• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!

ಪ್ರತಿಧ್ವನಿ by ಪ್ರತಿಧ್ವನಿ
September 29, 2025
in Top Story, ಇದೀಗ, ಜೀವನದ ಶೈಲಿ, ವಿದೇಶ, ವಿಶೇಷ, ಸಿನಿಮಾ
0
ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!
Share on WhatsAppShare on FacebookShare on Telegram

ಹೆಸರಾಂತ ರಂಗಭೂಮಿ ಕಲಾವಿದ ಹಲವಾರು ನಾಟಕಗಳನ್ನು ನಿರ್ದೇಶಿಸಿ-ನಟಿಸಿ ಕಲಾ ಕ್ಷೇತ್ರದಲ್ಲಿ ತಮ್ಮದೆ ಛಾಪನ್ನು ಮೂಡಿಸಿದ ಹಾಸ್ಯ ಕಲಾವಿದ ಯಶವಂತ ಸರದೇಶಪಾಂಡೆಯವರು ತೀವ್ರ ಹೃದಯಘಾತಕ್ಕೆ ತುತ್ತಾಗಿ ಅಸುನಿಗಿದ್ದಾರೆ. ಉತ್ತರ ಕರ್ನಾಟಕದ ಹುಬ್ಬಳಿ ಮೂಲದ ಕಲಾವಿದರಾದ ಇವರು ಅನೇಕ ಚಲನಚಿತ್ರಗಳಲ್ಲ ನಟಿಸಿದ್ದರು.

ADVERTISEMENT

ರಂಗಭೂಮಿ ಕ್ಷೇತ್ರಕ್ಕೆ ಇವರು ಅಪಾರವಾದ ಸೇವೆಯನ್ನು ಸಲ್ಲಿಸಿ, ಹಾಸ್ಯ ರಸಕ್ಕೆ ಹೆಸರುವಾಸಿಯಾಗಿದ್ದರು. 60 ವರ್ಷದ ಯಶವಂತ ಅವರಿಗೆ ಎದೆ ನೋವು ಕಾಣಿಸಿದೆ, ಕೂಡಲೇ ಅವರ ಕುಟುಂಬದ ಸದಸ್ಯರುಗಳು ಅವರನ್ನು Fortis ಆಸ್ಪತ್ರೆಗೆ ದಾಖಲಿಸಿದ್ದಾರೂ, ಚಿಕಿತ್ಸೆ ಫಲಿಸದೆ ಕೊನೆಯುಸಿರನ್ನು ಎಳೆದಿದ್ದಾರೆಂದು ಅವರು ಕುಟುಂಬದವರು ದೃಢ ಪಡಿಸಿದರು.

ಯಶವಂತ ದೇಶ್‌ ಪಾಂಡೆ ಅವರು ನಿರ್ದೇಶಿಸಿದ “ಆಲ್‌ ದಿ ಬೆಸ್” ನಾಟಕವು ಭರ್ಜರಿ ಯಶಸ್ಸನ್ನು ಕಂಡಿತಲ್ಲದೆ, ವಿಮರ್ಶಕರಿಂದಲೂ ಹಾಗೂ ಪ್ರೇಕ್ಷಕರಿಂದಲೂ ಉತ್ತಮ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ.

ಯಶವಂತ ಸರದೇಶಪಾಂಡೆ ಅವರು ಮೂಲತ: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದವರು. ಹೆಗ್ಗೋಡಿನ ನೀನಾಸಂ ನಾಟಕ ಸಂಸ್ಥೆಯಲ್ಲಿ ಡಿಪ್ಲೋಮಾ ಪದವಿಯನ್ನು ಪಡೆದುಕೊಳ್ಳುತ್ತಾರೆ. ಹಾಗೂ ರಂಗಬೂಮಿ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮತ್ತು
ಅವರಿಗಿದ್ದ ರಂಗಭೂಮಿಲ್ಲಿದ್ದ ಅಪಾರವಾದ ಆಸಕ್ತಿಯಿಂದಲೇ ಅವರು ನ್ಯೂಯಾರ್ಕ್‌ ವಿಶ್ವವಿದ್ಯಾಲಯದಲ್ಲಿ ನಾಟಕ ರಚನೆ, ಚಲನಚಿತ್ರ ಸಂಭಾಷಣೆಯ ವಿಭಾಗದಲ್ಲಿ ತರಬೇತಿ ಪಡೆಯುತ್ತಾರೆ.

ನಾಟಕಗಳ ಜೊತೆಗೆ ಇವರು ಕಿರುತರೆ ಮತ್ತು ಬೆಳ್ಳಿತರೆಯಲ್ಲೂ ಸಕ್ರಿಯರಾಗಿದ್ದರೂ. ಇವರ ಸಾವು ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಕಲಾ ಕ್ಷೇತ್ರಕ್ಕೆ ದೊಡ್ಡ ಶಾಕ್‌ ನೀಡಿದೆ.

ಆರೋಗ್ಯವಾಗಿದ್ದ ವ್ಯಕ್ತಿ ಸಡನ್ನಾಗಿ ಹೃದಯಘಾತಕ್ಕೆ ಒಳಗಾಗುತ್ತಾರೆ ಹಾಗೂ ಸಾವನ್ನಪ್ಪುತ್ತಾರೆಂದರೆ
ಇವರ ಸ್ನೇಹಿತರು ನಂಬಲಾಗದ ಸ್ಥಿತಿಯಲ್ಲಿದ್ದಾರೆ.

ಅಗಲಿದ ನಟನಿಗೆ ಕಂಬನಿ ಮಿಡಿದ ಸಚಿವ ಶಿವರಾಜ್‌ ತಂಗಡಗಿ !

ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿರುವ ಶಿವರಾಜ್‌ ತಂಗಡಗಿಯವರು ಅಗಲಿದ ಕಲಾವಿದನಿಗೆ ಕಂಬನಿ ಮಿಡಿದಿದ್ದಾರೆ.

ರಂಗಭೂಮಿ ಜೊತೆ ಸಿನಿಮಾ ಮತ್ತು ಟಿವಿ ಧಾರವಾಹಿಗಳಲ್ಲಿ ನಟನೆಯಿಂದ ಅಪಾರ ಹೆಸರು ಮಾಡಿರುವ ಯಶವಂತ ಸರದೇಶಪಾಂಡೆ ಸಮಕಾಲೀನ ಹಾಸ್ಯ ಕಲಾವಿದರ ಪಾಲಿನಲ್ಲಿ ತಮ್ಮ
ವಿಶಿಷ್ಟ ಭಾಷೆ, ಆಂಗಿಕ ಅಭಿನಯದಿಂದ ಅಪಾರ ಜನಪ್ರಿಯತೆ ಪಡೆದಿದ್ದರು.

ರಂಗ ವರ್ತುಲ ತಂಡವನ್ನು ಕಟ್ಟಿ, ಆ ಮೂಲಕ ಅಸಂಖ್ಯಾತ ನಾಟಕಗಳನ್ನು ಪ್ರದರ್ಶಿಸಿದ ಯಶವಂತ ಸರದೇಶಪಾಂಡೆ ಅವರ ಆಲ್‌ ದಿ ಬೆಸ್ಟ್‌ ನಾಟಕ ಪ್ರದರ್ಶನಗಳನ್ನು ಕಂಡಿದೆ.
ಕಲಮ ಹಾಸನ್‌ ಅಭಿನಯದ ರಾಮ ಶಾಮ ಭಾಮ ಜನಪ್ರಿಯ ಚಲನಚಿತ್ರದ ಸಂಭಾಷಕಾರರಾಗಿ
ಜೊತೆಗೆ ನಟಿಸಿ, ಅಪಾರ ಜನಪ್ರೀಯತೆ ಗಳಿಸಿದ್ದರು.

ದಾವಣಗೆರೆಯ ವೃತ್ತಿರಂಗಭೂಮಿ ರಂಗಾಯಣ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ ಯಶವಂತ ಸರದೇಶಪಾಂಡೆ ಅವರ ಸಾಂಸ್ಕೃತಿಕ ಮತ್ತು ಕೊಡುಗೆಗಾಗಿ ಅವರಿಗೆ ನನ್ನ ಗೌರವ ಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ ಎಂದು ಸಚಿವರು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

Tags: ಯಶವಂತ ಸರದೇಶಪಾಂಡೆಹೃದಯಘಾತ
Previous Post

ಕಲರ‍್ಸ್ ಕನ್ನಡದಲ್ಲಿ ಹೊಚ್ಚ ಹೊಸ ಧಾರಾವಾಹಿ

Next Post

Asia Cup : ಭಾರತ-ಪಾಕ್‌ ನಡುವೆ ಒಳ ಒಪ್ಪಂದವಿತ್ತೆ!?

Related Posts

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ
Top Story

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

by ಪ್ರತಿಧ್ವನಿ
April 18, 2026
0

ಕೃತಕ ಬುದ್ಧಿಮತ್ತೆ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಹಿನ್ನೆಲೆಯಲ್ಲಿ, ಮನುಷ್ಯರ ಉದ್ಯೋಗ ಭವಿಷ್ಯ ಕುರಿತು ಜಾಗತಿಕ ಮಟ್ಟದಲ್ಲಿ ಆತಂಕ ಹೆಚ್ಚುತ್ತಿದೆ. ಈ ನಡುವೆ ಎಲೋನ್ ಮಸ್ಕ್ ಭವಿಷ್ಯದ ಬಗ್ಗೆ...

Read moreDetails
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

April 18, 2026
ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

April 17, 2026
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

April 17, 2026
Next Post
Asia Cup : ಭಾರತ-ಪಾಕ್‌ ನಡುವೆ ಒಳ ಒಪ್ಪಂದವಿತ್ತೆ!?

Asia Cup : ಭಾರತ-ಪಾಕ್‌ ನಡುವೆ ಒಳ ಒಪ್ಪಂದವಿತ್ತೆ!?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada