
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರದಲ್ಲಿ ನಟ ದರ್ಶನ್ ಕೋರ್ಟ್ ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ಇಂದು ನಡೆಯಲಿದೆ. ದರ್ಶನ್ ಜಾಮೀನು ಕೋರಿ ಸೆ.21ರಂದು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.

ಇಂದು ಜಾಮೀನು ಅರ್ಜಿಯ ವಿಚಾರಣೆಯನ್ನು 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ನ್ಯಾಯಮೂರ್ತಿ ಜೈ.ಶಂಕರ್ ಅವರು ವಿಚಾರಣೆ ನಡೆಸಲಿದ್ದಾರೆ.ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ವಿಚಾರ ಬೆಳಕಿಗೆ ಬಂದ ನಂತರ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದಾರೆ. ದರ್ಶನ್ ವಕೀಲ ಸುನೀಲ್ ಮೂಲಕ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದಾರೆ.
ಇನ್ನು ಅರ್ಜಿಯಲ್ಲಿ ರೇಣುಕಾ ಸ್ವಾಮಿ ಕೊಲೆಗೂ ಹಾಗೂ ದರ್ಶನ್ಗು ಯಾವುದೇ ಸಂಬಂಧ ಇಲ್ಲ ಎಂಬ ಮಾಹಿತಿ ಉಲ್ಲೇಖಿಸಲಾಗಿದೆ.ಈ ಕೇಸ್ನಲ್ಲಿ ಸುಮ್ಮನೆ ದರ್ಶನ್ ಹೆಸರನ್ನು ಎಳೆದು ತರಲಾಗಿದೆ. ರೇಣುಕಾಸ್ವಾಮಿ ಅಪಹರಣ ಮಾಡಲು ದರ್ಶನ್ ಸೂಚನೆ ನೀಡಿಲ್ಲ. ರೇಣುಕಾಸ್ವಾಮಿ ಹತ್ಯೆಯಲ್ಲಿ ದರ್ಶನ್ ಪಾತ್ರವಿಲ್ಲ. ಎ10 ಆರೋಪಿ ವಿನಯ್ ಹಾಗೂ ಎ3 ಆರೋಪಿ ಪವನ್ ಸೂಚನೆ ಮೇರೆಗೆ ಅಪಹರಣ ಮಾಡಲಾಗಿದೆ ಎಂದು ಜಾಮೀನು ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ.
ಇನ್ನು ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಆಗಿರುವ ದರ್ಶನ್ ತಮ್ಮ ವಕೀಲರ ಮೂಲಕ ನಿನ್ನೆ ಮೊದಲ ಬಾರಿಗೆ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು, ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದರು. ಇಂದು ನಟ ದರ್ಶನ್ ಜಾಮೀನು ಅರ್ಜಿಯ ಭವಿಷ್ಯ ನಿರ್ಧಾರವಾಗಲಿದೆ.