• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇದು ಸಾಮಾನ್ಯ ಮನುಷ್ಯನ ಬಜೆಟ್ ಉಳಿವಿನ ಹೋರಾಟ: ಬಿಜೆಪಿ ವಿರುದ್ಧ ಸುರ್ಜೆವಾಲ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
June 13, 2026
in Top Story, ಕರ್ನಾಟಕ, ದೇಶ, ರಾಜಕೀಯ
0
ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !
Share on WhatsAppShare on FacebookShare on Telegram

ನವದೆಹಲಿ: ಭಾರತದ ಇತಿಹಾಸದಲ್ಲಿಯೇ ಜನಸಾಮಾನ್ಯರು, ರೈತರು, ವೇತನ ವರ್ಗ, ಸಾರಿಗೆದಾರರು, ಸಣ್ಣ ಉದ್ಯಮದವರಿಗೆ ಬಿಜೆಪಿ ಅತ್ಯಂತ ದುಬಾರಿ ಪಕ್ಷವೆಂದು ಸಾಬೀತಾಗುವಂತೆ ಕಾಣುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಕೇಂದ್ರ ಬಿಜೆಪಿ ಪಕ್ಷದ ವಿರುದ್ಧ ಕಿಡಿಕಾರಿದ್ದಾರೆ.

ADVERTISEMENT
CM DK Shivakumar : ತನಗೆ ಹೊದಿಸಿದ ಶಾಲು, ಮಾಲೆಯನ್ನೇ ಅಭಿಮಾನಿಯ ಕೊರಳಿಗೆ ಹಾಕಿ ಸನ್ಮಾನಿಸಿದ ಸಿಎಂ..! #dks

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, 2026ರ ಜೂನ್ 12ರಂದು ಭಾರತ ಸರ್ಕಾರದ ಪೆಟ್ರೋಲಿಯಂ ಸಚಿವಾಲಯ ಒಂದು ಆದೇಶಹೊರಡಿಸಿದ್ದು, ಇನ್ನು ಮುಂದೆ 200 ಲೀ. ಗಿಂತ ಹೆಚ್ಚು ಡೀಸೆಲ್ ಅನ್ನು ಪೆಟ್ರೋಲ್ ಪಂಪ್‌ಗಳಲ್ಲಿ ಮಾರಾಟ ಮಾಡದಂತೆ ನಿರ್ಬಂಧಿಸಲಾಗಿದೆ.

ನಿಮಗೆ 200 ಲೀ. ಅಥವಾ ಅದಕ್ಕಿಂತ ಹೆಚ್ಚಿನ ಪ್ರಮಾಣದ ಡೀಸೆಲ್ ಬೇಕಾದಲ್ಲಿ ನೀವು ‘ಬಲ್ಕ್ ಬೈಯರ್’ ಬಳಿ ದೊಡ್ಡ ಪ್ರಮಾಣದ ಡೀಸೆಲ್ ಖರೀದಿಸಬೇಕು. ಇದಕ್ಕೆ ಕಾರಣ, ಪೆಟ್ರೋಲ್ ಪಂಪ್‌ನಲ್ಲಿ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 95 ರಿಂದ 97 ರೂ. ಇದೆ. ಆದರೆ, ಬಲ್ಕ್ ಬೈಯರ್ ಬಳಿ ಖರೀದಿಸುವಾಗ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 135 ರಿಂದ 140 ರೂ. ಇದೆ. ಅಂದರೆ ಪ್ರತಿ ಲೀಟರ್‌ಗೆ 40 ರೂಪಾಯಿಗಳ ವ್ಯತ್ಯಾಸ.

ಕೇಂದ್ರ ಸರ್ಕಾರದ ಈ ತೀರ್ಮಾನ ನಿಮ್ಮ ಮೇಲೆ ಹೇಗೆ ಪರಿಣಾಮ ಬೀರುತ್ತದೆ? ಎಂಬುದನ್ನು ನೋಡುವುದಾದರೆ, ಮೊದಲನೆಯದಾಗಿ ಇಲ್ಲಿ ಹೊಡೆತ ಬೀಳುವುದು ರೈತನಿಗೆ. ಬಿತ್ತನೆಯ ಋತು ಆರಂಭವಾಗುತ್ತಿದೆ. ಪ್ರತಿ ರೈತ ಒಂದು ಎಕರೆಗೆ ಸುಮಾರು 300 ಲೀ. ಡೀಸೆಲ್ ಬಳಸುತ್ತಾನೆ. ಭಾರತದಲ್ಲಿ ಸರಾಸರಿ ಒಬ್ಬ ರೈತನಿಗೆ 5 ಎಕರೆ ಭೂಮಿ ಇದ್ದರೆ ಒಂದು ಬೆಳೆಯ ಋತುವಿಗೆ ಕನಿಷ್ಠ 1,500 ಲೀ. ಡೀಸೆಲ್ ಬೇಕು. ಇದು ‘ಬಲ್ಕ್ ಖರೀದಿ’ಯಾಗುತ್ತದೆ. ಹೀಗಾಗಿ, ಈಗ ರೈತರಿಗೆ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 40 ರೂಪಾಯಿ ಹೆಚ್ಚಾಗಲಿದೆ.

Rajnath Singh : ರಕ್ತಕ್ಕೆ ನಾವು ನೀರಿನಿಂದ ಉತ್ತರ ಕೊಡಲ್ಲಾ..! #pakistanpm #pakistan #india

ಇನ್ನು ನಗರವಾಸಿಗಳು ಹಾಗೂ ಅದರಲ್ಲೂ ಅಪಾರ್ಟ್‌ಮೆಂಟ್‌ಗಳಲ್ಲಿ ವಾಸಿಸುವವರಿಗೂ ಈ ಬರೆ ಬೀಳಲಿದೆ. ಈ ವರ್ಗದ ಜನ ದೈನಂದಿನ ವಿದ್ಯುತ್ ಅಗತ್ಯಕ್ಕಾಗಿ ಜನರೇಟರ್‌ಗಳನ್ನು ಬಳಸುತ್ತಾರೆ. ಇವರೂ ಸಹ ಬಲ್ಕ್ ಖರೀದಿದಾರರು. ಪ್ರತಿದಿನ 2000 ದಿಂದ 5000 ಲೀಟರ್ ಡೀಸೆಲ್ ಖರೀದಿಸುತ್ತಾರೆ. ಇವರಿಗೂ ಸಹ ಲೀಟರ್‌ಗೆ 40 ರೂಪಾಯಿ ಹೆಚ್ಚಾಗಲಿದೆ. ಇದರಿಂದ ಈ ವರ್ಗದ ಜನರ ದೈನಂದಿನ ವಿದ್ಯುತ್ ಬಳಕೆಯ ವೆಚ್ಚ ಭಾರಿ ಪ್ರಮಾಣದಲ್ಲಿ ಏರಿಕೆಯಾಗಲಿದೆ. ವೇತನ ಮತ್ತು ಮಧ್ಯಮ ವರ್ಗಕ್ಕೆ ಆಗಲಿರುವ ಪರಿಸ್ಥಿತಿ ಇದೇ ಆಗಿದೆ.

satish jarkiholi DK Shivakumar : ಮೀಟಿಂಗ್ ನಲ್ಲಿ ಸತೀಶ್ ಜಾರಕಿಹೊಳಿ ಡಿಕೆ ಶಿವಕುಮಾರ್ ಗುಸು ಗುಸು ಮಾತು..!

ಇನ್ನು ಸಾಮಾನ್ಯ ಜನರ ಬಗ್ಗೆ ಹೇಳುವುದಾದರೆ, ಸಾರಿಗೆ ವೆಚ್ಚವೂ ಹೆಚ್ಚಾಗಲಿದೆ. ಒಂದು ಬಸ್‌ನ ಟ್ಯಾಂಕ್‌ನಲ್ಲಿ 200 ಲೀಟರ್‌ಗಿಂತ ಹೆಚ್ಚು ಇಂಧನ ಹಿಡಿದರೆ. ಆ ಬಸ್‌ಗೆ ಪ್ರತಿ ಲೀಟರ್‌ಗೆ 40 ರೂ. ಹೆಚ್ಚು ನೀಡಿ ಡೀಸೆಲ್ ಖರೀದಿಸಿದರೆ, ಬಸ್ ಪ್ರಯಾಣ ದರ ಹೆಚ್ಚಿಸುವುದಿಲ್ಲವೇ? 500 ರಿಂದ 1000 ಲೀ. ಟ್ಯಾಂಕ್ ಹೊಂದಿರುವ ಟ್ರಕ್ ಚಾಲಕರು, 40 ರೂಪಾಯಿ ಹೆಚ್ಚು ನೀಡಿ ಡೀಸೆಲ್ ಖರೀದಿಸಿದಾಗ ನೀವು, ನಾವು ಬಳಸುವ ದಿನಬಳಕೆ ವಸ್ತುಗಳ ಸಾರಿಗೆ ವೆಚ್ಚ ಸಹಜವಾಗಿಯೇ ಹೆಚ್ಚಾಗುತ್ತದೆ. ಅಂತಿಮವಾಗಿ ಇದರ ಬೆಲೆಯನ್ನು ಸಾಮಾನ್ಯ ಜನರೇ ತೆರಬೇಕು.

Farmers Anger On Official : ಪರಿಹಾರಕ್ಕಾಗಿ ರೋಸಿಹೋಗಿ, ಹೊಡೆದಾಟಕ್ಕೆ ತಿರುಗಿದ ಹೋರಾಟದ ಆಕ್ರೋಶ.! #pratidhvani

ಕೊನೆಯದಾಗಿ, ನಮ್ಮ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಈ ತೀರ್ಮಾನದ ಬಿಸಿ ತಟ್ಟಲಿದೆ. ವಿದ್ಯುತ್ ಪೂರೈಕೆಯ ಒಂದು ನಿರ್ದಿಷ್ಟ ವೇಳಾಪಟ್ಟಿ ಇರುತ್ತದೆ, ಅದರಂತೆ ಅವರಿಗೆ 12, 14, 18 ಗಂಟೆ ವಿದ್ಯುತ್ ಸಿಗುತ್ತದೆ. ಅದಕ್ಕಿಂತ ಹೆಚ್ಚು ಬೇಕಾದಾಗ ಅವರು ಜನರೇಟರ್‌ಗಳನ್ನೇ ಅವಲಂಬಿಸಬೇಕಾಗುತ್ತದೆ. ಇವರೂ ಬಲ್ಕ್ ಖರೀದಿದಾರರಾಗಿದ್ದಾರೆ.

R ASHOK : ಮಾಧ್ಯಮಗಳೊಂದಿಗೆ ವಿಜಯೇಂದ್ರ ಅಬ್ಬರಿಸಿ ಮಾತನಾಡುತ್ತಿದ್ದಾಗ ತೂಕಡಿಕೆಯಲ್ಲಿ ಬ್ಯುಸಿಯಾದ ಅಶೋಕಣ್ಣ..!

ಈ ಕೈಗಾರಿಕೆಯವರು 200 ಲೀ.ಗಿಂತ ಹೆಚ್ಚಿನ ಅಂದರೆ 5000, 10000 ಅಥವಾ 15000 ಲೀ. ಡೀಸೆಲ್ ಖರೀದಿಸುತ್ತಾರೆ. ಇವರಿಗೂ ಲೀಟರ್‌ಗೆ 40 ರೂಪಾಯಿ ಹೆಚ್ಚಾದಾಗ, ಸಾಮಾನ್ಯ ಜನರ ಬಳಕೆಗೆ ತಯಾರಾಗುವ ವಸ್ತುವಿನ ಬೆಲೆಯೂ ಹೆಚ್ಚಲಿದೆ.

ಆದರೆ ಬಿಜೆಪಿ ಇದನ್ನು ಜನರರಿಂದ ಮರೆಮಾಚುತ್ತಿದೆ. ಈ ದೈನಂದಿನ ದುಬಾರಿ ವಿರೋಧಿಸುವ ಸಮಯ ಬಂದಿದೆ. ಸಾಮಾನ್ಯ ಜನರ ಬಜೆಟ್ ಮೇಲೆ ದೈನಂದಿನ ಹೊರೆಯನ್ನು ಖಂಡಿಸುವ ಸಮಯ ಬಂದಿದೆ. ನೀವು ನಿಮ್ಮ ಸುತ್ತಮುತ್ತಲಿನ ಪ್ರತಿಯೊಬ್ಬ ಬಿಜೆಪಿ ನಾಯಕರು, ಕಾರ್ಪೊರೇಟರ್, ಶಾಸಕರು, ಸಂಸದರು, ಬೀಜೆಪಿ ಸಚಿವರನ್ನು ಪ್ರಶ್ನಿಸುವ ಸಮಯ ಬಂದಿದೆ.

CM DK Shivakumar Meeting : ಶಾಲಾ ಶೈಕ್ಷಣಿಕ ವರ್ಷ ಆರಂಭದ ಕುರಿತು ಅಧಿಕಾರಿಗಳೊಂದಿಗೆ CM DK ಮೀಟಿಂಗ್‌..!

ರಾಜ್ಯ ಹಾಗೂ ಕೇಂದ್ರ ಎರಡರಲ್ಲೂ ಇರುವ ಬಿಜೆಪಿ ಸರ್ಕಾರಗಳನ್ನು ಪ್ರಶ್ನಿಸಲು ಪ್ರಾರಂಭಿಸಬೇಕಿದೆ. ಈಗ ಇದು ಕೇವಲ ರಾಜಕೀಯ ಪಕ್ಷಗಳ ನಡುವಿನ ಹೋರಾಟವಲ್ಲ. ಇದು ಸಾಮಾನ್ಯ ಮನುಷ್ಯನ ಬಜೆಟ್ ಉಳಿವಿನ ಹೋರಾಟವಾಗಿದೆ ಎಂದು ರಣದೀಪ್ ಸಿಂಗ್ ಸುರ್ಜೆವಾಲ ವಾಗ್ದಾಳಿ ನಡೆಸಿದ್ದಾರೆ.

Previous Post

ಭಾಷಾ ಸೌಜನ್ಯ-ಅಧಿಕಾರ ದರ್ಪ ಮತ್ತು ಉತ್ತರದಾಯಿತ್ವ..!

Next Post

Actor Doddanna: ಸಾವು ವದಂತಿ ಬೆನ್ನಲ್ಲೇ ದೇವಾಲಯ ಸುತ್ತಿದ ನಟ ದೊಡ್ಡಣ್ಣ

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post
Actor Doddanna: ಸಾವು ವದಂತಿ ಬೆನ್ನಲ್ಲೇ ದೇವಾಲಯ ಸುತ್ತಿದ ನಟ ದೊಡ್ಡಣ್ಣ

Actor Doddanna: ಸಾವು ವದಂತಿ ಬೆನ್ನಲ್ಲೇ ದೇವಾಲಯ ಸುತ್ತಿದ ನಟ ದೊಡ್ಡಣ್ಣ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada