‘ಹಿಂದೂಗಳ ಮೇಲೆ ನಡೆಯುವ ಹಲ್ಲೆಗೆ ನಾವು ಪ್ರತಿಕ್ರಿಯೆ ನೀಡಲು ಕತ್ತಿ ಹಿಡಿದರೆ ನಿಮಗೆ ಶವ ಹೂಳಲು ಜಾಗ ಇರುವುದಿಲ್ಲ’ ಎಂದು ವಿಶ್ವ ಹಿಂದೂ ಪರಿಷತ್ ರಾಜ್ಯ ಸಂಚಾಲಕ ಬಸವರಾಜ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬಜರಂಗದಳ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಖಂಡಿಸಿ ಶುಕ್ರವಾರ ಕರೆ ನೀಡಿದ್ದ ತುಮಕೂರು ನಗರ ಬಂದ್ ಸಮಯದಲ್ಲಿ ಏರ್ಪಡಿಸಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ‘ಹಿಂದೂಗಳ ಮೇಲೆ ಹಲ್ಲೆ, ಗೂಂಡಾಗಿರಿ ಮಾಡಿದರೆ, ಗೋ ಹತ್ಯೆ, ಲವ್ ಜಿಹಾದ್ ನಡೆಸಿದರೆ ಸುಮ್ಮನೆ ಬಿಡುವುದಿಲ್ಲ. ನಾವು ಬಹುಸಂಖ್ಯಾತರು, ನಮ್ಮೊಂದಿಗೆ ಬದುಕಬೇಕಾದರೆ ಸರಿಯಾಗಿ ಇರಬೇಕು. ನಾವು ಹೇಳಿದಂತೆ ಕೇಳಬೇಕು. ಇನ್ನು ಮುಂದೆ ನಿಮ್ಮ ಆಟ ನಡೆಯುವುದಿಲ್ಲ. ಕಾನೂನು ಕೈಗೆ ತೆಗೆದುಕೊಂಡರೆ ತಕ್ಕ ಶಾಸ್ತಿ ಮಾಡುತ್ತೇವೆ’ ಎಂದು ಹೇಳಿದ್ದಾರೆ.
‘ಹಿಂದೂ ಹೆಣ್ಣು ಮಕ್ಕಳ ಮೇಲೆ ಕಣ್ಣು ಹಾಕಿದರೆ ನಿಮಗೆ ಉಳಿಗಾಲವಿಲ್ಲ. ಕಣ್ಣೆತ್ತಿ ನೋಡಿದರೆ ಸುಮ್ಮನೆ ಬಿಡುವುದಿಲ್ಲ. ನಿಮ್ಮ ಹೆಣ್ಣು ಮಕ್ಕಳು ಉಳಿಯುವುದಿಲ್ಲ. ಈ ವೇದಿಕೆಯಿಂದಲೇ ಎಚ್ಚರಿಕೆ ನೀಡುತ್ತಿದ್ದೇವೆ’ ಎಂದು ಹೇಳಿದರು.
ಹಿಂದೂ ಜಾಗರಣ ವೇದಿಕೆ ರಾಜ್ಯ ಕಾರ್ಯದರ್ಶಿ ಉಲ್ಲಾಸ್, ‘ಧರ್ಮ ರಕ್ಷಣೆ ಮಾಡಲು ಹಿಂಸೆ ಅನಿವಾರ್ಯವಾಗಿದೆ. ಜಿಹಾದಿ ಭಯೋತ್ಪಾದಕರಿಗೆ ಒಳ್ಳೆ ಮಾತಿನಲ್ಲಿ ಹೇಳಿದರೆ ಅರ್ಥವಾಗುವುದಿಲ್ಲ. ಕ್ರಿಯೆಗೆ ಪ್ರತಿಕ್ರಿಯೆ ಕೊಡುತ್ತೇವೆ. ತಕ್ಕ ಪ್ರತಿಕ್ರಿಯೆ ಕೊಡಲು ಯುವಪಡೆ ಕಟ್ಟಲಾಗುವುದು. ರಾಷ್ಟ್ರ ರಕ್ಷಣೆಗೆ ರಸ್ತೆಗೆ ಇಳಿಯುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ತಿಳಿಸಿದರು.
ಸಿಎಂ ಬಸವರಾಜ್ ಬೊಮ್ಮಾಯಿ ಅವರು ಅನೈತಿಕ ಪೋಲಿಸ್ಗಿರಿಯನ್ನು ಬೆಂಬಲಿಸಿ ಮಾತಾಡಿದ ಪರಿಣಾಮ ರಾಜ್ಯದಲ್ಲಿ ಕೋಮು ಸಂಘಟನೆಗಳಿಗೆ ಶಕ್ತಿ ಬಂದಂತಾಗಿದೆ. ಬೀದಿ ಬೀದಿಗಳಲ್ಲಿ ತಮಗಿಷ್ಟ ಬಂದಾಗೆ ಪ್ರಜಾಪ್ರಭುತ್ವ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅನ್ಯ ಕೋಮಿನವರಿಗೆ ಬೆದರಿಕೆಯಾಕುವಂತಾ ಹೇಳಿಗಳನ್ನು ನೀಡುತ್ತಿದ್ದಾರೆ. ಸಿಎಂ ಉಚ್ಚರಿಸಿದ ಹೇಳಿಕೆಯನ್ನು ಸಂಘಟನೆಯ ಮುಖಂಡರುಗಳು ಪುನಃ ಉಚ್ಚರಿಸಿ ಅನ್ಯ ಧರ್ಮಿಯರಿಗೆ ಎಚ್ಚರಿಕೆ ರವಾನಿಸುತ್ತಿದ್ದಾರೆ.