• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

ಬ್ಯಾಕ್​ ಟು ಬ್ಯಾಕ್ ಎರಡು ಸಿಕ್ಸ್​ ಮತ್ತು ಒಂದು ಬೌಂಡರಿ ಬಾರಿಸಿ ಪಂದ್ಯವನ್ನು ಗೆದ್ದುಕೊಂಡ ಡೆಲ್ಲಿ..

ಪ್ರತಿಧ್ವನಿ by ಪ್ರತಿಧ್ವನಿ
April 18, 2026
in Top Story, ಇದೀಗ, ಕರ್ನಾಟಕ, ಕ್ರೀಡೆ
0
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Share on WhatsAppShare on FacebookShare on Telegram

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್‌ಗಳಿಂದ ಜಯಗಳಿಸಿತು.

ADVERTISEMENT
Siddaramaiah : ಸರ್ಕಾರಿ ಶಾಲೆಯಲ್ಲಿ ಓದಿದ ಸಿದ್ದರಾಮಯ್ಯ ಇಂಗ್ಲೀಷ್‌ ಎಷ್ಟು ಚೆನ್ನಾಗಿದೆ ನೋಡಿ.. #pratidhvani

ಆರ್‌ಸಿಬಿ ನೀಡಿದ್ದ 176 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಪರ ಟ್ರಿಸ್ಟಾನ್ ಸ್ಟಬ್ಸ್ ಅಜೇಯ 60 ರನ್‌ಗಳನ್ನು ಕಲೆಹಾಕಿ ಹೈಸ್ಕೋರರ್​ ಎನಿಸಿಕೊಂಡರು. ಚೇಸಿಂಗ್​ ಆರಂಭಿಸಿದ ಕೆಎಲ್ ರಾಹುಲ್ 34 ಎಸೆತಗಳಲ್ಲಿ 57 ರನ್ ಗಳಿಸಿದರೆ, ಡೇವಿಡ್ ಮಿಲ್ಲರ್ ಅಜೇಯ 22 ರನ್ ಗಳಿಸಿದರು. ನಾಯಕ ಅಕ್ಷರ್ ಪಟೇಲ್ 19 ಎಸೆತಗಳಲ್ಲಿ 26 ರನ್ ಗಳಿಸಿ ಗಾಯದಿಂದಾಗಿ ಅರ್ಧದಲ್ಲೇ ನಿರ್ಗಮಿಸಿದರು.

ಆದಾಗ್ಯೂ ಅದ್ಭುತ ಬೌಲಿಂಗ್​ ಪ್ರದರ್ಶನ ನೀಡಿದ್ದ ಆರ್​ಸಿಬಿ ಪಂದ್ಯವನ್ನು ಕೊನೆ ಹಂತಕ್ಕೆ ಕೊಂಡೊಯ್ದಿತು. ಕೊನೆಯ ಓವರ್​ನಲ್ಲಿ ಡೆಲ್ಲಿ ತಂಡಕ್ಕೆ 15 ರನ್​ಗಳು ಬೇಕಾಗಿದ್ದವು. ಆರಂಭಿಕ ಎರಡು ಎಸೆತಗಳಲ್ಲಿ 2 ರನ್​ ಕಲೆಹಾಕಿದ್ದ ಡೆಲ್ಲಿ ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಬ್ಯಾಕ್​ ಟು ಬ್ಯಾಕ್ ಎರಡು ಸಿಕ್ಸ್​ ಮತ್ತು ಒಂದು ಬೌಂಡರಿ ಬಾರಿಸಿ ಪಂದ್ಯವನ್ನು ಗೆದ್ದುಕೊಂಡರು.

ಇದನ್ನೂ ಓದಿ : ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಚೇಸಿಂಗ್‌ನ ಆರಂಭದಲ್ಲಿ ಭುವನೇಶ್ವರ್‌ ಕುಮಾರ್‌ ಮೂರು ವಿಕೆಟ್‌ ಕಿತ್ತು ಡೆಲ್ಲಿ ತಂಡಕ್ಕೆ ಆರಂಭಿಕ ಆಘಾತ ನೀಡಿದ್ದರು. ಆ ಮೂಲಕ ಡಿಸಿ ಕೇವಲ 18 ರನ್‌ಗಳಿಗೆ ಮೂರು ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ, ಕೆಎಲ್‌ ರಾಹುಲ್‌ ಹಾಗೂ ಟ್ರಿಸ್ಟನ್‌ ಸ್ಟಬ್ಸ್‌ 69 ರನ್‌ಗಳ ಜೊತೆಯಾಟವಾಡಿದರು. ರಾಹುಲ್ ತಮ್ಮ ಬ್ಯಾಟಿಂಗ್‌ನಲ್ಲಿ 34 ಎಸೆತಗಳಲ್ಲಿ 57 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು.

ನಂತರ, ಸ್ಟಬ್ಸ್‌ ಹಾಗೂ ಅಕ್ಷರ್‌ ಪಟೇಲ್‌ ಐದನೇ ವಿಕೆಟ್‌ಗೆ 47 ರನ್‌ ಗಳಿಸಿದರು. ಅಕ್ಷರ್‌ ಪಟೇಲ್‌ 26 ರನ್‌ ಗಳಿಸಿದ ಬಳಿಕ ರಿಟೈರ್ಡ್‌ ಹರ್ಟ್‌ ಆದರು. ಆದರೆ, ಕೊನೆಯವರೆಗೂ ಬ್ಯಾಟ್‌ ಮಾಡಿದ ಟ್ರಿಸ್ಟನ್‌ ಸ್ಟಬ್ಸ್‌ 47 ಎಸೆತಗಳಲ್ಲಿ ಅಜೇಯ 60 ರನ್‌ ಗಳಿಸಿದರು ಹಾಗೂ ಡೇವಿಡ್‌ ಮಿಲ್ಲರ್‌ (22*) ಅವರ ಜೊತೆಗೆ 45 ರನ್‌ ಜೊತೆಯಾಟವಾಡಿದರು. ಇದರೊಂದಿಗೆ ಡೆಲ್ಲಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಆರ್‌ಸಿಬಿ ಪರ ಈ ಸೀಸನ್‌ನಲ್ಲಿ ಫಿಲ್‌ ಸಾಲ್ಟ್‌ ಎರಡನೇ ಅರ್ಧಶತಕವನ್ನು ಬಾರಿಸಿದರು. ಅವರು ಆಡಿದ 38 ಎಸೆತಗಳಲ್ಲಿ 3 ಸಿಕ್ಸರ್‌ ಹಾಗೂ 4 ಬೌಂಡರಿಗಳೊಂದಿಗೆ 63 ರನ್‌ ಗಳಿಸಿದರು ಹಾಗೂ ವಿರಾಟ್‌ ಕೊಹ್ಲಿ ಜೊತೆ 52 ರನ್‌ ಮತ್ತು ದೇವದತ್‌ ಪಡಿಕ್ಕಲ್‌ ಜೊತೆ 47 ರನ್‌ಗಳ ಜೊತೆಯಾಟವನ್ನು ಆಡಿದರು. ಆರ್‌ಸಿಬಿ ಒಂದು ಹಂತದಲ್ಲಿ 10ರ ಸರಾಸರಿಯಲ್ಲಿ ರನ್‌ ಗಳಿಸಿತ್ತು. ಆದರೆ, ಡೆತ್‌ ಓವರ್‌ಗಳಲ್ಲಿ ಆರ್‌ಸಿಬಿ ಬ್ಯಾಟ್ಸ್‌ಮನ್‌ಗಳು ವಿಫಲರಾದರು. ಹಾಗಾಗಿ ಕೊನೆಯಲ್ಲಿ ಕೇವಲ 28 ರನ್‌ಗಳನ್ನು ಮಾತ್ರ ಗಳಿಸಲು ಸೀಮಿತವಾಗಿತ್ತು.

Tags: Akshar PatelBhuvaneshwar KumarChinnaswamy StadiumDelhi capitalsFil SaltIPL2026K L RahulM Chinnaswamy StadiumPratidhvaniRajat PatidarRoyal Challengers Benglore
Previous Post

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

Related Posts

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..
Top Story

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಸುಸ್ಥಿರ ಅಭಿವೃದ್ಧಿ ಗುರಿಗಳು (SDGs) ರಾಷ್ಟ್ರಗಳಿಗೆ ಬೆಳವಣಿಗೆ ಮತ್ತು ಸಸ್ಥಿರತೆಯನ್ನು ಸಮನ್ವಯಗೊಳಿಸುವ ಜಾಗತಿಕ ಚೌಕಟ್ಟನ್ನು ಒದಗಿಸುತ್ತವೆ. ಆದ್ದರಿಂದ ಅಭಿವೃದ್ಧಿ ಮತ್ತು ಸುಸ್ಥಿರತೆ ಹಾಗೂ ಒಳಗೊಳ್ಳುವಿಕೆಯ ಗುರಿಯ...

Read moreDetails
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada