• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನೈಜ, ವಸ್ತುಸ್ಥಿತಿ ಆಧಾರಿತ ಪ್ರಣಾಳಿಕೆ ಬಿಜೆಪಿ ಗುರಿ: ಸಚಿವ ಡಾ. ಕೆ. ಸುಧಾಕರ್‌

ಪ್ರತಿಧ್ವನಿ by ಪ್ರತಿಧ್ವನಿ
February 13, 2023
in ಕರ್ನಾಟಕ, ರಾಜಕೀಯ
0
ನೈಜ, ವಸ್ತುಸ್ಥಿತಿ ಆಧಾರಿತ ಪ್ರಣಾಳಿಕೆ ಬಿಜೆಪಿ ಗುರಿ: ಸಚಿವ ಡಾ. ಕೆ. ಸುಧಾಕರ್‌
Share on WhatsAppShare on FacebookShare on Telegram

ಬೆಂಗಳೂರು: ಭಾರತೀಯ ಜನತಾ ಪಕ್ಷಕ್ಕೆ ಪ್ರಣಾಳಿಕೆ ಕೇವಲ ಘೋಷಣೆಗೆ ಸೀಮಿತವಾದ ಕಾರ್ಯಕ್ರಮಗಳಲ್ಲ. ಬದಲಾಗಿ ಇದು ಅಭಿವೃದ್ಧಿಗೆ ಪೂರಕ ಹಾಗೂ ಜನರ ಆಶೋತ್ತರಗಳಿಗೆ ಸ್ಪಂದಿಸುವ ಭಗವದ್ಗೀತೆಗೆ ಸಮನಾಗಿರುವ ಯೋಜನೆಗಳು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ನಡೆದ ಪ್ರಣಾಳಿಕೆ  ಸಲಹಾ ಸಂಗ್ರಹ ಅಭಿಯಾನದ ಸಮಿತಿಯ ಜಿಲ್ಲಾ ಸಂಚಾಲಕರು ಮತ್ತು ಸಹ ಸಂಚಾಲಕರ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದ ಜನರ ಸದಾಶಯಗಳನ್ನು ಪೂರೈಸುವ ಪ್ರಣಾಳಿಕೆ ಹೊರತರಲು ಯೋಜನೆ ಸಿದ್ಧವಾಗಿದೆ.  31 ಜಿಲ್ಲೆಗಳ ಸಂಚಾಲಕರು, ಸಹ ಸಂಚಾಲಕರು, ಪ್ರಣಾಳಿಕೆ ಸಮಿತಿ ಸದ್ಯರು ಸೇರಿದಂತೆ ಎಲ್ಲರೂ ಮುಂದಿನ ಬಿಜೆಪಿ ಸರ್ಕಾರದ ಗುರಿ ಯಾವುದಿರಬೇಕು ಅನ್ನುವ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ ಎಂದರು.

ಬಿಜೆಪಿಗೆ ಪ್ರಣಾಳಿಕೆ ಭಗವದ್ಗೀತೆಯಷ್ಟೇ ಪವಿತ್ರವಾಗಿದೆ.  ಪಕ್ಷ ಘೋಷಿಸುವ ಪ್ರತಿಯೊಂದು ಕಾರ್ಯಕ್ರಮಗಳು ಕೂಡ ವಿಭಿನ್ನವಾಗಿರಲಿದ್ದು, ನೈಜವಾಗಿರಲಿದೆ.  ರಾಜ್ಯದ ವಸ್ತುಸ್ಥಿತಿ, ಆರ್ಥಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿಯ ನೀಲನಕಾಶೆ ಸಿದ್ಧಪಡಿಸಲಾಗುವುದು. ರಾಜ್ಯದ ಜನರ ಸದಾಶಯಗಳು ಪ್ರಣಾಳಿಕೆಯಲ್ಲಿ ಇರಲಿದ್ದು, ಪ್ರತಿಯೊಂದು ಯೋಜನೆಗಳ ಅನುಷ್ಠಾನಕ್ಕೆ ನಿಗದಿತ ಸಮಯವನ್ನು ಕೂಡ ಫಿಕ್ಸ್‌ ಮಾಡಲಾಗುವುದು ಎಂದು ಹೇಳಿದರು.

ಪ್ರಣಾಳಿಕೆ ಜನರ ಧ್ವನಿಯಾಗಿರಲಿದೆ. ಹಳ್ಳಿಯಿಂದ ಹಿಡಿದು ರಾಜಧಾನಿ ತನಕ ಎಲ್ಲಾ ಧರ್ಮದ, ಜಾತಿಯ  ಸಂಘಟನೆಗಳು, ಚುನಾಯಿತ ಪ್ರತಿನಿಧಿಗಳು, ಪದಾಧಿಕಾರಿಗಳು, ವೃತ್ತಿಪರರು ಹೀಗೆ ಸಾಮಾನ್ಯರಿಂದ ಹಿಡಿದು  ಎಲ್ಲರನ್ನೂ ಭೇಟಿ ಮಾಡಿ, ಸಂವಾದ ಮಾಡಿ ಅವರ ಅಭಿಪ್ರಾಯ ಶೇಖರಣೆ ಮಾಡಿ ನಿಗದಿತ ಕಾರ್ಯಕ್ರಮವನ್ನು ಸರ್ಕಾರ ಯಾವ ರೀತಿ ಕೊಡ್ಬೇಕು ಅನ್ನುವ ಬಗ್ಗೆ ಯೋಜನೆ ರೂಪಿಸಲಾಗಿದೆ. ವಾಟ್ಸ್‌’ಆಪ್‌, ಇ-ಮೇಲ್‌, ಚಾಟ್‌ಬೋಟ್‌ ಸೇರಿದಂತೆ ತಂತ್ರಜ್ಞಾನದ  ಸಹಕಾರ ಪಡೆದುಕೊಳ್ಳಲಾಗುವುದ ಎಂದರು.

ಪ್ರತಿಯೊಂದು  ಮಂಡಲದಲ್ಲಿ 25 ಸಲಹಾ ಬಾಕ್ಸ್‌ಗಳನ್ನು ನಿರ್ದಿಷ್ಟ ಸ್ಥಳಗಳಲ್ಲಿ ಇಡಲಾಗಿದೆ. ಜನರು ಪತ್ರದ ಮೂಲಕ ಸಲಹೆ ಬರೆದು, ಅದರಲ್ಲಿ ಹಾಕಿದರೆ, ಅದನ್ನು ವಿಶ್ಲೇಷಣೆ ಮಾಡಿ ಪ್ರಣಾಳಿಕೆಯಲ್ಲಿ ಹೇಗೆ ತರಬೇಕು ಅನ್ನುವುದನ್ನು ಚರ್ಚೆ ಮಾಡಲಾಗುವುದು. ರಾಜ್ಯದ ಜನರ ಭವಿಷ್ಯ ರೂಪಿಸಲು ಎಲ್ಲಾ ರೀತಿಯ ಕಾರ್ಯತಂತ್ರಗಳನ್ನು ಮಾಡಲಾಗುವುದು ಎಂದರು.

ಪ್ರಣಾಳಿಕೆಯಲ್ಲಿ ಕಟ್ಟಕಡೆಯ ವ್ಯಕ್ತಿಗೆ ಸಮಾನತೆ, ಸಾಮಾಜಿಕ ನ್ಯಾಯ ಸಿಗುವ ಹಾಗೇ ಕೆಲಸ ಮಾಡಿ ಸಮೃದ್ಧಿ, ಸುಂದರ ಕರ್ನಾಟಕ್ಕೆ ಭದ್ರ ಬುನಾಧಿ ಹಾಕಲಾಗುವುದು. ನವ ಭಾರತದ ನವ ಕರ್ನಾಟಕಕ್ಕೆ ಇದು ನೀಲನಕಾಶೆಯಾಗಿದೆ.  2030ಕ್ಕೆ ಟ್ರಿಲಿಯನ್‌ ಡಾಲರ್‌ ಆರ್ಥಿಕ ಪ್ರಧಾನಿ ನರೇಂದ್ರ ಮೋದಿ ಕನಸಿಗೆ  20% ಅಧಿಕ ರಾಜ್ಯದ ಕೊಡುಗೆ ಇರಬೇಕು ಅನ್ನುವ ನಿಟ್ಟಿನಲ್ಲಿ ಪ್ರಣಾಳಿಕೆ ಸಿದ್ಧವಾಗಲಿದೆ ಎಂದು ತಿಳಿಸಿದರು.

ಪಾಪದ ಕೆಲಸ ಮಾಡಲ್ಲ

ಬಿಜೆಪಿ ಮತ ಕಸಿಯಲು, ಸುಳ್ಳು ಆಶ್ವಾಸನೆಗಳನ್ನು ನೀಡುವಂತಹ ಪಾಪದ ಕೆಲಸ ಮಾಡುವುದಿಲ್ಲ. ಬದಲಾಗಿ ಜನ ಸಾಮಾನ್ಯರ ಬದುಕು ಹಸನಾಗಲು, ಇವತ್ತಿನ ಸ್ಥಿತಿಯಲ್ಲಿ ಯಾವೆಲ್ಲಾ ಸಾಧ್ಯತೆ ಇದೆ, ಅದನ್ನು ಯಾವ ರೀತಿಯಲ್ಲಿ ಪೂರೈಸಬಹುದು ಮತ್ತು ಸಮಯ ನಿಗದಿ ಮಾಡಿ ಕಾರ್ಯಕ್ರಮವನ್ನು ಪೂರ್ಣಮಾಡುವುದನ್ನೇ ಗುರಿಯಾಗಿರಿಸಿಕೊಂಡಿದೆ.  ಬೆಂಗಳೂರು ಅಭಿವೃದ್ಧಿಯ ಎಂಜಿನ್‌ ಆಗಿರುವುದರಿಂದ ರಾಜಧಾನಿಗೆ ವಿಶೇಷ ಒತ್ತು ಹಾಗೂ ಕಾಳಜಿ ನೀಡುವ ಬಗ್ಗೆಯೂ ಚರ್ಚೆ ನಡೆಸಲಾಗುವುದು ಎಂದರು.  

Tags: ಬಿಜೆಪಿಬಿಜೆಪಿ ಪ್ರಣಾಳಿಕೆಸಚಿವ ಡಾ. ಕೆ. ಸುಧಾಕರ್‌
Previous Post

Nalin Kumar Kateel: ಸಿದ್ದು ಡಿಕೆ ಕುಮಾರಣ್ಣಂಗೆ ಹೇಗೆ ವ್ಯಂಗ್ಯ ಮಾಡಿದ್ರು ನೋಡಿ ಕಟೀಲ್..! | #pratidhvaninews

Next Post

Pratap Simha: ಬೆಂ-ಮೈ ಎಕ್ಸ್‌ಪ್ರೆಸ್‌ವೇ ಚಾಲನೆಗೆ ಮುಹೂರ್ತ | #pratidhvaninews

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
Pratap Simha: ಬೆಂ-ಮೈ ಎಕ್ಸ್‌ಪ್ರೆಸ್‌ವೇ ಚಾಲನೆಗೆ ಮುಹೂರ್ತ | #pratidhvaninews

Pratap Simha: ಬೆಂ-ಮೈ ಎಕ್ಸ್‌ಪ್ರೆಸ್‌ವೇ ಚಾಲನೆಗೆ ಮುಹೂರ್ತ | #pratidhvaninews

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada