• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

CM Siddaramaiah Cabinet | ಸಂಪುಟದಲ್ಲಿ ಬೆಂಬಲಿಗರ ಸೇರ್ಪಡೆಗೆ ಸಿದ್ದು-ಡಿಕೆಶಿ ಸರ್ಕಸ್..!

ಪ್ರತಿಧ್ವನಿ by ಪ್ರತಿಧ್ವನಿ
May 23, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
CM Siddaramaiah Cabinet | ಸಂಪುಟದಲ್ಲಿ ಬೆಂಬಲಿಗರ ಸೇರ್ಪಡೆಗೆ ಸಿದ್ದು-ಡಿಕೆಶಿ ಸರ್ಕಸ್..!
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಿನಿಂದಲೂ ಸಿಎಂ ಸ್ಥಾನ ಜಟಾಪಟಿ ಆಯ್ತು, ಈಗ ಸಚಿವ ಸಂಪುಟಕ್ಕೆ ಯಾರನ್ನ ಸೇರಿಸಿಕೊಳ್ಳ ಬೇಕು ಯಾರನ್ನ ಕೈ ಬಿಡಬೇಕು ಎನ್ನುವ ಗೊಂದಲ ಕಾಂಗ್ರೆಸ್‌ ಪಕ್ಷದಲ್ಲಿ ಉಂಟಾಗಿದೆ. ಇದರ ಮುಂದುವರೆದ ಭಾಗವಾಗಿ ಈಗ ರಾಜ್ಯದ ಕಾಂಗ್ರೆಸ್​ನ (Karnataka Congress) ಬಣ ರಾಜಕಾರಣ ಸಚಿವ ಸಂಪುಟ ರಚನೆಯಲ್ಲೂ ಮುಂದುವರಿದಿದೆ. ತಮ್ಮ ಬೆಂಬಲಿಗರನ್ನು ಸಂಪುಟದಲ್ಲಿ ಸೇರಿಸಲು ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಸರ್ಕಸ್ ನಡೆಸುತ್ತಿದ್ದಾರೆ. ಯಾರಿಗೆ ಸಚಿವ ಸ್ಥಾನ ನೀಡೋದು ಎಂದು ಕಾಂಗ್ರೆಸ್ ಹೈಕಮಾಂಡ್​ಗ್ ತಲೆ ಬಿಸಿಯಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ವಿಧಾನಸಭೆ ಅಧಿಕವೇಶ ನಡೆಯಲಿದ್ದು, ಮೇ 24ರಂದು ಮುಕ್ತಾಯವಾಗಲಿದೆ. ನಂತರ ಸಿಎಂ ಮತ್ತು ಡಿಸಿಎಂ ದೆಹಲಿಗೆ ತೆರಳಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ADVERTISEMENT

ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸೆಡ್ಡು ಹೊಡೆದು ತಮ್ಮ ಬೆಂಬಲಿಗರನ್ನು ಸಂಪುಟಕ್ಕೆ ಸೇರಿಸಲು ಕಸರತ್ತು ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಭಾರೀ ರಣತಂತ್ರ ರೂಪಿಸಲು ಪ್ಲಾನ್ ಮಾಡಿದ್ದಾರೆ. ಅದರಂತೆ ಸಚಿವ ಕೆ.ಜೆ.ಜಾರ್ಜ್‌ ಹಾಗೂ ಶಾಸಕ ಭೈರತಿ ಸುರೇಶ್ ಅವರ ಜೊತೆ ಗೌಪ್ಯ ಸ್ಥಳದಲ್ಲಿ ಆಪ್ತರ ಜೊತೆ ಮಾತುಕತೆ ನಡೆಸಿದ್ದಾರೆ. ನಾಯಕರ ನಡುವೆ ಮುಂದಿನ ನಡೆ ಬಗ್ಗೆ ಅರ್ಧಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ.

ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮಧ್ಯೆ ಭಾರೀ ಪೈಪೋಟಿ ನಡೆದಿತ್ತು. ಕೊನೆಯಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಮನವೊಲಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿತ್ತು. ಅದರಂತೆ ಸಿಎಂ ಸ್ಥಾನ ಸಿದ್ದರಾಮಯ್ಯ ಪಾಲಾಗಿದ್ದು, ಡಿಕೆಶಿ ಅವರು ಡಿಸಿಎಂ ಸ್ಥಾನಕ್ಕೆ ತೃಪ್ತಿ ಪಡುವಂತಾಯಿತು. ಹೈಕಮಾಂಡ್ ಇಬ್ಬರ ನಡುವೆ ಅಧಿಕಾರ ಹಂಚಿಕೆ ಸೂತ್ರ ರಚಿಸಿರುವ ಸಾಧ್ಯತೆ ಇದೆ ಎಂದು ಕೆಲವು ಮೂಲಗಳು ಅಭಿಪ್ರಾಯಪಟ್ಟಿದ್ದವು. ಆದರೆ, ಈ ವಿಚಾರವಾಗಿ ಎಐಸಿಸಿ ಅಧಿಕೃತ ಹೇಳಿಕೆಯನ್ನೇನೂ ನೀಡಿಲ್ಲ. ಈ ಬಗ್ಗೆ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲವಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆಯೇ ಎಂಬಿ ಪಾಟೀಲ್ ಅಧಿಕಾರ ಹಂಚಿಕೆ ಮಾತುಕತೆಯಾಗಿಲ್ಲ ಎಂದು ಹೇಳಿದ್ದಾರೆ.


ಇನ್ನು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಜೊತೆ ಎಂಟು ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಈ ಪೈಕಿ ಹೆಚ್ಚಿನವರು ಸಿದ್ದರಾಮಯ್ಯ ಅವರ ಬಣಕ್ಕೆ ಸೇರಿದವರಾಗಿದ್ದಾರೆ. ಸದ್ಯ ಸಂಪೂರ್ಣ ಸಂಪುಟ ರಚನೆಗೆ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದು, ಮೇ 24ರ ಒಳಗಾಗಿ ಪೂರ್ಣಗೊಳಿಸುವುದಾಗಿ ಹೈಕಮಾಂಡ್ ಸೂಚಿಸಿದೆ. ಆದರೆ ಯಾರಿಗೆಲ್ಲ ಮಂತ್ರಿಗಿರಿ ಸಿಗಲಿದೆ ಎಂಬದನ್ನು ಕಾದುನೋಡಬೇಕಿದೆ.

Tags: BJPBreaking Newsbz zameer ahenadcmsiddaramiahCongress PartydcmDKShivakumarlatestnewsmbpatilMinistersಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

DK Shivakumar | ಕನಕಪುರ ಕ್ಷೇತ್ರದ ಶಾಸಕರಾಗಿ ಡಿ.ಕೆ.ಶಿವಕುಮಾರ್‌ ಪ್ರಮಾಣ ವಚನ ಸ್ವೀಕಾರ

Next Post

5 Years Siddaramaiah CM | ಡಿಕೆಶಿ ಕನಸು ಭಗ್ನ.. 5 ವರ್ಷ ಸಿದ್ದರಾಮಯ್ಯ ಸಿಎಂ.. ಆಪ್ತ ಬಿಚ್ಚಿಟ್ಟ ಅಸಲಿ ಕಥೆ..!

Related Posts

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ
ಕರ್ನಾಟಕ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

by ಪ್ರತಿಧ್ವನಿ
March 4, 2026
0

ಬಹುಕಾಲದ ನಿರೀಕ್ಷೆಯಾಗಿರುವ ಎಂ.ಜಿ. ರಸ್ತೆಯ ಮರು ಡಾಂಬರೀಕರಣ ಕಾಮಗಾರಿಯನ್ನು ಗುರುವಾರದಿಂದ ಆರಂಭಿಸಲು ಬೆಂಗಳೂರು ಸೆಂಟ್ರಲ್​​ ಸಿಟಿ ಕಾರ್ಪೊರೇಷನ್​​ ಸಜ್ಜಾಗಿದೆ. ಮೊದಲ ಹಂತದಲ್ಲಿ ಟ್ರಿನಿಟಿ ಸರ್ಕಲ್‌ನಿಂದ ಕಬ್ಬನ್ ಪಾರ್ಕ್ ಪೊಲೀಸ್...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
Next Post
5 Years Siddaramaiah CM | ಡಿಕೆಶಿ ಕನಸು ಭಗ್ನ.. 5 ವರ್ಷ ಸಿದ್ದರಾಮಯ್ಯ ಸಿಎಂ.. ಆಪ್ತ ಬಿಚ್ಚಿಟ್ಟ ಅಸಲಿ ಕಥೆ..!

5 Years Siddaramaiah CM | ಡಿಕೆಶಿ ಕನಸು ಭಗ್ನ.. 5 ವರ್ಷ ಸಿದ್ದರಾಮಯ್ಯ ಸಿಎಂ.. ಆಪ್ತ ಬಿಚ್ಚಿಟ್ಟ ಅಸಲಿ ಕಥೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada