• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

“ಚಿ ಸೌಜನ್ಯ” ಚಿತ್ರದ ಮೂಲಕ ನಿರ್ದೇಶನದತ್ತ ಖ್ಯಾತ ನಟಿ ಹರ್ಷಿಕಾ ಪೂಣಚ್ಛ .

ಪ್ರತಿಧ್ವನಿ by ಪ್ರತಿಧ್ವನಿ
March 20, 2025
in ಕರ್ನಾಟಕ, ಸಿನಿಮಾ
0
“ಚಿ ಸೌಜನ್ಯ” ಚಿತ್ರದ ಮೂಲಕ ನಿರ್ದೇಶನದತ್ತ ಖ್ಯಾತ ನಟಿ ಹರ್ಷಿಕಾ ಪೂಣಚ್ಛ .
Share on WhatsAppShare on FacebookShare on Telegram

ಕಂಸಾಳೆ ಫಿಲಂಸ್ ಹಾಗೂ ಭುವನ್ ಎಂಟರ್ಟೈನ್ಮೆಂಟ್ ನಿರ್ಮಾಣದ “ಚಿ ಸೌಜನ್ಯ” ಚಿತ್ರದ ಮೂಲಕ ನಿರ್ದೇಶನದತ್ತ ಖ್ಯಾತ ನಟಿ ಹರ್ಷಿಕಾ ಪೂಣಚ್ಛ .

ADVERTISEMENT

ಶೋಷಿತ ಹೆಣ್ಣುಮಕ್ಕಳ ಕುರಿತಾದ ಈ ಚಿತ್ರದ ಪ್ರಮುಖಪಾತ್ರದಲ್ಲಿ ಬಹುಭಾಷಾ ನಟ ಕಿಶೋರ್ .

ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ಅಷ್ಟೇ ಅಲ್ಲದೆ ಉತ್ತಮ ಸಾಮಾಜಿಕ ಕಾರ್ಯಗಳಿಂದಲೂ ಗುರುತಿಸಿಕೊಂಡಿರುವ ನಟಿ ಹರ್ಷಿಕಾ ಪೂಣಚ್ಛ ಈಗ ನಿರ್ದೇಶಕಿಯಾಗುತ್ತಿದ್ದಾರೆ. ಕನ್ನಡದಲ್ಲಿ ಕೇವಲ ಬೆರಳೆಣಿಕೆಯಷ್ಟು ಮಾತ್ರವಿರುವ ನಿರ್ದೇಶಕಿಯರ ಸಾಲಿಗೆ ಹರ್ಷಿಕಾ ಸೇರ್ಪಡೆಯಾಗಲಿದ್ದಾರೆ. ಇತ್ತೀಚೆಗೆ ಹರ್ಷಿಕಾ ಪೂಣಚ್ಛ ಅವರು ನಿರ್ದೇಶಿಸುತ್ತಿರುವ, ಕಂಸಾಳೆ ಫಿಲಂಸ್ ಹಾಗೂ ಭುವನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಮಧು ಮರಿಸ್ವಾಮಿ ಮತ್ತು ಭುವನ್ ಪೊನ್ನಣ್ಣ ನಿರ್ಮಿಸುತ್ತಿರುವ, ಬಹುಭಾಷಾ ನಟ ಕಿಶೋರ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಇತ್ತೀಚೆಗೆ ನಡೆಯಿತು. ದೇಶದಲ್ಲಿ ನಡೆದಿರುವ ಹಾಗೂ ನಡೆಯುತ್ತಿರುವ ಹೆಣ್ಣುಮಕ್ಕಳ ಶೋಷಣೆ ಕುರಿತು ಜಾಗೃತಿ ಮೂಡಿಸುವ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ “ಚಿ.ಸೌಜನ್ಯ” ಎಂದು ಹೆಸರಿಡಲಾಗಿದೆ. “ಒಂದು ಹೆಣ್ಣಿನ ಕಥೆ” ಎಂಬ ಅಡಿಬರಹ ಈ ಚಿತ್ರಕ್ಕಿದೆ. ಶೀರ್ಷಿಕೆ ಅನಾವರಣದ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

Assembly Session:ಇಂದಿರಾ ಗಾಂಧಿನ  ಆದಿನದ ಹೋರಾಟದ ಬಗ್ಗೆ ಸಂರ್ಪೂಣವಾಗಿ ವಿವರಿಸಿದ  ಕೆ ಜೆ ಜಾರ್ಜ್‌!#pratidhvani

ಭಾರತದಲ್ಲಿ ಪ್ರತಿವರ್ಷ ಮೂವತ್ತಾರು ಸಾವಿರಕ್ಕೂ ಅಧಿಕ ಮಹಿಳೆಯರು ಅತ್ಯಾಚಾರಕ್ಕೆ ಒಳಗಾಗುತ್ತಿದ್ದಾರೆ. ಸರಾಸರಿ ದಿನಕ್ಕೆ ನೂರು ಮಹಿಳೆಯರಂತೆ. ಈ ಅತ್ಯಾಚಾರಗಳ ಬಗ್ಗೆ ಕೇಸ್ ದಾಖಲಾಗುತ್ತದೆ. ವಿಚಾರಣೆ ನಡೆಯುತ್ತದೆ. ಆದರೆ ಆ ಹೆಣ್ಣುಮಕ್ಕಳಿಗೆ ನ್ಯಾಯ ದೊರಕಿರುವುದು ತೀರ ಕಡಿಮೆ. ನಾನು ಹಾಗೂ ಹರ್ಷಿಕಾ ಅವರು ಕೂಡ ಇಂತಹ ಘಟನೆ ಬಗ್ಗೆ ನಮಗೆ ತಿಳಿದಾಗ ಅ ಸ್ಥಳಕ್ಕೆ ಹೋಗಿ ಸಾವಿರಾರು ಜನರೊಂದಿಗೆ ಹೋರಾಟ ಮಾಡಿದ್ದೇವೆ. ಈ ವಿಷಯಗಳ ಕುರಿತು ಜನರಿಗೆ ಜಾಗೃತಿ ಮೂಡಿಸಲು ಸಿನಿಮಾ ಉತ್ತಮವಾದ ಮಾಧ್ಯಮ ಅನಿಸಿತು. ಹಾಗಾಗಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದೇವೆ. ಸಮಾಜಕ್ಕೆ ಉತ್ತಮ ಸಂದೇಶವಿರುವ ಈ ಚಿತ್ರವನ್ನು ನಾನು ಹಾಗೂ ಮಧು‌ ಮರಿಸ್ವಾಮಿ ಅವರು ಜಂಟಿಯಾಗಿ ನಿರ್ಮಿಸುತ್ತಿದ್ದೇವೆ. ಈ ಕಥೆಯನ್ನು ಕಿಶೋರ್ ಅವರ ಬಳಿ ಹೇಳಿದಾಗ ಕಥೆ ಕೇಳಿ, ನಟಿಸಲು ಒಪ್ಪಿಕೊಂಡರು ಎಂದು ಭುವನ್ ಪೊನ್ನಣ್ಣ ತಿಳಿಸಿದರು.

ಇದು ನಮ್ಮ ಸಂಸ್ಥೆಯ ನಿರ್ಮಾಣದ ಎರಡನೇ ಚಿತ್ರ. ಭುವನ್ ಎಂಟರ್ಟೈನ್ಮೆಂಟ್ ಸಹ ನಿರ್ಮಾಣಕ್ಕೆ ನಮ್ಮ ಸಂಸ್ಥೆಯ ಜೊತೆಯಾಗಿದೆ. ಹರ್ಷಿಕಾ ಪೂಣಚ್ಛ ಅವರು ನಿರ್ದೇಶಿಸುತ್ತಿರುವ ಈ ಚಿತ್ರ ಐದು ಭಾಷೆಗಳಲ್ಲಿ ನಿರ್ಮಾಣವಾಗಲಿದೆ. ಕಿಶೋರ್, ಉಗ್ರಂ ಮಂಜು, ಕಾಕ್ರೋಜ್ ಸುಧೀ , ಯಶ್ ಶೆಟ್ಟಿ ಮುಂತಾದವರು ನಟಿಸುತ್ತಿದ್ದಾರೆ. ಅರುಣ್ ಸುರೇಶ್ ಛಾಯಾಗ್ರಹಣ ಈ ಚಿತ್ರಕ್ಕಿರಲಿದೆ ಎಂದರು ನಿರ್ಮಾಪಕ ಮಧು ಮರಿಸ್ವಾಮಿ.

ಇಷ್ಟು ದಿನ ನಟಿಯಾಗಿ ಗುರುತಿಸಿಕೊಂಡಿದ್ದೆ. ಚಿತ್ರವನ್ನು ನಿರ್ಮಾಣ‌ ಮಾಡಬೇಕು ಎಂಬ ಹಂಬಲವಿತ್ತು. ಆದರೆ ನಿರ್ದೇಶನ ಮಾಡುತ್ತೀನಿ ಅಂತ ಅಂದುಕೊಂಡಿರಲಿಲ್ಲ ಎಂದು ಮಾತನಾಡಿದ ಹರ್ಷಿಕಾ ಪೂಣಚ್ಛ, ಹೆಣ್ಣುಮಕ್ಕಳ ಶೋಷಣೆಯ ಬಗ್ಗೆ ನಾನು ಹಾಗೂ ಭುವನ್ ಸಾಕಷ್ಟು ಹೋರಾಟ ಮಾಡಿದ್ದೇವೆ. ಇಂತಹ ಸಾಮಾಜಿಕ ಕಳಕಳಿಯುಳ್ಳ ಚಿತ್ರವನ್ನು ಮಾಡಬೇಕೆಂದು ಆಸೆಯಿತ್ತು. ಹಾಗಾಗಿ ನನ್ನ ಪತಿ ಭುವನ್ ಮತ್ತು ನಿರ್ಮಾಪಕ ಮಧು ಮರಿಸ್ವಾಮಿ ಅವರು ಹೆಣ್ಣುಮಕ್ಕಳ ನೋವು ಗಂಡುಮಕ್ಕಳಿಗಿಂತ ಹೆಣ್ಣುಮಕ್ಕಳಿಗೆ ಜಾಸ್ತಿ ಗೊತ್ತಿರುತ್ತದೆ. ಹಾಗಾಗಿ ಈ ಚಿತ್ರವನ್ನು ನೀವೇ ನಿರ್ದೇಶನ ಮಾಡಿ ಎಂದರು. ಇದು ಯಾವುದೇ ಒಂದು ಘಟನೆಯ ಕುರಿತಾದ ಚಿತ್ರವಲ್ಲ. ದೇಶದಲ್ಲಿ ನಡೆದಿರುವ ಇಂತಹ ಅಮಾನುಷ ಘಟನೆಗಳನ್ನಿಟ್ಟುಕೊಂಡು ಮಾಡುತ್ತಿರುವ ಚಿತ್ರ. ನಮ್ಮ ಚಿತ್ರದ ನಾಯಕಿ ಹೆಸರು ಸೌಜನ್ಯ ಅಷ್ಟೇ. ಇನ್ನೂ ಈ ಚಿತ್ರದ ಕಥೆ ಮಾಡಿಕೊಂಡ ತಕ್ಷಣ ಪ್ರಮುಖಪಾತ್ರಕ್ಕೆ ನಮಗೆ ತಕ್ಷಣ ಅನಿಸಿದು ಕಿಶೋರ್ ಅವರು. ಕಥೆ ಕೇಳಿದ ತಕ್ಷಣ ನಟಿಸಲು ಕಿಶೋರ್ ಅವರು ಒಪ್ಪಿಕೊಂಡರು. ಬಿಗ್ ಬಾಸ್ ಖ್ಯಾತಿಯ ಉಗ್ರಂ ಮಂಜು, ಕಾಕ್ರೋಜ್ ಸುಧೀ, ಯಶ್ ಶೆಟ್ಟಿ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇಂದು ಚಿತ್ರದ ಶೀರ್ಷಿಕೆ ಹಾಗೂ ಪೋಸ್ಟರ್ ಮಾತ್ರ ಬಿಡುಗಡೆ ಮಾಡಿದ್ದೇವೆ. ಚಿತ್ರೀಕರಣ ಆರಂಭವಾಗಲು ಇನ್ನೆರಡು ತಿಂಗಳು ಬೇಕು. ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡುತ್ತೇವೆ. ನನ್ನ ಮೊದಲ ನಿರ್ದೇಶನದ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು‌.

ನಾವು ದೇಶದಲ್ಲಿ ಇಂತಹ ಎಷ್ಟೇ ಘಟನೆಗಳು ನಡೆದರೂ ನಮ್ಮ ಮನೆಯದಲ್ಲ ಎನ್ನುವ ರೀತಿಯಲ್ಲಿ ಇರುತ್ತೇವೆ. ಆದರೆ ಆಕೆ ಕೂಡ ಒಬ್ಬರ ಮಗಳು, ಒಬ್ಬರ ಸಹೋದರಿ ಆಗಿರುತ್ತಾರೆ. ಆ ನಿಟ್ಟಿನಲ್ಲಿ ನಾವು ಯೋಚಿಸಬೇಕು. ಇನ್ನೂ ಇಂತಹ ವಿಷಯಗಳನ್ನು ಸಿನಿಮಾ ಮೂಲಕ ಹೇಳಿದಾಗ ಅದು ಬೇಗ ಜನರಿಗೆ ತಲಪುತ್ತದೆ. ಇಂತಹ ವಿಷಯವನ್ನಿಟ್ಟುಕೊಂಡು ಚಿತ್ರ ನಿರ್ಮಾಣ ಮಾಡುತ್ತಿರುವ ನಿರ್ಮಾಪಕರಿಗೆ ಹಾಗೂ ಮೊದಲ ಬಾರಿಯ ನಿರ್ದೇಶನಕ್ಕೆ ಸಾಮಾಜಿಕ ಕಳಕಳಿಯುಳ್ಳ ಕಥಾವಸ್ತು ಆರಿಸಿಕೊಂಡಿರುವುದು ನಿಜಕ್ಕೂ ಶ್ಲಾಘನೀಯ. ನಾನು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ ಎಂದು ನಟ ಕಿಶೋರ್ ತಿಳಿಸಿದರು.

ನಿರ್ಮಾಪಕ ಮಧು ಅವರು ಕರೆ ಮಾಡಿ ಈ ಚಿತ್ರದಲ್ಲಿ ನಟಿಸಬೇಕೆಂದು ಹೇಳಿದರು. ಇಂತಹ ಸಾಮಾಜಿಕ ಕಳಕಳಿಯುಳ್ಳ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ಹೆಮ್ಮೆಯಿದೆ ಎಂದರು ನಟರಾದ‌ ಉಗ್ರಂ ಮಂಜು ಹಾಗೂ ಕಾಕ್ರೋಜ್ ಸುಧೀ.

Tags: anushka movie songsdharmasthala soujanyadharmasthala soujanya casedharmasthala sowjanya case protestsoujanyaSoujanya Casesoujanya case court ordersoujanya case latest newssoujanya case moviesoujanya case newssoujanya case sameer mdsoujanya case videoSoujanya Murder CaseSowjanyaSowjanya casesowjanya case moviesowjanya case veerendra heggadesowjanya moviesowjanya shivasowjanya shiva movies
Previous Post

ಅವಾಗ ರಮೇಶ್ ಜಾರಕಿ ಹೋಳಿ ಇವಾಗ ಕೆ ಎನ್ ರಾಜಣ್ಣ ಹನಿ ಟ್ರ್ಯಾಪ್ ಬಲೆಗೆ ಬಿದ್ರಾ..?

Next Post

ವಿದ್ಯಾಪತಿʼಗೆ ಪ್ರೇರಣಪತಿ ಸಾಥ್..ಡಾಲಿ ಧನಂಜಯ್ ನಿರ್ಮಾಣದ ಚಿತ್ರಕ್ಕೆ ಆಕ್ಷನ್ ಪ್ರಿನ್ಸ್ ಬಲ

Related Posts

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು
ಇದೀಗ

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

by ಪ್ರತಿಧ್ವನಿ
February 2, 2026
0

ಬೆಂಗಳೂರು : ಕೊಯಂಬತ್ತೂರಿನಲ್ಲಿ ನಡೆದ ಸೆಲಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್ 2026) ನಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ ಕರ್ನಾಟಕ ಬುಲ್ಡೋಸರ್ಸ್ ತಂಡ ಭರ್ಜರಿ ಗೆಲುವು ಸಾಧಿಸಿ ಚಾಂಪಿಯನ್...

Read moreDetails
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Next Post
ವಿದ್ಯಾಪತಿʼಗೆ ಪ್ರೇರಣಪತಿ ಸಾಥ್..ಡಾಲಿ ಧನಂಜಯ್ ನಿರ್ಮಾಣದ ಚಿತ್ರಕ್ಕೆ ಆಕ್ಷನ್ ಪ್ರಿನ್ಸ್ ಬಲ

ವಿದ್ಯಾಪತಿʼಗೆ ಪ್ರೇರಣಪತಿ ಸಾಥ್..ಡಾಲಿ ಧನಂಜಯ್ ನಿರ್ಮಾಣದ ಚಿತ್ರಕ್ಕೆ ಆಕ್ಷನ್ ಪ್ರಿನ್ಸ್ ಬಲ

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada