• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ಪ್ರತಿಧ್ವನಿ by ಪ್ರತಿಧ್ವನಿ
February 8, 2026
in Top Story, ಕರ್ನಾಟಕ, ಸಿನಿಮಾ
0
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ
Share on WhatsAppShare on FacebookShare on Telegram

​ಕಲಿಯುಗದ ಕಾಮಧೇನು, ಕಲ್ಪವೃಕ್ಷ ಎಂದು ಖ್ಯಾತರಾದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಕೋಟ್ಯಂತರ ಭಕ್ತರಿಗೆ ಇದೊಂದು ಅದ್ಭುತವಾದ ಸಿಹಿ ಸುದ್ದಿ. ರಾಯರ ದಿವ್ಯ ಚರಿತ್ರೆಯನ್ನು ಹಿಂದೆಂದೂ ಕಾಣದ ರೀತಿಯಲ್ಲಿ ದೃಶ್ಯೀಕರಿಸುವ ʼರಾಯರ ದರ್ಶನʼ(Rayara Darshana) ಆಲ್ಬಮ್ ಸಾಂಗ್ ಸದ್ದಿಲ್ಲದೇ ಸಿದ್ಧವಾಗುತ್ತಿದ್ದು, ಶ್ರೀ ಲಕ್ಷ್ಮೀ ಗಣೇಶ ಪ್ರೊಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಹೆಮ್ಮೆಯಿಂದ ಅರ್ಪಿಸುತ್ತಿರುವ ಈ ವಿಶೇಷ ಪ್ರಾಜೆಕ್ಟ್‌ಗೆ ಚಿತ್ರರಂಗದ ಪ್ರತಿಭೆಗಳು ಕೈಜೋಡಿಸಿರುವುದು ವಿಶೇಷ.

ADVERTISEMENT
|Dk Suresh Dance :  ತಮ್ಮ ರೊಚ್ಚಿಗೆದ್ದು ಕುಣಿಯೋದು ನೋಡಿ ನಕ್ಕು ನಕ್ಕು ಬಿದ್ದ ಡಿಕೆಶಿ #pratidhvani

​ತಾರಾ ಮೆರುಗು – ದ್ವಿಭಾಷಾ ಸಂಭ್ರಮ

​ಈ ಆಲ್ಬಮ್ ಸಾಂಗ್ ಕೇವಲ ಒಂದು ಭಕ್ತಿಗೀತೆಯಾಗಿ ಉಳಿಯದೆ, ದಕ್ಷಿಣ ಭಾರತದ ಖ್ಯಾತ ನಟರ ಸಮಾಗಮಕ್ಕೆ ಸಾಕ್ಷಿಯಾಗುತ್ತಿದೆ. ಇದರಲ್ಲಿ ಸೂಪರ್ ಸ್ಟಾರ್ ರಜನಿಕಾಂತ್, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ನವರಸ ನಾಯಕ ಜಗ್ಗೇಶ್, ನೆನಪಿರಲಿ ಪ್ರೇಮ್ ಸೇರಿದಂತೆ ಚಿತ್ರರಂಗದ 25ಕ್ಕೂ ಹೆಚ್ಚು ಜನಪ್ರಿಯ ತಾರೆಯರು ಕಾಣಿಸಿಕೊಳ್ಳುತ್ತಿದ್ದಾರೆ. ವಿಶೇಷವೆಂದರೆ, ಈ ಆಲ್ಬಮ್ ಕನ್ನಡ ಮತ್ತು ತೆಲುಗು ಎರಡೂ ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿದ್ದು, ಜಾಗತಿಕ ಮಟ್ಟದ ಭಕ್ತರನ್ನು ತಲುಪುವ ಗುರಿ ಹೊಂದಿದೆ.

​ಭಕ್ತಿಯ ಲಹರಿಯಲ್ಲಿ ವಿಶಿಷ್ಟ ಸಂಕಲ್ಪ

​ಮಂತ್ರಾಲಯದ ಗುರು ಸಾರ್ವಭೌಮರ ಕುರಿತು ಈವರೆಗೆ ಯಾರು ಹೇಳದ ಮತ್ತು ತೋರಿಸದ ರಾಯರ ಬದುಕಿನ ಕೆಲವು ಅಪರೂಪದ ವಿಷಯಗಳನ್ನು ಈ ಹಾಡಿನಲ್ಲಿ ಪ್ರಸ್ತುತಪಡಿಸಲಾಗುತ್ತಿದೆ. ಮಂತ್ರಾಲಯದ ಪ್ರಸ್ತುತ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥರ ಆಶೀರ್ವಾದದೊಂದಿಗೆ ಈ ಪ್ರಾಜೆಕ್ಟ್ ಅತ್ಯಂತ ಅದ್ಧೂರಿಯಾಗಿ ಮೂಡಿಬರುತ್ತಿದೆ.


​
​ಈ ಬಹುನಿರೀಕ್ಷಿತ ಆಲ್ಬಮ್‌ನ ಮೊದಲ ಹಂತದ ಚಿತ್ರೀಕರಣವು ಫೆಬ್ರವರಿ 2 ರಿಂದ ಫೆಬ್ರವರಿ 7ರವರೆಗೆ ಅತ್ಯಂತ ಯಶಸ್ವಿಯಾಗಿ ನಡೆದಿದೆ. ತಾಂತ್ರಿಕವಾಗಿ ಅತ್ಯಂತ ಶ್ರೀಮಂತವಾಗಿ ಮೂಡಿಬರುತ್ತಿರುವ ಈ ಆಲ್ಬಮ್‌ನ ಎರಡನೇ ಹಂತದ ಚಿತ್ರೀಕರಣವು ಫೆಬ್ರವರಿ 24ರಂದು ಪ್ರಾರಂಭವಾಗಲಿದೆ ಎಂದು ತಂಡ ಮಾಹಿತಿ ನೀಡಿದೆ.

​ದೃಶ್ಯ ವೈಭವವನ್ನು ಅಚ್ಚುಕಟ್ಟಾಗಿ ತೆರೆಮೇಲೆ ತರಲು ಚಿತ್ರರಂಗದ ಹೆಸರಾಂತ ತಾಂತ್ರಿಕ ವರ್ಗ ಶ್ರಮಿಸುತ್ತಿದೆ.
​ನಿರ್ಮಾಣ: ಸುಗುಣ ರಘು ಭಟ್
ನಿರ್ದೇಶನ: ರಘು ಭಟ್
​ಸಂಗೀತ: ಎಬಿಬಿಎಸ್ ಸ್ಟುಡಿಯೋ, ಸಿ.ಆರ್. ಬಾಬಿ ಹಾಗೂ ಅಜನೀಶ್ ಲೋಕನಾಥ್.
​ಸಾಹಿತ್ಯ: ನಾಗಾರ್ಜುನ ಶರ್ಮ
ಪ್ರಾಜೆಕ್ಟ್ ಹೆಡ್: ಶ್ರೀನಿಧಿ ಎಂ.ಕೆ. ಹಾಗೂ ಖುಷಿ.
ಡೈರೆಕ್ಟರ್ ಆಫ್ ಫೋಟೋಗ್ರಫಿ: ​ನಾಗೇಶ್ ವಿ ಆಚಾರ್ಯ.
ತಾಂತ್ರಿಕ ವರ್ಗ: ದೊರೆಅರಸ್.
ಜಿಮ್ಮಿ: ಹರೀಶ್ ಮತ್ತು ತಂಡ.
ಪ್ರೊಡಕ್ಷನ್ ಹೆಡ್: ದರ್ಶನ್ ಯದುರಾಜ್.
ಪ್ರೊಡಕ್ಷನ್ ಟೀಮ್: ಯಶಸ್
ಸಿನಿಮಾಟೋಗ್ರಫಿ: ಪವನ್ ಎಂ. ಬಿ ಆಚಾರ್ಯ.
ಡ್ರೋನ್: ವಿಘ್ನೇಶ್ ಮೊಗವೀರ್.
ಸ್ಥಿರಛಾಯಗ್ರಹಣ: ಸಂಪತ್ ಪಾರ್ಸಿ ಡಿ.ಕೆ.
ಯೂನಿಟ್: ಬಿ. ಆರ್ ಮಲ್ಲಿಕಾರ್ಜುನ್ ಸಿನಿಲೈಟ್.

Santhosh Lad : ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಸಚಿವ ಸಂತೋಷ್‌ ಲಾಡ್‌..! #pmmodi #vbgramgbill

​ರಾಯರ ಭಕ್ತರ ಮನಸ್ಸಿಗೆ ಹತ್ತಿರವಾಗುವಂತೆ ಮತ್ತು ದೃಶ್ಯ ರೂಪದಲ್ಲಿ ಹೊಸ ಅನುಭವ ನೀಡುವ ಸಲುವಾಗಿ ʼರಾಯರ ದರ್ಶನʼ ಹಾಡು ಭಕ್ತರ ಕಣ್ಮುಂದೆ ಬರಲು ಸಜ್ಜಾಗಿದೆ.

Previous Post

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

Next Post

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

Related Posts

ದೇಹಕ್ಕೆ ಅಂಗವೈಕಲ್ಯ ಇರಬಹುದು, ಆದರೆ ಕನಸುಗಳಿಗಲ್ಲಾ : ನಿತೀಶ್‌ ಸರ್ಕಾರದ ವೈಫಲ್ಯತೆ ಬಿಚ್ಚಿಟ್ಟ ನೆಟ್ಟಿಗರು..
Top Story

ದೇಹಕ್ಕೆ ಅಂಗವೈಕಲ್ಯ ಇರಬಹುದು, ಆದರೆ ಕನಸುಗಳಿಗಲ್ಲಾ : ನಿತೀಶ್‌ ಸರ್ಕಾರದ ವೈಫಲ್ಯತೆ ಬಿಚ್ಚಿಟ್ಟ ನೆಟ್ಟಿಗರು..

by ಪ್ರತಿಧ್ವನಿ
March 12, 2026
0

ಪ್ರತಿಧ್ವನಿ ವಿಶೇಷ ವರದಿ : ಬೆಂಗಳೂರು : ಮನುಷ್ಯನ ಅಂಗಕ್ಕೆ ವೈಕಲ್ಯ ಇರಬಹುದು ಆದರೆ ಕನಸುಗಳಿಗೆ ಅಲ್ಲಾ ಎಂಬುವುದಕ್ಕೆ ಇದೀಗ ದೇಶಾದ್ಯಂತ ಭಾರತೀಯರ ಗಮನ ಸೆಳೆದಿರುವ ದಿವ್ಯಾಂಗ ಬಾಲಕಿಯೇ...

Read moreDetails
BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

March 12, 2026
ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

March 12, 2026

ವಿಧಾನಸಭೆ ಬಜೆಟ್ ಅಧಿವೇಶನ ನೇರಪ್ರಸಾರ..!

March 12, 2026
ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

March 12, 2026
Next Post
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada