• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಜೆಪಿ ಬುಡಕ್ಕೆ ಬಿಸಿ ನೀರು ಬಿಟ್ಟ ರೆಡ್ಡಿ-ರಾಮುಲು!

ಪ್ರತಿಧ್ವನಿ by ಪ್ರತಿಧ್ವನಿ
January 27, 2025
in Top Story, ಕರ್ನಾಟಕ, ರಾಜಕೀಯ
0
ಬಿಜೆಪಿ ಬುಡಕ್ಕೆ ಬಿಸಿ ನೀರು ಬಿಟ್ಟ ರೆಡ್ಡಿ-ರಾಮುಲು!
Share on WhatsAppShare on FacebookShare on Telegram

ಧರಣೀಶ್ ಬೂಕನಕೆರೆ
ರಾಜಕೀಯ ವಿಶ್ಲೇಷಕರು

ADVERTISEMENT

ಅಧಿಕಾರವೇ ಹಾಗೆ; ಏನೇನೋ ಕನಸು ಬಿತ್ತುತ್ತದೆ. ಮುನಿಸು ತರಿಸುತ್ತದೆ. ವಿರಸ ಉಂಟುಮಾಡುತ್ತದೆ. ಅದರಿಂದಾಗಿ ಅಧಿಕಾರದಲ್ಲಿದ್ದಾಗ ಕಿತ್ತಾಡುವುದು ಸಹಜ. ಆದರೆ ರಾಜ್ಯ ಬಿಜೆಪಿ ನಾಯಕರು ವಿಪಕ್ಷದಲ್ಲಿರುವಾಗಲೂ ವಿರಮಿಸದೆ ಪರಸ್ಪರ ವಿಷ ಕಾರಿಕೊಳ್ಳುತ್ತಿದ್ದಾರೆ. ಮೊದಲು ವಿಜಯೇಂದ್ರ ಮತ್ತು ಬಸವನಗೌಡ ಪಾಟೀಲ್ ಯತ್ನಾಳ್ ಬಣ ಬಡಿದಾಟ. ನಂತರ ವಿಜಯೇಂದ್ರ-ರಮೇಶ್ ಜಾರಕಿಹೊಳಿ, ವಿಜಯೇಂದ್ರ-ಯತ್ನಾಳ್ ನಡುವೆ ವೈಯಕ್ತಿಕ ಕಚ್ಚಾಟ. ನಡುವೆ ರೇಣುಕಾಚಾರ್ಯ ಮತ್ತಿತರರದ್ದು ಪೋಷಕ ಪಾತ್ರದಲ್ಲಿ ಉತ್ತಮ ಪ್ರದರ್ಶನ.
ಇವರೆಲ್ಲಾ ವರ್ಷದಿಂದ ನಡೆಸಿದ್ದ ಕಾದಾಟವನ್ನು ಕ್ಷಣ ಮಾತ್ರದಲ್ಲಿ ಕಣ್ಮರೆ ಮಾಡಿದ್ದಾರೆ ರೆಡ್ಡಿ-ರಾಮುಲು. ಒಂದು ಕಾಲದ ಆಪ್ತಮಿತ್ರರು, ಹಾಲಿ ಬದ್ದ ವೈರಿಗಳೂ ಆದ ಜನಾರ್ದನ ರೆಡ್ಡಿ-ಶ್ರೀರಾಮುಲು ರಂಪಾಟಕ್ಕೆ ಬಿಜೆಪಿ ಹೈಕಮಾಂಡ್ ನಾಯಕರೇ ಬೆಚ್ಚಿ ಬಿದ್ದಿದ್ದಾರೆ. ಅಷ್ಟಲ್ಲದಿದ್ದರೆ ಪತ್ರಿಕಾಗೋಷ್ಠಿ ಮಾಡುತ್ತಿದ್ದಂತೆ ರಾಮುಲುಗೆ ಜೆಪಿ ನಡ್ಡಾ ಫೋನ್ ಮಾಡುತ್ತಿರಲಿಲ್ಲ. ಮರುದಿನವೇ ದೆಹಲಿಗೆ ಬರುವಂತೆ ವಿಜಯೇಂದ್ರಗೆ ಕರೆ ಬರುತ್ತಿರಲಿಲ್ಲ. ಇಷ್ಟು ದಿನ ತಾವೇ ನೇಮಿಸಿದ ರಾಜ್ಯಾಧ್ಯಕ್ಷರ ಅರ್ಹತೆ-ಸಾಮರ್ಥ್ಯಗಳನ್ನು ಹಾದಿ-ಬೀದಿಯಲ್ಲಿ ಹರಾಜಿಗಿಟ್ಟಾಗಲೂ ಹಾಜರಾಗದಿದ್ದ ಹೈಕಮಾಂಡ್ ನಾಯಕರು ರೆಡ್ಡಿ-ರಾಮುಲು ಗುಟುರಿಗೆ ಗಲಿಬಿಲಿಯಾಗಿದ್ದಾರೆ ಎನ್ನುವುದಕ್ಕೆ ಇದಕ್ಕಿಂತ ಉದಾಹರಣೆ ಬೇಕೇ?

ಅನುಮಾನವೇ ಇಲ್ಲ, ಇದು ರೆಡ್ಡಿ-ರಾಮುಲು ನಡುವಿನ ವೈಯಕ್ತಿಕ ಸಮಸ್ಯೆ. ಅದಕ್ಕೆ ಹಣವೂ ಸೇರಿದಂತೆ ಹಲವು ಆಯಾಮಗಳಿವೆ. ತಾನು ಜೈಲಿಗೆ ಹೋದಾಗ ಅಂತರ ಕಾಯ್ದುಕೊಂಡರು, ಮರಳಿ ಬಿಜೆಪಿಗೆ ಸೇರಿಸಲು ಪ್ರಯತ್ನಿಸಲಿಲ್ಲ, ಹೊಸ ಪಕ್ಷ ಕಟ್ಟಿದಾಗ ಜೊತೆಗೆ ಬರಲಿಲ್ಲ ಎನ್ನುವವು ರಾಮುಲು ಬಗ್ಗೆ ರೆಡ್ಡಿಗೆ ಇರುವ ರಾಜಕೀಯ ತಕರಾರುಗಳು. ರೆಡ್ಡಿಯಿಂದ ನನ್ನ ರಾಜಕೀಯ ಹಾದಿಗೆ ಎಡರು-ತೊಡರಾಯಿತು. ಬಿಜೆಪಿಗೆ ಸೇರಿಸುವ ನನ್ನ ಪ್ರಯತ್ನ ಗೌಣವಾಯಿತು. ಹೊಸ ಪಕ್ಷ ಕಟ್ಟಿ ಸೊತ್ತಿದ್ದ ನಾನು ಮತ್ತೊಂದು ಪ್ರಯೋಗಕ್ಕೆ ಒಡ್ಡಿಕೊಳ್ಳಲು ಒಪ್ಪದಿದ್ದುದೇ ಪ್ರಮಾದವಾಯಿತು ಎನ್ನುವವು ರೆಡ್ಡಿ ಬಗ್ಗೆ ರಾಮುಲುಗಿರುವ ಸಮಸ್ಯೆಗಳು.


ಆದರೆ ಬಿಜೆಪಿಗಿರುವ ಸಮಸ್ಯೆಗಳು ಬೇರೆ. ಬಿಜೆಪಿಗೆ ರೆಡ್ಡಿಯೂ ಬೇಕು. ರಾಮುಲುನೂ ಬೇಕು. ಯಾಕೆ ಬೇಕು ಎನ್ನುವುದನ್ನು ತಿಳಿಯಲು ಕಳೆದ ವಿಧಾನಸಭಾ ಮತ್ತು ಲೋಕಸಭಾ ಚುನಾವಣಾ ಫಲಿತಾಂಶಗಳನ್ನು ನೋಡಬೇಕು. ರೆಡ್ಡಿ-ರಾಮುಲು ಪ್ರಾಬಲ್ಯ ಇರುವ ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿ ಮಕಾಡೆ ಮಲಗಿತ್ತು. ರೆಡ್ಡಿ-ರಾಮುಲು ಜೊತೆಗಿದ್ದಿದ್ದರೆ ಪರಿಸ್ಥಿತಿ ಇಷ್ಟು ಹೀನಾಯವಾಗುತ್ತಿರಲಿಲ್ಲವೇನೋ. ಇತಿಹಾಸವೂ ಇದನ್ನು ಪುಷ್ಟಿಕರಿಸುತ್ತದೆ. ಹಿಂದೆ ರಾಜ್ಯದಲ್ಲಿ ಬಿಜೆಪಿಯನ್ನು ನೂರು ಸೀಟು ದಾಟಿಸಲು ಇವರಿಬ್ಬರೂ ಜೋಡೆತ್ತಿನಂತೆ ದುಡಿದಿದ್ದರು. ತನು-ಮನ-ಧನ ವ್ಯಯಿಸಿದ್ದರು. ಆಪರೇಷನ್ ಕಮಲದ ಮೂಲಕ ಬಿಜೆಪಿಯನ್ನು ಅಧಿಕಾರದ ಗದ್ದುಗೆಗೆ ಏರಿಸಲು ಶ್ರಮಿಸಿದ್ದರು. ಮುಂದೆಯೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ಭದ್ರ ನೆಲೆ ಒದಗಿಸಲು ರೆಡ್ಡಿ-ರಾಮುಲು ಪ್ರಮುಖ ಪಾತ್ರವಹಿಸಬೇಕಾಗಿದೆ. ಆದರದು ಇಬ್ಬರೂ ಒಟ್ಟಿಗಿದ್ದರೆ ಮಾತ್ರ ಸಾಧ್ಯ. ಇಬ್ಬರೂ ಪ್ರತ್ಯೇಕವಾದರೆ ಮತ್ತೆ ಕಾಂಗ್ರೆಸಿಗೆ ಲಾಭ ಎನ್ನುವುದು ಬಿಜೆಪಿಗಿರುವ ಆತಂಕ.


ಇದೇ ಆತಂಕದಿಂದ ಹೈಕಮಾಂಡ್ ನಾಯಕರು ಮಧ್ಯಪ್ರವೇಶಿಸಿದ್ದಾರೆ. ರಾಜ್ಯ ನಾಯಕರು ‘ನಮ್ಮಿಂದ ಆಗಲ್ಲ, ನೀವೇ ಸಮಸ್ಯೆ ಬಗೆಹರಿಸಿ’ ಅಂತಾ ಕೈತೊಳೆದುಕೊಂಡಿದ್ದಾರೆ. ಇದರಿಂದ ಯಾವಾಗಬೇಕಾದರೂ ದೆಹಲಿಗೆ ಬರುವಂತೆ ರೆಡ್ಡಿ-ರಾಮುಲುಗೆ ಕರೆ ಬರಬಹುದು. ಆದರೆ ರಾಮುಲು-ರೆಡ್ಡಿಯನ್ನು ಬಲ್ಲವರು ಹೇಳುವ ಪ್ರಕಾರ ಅವರು ಮತ್ತೆ ಒಂದಾಗುವ ಸಾಧ್ಯತೆ ಇಲ್ಲವೇ ಇಲ್ಲ.

ನಂದು.. ನಂದು.. ಏನ್‌ Kumaraswamy ನಿಮ್ದು.. ಕುಮಾರಣ್ಣಂಗೆ ಟಾಂಗ್‌ ಕೊಟ್ಟ Cheluvarayaswamy #pratidhvani

ರಾಮುಲು ಕೋಪ ರೆಡ್ಡಿ ಮೇಲೆ ಮಾತ್ರನಾ?

ಶ್ರೀರಾಮುಲು ಇದ್ದಕ್ಕಿದ್ದಂತೆ ವೀರಾವೇಶ ಪ್ರದರ್ಶಿಸಲು ಇನ್ನೂ ಕೆಲ ಕಾರಣಗಳಿವೆ. ನಮ್ಮ ಸಂಬಂಧ ಹಳಸಿದೆ ಎಂದು ಗೊತ್ತಿದ್ದ ರಾಜ್ಯ ಬಿಜೆಪಿ ನಾಯಕರು ರೆಡ್ಡಿಗೆ ತೋರಿದ ಗೌರವಾದರಗಳಲ್ಲಿ ಕನಿಷ್ಠ ಕಾಲು ಭಾಗದಷ್ಟನ್ನು ನನಗೆ ತೋರಲಿಲ್ಲ. ಫಲಿತಾಂಶ ಬಂದ ಮೇಲೆ ಯಾರೊಬ್ಬರೂ ಫೋನ್ ಮಾಡಲಿಲ್ಲ. ಬಿಜೆಪಿಗೆ ರೆಡ್ಡಿ ಬೆಂಬಲ ಪಡೆಯುವಾಗ ಸೌಜನ್ಯಕ್ಕಾದರೂ ನನ್ನನ್ನು ಒಂದು ಮಾತು ಕೇಳಲಿಲ್ಲ. ರೆಡ್ಡಿ ಮಾತು ಕೇಳಿ ನನಗೆ ಸಂಡೂರು ಉಪಚುನಾವಣೆ ಟಿಕೆಟ್ ಕೊಡಲಿಲ್ಲ. ನನ್ನನ್ನು ಸಂಪೂರ್ಣವಾಗಿ ಕಡಗಣಿಸಲಾಯಿತು. ಮೇಲಾಗಿ ಸೋಲಿಗೆ ನನ್ನನ್ನು ಹೊಣೆ ಮಾಡಲಾಯಿತು ಎನ್ನುವುದು ರಾಮುಲು ಬೇಸರ.
ಮುಂದುವರೆದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ (ಆರ್ ಎಂಡಿ) ಅಗರವಾಲ್ ಕೋರ್ ಕಮಿಟಿ ಸಭೆಯಲ್ಲಿ ರಾಮುಲು ಮೇಲೆ ಗುರುತರ ಆರೋಪ ಮಾಡುತ್ತಿದ್ದರೆ ವಿಜಯೇಂದ್ರ ಮುಸಿ ಮುಸಿ ನಗುತ್ತಿದ್ದರಂತೆ. ಯತ್ನಾಳ್, ಜಾರಕಿಹೊಳಿ ವಗೈರೆ ವಗೈರೆಗಳು ನನ್ನ ವಿರುದ್ಧ ಮಾತನಾಡುತ್ತಿದ್ದಾಗ ರಾಮುಲು ಸುಮ್ಮನಿದ್ದರು ಎನ್ನುವ ಕಾರಣಕ್ಕೋ ಏನೋ ವಿಜಯೇಂದ್ರ ಕೂಡ ಮೌನವಾಗಿದ್ದರು. ಆಗಲೇ ರಾಮುಲು ರೌದ್ರಾವತಾರ ತಾಳಿದ್ದು ಎನ್ನುತ್ತಾರೆ ಸಭೆಯಲ್ಲಿದ್ದವರೊಬ್ಬರು. ಎಲ್ಲರೊಂದಿಗೂ ಸೌಮ್ಯದಿಂದಲೇ ಇದ್ದ ಆರ್ ಎಂಡಿ, ರಾಮುಲು ಜೊತೆ ಮಾತ್ರ ಏಕೆ ಹಾಗೆ ವರ್ತಿಸಿದರು? ಎನ್ನುವುದು ಸದ್ಯಕ್ಕೆ ಯಕ್ಷಪ್ರಶ್ನೆಯಾಗಿಯೇ ಉಳಿದಿದೆ.

ರೆಡ್ಡಿಗಾಗಿ ರಾಮುಲು ಬಿಟ್ಟರಾ ವಿಜಯೇಂದ್ರ?

ಸದ್ಯ ರಾಜ್ಯ ಬಿಜೆಪಿಯಲ್ಲಿ ಇನ್ನೊಂದು ಮಾತು ಕೇಳಿಬರುತ್ತಿದೆ. ವಿಜಯೇಂದ್ರ ಮತ್ತು ಜನಾರ್ಧನ ರೆಡ್ಡಿ ತುಂಬಾ ಹತ್ತಿರವಾಗಿದ್ದರಂತೆ. ರೆಡ್ಡಿ ಹತ್ತಿರ ಆಗುತ್ತಿದ್ದಂತೆ ರಾಮುಲು ಎಂಬ ಗ್ರಹ ವಿರುದ್ಧ ದಿಕ್ಕಿಗೆ ಚಲಿಸಿದೆಯಂತೆ. ಈಗ ಪರಿಶಿಷ್ಟ ಪಂಗಡದ ನಾಯಕತ್ವ ಸತೀಶ್ ಜಾರಕಿಹೊಳಿ ಪಾಲಾಗಿದೆ. ರಾಮುಲು ಎರಡು ಚುನಾವಣಾ ಸೋತಿರುವುದು ಮಾತ್ರವಲ್ಲ. ಸಮುದಾಯದಲ್ಲಿ ಅವರಿಗೀಗ ಕವಡೆ ಕಾಸಿನ ಕಿಮ್ಮತ್ತಿಲ್ಲ. ರೆಡ್ಡಿ ಈಗಲೂ ಬಳ್ಳಾರಿ ಮತ್ತು ಸುತ್ತಮುತ್ತಾ ಪ್ರಭಾವ ಹೊಂದಿದ್ದಾರೆ. ಅದಕ್ಕಿಂತಲೂ ಮಿಗಿಲಾಗಿ ಸಂಪನ್ಮೂಲದ ದೃಷ್ಟಿಯಲ್ಲಿ ರೆಡ್ಡಿ ಜೊತೆಗಿರುವುದೇ ಸರಿ ಎಂದು ವಿಜಯೇಂದ್ರ ನಿರ್ಧರಿಸಿದ್ದಾರಂತೆ. ಅದಕ್ಕಾಗಿಯೇ ವಿಜಯೇಂದ್ರ ಕೋರ್ ಕಮಿಟಿ ಸಭೆಯಲ್ಲಿ ರಾಮುಲು ಸಮರ್ಥನೆಗೆ ಬರಲಿಲ್ಲ ಎನ್ನುವ ಮಾತಿದೆ. ಇದರಿಂದ ರಾಮುಲು ಕೂಡ ಮುಂದೆ ವಿಜಯೇಂದ್ರ ವಿರೋಧಿ ಬಣ ಸೇರುವ ಸಾಧ್ಯತೆ ಇದೆಯಂತೆ.

ಹೊಡೆಯಲು ಹೋಗಿದ್ದ ಬಿಜೆಪಿ ನಾಯಕರು

ಧರ್ಮೇಂದ್ರ ಪ್ರಧಾನ್, ಪ್ರಕಾಶ್ ಜಾವಡೇಕರ್ ಅವರಂಥವರು ಬಿಜೆಪಿ ಉಸ್ತುವಾರಿಯಾಗಿದ್ದಾಗ ರಾಜ್ಯ ನಾಯಕರು ಕಮಕ್ ಗಿಮಕ್ ಎನ್ನುತ್ತಿರಲಿಲ್ಲ. ಅರುಣ್ ಜೈಟ್ಲಿ, ರಾಜನಾಥ್ ಸಿಂಗ್ ಅವರಂಥವರು ಯಡಿಯೂರಪ್ಪ-ಅನಂತಕುಮಾರ್ ಅವರಂಥವರನ್ನು ನಿಭಾಯಿಸುವಾಗಲೂ ನಿತ್ರಾಣರಾಗುತ್ತಿರಲಿಲ್ಲ. ಆದರೆ ಹಿಂದಿದ್ದ ಅರುಣ್ ಸಿಂಗ್ ಈಗಿರುವ ರಾಧಾಮೋಹನ್ ದಾಸ್ ಅಗರವಾಲ್ ಮಾತಿಗೆ ಮೂರೂ ಕಾಸಿನ ಬೆಲೆ ಇಲ್ಲ. ಗೌರವ ಕೊಡುವುದು ಬೇರೆ ಮಾತು. ರಾಜ್ಯ ಬಿಜೆಪಿಯ ಎಲ್ಲಾ ಸಮಸ್ಯೆಗಳನ್ನು ಒಂದೇ ಏಟಿಗೆ ಬಗೆಹರಿಸಿಬಿಡುತ್ತೇನೆ ಎಂದು ಬೆಂಗಳೂರಿಗೆ ಬಂದಿದ್ದ ರಾಧಾಮೋಹನ್ ದಾಸ್ ಅಗರವಾಲ್ ಅವರಿಗೆ ವಿಜಯೇಂದ್ರ ಬಣದ ನಾಯಕರು ಹೊಡೆಯಲು ಹೋಗಿದ್ದರಂತೆ.
ಸ್ವಲ್ಪ ಯಾಮಾರಿದ್ದರೆ ಕೋರ್ ಕಮಿಟಿ ಸಭೆಯಲ್ಲಿ ರಾಮುಲು ಒಡೆಯುತ್ತಿದ್ದರು. ಹೊರಗೆ ಇನ್ನೊಂದೇ ಒಂದು ಹೆಚ್ಚು ಮಾತನಾಡಿದ್ದರೆ ವಿಜಯೇಂದ್ರ ಬಣದವರು ಹಲ್ಲೆ ಮಾಡುತ್ತಿದ್ದರು. ಇಂಥ ಪರಿಸ್ಥಿತಿ ಯಾವ ಉಸ್ತುವಾರಿಗೂ ಬೇಡ ಎಂದು ಎದುಸಿರು ಬಿಡುತ್ತಾ ಅಗರವಾಲ್ ದೆಹಲಿ ವಿಮಾನ ಹತ್ತಿದರಂತೆ!

ಶಾಸಕರನ್ನು ಮಾತ್ರ ಕರೆದು ಸಭೆ ಮಾಡಿದರೆ ನಿಜವಾದ ಚಿತ್ರಣ ಸಿಗುವುದಿಲ್ಲ. ಬಹುತೇಕ ಶಾಸಕರು ಬಾಯಿ ಬಿಡುವುದಿಲ್ಲ. ಮಾಜಿ ಶಾಸಕರಾದ ನಮ್ಮ ಅಭಿಪ್ರಾಯಗಳನ್ನು ಸ್ವೀಕರಿಸಿ, ನಮ್ಮನ್ನೂ ಪರಿಗಣಿಸಿ ಎಂದು ವಿಜಯೇಂದ್ರ ಬಣದ ಮಾಜಿ ಶಾಸಕರು ಕೇಳಿಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಅಗರವಾಲ್ ಸೋತಿರುವ ನಿಮ್ಮಿಂದ ಅಭಿಪ್ರಾಯ ಕೇಳುವ ಅಗತ್ಯ ಇಲ್ಲ ಎಂದಿದ್ದಾರೆ. ಅಗರವಾಲ್ ಹಾಗೆ ಹೇಳುತ್ತಿದ್ದಂತೆ ಪಿತ್ತ ನೆತ್ತಿಗೇರಿದ ವಿಜಯೇಂದ್ರ ಬಣದ ಮಾಜಿಗಳು ತೋಳೇರಿಸಿಕೊಂಡು ಹೊಡೆಯಲು ಹೋಗಿದ್ದಾರೆ.
ಇದಲ್ಲದೆ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ವಿರುದ್ದ ಎಷ್ಟೇ ದೂರು ಕೊಟ್ಟರೂ ಕ್ರಮ ಕೈಗೊಳ್ಳುತ್ತಿಲ್ಲ. ಕಡೆಪಕ್ಷ ಒಂದು ನೋಟಿಸ್ ಕೊಡುತ್ತಿಲ್ಲ. ಬಿಎಲ್ ಸಂತೋಷ್ ಅಣತಿಯಂತೆ ಕೆಲಸ ಮಾಡುತ್ತಿದ್ದಾರೆ ಎನ್ನುವ ಆಕ್ರೋಶ ಇತ್ತು. ಅದು ಈಗ ಸಿಟ್ಟಾಗಿ ವ್ಯಕ್ತವಾಗಿದೆ ಎನ್ನುತ್ತಾರೆ ಅವರ ಬಗಿಲಲ್ಲೇ ಇದ್ದ ಬಿಜೆಪಿ ನಾಯಕರು.

ಯತ್ನಾಳ್ ಮೇಲೆ ಕ್ರಮ ಕೈಗೊಳ್ಳಬೇಡಿ

ವಿಜಯೇಂದ್ರ ಮೇಲೆ ಮುಗಿಬಿದ್ದಿರುವ ಯತ್ನಾಳ್ ಮತ್ತು ಜಾರಕಿಹೊಳಿ ವಿರುದ್ದ ಕ್ರಮ ಕೈಗೊಳ್ಳಬೇಡಿ. ಹಾಗೇನಾದರೂ ಕ್ರಮ ಕೈಗೊಂಡರೆ ವಿಜಯೇಂದ್ರ ಇನ್ನಷ್ಟು ಪ್ರಬಲರಾಗುತ್ತಾರೆ. ಈಗಲೇ ಅವರು ಯಾರ ಮಾತನ್ನು ಕೇಳುತ್ತಿಲ್ಲ. ಅವರ ವಿರೋಧಿಗಳ ಸದ್ದಡಗಿಸಿದರೆ ಬೇರೆ ಯಾರನ್ನೂ ಲೆಕ್ಕಕ್ಕೇ ತೆಗೆದುಕೊಳ್ಳುವುದಿಲ್ಲ. ಪಕ್ಷ ಮತ್ತು ಸಂಘಟನೆ ದೃಷ್ಟಿಯಿಂದ ಇಂಥ ಸರ್ವಾಧಿಕಾರಿ ಧೋರಣೆ ಸರಿಯಲ್ಲ ಎಂದು ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್ ಮೇಲೆ ಬಲವಾದ ಒತ್ತಡ ಹೇರುತ್ತಿದ್ದಾರಂತೆ.


ಕ್ರೆಡಿಟ್ ವಾರ್ತಾಭಾರತಿ

Tags: b sriramulu slams janardhan reddyJanardhan reddyjanardhan reddy latest newsjanardhan reddy newsjanardhan reddy press meetjanardhan reddy today newsjanardhan reddy vs sriramuluJanardhana Reddyjanardhana reddy vs b sriramulujanardhana reddy vs sriramuluramulu vs reddysriramulu expresses ire against janardhan reddysriramulu on janardhan reddysriramulu vs bjp leaderssriramulu vs janardhan reddysriramulu vs janardhana reddy
Previous Post

ನಾನು ಈವಾಗ್ಲೇ ಹೇಳ್ತಿನಿ ಬರೆದಿಟ್ಟುಕೊಳ್ಳಿ.. ಲೋಕಾಯುಕ್ತ ಸಿಎಂ ಪರವಾಗಿಯೇ ವರದಿ ನೀಡಲಿದೆ : ಆರ್.ಅಶೋಕ್ ! 

Next Post

ಫಿಂಗರ್ ಪ್ರಿಂಟ್ ಮ್ಯಾಚ್ ಆಗ್ತಿಲ್ಲ.. ! ಸೈಫ್ ಅಲಿ ಖಾನ್ ಇರಿತ ಕೇಸ್ ನಲ್ಲಿ ಮೇಜರ್ ಟ್ವಿಸ್ಟ್ ! 

Related Posts

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಇತ್ತೀಚೆಗೆ ಹೊರಬಂದ ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣದ ಮತ್ತಷ್ಟು ರೋಚಕ ವಿಚಾರಗಳು ಬಯಲಾಗ್ತಿದೆ. ವಿಚಾರಣೆ ವೇಳೆ ತಾನೇ ಕೊಲೆ‌ ಮಾಡಿದ್ದು ಎಂದು ಒಪ್ಪಿಕೊಂಡಿರುವ ಪತಿ ಡಾ.ಮಹೇಂದ್ರ ರೆಡ್ಡಿ...

Read moreDetails
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
Next Post
BREAKING : ಸೈಫ್ ಅಲಿಖಾನ್ ಗೆ ಚಾಕು ಇರಿದಿದ್ದ ಆರೋಪಿ ಅರೆಸ್ಟ್ ! ಒಂದೇ ದಿನದಲ್ಲಿ ಹೆಡೆಮುರಿ ಕಟ್ಟಿದ ಮುಂಬೈ ಪೊಲೀಸ್! 

ಫಿಂಗರ್ ಪ್ರಿಂಟ್ ಮ್ಯಾಚ್ ಆಗ್ತಿಲ್ಲ.. ! ಸೈಫ್ ಅಲಿ ಖಾನ್ ಇರಿತ ಕೇಸ್ ನಲ್ಲಿ ಮೇಜರ್ ಟ್ವಿಸ್ಟ್ ! 

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada