• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಗೂಂಡಾಗಿರಿ ಕೊನೆಯಾಗಬೇಕಾದರೆ ಬಿಜೆಪಿ ಕಚೇರಿ, ಅಮಿತ್‌ ಶಾ ಮನೆ ನೆಲಸಮ ಮಾಡಬೇಕು: ಆಪ್

ಫೈಝ್ by ಫೈಝ್
April 20, 2022
in ದೇಶ
0
ಗೂಂಡಾಗಿರಿ ಕೊನೆಯಾಗಬೇಕಾದರೆ ಬಿಜೆಪಿ ಕಚೇರಿ, ಅಮಿತ್‌ ಶಾ ಮನೆ  ನೆಲಸಮ ಮಾಡಬೇಕು: ಆಪ್
Share on WhatsAppShare on FacebookShare on Telegram

ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷವು ಜಹಾಂಗೀರ್‌ಪುರಿಯಲ್ಲಿ ಕೆಡವಲಾದ ಅತಿಕ್ರಮಣ ಕಟ್ಟಡಗಳಿಗೆ ಬಿಜೆಪಿಯನ್ನು ಹೊಣೆ ಮಾಡಿದೆ. ಮಾತ್ರವಲ್ಲ, ದೇಶದಲ್ಲಿ ಗೂಂಡಾಗಿರಿಯನ್ನು ಕೊನೆಗೊಳಿಸಬೇಕಾದರೆ, ಬಿಜೆಪಿ ಕಛೇರಿಯನ್ನು ನೆಲಸಮಗೊಳಿಸಬೇಕು ಎಂದು ಎಎಪಿ ನಾಯಕ, ದೆಹಲಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಹೇಳಿದ್ದಾರೆ.

ADVERTISEMENT

BJP नेता रोहिंग्या की बात करते हैं

BJP जवाब दे 8 साल में देश भर में सबसे ज़्यादा Bangladeshi-Rohingya को क्यों बसाया? इसका Data दे

रोहिंग्या को बसा के Scripted तरीके से गुंडई करते हैं और देश को रोज़गार, महंगाई से भटका के लड़ाई-झगड़ों में फंसा देते हैं

–@msisodia #BulldozeBJPHQ pic.twitter.com/AqLakLAZSA

— AAP (@AamAadmiParty) April 20, 2022

ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಧ್ವಂಸ ಕಾರ್ಯಾಚರಣೆಯನ್ನು “ನಾಟಕ” ಎಂದು ಕರೆದಿದ್ದು, 15 ವರ್ಷಗಳಿಂದ ಲಂಚ ಪಡೆದು ಈ ಕಟ್ಟಡಗಳನ್ನು ನಿರ್ಮಿಸಲು ಅವಕಾಶ ನೀಡಿದ ನಾಯಕರ ಮನೆಗಳ ಮೇಲೆ ಬಿಜೆಪಿ ಬುಲ್ಡೋಜರ್‌ಗಳನ್ನು ಯಾವಾಗ ಬಳಸುತ್ತದೆ ಎಂದು ಪ್ರಶ್ನಿಸಿದ್ದಾರೆ.

ಆ ನಾಯಕರ ಮನೆಗಳನ್ನೂ ಕೆಡವಿ, ಅವರ ಮನೆಗಳು ಯಾವಾಗ ಬುಲ್ಡೋಜರ್ ಆಗುತ್ತವೆ ಎನ್ನುವುದನ್ನು ಬಿಜೆಪಿಯೇ ಹೇಳಬೇಕು ಎಂದು ಅವರ ಕೇಳಿದ್ದಾರೆ. ಆ ಮೂಲಕ ದಶಕಕ್ಕೂ ಹೆಚ್ಚು ಕಾಲದಿಂದ ದಿಲ್ಲಿ ಪೌರ ಸಂಸ್ಥೆಗಳನ್ನು ನಡೆಸುತ್ತಿರುವ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಅವರು ಪ್ರಶ್ನಿಸಿದ್ದಾರೆ.

ದೇಶದಲ್ಲಿ ಅಶಾಂತಿ ಎಬ್ಬಿಸಿರುವುದೇ ಬಿಜೆಪಿ ಎಂಬುದು ಎಎಪಿಯ ನಿಲುವಾಗಿದೆ ಎಂದು ಹೇಳಿದ ಸಿಸೋಡಿಯಾ, ಗೂಂಡಾಗಿರಿಯನ್ನು ಕೊನೆಗೊಳಿಸಲು ನಾವು ಬಿಜೆಪಿ ಕೇಂದ್ರ ಕಚೇರಿಯನ್ನು ನೆಲಸಮಗೊಳಿಸಬೇಕಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ದೇಶವನ್ನು ಎಲ್ಲಿಗೆ ಕೊಂಡೊಯ್ಯುತ್ತಿದೆ ಎಂದು ಪ್ರಶ್ನಿಸಿದ ಅವರು, ಇಂದು ಆರೋಗ್ಯ, ಶಿಕ್ಷಣ ಅಥವಾ ಐಟಿ ಬಗ್ಗೆ ಮಾತನಾಡುತ್ತಿಲ್ಲ, ಬದಲಾಗಿ ಗೂಂಡಾಗಿರಿ ಬಗ್ಗೆ ಮಾತನಾಡುತ್ತಿದೆ ಎಂದು ಹೇಳಿದರು.

ಈ ಹಿಂದೆ ಎಎಪಿ ಸಂಸದ ರಾಘವ್ ಚಡ್ಡಾ ಅವರು ಗೃಹ ಸಚಿವ ಅಮಿತ್ ಶಾ ಕೋಮುಗಲಭೆಗಳನ್ನು ರೂಪಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. “ಗೃಹ ಸಚಿವರೇ ಈ ಗಲಭೆಗಳನ್ನು ರೂಪಿಸುತ್ತಿದ್ದಾರೆ. ನೀವು ಬುಲ್ಡೋಜರ್ ಅನ್ನು ಬಳಸಲು ಬಯಸಿದರೆ, ಗೃಹ ಸಚಿವರ ಮನೆಯನ್ನು ಕೆಡವಲು ಅದನ್ನು ಬಳಸಿ. ಹಾಗಾಗಿ ಗಲಭೆಗಳು ನಿಲ್ಲುತ್ತವೆ” ಎಂದು ಎಎಪಿ ನಾಯಕ ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಹೇಳಿದ್ದಾರೆ.

ಬಿಜೆಪಿ ಆಡಳಿತದ ಉತ್ತರ ದಿಲ್ಲಿ ಮುನ್ಸಿಪಲ್ ಕಾರ್ಪೊರೇಷನ್ (ಎನ್‌ಡಿಎಂಸಿ) ಜಹಾಂಗೀರ್‌ಪುರಿಯಲ್ಲಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ಒಂಬತ್ತು ಬುಲ್‌ಡೋಜರ್‌ಗಳನ್ನು ಬಳಸಿ ಗಲಭೆಯ ಶಂಕಿತ ಆರೋಪಿಗಳಿಗೆ ಸೇರಿದ ಮನೆ, ಆಸ್ತಿಗಳನ್ನು ಕೆಡವಲು ಪ್ರಾರಂಭಿಸಿತ್ತು. ಸ್ವಲ್ಪ ಸಮಯದ ನಂತರ, ತುರ್ತು ಅರ್ಜಿಯೊಂದಕ್ಕೆ ಪ್ರತಿಕ್ರಿಯಿಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ತ್ರಿಸದಸ್ಯ ಸುಪ್ರೀಂ ಕೋರ್ಟ್ ಪೀಠ, ಮುಂದಿನ ವಿಚಾರಣೆ ನಡೆಯುವವರೆಗೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ಆದೇಶ ಹೊರಡಿಸಿತ್ತು.

ಆದರೆ, ಜಹಾಂಗೀರ್‌ಪುರಿಯಲ್ಲಿನ ಎಂಸಿಡಿ ಅಧಿಕಾರಿಗಳು, ಆದೇಶದ ಪ್ರತಿಯನ್ನು ಸ್ವೀಕರಿಸಿಲ್ಲ ಎಂದು ಹೇಳಿ ಹಲವಾರು ಅಂಗಡಿಗಳನ್ನು ಮಾತ್ರವಲ್ಲದೆ ಮಸೀದಿಯ ಗೇಟ್‌ಗಳು ಮತ್ತು ಗೋಡೆಯನ್ನು ಸಹ ಧ್ವಂಸಗೊಳಿಸಲು ಮುಂದಾದರು ಎಂದು ವರದಿಯಾಗಿದೆ.

Tags: BJPCongress Partyಅಮಿತ್‌ ಶಾಎಎಪಿಗೂಂಡಾಗಿರಿನರೇಂದ್ರ ಮೋದಿಬಿಜೆಪಿ
Previous Post

ಟೀ ಅಂಗಡಿ ತೆರೆದ ಅರ್ಥಶಾಸ್ತ್ರ ಪದವೀಧರೆ: ಟೀ ಮಾರಿದ ಪ್ರಧಾನಿಯಿರುವ ಭಾರತದ ಕತೆ!

Next Post

ಬಾಲಿವುಡ್‌ ಗೆ ಮರಳಿದ ರಾಮ್‌ ತೇರಿ ಗಂಗಾ ಮೈಲಿ ಖ್ಯಾತಿಯ ಮಂದಾಕಿನಿ!

Related Posts

Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
0

ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನು ಸಾಕ್ಷಿ ಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ? :ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ...

Read moreDetails
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
Next Post
ಬಾಲಿವುಡ್‌ ಗೆ ಮರಳಿದ ರಾಮ್‌ ತೇರಿ ಗಂಗಾ ಮೈಲಿ ಖ್ಯಾತಿಯ ಮಂದಾಕಿನಿ!

ಬಾಲಿವುಡ್‌ ಗೆ ಮರಳಿದ ರಾಮ್‌ ತೇರಿ ಗಂಗಾ ಮೈಲಿ ಖ್ಯಾತಿಯ ಮಂದಾಕಿನಿ!

Please login to join discussion

Recent News

Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
Top Story

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada