• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

IAS ಅಧಿಕಾರಿ ನೇಮಿಸುವ ಹುದ್ದೆಗೆ KAS ಅಧಿಕಾರಿಗಳ ನೇಮಕ..! ಇದು ಹೇಗೆ ಸಾಧ್ಯ..?

ಕೃಷ್ಣ ಮಣಿ by ಕೃಷ್ಣ ಮಣಿ
July 5, 2023
in ಅಂಕಣ, ಅಭಿಮತ
0
IAS ಅಧಿಕಾರಿ ನೇಮಿಸುವ ಹುದ್ದೆಗೆ KAS ಅಧಿಕಾರಿಗಳ ನೇಮಕ..! ಇದು ಹೇಗೆ ಸಾಧ್ಯ..?
Share on WhatsAppShare on FacebookShare on Telegram

ರಾಜ್ಯ ಸರ್ಕಾರದಲ್ಲಿ ಆಡಳಿತ ಕೆಲಸದಲ್ಲಿ ಪ್ರಮುಖ ಪಾತ್ರ ವಹಿಸೋದು ಅಧಿಕಾರಿ ವರ್ಗ ಎನ್ನಬಹುದು. ಇದೇ ಕಾರಣಕ್ಕೆ ಐಎಎಸ್‌ ಅಧಿಕಾರಿಗಳು ಹಾಗು ಕೆಎಎಸ್‌ ಅಧಿಕಾರಿಗಳು ಎಂದು ವರ್ಗೀಕರಿಸಲಾಗುತ್ತದೆ. ಕೇಂದ್ರ ಲೋಕಸೇವಾ ಆಯೋಗದ ಮೂಲಕ ಆಯ್ಕೆಯಾಗುವ ಅಧಿಕಾರಿಗಳು, ಭಾರತೀಯ ನಾಗರಿಕ ಸೇವೆಗೆ ಬರುತ್ತಾರೆ. ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಆಯ್ಕೆಯಾಗುವ ಅಧಿಕಾರಿಗಳು ಕರ್ನಾಟಕ ಸೇವೆಗೆ ಆಯ್ಕೆಯಾಗುತ್ತಾರೆ. ಭಾರತೀಯ ಲೋಕಸೇವಾ ಆಯೋಗದಲ್ಲಿ ಬರುವ ಅಧಿಕಾರಿಗಳು ಜಿಲ್ಲಾ ಮಟ್ಟದ ಅಧಿಕಾರಿಗಳು, ಪ್ರಮುಖ ಸಂಸ್ಥೆಗಳ ನಿರ್ದೇಶಕರು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಆಗುತ್ತಾರೆ. ಆದರೆ ಕರ್ನಾಟಕ ಸೇವೆಗೆ ಬರುವ ಅಧಿಕಾರಿಗಳು ತಾಲೂಕು ಹಾಗು ಜಿಲ್ಲಾ ಮಟ್ಟದಲ್ಲಿ IAS, IPS ಅಧಿಕಾರಿಗಳ ಕೈಕೆಳಗೆ ಕೆಲಸ ಮಾಡುತ್ತಾರೆ. ಇದು ನಿಯಮ. ಕೆಲವೊಮ್ಮೆ ರಾಜ್ಯ ಲೋಕಸೇವಾ ಆಯೋಗದ ಮೂಲಕ ಆಯ್ಕೆಯಾಗುವ ಅಧಿಕಾರಿಗಳಿಗೆ ಪ್ರಮೋಷನ್‌‌ ಮೂಲಕ IAS, IPS ಗ್ರೇಡ್‌‌ ಕೊಡುವ ಅವಕಾಶವಿದೆ. ಆದರೆ ಕರ್ನಾಟಕದಲ್ಲಿ ಪ್ರಮೋಷನ್‌‌ ಕೊಡದೆಯೂ IAS ಅಧಿಕಾರಿಗಳಿಗೆ ನೀಡುವ ಪೋಸ್ಟ್‌ ನೀಡಲಾಗಿದೆ.

ADVERTISEMENT

ಚಿದಾನಂದ ಸದಾಶಿವಾ ವಟಾರೆಗೆ IAS ಸಮನಾದ ಹುದ್ದೆ..!

ಕಾಂಗ್ರೆಸ್‌ ಸರ್ಕಾರದಲ್ಲಿ ಜೂನ್‌ 30ರಂದು ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗದ ಸ್ಮಾರ್ಟ್‌ ಸಿಟಿ ಲಿಮಿಟೆಡ್‌‌ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಚಿದಾನಂದ ಸದಾಶಿವ ವಟಾರೆ ಅವರನ್ನು ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತಕ್ಕೆ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ಆದರೆ ಈ ಹಿಂದೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತಕ್ಕೆ ವ್ಯವಸ್ಥಾಪಕ ನಿರ್ದೇಶಕರಾಗಿ ನಿಯೋಜನೆಗೊಂಡಿದ್ದು, ಕೇವಲ ಐಎಎಸ್‌ ಅಧಿಕಾರಿಗಳು. ಆದರೆ ಇದೀಗ ಕೆಎಎಸ್‌ ಅಧಿಕಾರಿ ಆಗಿರುವ‌ ಚಿದಾನಂದ ಸದಾಶಿವ ವಟಾರೆ ಅವರನ್ನು ನೇಮಕ ಮಾಡಲಾಗಿದೆ. ಇದು ಯಾವ ಉದ್ದೇಶ ಅಥವಾ ಏನು ಕಾರಣ ಅನ್ನೋದು ಸ್ವತಃ ಅಧಿಕಾರಿಗಳ ವರ್ಗಕ್ಕೂ ತಿಳಿಯದ ನಿಗೂಢ ಆಗಿದೆ. ಕೆಎಎಸ್‌ ಅಧಿಕಾರಿಗಳನ್ನು ನೇಮಿಸುವುದಾಗಿದ್ದರೂ ಸಾಕಷ್ಟು ಅಧಿಕಾರಿಗಳು ಇದ್ದರೂ ಎನ್ನುವ ಮಾತು ಅಧಿಕಾರಿಗಳ ವರ್ಗದಲ್ಲಿ ಕೇಳಿ ಬರುತ್ತಿದೆ.
‌

ಈ ಹಿಂದೆ ಯಾವೆಲ್ಲಾ ಅಧಿಕಾರಿಗಳು ನೇಮಕ ಆಗಿದ್ದರು..?

ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರಾಗಿ ಈ ಹಿಂದೆ ಮಂಜುಶ್ರೀ IAS, ಲತಾ ಕುಮಾರಿ IAS, ನಾಗರಾಜ್ IAS, ಸೋಮಶೇಖರ್‌ IAS, ರಂಗಪ್ಪ IAS ಸೇರಿದಂತೆ ಸಾಕಷ್ಟು ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಆದರೆ ಇದೀಗ ಕೆಎಎಸ್‌ ಅಧಿಕಾರಿ ಚಿದಾನಂದ ಸದಾಶಿವಾ ವಟಾರೆ ನೇಮಿಸಿದ ಉದ್ದೇಶ ಏನು ಎನ್ನುವ ಪ್ರಶ್ನೆ ಕೇಳಿ ಬರುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರದ ಅಸ್ತಿತ್ವಕ್ಕೆ ಬಂದ ಬಳಿಕ ವರ್ಗಾವಣೆ ವ್ಯವಹಾರ ನಡೆಯುತ್ತಿದೆ ಎನ್ನುವ ಆರೋಪ ಕೇಳಿ ಬರುತ್ತಿರುವ ಹೊತ್ತಿನಲ್ಲಿ ಉನ್ನತ ಮಟ್ಟದ ಹುದ್ದೆಗೆ ಐಎಎಸ್‌ ಅಧಿಕಾರಿ ನೇಮಿಸುವ ಬದಲು ಕೆಎಎಸ್‌‌ ಅಧಿಕಾರಿ ನೇಮಿಸಿದ್ದು, ಸಾಕಷ್ಟು ಅನುಮಾನಗಳಿಗೂ ಕಾರಣ ಆಗುತ್ತಿದೆ. ಇದಕ್ಕೆ ಕಾರಣ ಏನು ಅನ್ನೋದನ್ನು ಬಲ್ಲವರೇ ಹೇಳಬೇಕು. ಕೆಎಎಸ್‌‌ ಅಧಿಕಾರಿ ನೇಮಿಸುವುದಾದರೆ ಪ್ರಮೋಷನ್‌ ಆದರೂ ಕೊಡಬೇಕಿತ್ತು ಅಲ್ಲವೇ..?

ಕೃಷ್ಣಮಣಿ

Tags: CMSiddaramaiahCongress GovernmentDKShivakumarIASKASKAS officer
Previous Post

ಮಣಿಪುರದ ಹಿಂಸಾಚಾರ ಮತ್ತು ಬಿಜೆಪಿಯ ಹುನ್ನಾರಗಳು

Next Post

ಒಂದು ಕಾಲದಲ್ಲಿ ಬೇಡವಾದ ನಾಯಕ ಈಗ ಬೇಕಾಗಿದ್ದು ಹೇಗೆ..? ಕಾಲಾಯ ತಸ್ಮೈ ನಮಃ

Related Posts

Top Story

ಸೆಟ್ಟೇರಿತು ವಿಜಯ್ ದೇವರಕೊಂಡ ಹೊಸ ಸಿನಿಮಾ…ರೌಡಿಬಾಯ್ ಗೆ ಕೀರ್ತಿ ಸುರೇಶ್ ನಾಯಕಿ

by ಪ್ರತಿಧ್ವನಿ
October 12, 2025
0

ವಿಜಯ್ ದೇವರಕೊಂಡ ಹೊಸ ಸಿನಿಮಾದ ಮುಹೂರ್ತ ಸಂಭ್ರಮ.. ಟಾಲಿವುಡ್ ನಟ ವಿಜಯ್ ದೇವರಕೊಂಡ ಹೊಸ ಸಿನಿಮಾ ಸೆಟ್ಟೇರಿದೆ.‌ ಹೈದರಾಬಾದ್ ನಲ್ಲಿ ನಿನ್ನೆ ಮುಹೂರ್ತ ನೆರವೇರಿದ್ದು, ಖ್ಯಾತ ನಿರ್ಮಾಪಕ...

Read moreDetails

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

October 11, 2025

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

October 11, 2025
Next Post
ಹೊಸ ಶತ್ರುಗಳನ್ನು ಸೋಲಿಸಲು ಒಂದಾದ ಹಳೇ ಶತ್ರುಗಳು..!

ಒಂದು ಕಾಲದಲ್ಲಿ ಬೇಡವಾದ ನಾಯಕ ಈಗ ಬೇಕಾಗಿದ್ದು ಹೇಗೆ..? ಕಾಲಾಯ ತಸ್ಮೈ ನಮಃ

Please login to join discussion

Recent News

Top Story

ಸೆಟ್ಟೇರಿತು ವಿಜಯ್ ದೇವರಕೊಂಡ ಹೊಸ ಸಿನಿಮಾ…ರೌಡಿಬಾಯ್ ಗೆ ಕೀರ್ತಿ ಸುರೇಶ್ ನಾಯಕಿ

by ಪ್ರತಿಧ್ವನಿ
October 12, 2025
DK Shivakumar: ಜೆ.ಪಿ. ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಪುತ್ಥಳಿ ‌ಮರುಸ್ಥಾಪನೆ ಭರವಸೆ..!!
Top Story

DK Shivakumar: ಜೆ.ಪಿ. ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಪುತ್ಥಳಿ ‌ಮರುಸ್ಥಾಪನೆ ಭರವಸೆ..!!

by ಪ್ರತಿಧ್ವನಿ
October 12, 2025
Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸೆಟ್ಟೇರಿತು ವಿಜಯ್ ದೇವರಕೊಂಡ ಹೊಸ ಸಿನಿಮಾ…ರೌಡಿಬಾಯ್ ಗೆ ಕೀರ್ತಿ ಸುರೇಶ್ ನಾಯಕಿ

October 12, 2025
DK Shivakumar: ಜೆ.ಪಿ. ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಪುತ್ಥಳಿ ‌ಮರುಸ್ಥಾಪನೆ ಭರವಸೆ..!!

DK Shivakumar: ಜೆ.ಪಿ. ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಪುತ್ಥಳಿ ‌ಮರುಸ್ಥಾಪನೆ ಭರವಸೆ..!!

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada