ಮುಸ್ಲಿಂ ದೇಶ ಕತಾರ್ನಲ್ಲಿ (Qatar) ಭಾರತಕ್ಕೆ ಅತಿದೊಡ್ಡ ರಾಜತಾಂತ್ರಿಕ ಗೆಲುವು ಸಿಕ್ಕಿದೆ. ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 8 ಭಾರತೀಯರನ್ನ ಬಿಡುಗಡೆ ಮಾಡಲಾಗಿದೆ.
ಸಚಿವ ಜೈ ಶಂಕರ್ (jaishankar) ರಣತಂತ್ರ ಹಾಗೂ ಭಾರತದ ಜೇಮ್ಸ್ ಬಾಂಡ್ ಅಜಿತ್ ಧೋವಲ್(ajithdoval) ಸುಪ್ರೀಂ ಐಡಿಯಾ ಫಲಪ್ರದವಾಗಿದ್ದು, ಭಾರತೀಯ ನೌಕಾಪಡೆಯ(navy) ಎಂಟು ಯೋಧರನ್ನು ಸೋಮವಾರ ದೋಹಾದಲ್ಲಿ ಬಿಡುಗಡೆ ಮಾಡಲಾಗಿದೆ.
ಕ್ಯಾಪ್ಟನ್ ನವತೇಜ್ ಸಿಂಗ್ ಗಿಲ್, ಕ್ಯಾಪ್ಟನ್ ಸೌರಭ್ ವಸಿಷ್ಟ್, ಕಮಾಂಡರ್ ಪೂರ್ಣೇಂದು ತಿವಾರಿ, ಕ್ಯಾಪ್ಟನ್ ಬೀರೇಂದ್ರ ಕುಮಾರ್ ವರ್ಮಾ, ಕಮಾಂಡರ್ ಸುಗುಣಾಕರ್ ಪಕಾಲ, ಕಮಾಂಡರ್ ಸಂಜೀವ್ ಗುಪ್ತಾ, ಕಮಾಂಡರ್ ಅಮಿತ್ ನಾಗ್ಪಾಲ್ ಮತ್ತು ನಾವಿಕ ರಾಗೇಶ್ ಬಿಡುಗಡೆಗೊಂಡ ಯೋಧರು.
ದಹ್ರಾ ಗ್ಲೋಬಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂಟು ಭಾರತೀಯ ಪ್ರಜೆಗಳ ಬಿಡುಗಡೆಯನ್ನು ಭಾರತ ಸರ್ಕಾರ ಸ್ವಾಗತಿಸುತ್ತದೆ. ಅವರಲ್ಲಿ ಎಂಟು ಮಂದಿಯಲ್ಲಿ ಏಳು ಮಂದಿ ಭಾರತಕ್ಕೆ ಮರಳಿದ್ದಾರೆ.
ಕತಾರ್ ರಾಜ್ಯದ ಅಮೀರ್ ಅವರ ನಿರ್ಧಾರವನ್ನು ನಾವು ಪ್ರಶಂಸಿಸುತ್ತೇವೆ” ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ನೌಕಾಪಡೆಯ(navy) ಯೋಧರು ತಮ್ಮ ತಾಯ್ನಾಡಿಗೆ ಮರಳಲು ಸಹಾಯ ಮಾಡಿ ಎಂದು ಕುಟುಂಬಸ್ಥರು ಈ ಹಿಂದೆ ಮನವಿ ಮಾಡಿಕೊಂಡಿದ್ದರು. ಜಲಾಂತರ್ಗಾಮಿ ಕಾರ್ಯಕ್ರಮದ ಮೇಲೆ ಬೇಹುಗಾರಿಕೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
8 ಯೋಧರನ್ನು ಆಗಸ್ಟ್ ನಲ್ಲಿ ಬಂಧಿಸಿ ಜೈಲಿನಲ್ಲಿಡಲಾಗಿತ್ತು. ಇಷ್ಟು ಮಂದಿಗೂ ಕತಾರ್ ನ್ಯಾಯಾಲಯ ಅಕ್ಟೋಬರ್ 26, 2023ರಂದು ಇವರಿಗೆ ಮರಣದಂಡನೆ ವಿಧಿಸಿತ್ತು. ಇದೀಗ ದೇಶಕ್ಕೆ ಮರಳಿದ ನೌಕಾಪಡೆಯ ಯೋಧರು ತಮ್ಮ ಬಿಡುಗಡೆಗೆ ವಿಶೇಷ ಗಮನ ಹರಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಸರ್ಕಾರಕ್ಕೆ ಧನ್ಯವಾದ ಸಮರ್ಪಣೆ ಮಾಡಿದ್ದಾರೆ.
#Qatar #jailed #relese #india #indiannavy