ಮಾಜಿ ಸಚಿವ ರಮೇಶ್ ಜಾರಕೀಹೊಳಿ ಅವರ ಸಿಡಿ ಪ್ರಕರಣ ಸ್ವಲ್ಪ ತಣ್ಣಗಾಗುತ್ತಿರುವ ಬೆನ್ನಲ್ಲೇ ಇದೀಗ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಗೆ ಸಿಡಿ ಭೀತಿ ಶುರುವಾಗಿದ್ದು ತಮ್ಮ ವಿರುದ್ಧದ ವಿಡಿಯೋ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋಗಿ ತಡೆಯಾಜ್ಞೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಆದ್ದರಿಂದ ತಮ್ಮ ವಿರುದ್ಧ ಯಾವುದಾದರೂ ಸಿಡಿಗಳು ಇದ್ದರೆ ಅದು ಎಲ್ಲಿಯೂ ಪ್ರಸಾರವಾಗಬಾರದು ಎಂದು ಕೋರಿ ಬೆಂಗಳೂರಿನ ಸಿವಿಲ್ ಕೋರ್ಟ್ ಮೊರೆ ಹೋಗಿದ್ದಾರೆ. ಇಂದು ಇದರ ವಿಚಾರಣೆ ನಡೆಸಿರುವ ಕೋರ್ಟ್, ಸಿಡಿಯನ್ನು ಎಲ್ಲಿಯೂ ಪ್ರಸಾರ ಮಾಡಬಾರದು ಎಂದು ತಡೆಯಾಜ್ಞೆ ನೀಡಿದೆ.
ಕೊರ್ಟ್ ತಡೆಯಾಜ್ಞೆ ನೀಡುವ ಮೊದಲ ಅಂದರೆ ಇಂದು ಮಧ್ಯಾನ ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ರೇಣುಕಾಚಾರ್ಯ ವಿಡಿಯೋ ಇದೆ ಎಂದು ಯಾರೋ ಪುಣ್ಯಾತ್ಮ ಬ್ಲಾಕ್ ಮೇಲೆ ಮಾಡಿದ್ದಾರೆ. ಹೀಗಾಗಿ ನಾನು ತಡೆಯಾಜ್ಞೆ ನೋಡುತ್ತಿದ್ದೇನೆ . ನಾನು ಯಾವುದೇ ತಪ್ಪು ಮಾಡಿಲ್ಲ, ನನ್ನ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ. ಯಾವುದನ್ನ ಬೇಕಾದರೂ ಎಡಿಟ್ ಮಾಡಬಹುದು. ಯಾರ ಮುಖ ಯಾವುದಕ್ಕೂ ಜೋಡಿಸಬಹುದು. ಯಾರದ್ದೋ ಕಾಲು, ಯಾರದ್ದೋ ದೇಹ ಗ್ರಾಫಿಕ್ಸ್ ಮಾಡಿಸಬಹುದು. ನನ್ನನ್ನು ಯಾರೂ ಬ್ಲ್ಯಾಕ್ ಮೇಲ್ ಮಾಡಲು ಸಾಧ್ಯವಿಲ್ಲ, ಬ್ಲ್ಯಾಕ್ ಮೇಲ್ ಖೆಡ್ಡಾಗೆ ಬೀಳುವುದಿಲ್ಲ. ನನ್ನ ಮೇಲೆ ಆರೋಪ ಮಾಡುವವರು ಆತ್ಮಾವಲೋಕನ ಮಾಡಿಕೊಳ್ಳಲಿ. ಜೀವನದಲ್ಲಿ ಅವರು ಏನು ಮಾಡಿದ್ದಾರೆ ಯೋಚಿಸಲಿ ಎಂದು ಕಿಡಿಕಾರಿದ್ದರು.
ನಾನು ಅಂದು ಒಮ್ಮೆ ತಪ್ಪು ಮಾಡಿದ್ದೆ, ತಪ್ಪಿನಿಂದ ನಾನು ಪಾಠ ಕಲಿತಿದ್ದೇನೆ. ನಡೆಯುವ ಮನುಷ್ಯ ಎಡವುವುದು ಸಹಜ, ಮತ್ತೆಂದೂ ಆ ತಪ್ಪು ನಾನು ಮಾಡಿಲ್ಲ. ನೀಚಮಟ್ಟದ ಕೀಳುಮಟ್ಟದ ರಾಜಕಾರಣ ಯಾರೂ ಕ್ಷಮಿಸಲ್ಲ ಎಂದರು. ಇನ್ನು ಕೋರ್ಟ್ನಿಂದ ತಡೆಯಾಜ್ಞೆ ತಂದ ಶಾಸಕರಿಗೆ ಮಂತ್ರಿಗಿರಿ ಬೇಡ ಎಂದು ಬಿಜೆಪಿಗೆ ಆರ್ಎಸ್ಎಸ್ ಸೂಚನೆ ವಿಚಾರವಾಗಿಗಿ ಪ್ರತಿಕ್ರಿಯಿಸಿದ ಅವರು, ಸಂಪುಟ ರಚನೆ ಸಿಎಂ ಪರಮಾಧಿಕಾರ. ಸಿಎಂಗೆ ನಾನು ಮನವಿ ಮಾಡಿದ್ದೇನೆ . ಅವಕಾಶ ಮಾಡಿಕೊಡಲು ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದರು.
ಈಗ ಕೋರ್ಟ್, ಸಿಡಿಯನ್ನು ಎಲ್ಲಿಯೂ ಪ್ರಸಾರ ಮಾಡಬಾರದು ಎಂದು ತಡೆಯಾಜ್ಞೆ ನೀಡಿದೆ. ರೇಣುಕಾಚಾರ್ಯರಿಗೆ ಈಗ ತಾತ್ಕಾಲಿಕ ದಿಲೀಪ್ ಸಿಕ್ಕಿದೆ.