• Home
  • About Us
  • ಕರ್ನಾಟಕ
Thursday, July 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಜಾಗತಿಕ ಆರ್ಥಿಕ ಕ್ಷೋಭೆ : ಜಿಡಿಪಿ ಬೆಳವಣಿಗೆ ಮುನ್ನಂದಾಜು ಶೇ.7.2ಕ್ಕೆ ತಗ್ಗಿಸಿದ RBI

ಪ್ರತಿಧ್ವನಿ by ಪ್ರತಿಧ್ವನಿ
April 8, 2022
in ದೇಶ, ವಾಣಿಜ್ಯ
0
ಜಾಗತಿಕ ಆರ್ಥಿಕ ಕ್ಷೋಭೆ : ಜಿಡಿಪಿ ಬೆಳವಣಿಗೆ ಮುನ್ನಂದಾಜು ಶೇ.7.2ಕ್ಕೆ ತಗ್ಗಿಸಿದ RBI
Share on WhatsAppShare on FacebookShare on Telegram

ಹಣದುಬ್ಬರ ತೀವ್ರ ಏರಿಕೆಯ ನಡುವೆಯೂ ಭಾರತೀಯ ರಿಸರ್ವ್ ಬ್ಯಾಂಕ್ (RBI) ರೆಪೊದರ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿದೆ. ಆದರೆ ಪ್ರಸಕ್ತ ವಿತ್ತೀಯ ವರ್ಷದ ಆರ್ಥಿಕ ಅಭಿವೃದ್ಧಿಯ ಮುನ್ನಂದಾಜನ್ನು ಗಣನೀಯವಾಗಿ ತಗ್ಗಿಸಿದೆ.

ADVERTISEMENT

ಮೂರು ದಿನಗಳ ಕಾಲ ನಡೆದ ದ್ವೈಮಾಸಿಕ ಹಣಾಕಾಸು ನೀತಿ ಪರಾಮರ್ಶೆಯ ನಂತರ ಬಡ್ಡಿದರ ಯಥಾಸ್ಥಿತಿ ಕಾಯ್ದುಕೊಳ್ಳುವ ನಿರ್ಧಾರವನ್ನು RBI ಗವರ್ನರ್ ಶಕ್ತಿಕಾಂತದಾಸ್ ಪ್ರಕಟಿಸಿದರು. ಪ್ರಸ್ತುತ ರೆಪೊ ದರ ಶೇ.4ರಷ್ಟಿದೆ. ರಿವರ್ಸ್ ರೆಪೊ ದರ ಶೇ.3.35ರಷ್ಟಿದೆ.

RBI ಬ್ಯಾಂಕುಗಳಿಗೆ ನೀಡುವ ಸಾಲದ ಮೇಲಿನ ಬಡ್ಡಿದರವನ್ನು ರೆಪೊದರ ಎಂದೂ, ಬ್ಯಾಂಕುಗಳು ಆರ್ಬಿಐನಲ್ಲಿ ಇಡುವ ಹಣಕ್ಕೆ ನೀಡುವ ಬಡ್ಡಿದರಕ್ಕೆ ರಿವರ್ಸ್ ರೆಪೊ ದರ ಎನ್ನಲಾಗುತ್ತದೆ.

ಪ್ರತಿ ಎರಡು ತಿಂಗಳಿಗೊಮ್ಮೆ RBI ಹಣಕಾಸು ನೀತಿ ಸಮಿತಿಯು ಸಭೆ ಸೇರಿ, ದೇಶದ ಹಣಕಾಸು ಪರಿಸ್ಥಿತಿ ಪರಾಮರ್ಶಿಸಿ ಬಡ್ಡಿದರ ನಿಗದಿ ಮಾಡುತ್ತದೆ.

ಪ್ರಸ್ತುತ ಕೋವಿಡ್ ಸಂಕಷ್ಟದಿಂದ ದೇಶದ ಆರ್ಥಿಕತೆ ಚೇತರಿಕೆಯತ್ತ ಸಾಗುತ್ತಿರುವುದರಿಂದ ಬಡ್ಡಿದರ ಏರಿಕೆ ಮಾಡದಿರಲು ನಿರ್ಧರಿಸಲಾಗಿದೆ. ಆದರೆ, ಈಗ ಭುಗಿಲೆದ್ದಿರುವ ಹಣದುಬ್ಬರವು ನಿಧಾನವಾಗಿ ತಗ್ಗಲಿದೆ ಎಂಬ ನಿರೀಕ್ಷೆಯನ್ನು ಹಣಕಾಸು ಸಮಿತಿ ಹೊಂದಿದೆ. ಹೀಗಾಗಿ ಪ್ರಸ್ತುತ ಆರ್ಬಿಐ ಮಿತಿಯಾದ ಶೇ.6ರ ಗಡಿಯನ್ನು ದಾಟಿದ್ದರೂ, 2022-23ನೇ ವರ್ಷದ ಸರಾಸರಿ ಹಣದುಬ್ಬರವು ಶೇ.5.7ರಷ್ಟಾಗಲಿದೆ ಎಂದು ಅಂದಾಜಿಸಿದೆ.

ಹಣಕಾಸು ನೀತಿ ಸಮಿತಿಯು 2022-23ರ ವಿತ್ತೀಯ ವರ್ಷದ ಜಿಡಿಪಿ ಬೆಳವಣಿಗೆ ದರವನ್ನು ಶೇ 7.2 ಕ್ಕೆ ತಗ್ಗಿಸಿದೆ. ವಿತ್ತೀಯ ವರ್ಷದ 23ರ ಜಿಡಿಪಿ ಬೆಳವಣಿಗೆಯು ಶೇ.7.8ರಷ್ಟಾಗಲಿದೆ ಎಂದು ಈ ಹಿಂದೆ ಅಂದಾಜಿಸಿತ್ತು. ಆದರೆ, ಉಕ್ರೇನ್-ರಷ್ಯಾ ಯುದ್ಧ, ಏರಿದ ಕಚ್ಚಾ ತೈಲ ಬೆಲೆ, ಏರುತ್ತಿರುವ ಹಣದುಬ್ಬರ ಇತ್ಯಾದಿ ಕಾರಣಗಳಿಂದಾಗಿ ಶೇ. 7.2ಕ್ಕೆ ಇಳಿಸಲಾಗಿದೆ.

2022-23ರ ಜಿಡಿಪಿ ಬೆಳವಣಿಗೆಯು ಮೊದಲ ಪ್ತೈಮಾಸಿಕದಲ್ಲಿ (ಏಪ್ರಿಲ್-ಜೂನ್ 2022) ಶೇ.16.2, ದ್ವಿತೀಯ ತ್ರೈಮಾಸಿಕದಲ್ಲಿ (ಜುಲೈ-ಸೆಪ್ಟೆಂಬರ್ 2022) ಶೇ.6.2 , ತೃತೀಯ ತ್ರೈಮಾಸಿಕದಲ್ಲಿ (ಅಕ್ಟೋಬರ್-ಡಿಸೆಂಬರ್ 2022) ಶೇ.4.1 ಮತ್ತು ನಾಲ್ಕನೇ ತ್ರೈಮಾಸಿಕದಲ್ಲಿ (ಜನವರಿ-ಮಾರ್ಚ್ 2023) ಶೇ.4 ರಷ್ಟಾಗಬಹುದು ಎಂದು ಮುನ್ನಂದಾಜಿಸಲಾಗಿದೆ. ಈ ಎಲ್ಲಾ ಮುನ್ನಂದಾಜುಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್ಲಿಗೆ 100 ಡಾಲರ್ ಇರುತ್ತದೆಂಬ ಆಧಾರದ ಮೇಲೆ ಮಾಡಲಾಗಿದೆ.

ಫೆಬ್ರವರಿ ಅಂತ್ಯದಿಂದ ಜಾಗತಿಕ ಕಚ್ಚಾ ತೈಲ ಬೆಲೆಯಲ್ಲಿನ ಅತಿಯಾದ ಏರಿಳಿತದಿಂದ ಕೂಡಿವೆ. ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳಿಂದಾಗಿ ತೀವ್ರವಾದ ಅನಿಶ್ಚಿತತೆಯು ಬೆಳವಣಿಗೆ ಮತ್ತು ಹಣದುಬ್ಬರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿವೆ. ಭವಿಷ್ಯದ ತೈಲ ಮತ್ತು ಸರಕುಗಳ ಬೆಲೆಯ ಅನಿಶ್ಚಿತತೆಯೂ ಭಾರತದ ಆರ್ಥಿಕ ಬೆಳವಣಿಗೆ ನಿಚ್ಛಳ ಪರಿಣಾಮ ಬೀರಲಿದೆ ಎಂದು ಶಕ್ತಿಕಾಂತ ದಾಸ್ ಹೇಳಿದ್ದಾರೆ.

ಪ್ರಸಕ್ತ ವಿತ್ತೀಯ ವರ್ಷದ ಮೊದಲ ಗಣಕಾಸು ನೀತಿ ಸಮಿತಿ ಸಭೆಯು ಪ್ರಮುಖವಾಗಿ ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಿದ ನಂತರದಲ್ಲಿ ರಷ್ಯಾ ಮೇಲೆ ಹೇರಲಾಗಿರುವ ಆರ್ಥಿಕ ನಿರ್ಬಂಧಗಳು, ಅದರಿಂದ ಜಾಗತಿಕ ಆರ್ಥಿಕತೆ ಮೇಲಾಗುವ ವ್ಯತಿರಿಕ್ತ ಪರಿಣಾಮಗಳು, ಈಗಾಗಲೇ ಉದ್ಭವಿಸಿರುವ ಜಾಗತಿಕ ರಾಜಕೀಯ ಉದ್ವಿಘ್ನತೆ, ಜಾಗತಿಕ ಮಾರುಕಟ್ಟೆಯಲ್ಲಿ ತೀವ್ರ ಏರಿಳಿತದಲ್ಲಿರುವ ಇಂಧನ ಬೆಲೆಗಳು, ಇನ್ನಿತರ ಸರಕುಗಳ ಬೆಲೆ ಏರಿಕೆ ಕುರಿತಾಗಿ ವಿಸ್ತೃತವಾಗಿ ಚರ್ಚಿಸಿದೆ. ಈ ಎಲ್ಲಾ ಅಂಶಗಳು ಭಾರತದ ಆರ್ಥಿಕತೆಯ ಬೆಳವಣಿಗೆಯ ಪಥದ ಮೇಲೆ ನಕಾರಾತ್ಮಕ ಪ್ರಭಾವ ಬೀರುವ ಅಂಶಗಳಾಗಿರುವುದರಿಂದ ಮುನ್ನಂದಾಜನ್ನು ಸೇ.7.8ರಿಂದ ಶೇ.7.2ಕ್ಕೆ ತಗ್ಗಿಸಲಾಗಿದೆ.

Tags: BJPCongress PartyCovid 19RBIಆರ್ಥಿಕ ಕ್ಷೋಭೆಜಿಡಿಪಿ ಬೆಳವಣಿಗೆಬಿಜೆಪಿ
Previous Post

ಗೋಕಾಕ್ ಪ್ರತ್ಯೇಕ ಜಿಲ್ಲೆಗೆ ಮುರುಘ ರಾಜೇಂದ್ರ ಸ್ವಾಮೀಜಿ ಹೇಳಿದ್ದೇನು?

Next Post

ಸೆಲ್ಫಿಗಾಗಿ ರೈಲಿನ ಇಂಜಿನ್‌ ಏರಿದ 16 ವರ್ಷದ ಬಾಲಕ, ಕರೆಂಟ್‌ ಹೊಡೆದು ಸಾವು!

Related Posts

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
0

ಸೋಷಿಯಲ್‌ ಮೀಡಿಯಾದಲ್ಲಿ ಆಕ್ಟೀವ್‌ ಆಗಿರುವ ನಟಿಯರಲ್ಲಿ ಖುಷಿ ಮುಖರ್ಜಿ (Khushi Mukherjee) ಕೂಡ ಒಬ್ಬರು. ಸದಾ ತುಂಡುಡುಗೆ ತೊಟ್ಟು ಸದ್ದು ಮಾಡುತ್ತಿರುವ ಬೆಡಗಿ ಎಂದೇ ಹೇಳಬಹುದು. ಇದೀಗ...

Read moreDetails

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
Next Post
ಲಾಕ್ ಡೌನ್ ಭೀತಿ ವಲಸೆ ಗ್ರಾಮೀಣ ಬದುಕಿಗೆ ತರುವ ಆಪತ್ತುಗಳೇನು?

ಸೆಲ್ಫಿಗಾಗಿ ರೈಲಿನ ಇಂಜಿನ್‌ ಏರಿದ 16 ವರ್ಷದ ಬಾಲಕ, ಕರೆಂಟ್‌ ಹೊಡೆದು ಸಾವು!

Please login to join discussion

Recent News

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada