ಚಿಕ್ಕಬಳ್ಳಾಪುರ: ಡ್ರಾಪ್ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ನಡೆದಿದೆ.
![](https://pratidhvani.com/wp-content/uploads/2024/05/STOP-RAPE-CRIME.webp)
ಡ್ರಾಪ್ ಕೊಡುವ ನೆಪದಲ್ಲಿ ಯುವಕನೊಬ್ಬ ಇಬ್ಬರು ವಿದ್ಯಾರ್ಥಿನಿಯರ (students) ಮೇಲೆ ಅತ್ಯಾಚಾರಕ್ಕೆ (rape) ಯತ್ನಿಸಿದ್ದಾನೆ ಎನ್ನಲಾಗಿದೆ. ಈ ಘಟನೆ ಜಿಲ್ಲೆಯ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
![](https://pratidhvani.com/wp-content/uploads/2024/05/RAPE-STOP.webp)
ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಿದ್ಯಾರ್ಥಿನಿಯರು ಮರಳಿ ಬರುತ್ತಿದ್ದ ಸಂದರ್ಭದಲ್ಲಿ ಪೋಲಕುಂಟಹಳ್ಳಿ ನಿವಾಸಿ ಶ್ರೀಕಾಂತ್ ಎಂಬಾತ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಈತ ವಿದ್ಯಾರ್ಥಿನಿಯರನ್ನು ಬೈಕ್ ನಲ್ಲಿ ಹತ್ತಿಸಿಕೊಂಡು ಹೆದ್ದಾರಿಗೆ ಬರುವ ಬದಲು ಅರಣ್ಯಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ವಿದ್ಯಾರ್ಥಿನಿಯರು ಆತನಿಂದ ತಪ್ಪಿಸಿಕೊಂಡು 112ಕ್ಕೆ ಕರೆ ಮಾಡಿದ್ದಾರೆ. ಲೋಕೇಶನ್ ಆಧಾರದ ಮೇಲೆ ಪೊಲೀಸರು, ವಿದ್ಯಾರ್ಥಿನಿಯನ್ನು ರಕ್ಷಿಸಿದ್ದಾರೆ. ಸದ್ಯ ಆರೋಪಿ ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.