• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ಅಫ್ಘಾನಿಸ್ತಾನದಲ್ಲಿ ಶಾಂತಿ ನೆಲೆಸಿದ್ರೆ ಮಾತ್ರ ಪ್ರಾದೇಶಿಕ ಶಾಂತಿ ಸಾಧ್ಯ; ಎನ್ಎಸ್ಎ ಮಟ್ಟದ ಸಭೆಯಲ್ಲಿ 8 ದೇಶಗಳ ಒಕ್ಕೊರಲ ಅಭಿಪ್ರಾಯ

ನಚಿಕೇತು by ನಚಿಕೇತು
November 16, 2021
in ವಿದೇಶ
0

A member of Taliban forces keeps watch at a checkpost in Kabul, Afghanistan August 17, 2021. REUTERS/Stringer

Share on WhatsAppShare on FacebookShare on Telegram

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರಕ್ಕೇರಿದ ಬಳಿಕ ಭಾರತದ ಭದ್ರತೆಗೆ ಬೆದರಿಕೆಯಾಗಿ ಪರಿಣಮಿಸಿದೆ. ಭಯೋತ್ಪಾದನೆ ವಿಚಾರದಲ್ಲಿ ಭಾರತ ಮಾತ್ರವಲ್ಲದೆ ದಕ್ಷಿಣ ಏಷ್ಯಾದ ಪ್ರಾದೇಶಿಕ ಭದ್ರತೆ ಹಾಗೂ ಶಾಂತಿಗೂ ಭಂಗ ತರೋ ಆತಂಕವಿದೆ. ಹೀಗಾಗಿ ಭಾರತ ತೆಗೆದುಕೊಂಡ ಮತ್ತೊಂದು ದಿಟ್ಟ ಕ್ರಮ ತಾಲಿಬಾನಿಗಳಿಗೆ ಪರೋಕ್ಷ ಎಚ್ಚರಿಕೆ ನೀಡಿದಂತಾಗಿದೆ.

ADVERTISEMENT

ಅಫ್ಘಾನಿಸ್ತಾನ… 20 ವರ್ಷಗಳ ಬಳಿಕ ಮತ್ತೆ ತಾಲಿಬಾನಿಗಳ ತೆಕ್ಕೆಗೆ ಬಿದ್ದಿದೆ. 2 ದಶಕಗಳಿಂದ ಅಮೆರಿಕ ಬೆಂಬಲಿತ ಪ್ರಜಾಪ್ರಭುತ್ವ ಸರ್ಕಾರ ಅಫ್ಘಾನಿಸ್ತಾನದಲ್ಲಿ ಜಾರಿಯಲ್ಲಿತ್ತು. ಅದ್ಯಾವಾಗ ಅಮೆರಿಕ ಸೇನೆ ಅಫ್ಘಾನ್ ನೆಲದಿಂದ ಜಾಗ ಖಾಲಿ ಮಾಡಿತೋ ತಾಲಿಬಾನಿಗಳು ಮತ್ತೆ ದೇಶವನ್ನು ತಮ್ಮ ಕೈವಶಮಾಡಿಕೊಂಡ್ರು. ಮಂಗನ ಕೈಗೆ ಸಿಕ್ಕ ಮಾಣಿಕ್ಯದಂತೆ ಅಧಿಕಾರ ಸಿಕ್ಕಿದ್ದೇ ತಡ ಹುಚ್ಚುಚ್ಚಾಗಿ ವರ್ತಿಸತೊಡಗಿದ್ರು. ಇವನ್ನೆಲ್ಲಾ ಸೂಕ್ಷ್ಮವಾಗಿ ಗಮನಿಸ್ತಿದ್ದ ಭಾರತ ಸಮಯಕ್ಕೆ ತಕ್ಕಂತೆ ಎಚ್ಚರಿಕೆಗಳನ್ನು ಕೊಡುತ್ತಲೇ ಬಂದಿತ್ತು. ಯಾವಾಗ ಪ್ರಾದೇಶಿಕ ಭದ್ರತೆ ಅದ್ರಲ್ಲೂ ಪಾಕಿಸ್ತಾನದ ಜೊತೆ ಸೇರಿ ಭಾರತದ ಆಂತರಿಕ ಭದ್ರತೆಗೆ ಬೆದರಿಕೆಯಾಗುವಂಥಾ ಚಟುವಟಿಕೆಗಳ ಆರಂಭವಾಯ್ತೋ ಮೋದಿ ಸರ್ಕಾರ ಮಹತ್ವದ ಹೆಜ್ಜೆಯೊಂದನ್ನಿಟ್ಟಿದೆ.

ಹೌದು, ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಮರುಸ್ಥಾಪನೆಯಾದ ಬಳಿಕ ಪ್ರಾದೇಶಿಕ ಭದ್ರತೆಯದ್ದೇ ತಲೆನೋವಾಗಿದೆ. ಉಗ್ರ ಕೃತ್ಯಗಳ ಮೂಲಕ ಜಗತ್ತನ್ನೇ ನಡುಗಿಸಿದ್ದ ತಾಲಿಬಾನ್ ಮತ್ತೆ ಅಧಿಕಾರಕ್ಕೆ ಬರ್ತಿದ್ದಂತೆ ದಕ್ಷಿಣ ಏಷಿಯಾ ರಾಷ್ಟ್ರಗಳಿಗೆ ಅಭದ್ರತೆ ಕಾಡ್ತಿದೆ. ಅದ್ರಲ್ಲೂ ಭಾರತದ ಜೊತೆ ಸದಾ ಕಾಲುಕೆರೆದು ಜಗಳಕ್ಕೆ ನಿಲ್ಲೋ ಪಾಕಿಸ್ತಾನ ತಾಲಿಬಾನ್ ಜೊತೆ ಕೈಜೋಡಿಸೋ ಭೀತಿ ಭಾರತದ ಭದ್ರತೆಗೆ ಬೆದರಿಕೆ ಒಡ್ಡುವಂತಿದೆ. ಹೀಗಾಗಿ ಅಫ್ಘಾನಿಸ್ತಾನವನ್ನು ಬಳಸಿಕೊಂಡು ಮುಂದೆ ನಡೆಯಬಹುದಾದ ಎಲ್ಲಾ ದಾಳಿಯನ್ನು ಮನಸ್ಸಲ್ಲಿಟ್ಟಕೊಂಡ ಭಾರತ 8 ರಾಷ್ಟ್ರಗಳ ರಾಷ್ಟ್ರೀಯ ಭದ್ರತಾ ಸಲಹೆಗಾರರ ಮಟ್ಟದ ಮಹತ್ವದ ಸಭೆ ನಡೆಸಿದೆ.

ಇನ್ನು ದೆಹಲಿಯಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ನೇತೃತ್ವದಲ್ಲಿ ನಡೆದ ಮಹತ್ವದ ಸಮಾವೇಶದಲ್ಲಿ ರಷ್ಯಾ, ಇರಾನ್, ಕಜಕಿಸ್ತಾನ್, ಕಿರ್ಗಿಸ್ತಾನ್, ಉಜ್ಬೆಕಿಸ್ತಾನ್ ತುರ್ಕ್ಮೆನಿಸ್ತಾನ್ ಹಾಗೂ ತಜಕಿಸ್ತಾನದ ರಾಷ್ಟ್ರೀಯ ಭದ್ರತಾ ಸಲಹೆಗಾರರು ಭಾಗವಹಿಸಿದ್ರು. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಕಮ್ ಬ್ಯಾಕ್ ಆದ ಬಳಿಕ ಸಹಜವಾಗೇ ಭಯೋತ್ಪಾದನೆ, ಮೂಲಭೂತವಾದ ಹಾಗೂ ಡ್ರಗ್ಸ್ ಸಾಗಾಟ ಹೆಚ್ಚಾಗೋ ಆತಂಕ ಇರೋದ್ರಿಂದ ಪ್ರದೇಶಿಕ ಭದ್ರತೆ ಬಗ್ಗೆ ಎಲ್ಲಾ ದೇಶಗಳ ಭದ್ರತಾ ಸಲಹೆಗಾರರು ಆತಂಕ ವ್ಯಕ್ತಪಡಿಸಿದ್ರು. ಅಲ್ಲದೆ ಭಯೋತ್ಪಾದನಾ ಕೃತ್ಯಗಳಿಗೆ ಅಫ್ಘಾನಿಸ್ತಾನದ ನೆಲ ಬಳಕೆಯಾಗಬಾರದು ಅಂತಾ ಎಂಟು ರಾಷ್ಟ್ರಗಳ ಭದ್ರತಾ ಸಲಹೆಗಾರರು ಘೋಷಣೆ ಮಾಡಿದ್ರು.

ಆಗಸ್ಟ್ ತಿಂಗಳಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ಕೈ ವಶ ಮಾಡಿಕೊಳ್ತಿದ್ದಂತೆ ಜಾಗತಿಕ ಮಟ್ಟದಲ್ಲಿ ಆತಂಕ ಮನೆಮಾಡಿತ್ತು. ಉಗ್ರ ಸಂಘಟನೆಯಾದ ತಾಲಿಬಾನ್ ತೆಕ್ಕೆಗೆ ಅಫ್ಘಾನಿಸ್ತಾನ ಸಿಕ್ಕರೆ ಭಯೋತ್ಪಾದನೆ, ಮೂಲಭೂತವಾದ, ಡ್ರಗ್ಸ್ ಸಾಗಟಕ್ಕೆ ಯಾವುದೇ ನಿಯಂತ್ರಣ ಇರಲ್ಲ ಅನ್ನೋದು ದಕ್ಷಿಣ ಏಷ್ಯಾ ರಾಷ್ಟ್ರಗಳ ಆತಂಕ. ಈ ಎಲ್ಲಾ ಆತಂಕ ದೂರ ಮಾಡೋ ನಿಟ್ಟಿನಲ್ಲಿ ಭಾರತ ಸರ್ಕಾರ ಮಹತ್ವದ ಹೆಜ್ಜೆ ಮುಂದಿಟ್ಟಿದ್ದು, ತಾಲಿಬಾನ್ ಹಿಂಸೆಯ ಹಾದಿ ತುಳಿದ್ರೆ ಮೂಗು ದಾರ ಹಾಕಲು ಈಗಿಂದಲೇ ಸಿದ್ಧತೆ ನಡೆಸಿದೆ. 

Tags: AfghanistanAfghanistanCrisisHow Taliban return in Afghanistan triggered Islamophobia in India
Previous Post

ಕರಾವಳಿ ಮೀನು ಉದ್ಯಮ ಸಮೃದ್ಧ, ಅಂಜಲ್ , ಮಾಂಜಿ ಫ್ರೈ ಎಲ್ಲರ ಮನೆಯಲ್ಲೂ!

Next Post

ಅಂಬಾಲಾ ಸೆಂಟ್ರಲ್ ಜೈಲಿನ ಮಣ್ಣಿನಿಂದ ಗೋಡ್ಸೆ ಪ್ರತಿಮೆ ನಿರ್ಮಾಣ – ಹಿಂದೂ ಮಹಾಸಭಾ

Related Posts

ವಿಶ್ವಸಂಸ್ಥೆಯಲ್ಲಿ ಕನ್ನಡತಿಯ ಸಾಧನೆ : ಸೇನಾಧಿಕಾರಿ ಸ್ವಾತಿ ಕಾರ್ಯಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಶ್ಲಾಘನೆ..
ಇದೀಗ

ವಿಶ್ವಸಂಸ್ಥೆಯಲ್ಲಿ ಕನ್ನಡತಿಯ ಸಾಧನೆ : ಸೇನಾಧಿಕಾರಿ ಸ್ವಾತಿ ಕಾರ್ಯಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಶ್ಲಾಘನೆ..

by ಪ್ರತಿಧ್ವನಿ
January 15, 2026
0

ಬೆಂಗಳೂರು : ಭಾರತೀಯ ಸೇನಾಧಿಕಾರಿ, ಕನ್ನಡತಿ ಸ್ವಾತಿ ಶಾಂತಕುಮಾರ್ ಅವರು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಮೂಲಕ ಭಾರತದ ಹಿರಿಮೆಯನ್ನ ಹೆಚ್ಚಿಸಿದ್ದಾರೆ ಎಂದು ಕೇಂದ್ರ...

Read moreDetails
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

January 12, 2026
US Airstrikes Syria: ಸಿರಿಯಾ ಐಸಿಸ್ ನೆಲೆಗಳ ಮೇಲೆ ಅಮೆರಿಕ ಭೀಕರ ಏರ್‌ಸ್ಟ್ರೈಕ್

US Airstrikes Syria: ಸಿರಿಯಾ ಐಸಿಸ್ ನೆಲೆಗಳ ಮೇಲೆ ಅಮೆರಿಕ ಭೀಕರ ಏರ್‌ಸ್ಟ್ರೈಕ್

January 11, 2026
ಜಾಗತಿಕ ಮಟ್ಟದಲ್ಲಿ ಅಪಾಯ: “ಕೋಡಿ” ಸ್ಫೋಟಕ ಭವಿಷ್ಯ

ಜಾಗತಿಕ ಮಟ್ಟದಲ್ಲಿ ಅಪಾಯ: “ಕೋಡಿ” ಸ್ಫೋಟಕ ಭವಿಷ್ಯ

January 10, 2026
ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ

ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ

January 7, 2026
Next Post
ಅಂಬಾಲಾ ಸೆಂಟ್ರಲ್ ಜೈಲಿನ ಮಣ್ಣಿನಿಂದ ಗೋಡ್ಸೆ ಪ್ರತಿಮೆ ನಿರ್ಮಾಣ – ಹಿಂದೂ ಮಹಾಸಭಾ

ಅಂಬಾಲಾ ಸೆಂಟ್ರಲ್ ಜೈಲಿನ ಮಣ್ಣಿನಿಂದ ಗೋಡ್ಸೆ ಪ್ರತಿಮೆ ನಿರ್ಮಾಣ – ಹಿಂದೂ ಮಹಾಸಭಾ

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

January 18, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada