಳಿಕೆಗಳು, ರಾಜ್ಯದ ಮತದಾರರಿಗೆ ಆಮೀಷ ಒಡ್ಡುತ್ತಿರುವುದರ ಸ್ಪಷ್ಟ ಉದಾಹರಣೆ ಆಗಿವೆ. ಬಿಜೆಪಿ ಸರ್ಕಾರ 40% ಕಮಿಷನ್ ಮೂಲಕ ಸಾವಿರಾರು ಕೋಟಿ ಹಣ ಸಂಗ್ರಹಿಸಿದೆ. ಇತ್ತೀಚೆಗೆ ಮಾಜಿ ಮಂತ್ರಿ ರಮೇಶ್ ಜಾರಕಿಹೊಳಿ ಅವರು ಪ್ರತಿ ಮತಕ್ಕೆ 6 ಸಾವಿರ ನೀಡುತ್ತೇವೆ ಎಂದು ಹೇಳಿದ್ದಾರೆ. ಯಾವುದೇ ಎದುರಾಳಿ ಅಭ್ಯರ್ಥಿ ಎಷ್ಟೇ ಖರ್ಚು ಮಾಡಿದರೂ ಅದಕ್ಕಿಂತ 10ಕೋಟಿ ಹೆಚ್ಚಿನ ಮೊತ್ತವನ್ನು ಖರ್ಚು ಮಾಡುವುದಾಗಿ ಅವರು ಹೇಳಿರುವ ವಿಡಿಯೋ, ಮಾಧ್ಯಮ ವರದಿ ದಾಖಲೆಗಳಿವೆ.

ಈ ದಾಖಲೆಗಳ ಸಮೇತ ನಾನು, ಸಿದ್ದರಾಮಯ್ಯ ಹಾಗೂ ಪಕ್ಷದ ಇತರ ನಾಯಕರೆಲ್ಲರೂ ಸೇರಿ ಹೈಗ್ರೌಂಡ್ಸ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ. ಬಿಜೆಪಿಯವರು ರಾಜ್ಯದ 5 ಕೋಟಿ ಮತದಾರರಿಗೆ ಪ್ರತಿಯೊಬ್ಬರಿಗೆ 6 ಸಾವಿರ ರೂ.ನಂತೆ ಒಟ್ಟು 30 ಸಾವಿರ ಕೋಟಿ ಹಣ ಹಂಚಲು ತಯಾರಿ ಮಾಡಿಕೊಂಡಿದ್ದಾರೆ. ಹೀಗಾಗಿ ಮತದಾರರಿಗೆ ಆಮಿಷ ಒಡ್ಡುತ್ತಿರುವ ಬಿಜೆಪಿ ವಿರುದ್ಧ ದಾಖಲೆ ಸಮೇತ ಐಪಿಸಿ ಸೆಕ್ಷನ್ 171ಬಿ, 506, ಜನಪ್ರತಿನಿಧಿ ಕಾಯ್ದೆ 123 ಪ್ರಕಾರ ದೂರು ದಾಖಲಿಸಿದ್ದೇವೆ.

ಅಧಿಕಾರಿಗಳು ಕೂಡಲೇ ಎಫ್ಐಆರ್ ದಾಖಲಿಸಬೇಕು. ಈ ದೇಶದ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು. ನಾವು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಮೇಶ್ ಜಾರಕಿಹೊಳಿ ಅವರ ವಿರುದ್ಧ ದೂರು ನೀಡಿದ್ದೇವೆ. ಅವರ ಪಕ್ಷದ ನಾಯಕರು ಇಂತಹ ಹೇಳಿಕೆ ಕೊಟ್ಟರು ಯಾವುದೇ ಶಿಸ್ತಿನ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ನಾವು ಆ ಪಕ್ಷದ ಮುಖ್ಯಸ್ಥರ ಮೇಲೂ ದೂರು ನೀಡುತ್ತಿದ್ದೇವೆ. ಮಾಜಿ ಸಚಿವರ ಹೇಳಿಕೆ ತಿರಸ್ಕರಿಸಿದ ಮಾತ್ರಕ್ಕೆ ಎಲ್ಲವೂ ಸರಿಯಾಗುವುದಿಲ್ಲ. ಅಗತ್ಯ ಕ್ರಮ ಆಗಲೇಬೇಕು, ರಮೇಶ್ ಜಾರಕಿಹೊಳಿ ಅವರ ಬಂಧನವಾಗಬೇಕು ಎಂಬುದು ನಮ್ಮ ಆಗ್ರಹ.

ನಾವು ರಾಜ್ಯ ಪ್ರವಾಸದಲ್ಲಿದ್ದ ಕಾರಣ ಕಳೆದ ಎರಡು ಮೂರು ದಿನಗಳಿಂದ ಬಂದು ದೂರು ನೀಡಲು ಸಾಧ್ಯವಾಗಲಿಲ್ಲ. ಅಲ್ಲದೆ ಇಂದು ರಾಷ್ಟ್ರೀಯ ಮತದಾರರ ದಿನ. ಈ ಮತದಾನದ ಹಕ್ಕಿಗೆ ಅದರದೇ ಆದ ಗೌರವ ಇದೆ. ಈ ಪವಿತ್ರವಾದ ಹಕ್ಕನ್ನು ಉಳಿಸಲು ಈ ದಿನ ಬಿಜೆಪಿಯ ಷಡ್ಯಂತ್ರದ ವಿರುದ್ಧ ದೂರು ನೀಡಿದ್ದೇವೆ. ನಾಳೆ ನಮ್ಮ ನಾಯಕರ ಸಭೆ ಇದ್ದು, ಪ್ರತಿ ಕ್ಷೇತ್ರದಲ್ಲಿ ನಿಗಾ ವಹಿಸಲು ಕಾರ್ಯಕರ್ತರಿಗೆ ತಿಳಿಸಲಾಗುವುದು.

ಪಿಎಸ್ಐ ನೇಮಕಾತಿ ಅಕ್ರಮ

ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ ಅವರು, ತನಿಖಾಧಿಕಾರಿಯು ಈ ಪ್ರಕರಣವನ್ನು ಮುಚ್ಚಿಹಾಕಲು 3 ಕೋಟಿ ಲಂಚ ಕೇಳಿದ್ದು, ಅದರಲ್ಲಿ 76 ಲಕ್ಷ ರೂ. ನೀಡಲಾಗಿದೆ. ಉಳಿದ 2.24 ಕೋಟಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಪ್ರಕರಣದ ಹಿಂದೆ ಕೇವಲ ಎಸ್ಐ ಅಥವಾ ಅಧಿಕಾರಿಗಳು ಮಾತ್ರವಲ್ಲ, ಇಡೀ ವ್ಯವಸ್ಥೆಯೇ ಭಾಗಿಯಾಗಿದೆ. ಈ ನೇಮಕಾತಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದ ಅರಗ ಜ್ಞಾನೇಂದ್ರ, ಈಗ ಪ್ರಮುಖ ಆರೋಪಿಯೇ ಪ್ರಕರಣದ ತನಿಖಾಧಿಕಾರಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಯಾರೆಲ್ಲಾ ಆರೋಪಿಗಳನ್ನು ಮುಕ್ತಗೊಳಿಸಲು ಎಷ್ಟು ವಸೂಲಿ ಮಾಡಲಾಗಿದೆ ಎಂಬುದರ ಬಗ್ಗೆ ಲೋಕಾಯುಕ್ತದಿಂದ ವಿಸ್ತೃತ ತನಿಖೆಯಾಗಬೇಕು. ಬೆಂಗಳೂರಿನಲ್ಲಿ ಅಭ್ಯರ್ಥಿಗಳಿಂದ ಹಣಪಡೆದು ನಂತರ ಅವುಗಳನ್ನು ಹಿಂದಿರುಗಿಸುವುದಾಗಿ ಕೆಲವು ನಾಯಕರು ಒಪ್ಪಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಕೆಲವರು ಮಂತ್ರಿಗಳ ಹೆಸರು ಹೇಳಿದರೆ, ಮತ್ತೆ ಕೆಲವರು ಗೃಹ ಸಚಿವರು, ಮುಖ್ಯಮಂತ್ರಿಗಳು, ಡಿಜಿಪಿ ಅವರ ಹೆಸರು ಹೇಳುತ್ತಿದ್ದಾರೆ. ಬಂಧನವಾಗಿರುವ ಐಪಿಎಸ್ ಅಧಿಕಾರಿಗೆ ನ್ಯಾಯಾಲಯದ ಮುಂದೆ ಹೇಳಿಕೆ ನೀಡಲು ಅವಕಾಶ ನೀಡುತ್ತಿಲ್ಲ.

ಇನ್ನು ಗೃಹಲಕ್ಷ್ಮೀ ಯೋಜನೆ ಕೂಡ ಆಮಿಷ ಎಂಬ ಮುಖ್ಯಮಂತ್ರಿಗಳ ಆರೋಪದ ಬಗ್ಗೆ ಕೇಳಿದಾಗ, ‘ನಾವು ಏನೇ ಮಾತನಾಡಿದ್ದರೂ ಕಾನೂನಿನ ಚೌಕಟ್ಟಿನಲ್ಲಿ ಮಾತನಾಡಿದ್ದೇವೆ’ ಎಂದರು.

ಭ್ರಷ್ಟಾಚಾರಕ್ಕೆ ಜನ್ಮ ಕೊಟ್ಟಿದ್ದು ಕಾಂಗ್ರೆಸ್ ಎಂಬ ಸಿಎಂ ಹೇಳಿಕೆ ಬಗ್ಗೆ ಕೇಳಿದಾಗ, ‘ಭ್ರಷ್ಟಾಚಾರದ ಪಿತಾಮಹಾ ಬಸವರಾಜ ಬೊಮ್ಮಾಯಿ ಹಾಗೂ ಅವರ ತಂಡ’ ಎಂದರು.

ಇದಕ್ಕೂ ಮುನ್ನ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ಹೇಳಿದ್ದಿಷ್ಟು;

ಬಿಜೆಪಿ ಸರ್ಕಾರ 40% ಕಮಿಷನ್ ಮೂಲಕ ಸಂಗ್ರಹಿಸಿರುವ ಸಾವಿರಾರು ಕೋಟಿ ಹಣವನ್ನು ಮುಂಬರುವ ಚುನಾವಣೆಯಲ್ಲಿ ಹಂಚಲು ಮುಂದಾಗಿದೆ. ಆದರೂ ಐಟಿ, ಇಡಿ ತನಿಖಾ ಸಂಸ್ಥೆಗಳು ಸುಮ್ಮನೆ ಕೂತಿವೆ. ನಾನು ನನ್ನ ಸ್ವಂತ ಹಣದಲ್ಲಿ ಸಂಸದರಿಗೆ ಸಣ್ಣ ಉಡುಗೊರೆ ನೀಡಿದ್ದಕ್ಕೆ ಆದಾಯ ತೆರಿಗೆ ಅಧಿಕಾರಿಗಳು ನನಗೆ ನೋಟೀಸ್ ಜಾರಿ ಮಾಡಿದ್ದಾರೆ. ಆದರೆ ಈ ವಿಚಾರದಲ್ಲಿ ಅವರು ಮೌನವಾಗಿರುವುದೇಕೆ?

ಬಿಜೆಪಿ ಚುನಾವಣೆ ಗೆಲ್ಲದಿದ್ದರೂ ಸರ್ಕಾರ ರಚಿಸುತ್ತೇವೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಆ ಮೂಲಕ ಹಣಬಲದ ಮೂಲದ ಚುನಾವಣೆಯನ್ನು ನಿಯಂತ್ರಿಸಲು ಬಿಜೆಪಿ ಮುಂದಾಗಿದೆ.

Tags: BJPCongress Partyಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

BJP ಯಲ್ಲಿ ಮತ್ತೆ ಶುರುವಾಯ್ತಾ ಮಾಜಿ ಸಿಎಂ ಯಡಿಯೂರಪ್ಪ ಹವಾ..?

Next Post

| PRAJADHVANI YATHRE | ಗಂಡಸರಿಗೆ ದುಡ್ಡು ಕೊಡಲ್ಲ ಮನೆ ಒಡತಿಗೆ ಮಾತ್ರ 24 ಸಾವಿರ ಕೊಡುವುದು. : D K Shivakumar |

Related Posts

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್
Top Story

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
November 21, 2025
0

ಬೆಂಗಳೂರು: ಕಾಂಗ್ರೆಸ್‌ನಲ್ಲಿ ನವೆಂಬರ್‌ ಕ್ರಾಂತಿ ಗರಿಗೆದರಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇಂದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ. https://youtu.be/lJkxhAdZhXc?si=7skLOG-oaNLSzXaG ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಭೇಟಿ...

Read moreDetails
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

November 21, 2025
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

November 21, 2025
ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

November 21, 2025
Next Post
| PRAJADHVANI YATHRE | ಗಂಡಸರಿಗೆ ದುಡ್ಡು ಕೊಡಲ್ಲ ಮನೆ ಒಡತಿಗೆ ಮಾತ್ರ 24 ಸಾವಿರ ಕೊಡುವುದು. : D K Shivakumar |

| PRAJADHVANI YATHRE | ಗಂಡಸರಿಗೆ ದುಡ್ಡು ಕೊಡಲ್ಲ ಮನೆ ಒಡತಿಗೆ ಮಾತ್ರ 24 ಸಾವಿರ ಕೊಡುವುದು. : D K Shivakumar |

Please login to join discussion

Recent News

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್
Top Story

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ
Top Story

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

by ಪ್ರತಿಧ್ವನಿ
November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌
Top Story

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 21, 2025
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada