• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ವಿರಾಟ್‌ ಕೊಹ್ಲಿ ಮಗಳಿಗೆ ಅತ್ಯಾಚಾರದ ಬೆದರಿಕೆ: ಸಾಮಾಜಿಕ ಜಾಲತಾಣದ ಅತ್ಯಾಚಾರಿಗಳಿಗೆ ಇಲ್ಲವೇ ಕಡಿವಾಣ?

ನೀಲಿ by ನೀಲಿ
November 3, 2021
in ದೇಶ
0
ವಿರಾಟ್‌ ಕೊಹ್ಲಿ ಮಗಳಿಗೆ ಅತ್ಯಾಚಾರದ ಬೆದರಿಕೆ: ಸಾಮಾಜಿಕ ಜಾಲತಾಣದ ಅತ್ಯಾಚಾರಿಗಳಿಗೆ ಇಲ್ಲವೇ ಕಡಿವಾಣ?
Share on WhatsAppShare on FacebookShare on Telegram

ಭಾರತ ಕ್ರಿಕೆಟ್ ತಂಡದ ಕ್ಯಾಪ್ಟನ್‌ ವಿರಾಟ್‌ ಕೊಹ್ಲಿ ಅವರ 9 ತಿಂಗಳ ಪುತ್ರಿ ಮೇಲೆ ಅತ್ಯಾಚಾರದ ಬೆದರಿಕೆ ಒಡ್ಡಿರುವುದರೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಇಂತಹ ಧ್ವೇಷಪೂರಿತ ಕಮೆಂಟ್‌ಗಳ ಕಡಿವಾಣದ ಕುರಿತು ಮತ್ತೆ ಚರ್ಚೆಗೆ ಬಂದಿದೆ.

ADVERTISEMENT

ಟಿ-20 ವಿಶ್ವಕಪ್‌ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡುತ್ತಿರುವ ಭಾರತ ತಂಡದ ಕುರಿತು ಹಲವು ಸೃಜನಾತ್ಮಕ ಟೀಕೆಗಳಿಗಿಂತ ಇಂತಹ ನಿಂದನಾತ್ಮಕ ಟೀಕೆಗಳು ಹೆಚ್‌ಚು ಸದ್ದು ಮಾಡುತ್ತಿವೆ. ಇದು ಆಗಬೇಕಾದುದು ಕೂಡಾ. ಈ ಬಾರಿಯ ವಿಶ್ವ ಕಪ್‌ ಸರಣಿಯಲ್ಲಿ ಭಾರತ ತಂಡದ ಪ್ರದರ್ಶನಕ್ಕೆ ಧರ್ಮಾಧರಿತ ನಿಂದನೆಗಳು, ಸ್ತ್ರೀವಿರೋಧಿ ಮನಸ್ಥಿತಿಯ ಅನಾವರಣಗೊಳ್ಳುತ್ತಿದೆ. ಪಾಕಿಸ್ತಾನದೊಂದಿಗಿನ ಸೋಲಿಗೆ ವಿಕೃತ ಜನಾಂಗೀಯವಾದಿಗಳು ಭಾರತದ ಹಿರಿಯ ಬೌಲರ್‌ ಮಹಮ್ಮದ್‌ ಶಮಿ ವಿರುದ್ಧ ಧ್ವೇಷದ ಪ್ರತಿಕ್ರಿಯೆಗಳು ಬಂದಿದ್ದವು. ಶಮಿಯನ್ನು ಪಾಕಿಸ್ತಾನಿಯೆಂದು ಹೇಳಿ ಅವಮಾನಿಸಲಾಗಿತ್ತು. ಈ ರೀತಿಯ ಪ್ರತಿಕ್ರಿಯೆಗಳಿಗೆ ಶಮಿ ಅವರ ಧರ್ಮವೇ ಕಾರಣವಾಗಿರುವುದು ವಿಪರ್ಯಾಸ.

ಶಮಿ ವಿರುದ್ಧದ ನಿಂದನೆಯನ್ನು ಖಂಡಿಸಿದ್ದ ನಾಯಕ ವಿರಾಟ್‌ ಕೊಹ್ಲಿ “ಬೆನ್ನು ಮೂಳೆ ಇಲ್ಲದವರಷ್ಟೇ ಧರ್ಮಾಧರಿತವಾಗಿ ಕ್ರಿಕೆಟ್ಟಿಗರನ್ನು ನೋಡುತ್ತಾರೆ ಹಾಗೂ ಧರ್ಮದ ಕಾರಣಕ್ಕೆ ಟೀಕೆ ಮಾಡುತ್ತಾರೆ, ಇದು ಅಮಾನವೀಯ” ಎಂದಿದ್ದರು.

https://twitter.com/hananbhatt/status/1454916708443906056

ವಿಕೃತ ಟ್ರಾಲ್‌ಗಳ ವಿರುದ್ಧ ಕೊಹ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡುತ್ತಿದ್ದಂತೆಯೇ ಟ್ವಿಟರಿನಲ್ಲಿ ಮತ್ತೆ ವಿರಾಟ್‌ ವಿರುದ್ಧವೇ ಟ್ರೋಲ್‌ ವಿಕೃತರು ಟೊಂಕ ಕಟ್ಟಿ ನಿಂತಿದ್ದಾರೆ. ಇವರ ವಿಕೃತಿ ಅತಿರೇಕಕ್ಕೆ ಹೋಗಿದ್ದು, ವಿರಾಟ್‌ ಕೊಹ್ಲಿಯ 9 ತಿಂಗಳ ಮಗಳ ಮೇಲೆಯೇ ಅತ್ಯಾಚಾರ ಬೆದರಿಕೆ ಒಡ್ಡಿದ್ದಾರೆ. ಒಂದು ಕ್ರೀಡೆಯ ಮೇಲಿನ ಅಭಿಮಾನ ಇಷ್ಟು ಕೀಳುಮಟ್ಟಕ್ಕೆ ಹೋಗುತ್ತಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ.

https://twitter.com/innovatewithkau/status/1454981187827425285

ಸಾಮಾಜಿಕ ಮಾಧ್ಯಮದಲ್ಲಿ ಪಂದ್ಯಾಟಗಳಿಗಾಗಿ ಹಾಗೂ ಕ್ರಿಕೆಟಿಗರ ವಿರುದ್ಧ ಈ ರೀತಿಯ ವಿಕೃತಿ ಮೆರೆಯುವುದು ಇದೇ ಮೊದಲೇನಲ್ಲ. 2020 ರ ಐಪಿಎಲ್‌ ಪಂದ್ಯಾಟದಲ್ಲಿ ಧೋನಿ ಅವರ ಕಳಪೆ ಪ್ರದರ್ಶನಕ್ಕಾಗಿ ಅವರ 5 ವರ್ಷದ ಮಗಳ ಮೇಲೆ ಅತ್ಯಾಚಾರ ಬೆದರಿಕೆಯನ್ನು ಒಬ್ಬ ಹಾಕಿದ್ದ. ಈ ಪ್ರಕರಣ ಕೂಡಾ ಆ ಸಮಯದಲ್ಲಿ ಸಾಕಷ್ಟು ಸದ್ದು ಮಾಡಿತ್ತು.

ಕ್ರಿಕೆಟಿಗರ ಕಳಪೆ ಪ್ರದರ್ಶನಕ್ಕಾಗಿ ಅವರ ಪತ್ನಿ, ಮಗಳು ಹಾಗೂ ಕುಟುಂಬಸ್ಥರ ವಿರುದ್ಧ ಅಸಹ್ಯ ಭಾಷೆಯಲ್ಲಿ ನಿಂದಿಸುವುದು, ಅತ್ಯಾಚಾರದ ಬೆದರಿಕೆ ಒಡ್ಡುವುದರ ಹಿಂದೆ ಸ್ತ್ರೀ ವಿರೋಧಿ ಧೋರಣೆ ಇರುವುದು ನಿಚ್ಚಳವಾಗಿದೆ. ಅಷ್ಟಕ್ಕೂ ಆಟಗಾರರ ಕಳಪೆ ಆಟಕ್ಕೂ ಅವರ ಕುಟುಂಬದ ಮಹಿಳೆಯರಿಗೂ ಏನು ಸಂಬಂಧ? ಆನಂದವನ್ನು ಹಂಚಬೇಕಿದ್ದ ಪಂದ್ಯಗಳು ಧ್ವೇಷದ, ಅಸಹ್ಯದ ಪರಮಾವಧಿಗೆ ತಲುಪಿಸುತ್ತಿರುವುದರ ಬಗ್ಗೆ ನಿಜವಾಗಿಯೂ ಗಂಭೀರವಾಗಿ ಚಿಂತಿಸಬೇಕಾದ ತುರ್ತಿದೆ.

Kohli and Anushka’s 10-month-old daughter is getting rape threats because he decided to stand by his Muslim teammate, call out bigotry, and say discrimination on the basis of religion is wrong.

A 10-month-old child.

This is the India that we let happen.

— Andre Borges (@borges) October 31, 2021

 ಸದ್ಯ, ವಿರಾಟ್‌ ಕೊಹ್ಲಿ ಪುತ್ರಿಯ ಮೇಲೆ ಅತ್ಯಾಚಾರದ ಬೆದರಿಕೆಯನ್ನು ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣ ದಾಖಲಿಸುವಂತೆ ದೆಹಲಿ ಪೊಲೀಸರಿಗೆ ಸೂಚಿಸಿದೆ. ಆದರೆ, ಸೈಬರ್‌ ಲೋಕದಲ್ಲಿ ಬಹುತೇಖ 50 % ಮಹಿಳೆಯರು ಇಂತಹ ಬೆದರಿಕೆಗಳಿಂದ, ಲೈಂಗಿಕ ಕಿರುಕುಳಗಳಿಂದ ಸಂತ್ರಸ್ತರಾಗುತ್ತಿದ್ದಾರೆ ಎಂದು ವರದಿಯೊಂದು ಹೇಳುತ್ತಿದೆ.

ಪ್ರತಿ ನಾಲ್ವರಲ್ಲಿ ಒಬ್ಬ ಬಾಲಕಿ ಸಾಮಾಜಿಕ ಜಾಲತಾಣಗಳಲ್ಲಿನ ನಿಂದನೆಯು ದೈಹಿಕವಾಗಿ ಅಸುರಕ್ಷಿತ ಭಾವನೆಯನ್ನು ಉಂಟುಮಾಡಿದೆ ಎಂದು ಬಹಿರಂಗಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮವು ಅಪರಾಧಿಗಳು ಮತ್ತು ದುರುಪಯೋಗ ಮಾಡುವವರಿಗೆ ಅನಾಮಧೇಯವಾಗಿ ಕಾರ್ಯನಿರ್ವಹಿಸಲು ಮತ್ತು ಅಂತಹ ಅಸ್ಪಷ್ಟ ಬೆದರಿಕೆಗಳನ್ನು ನೀಡಲು ಅನುಮತಿಸುತ್ತಿರುವುದನ್ನು ವ್ಯವಸ್ಥೆಯ ವೈಫಲ್ಯ ಎಂದು ಕರೆಯಬೇಕೆ, ಬೇಜವಾಬ್ದಾರಿ ಎಂದು ಕರೆಯಬೇಕೆ?

ಮಹಿಳೆಯರಿಗೆ ಸುರಕ್ಷಿತ ಭಾವವನ್ನು ಒದಗಿಸುವುದು ಇಂತಹ ಪ್ಲಾಟ್‌ಫಾರ್ಮ್‌ಗಳ ಹಾಗೂ ಸರ್ಕಾರ ಭಾದ್ಯತೆ. ಭಾರತದ ಇಬ್ಬರು ಪ್ರಭಾವಿ ಕ್ರೀಡಾಪಟುಗಳ ಹೆಣ್ಣುಮಕ್ಕಳಿಗೆ ಈ ರೀತಿಯ ಅತ್ಯಾಚಾರದ ಬೆದರಿಕೆಗಳು ಸಲೀಸಾಗಿ ಹಾಕಬಹುದಾದರೆ,  ಸಾಮಾಜಿಕ ಮಾಧ್ಯಮದಲ್ಲಿ ಇತರ ಮಹಿಳೆಯರು ಮತ್ತು ಅವರ ಮಕ್ಕಳ ಅವಸ್ಥೆ ಹೇಗಿರಬಹುದು ಎಂದು ಯೋಚಿಸಬೇಕಿದೆ.

pic.jpg
Tags: BJPಅತ್ಯಾಚಾರನರೇಂದ್ರ ಮೋದಿಬಿಜೆಪಿಬೆದರಿಕೆ‌ವಿರಾಟ್‌ ಕೊಹ್ಲಿಸಾಮಾಜಿಕ ಜಾಲತಾಣ
Previous Post

ಇತಿಹಾಸದಿಂದ ಮರೆಯಾದ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಪುಸ್ತಕ ಹೊರತರಲಿರುವ RSS

Next Post

2023ರ ವಿಧಾನಸಭೆ ಚುನಾವಣೆ ಟಾರ್ಗೆಟ್ ; ಕಾಂಗ್ರೆಸ್‌ನಲ್ಲಿ ಕಿಡಿ ಹೊತ್ತಿಸಿದ ನಾಯಕತ್ವದ ವಿವಾದ!

Related Posts

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 
Top Story

ಹ್ಯಾಪಿ ಬರ್ತ್ ಡೇ ರಾಹುಲ್ ಗಾಂಧಿ..! – ರಾಗಾ ಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ ಮೋದಿ ! 

by Chetan
June 20, 2025
0

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul gandhi) ನಿನ್ನೆ (ಜೂನ್.19) 55ನೇ ವರ್ಷಕ್ಕೆ ಕಾಲಿಟ್ಟಿದ್ದು,ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಜೊತೆಗೆ  ಅಭಿಮಾನಿಗಳು ತಮ್ಮ...

Read moreDetails
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post
2023ರ ವಿಧಾನಸಭೆ ಚುನಾವಣೆ ಟಾರ್ಗೆಟ್ ; ಕಾಂಗ್ರೆಸ್‌ನಲ್ಲಿ ಕಿಡಿ ಹೊತ್ತಿಸಿದ ನಾಯಕತ್ವದ ವಿವಾದ!

2023ರ ವಿಧಾನಸಭೆ ಚುನಾವಣೆ ಟಾರ್ಗೆಟ್ ; ಕಾಂಗ್ರೆಸ್‌ನಲ್ಲಿ ಕಿಡಿ ಹೊತ್ತಿಸಿದ ನಾಯಕತ್ವದ ವಿವಾದ!

Please login to join discussion

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 
Top Story

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada