ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ(Renukaswamy Murder Case) ಸಂಬಂಧ ಇಂದು ಮತ್ತೆ ಸಾಕ್ಷ್ಯ ವಿಚಾರಣೆ ಶುರುವಾಗಿದ್ದು, ಮುಚ್ಚಿದ ಕೊಠಡಿಯಲ್ಲಿ ವಿಚಾರಣೆ ನಡೆಯುತ್ತಿದೆ.

ನಗರದ 57 ನೇ ಸಿಸಿಹೆಚ್ ಕೋರ್ಟ್ನಲ್ಲಿ ಮಧ್ಯಾಹ್ನ 12 ಗಂಟೆಯಿಂದ ವಿಚಾರಣೆ ನಡೆಯುತ್ತಿದ್ದು, ನಿನ್ನೆಯಂತೆ ಆರೋಪಿ ದರ್ಶನ್ ಸೇರಿ 7 ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಉಳಿದ ಆರೋಪಿಗಳು ನೇರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ರೇಣುಕಾಸ್ವಾಮಿ ತಂದೆ-ತಾಯಿ ವಿಚಾರಣೆ
ನಿನ್ನೆಯಿಂದ ರೇಣುಕಾಸ್ವಾಮಿ ತಂದೆ-ತಾಯಿ ಸಾಕ್ಷ್ಯ ವಿಚಾರಣೆಯ ನಡೆಯುತ್ತಿದ್ದು, ಇಬ್ಬರು ತಮ್ಮ ಮಗನ ಕಿಡ್ನಾಪ್, ಕೊಲೆ ಸಂಬಂಧ ತಮಗೆ ತಿಳಿದಿರುವ ಮಾಹಿತಿಯನ್ನು ಕೋರ್ಟ್ಗೆ ತಿಳಿಸುತ್ತಿದ್ದಾರೆ. ನಿನ್ನೆ ರೇಣುಕಾಸ್ವಾಮಿ ತಾಯಿ ರತ್ನಪ್ರಭಾ ಕ್ರಾಸ್ ಎಕ್ಸಾಮಿನೇಷನ್ ಮಾಡಿದ್ದ ಪವಿತ್ರ ಗೌಡ ಪರ ವಕೀಲ ಬಾಲನ್ ಇಂದು ಕೂಡ ಪಾಟಿ ಸವಾಲು ಮುಂದುವರಿಸಿದ್ದಾರೆ.

ಮುಚ್ಚಿದ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು, ಕೋರ್ಟ್ ಹಾಲ್ನಲ್ಲಿ ಪ್ರಕರಣಕ್ಕೆ ಸಂಬಂಧಪಟ್ಟ ವಕೀಲರು, ಆರೋಪಿಗಳು ಮಾತ್ರ ಹಾಜರಿದ್ದಾರೆ.
ಸಾಕ್ಷ್ಯ ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ಎಸ್ಪಿಪಿ ಪ್ರಸನ್ನ ಕುಮಾರ್ ಹಾಜರಾಗಿದ್ದರೆ, ದರ್ಶನ್ ಪರ ಹಿರಿಯ ವಕೀಲ ಸಿ.ವಿ.ನಾಗೇಶ್, ಪವಿತ್ರ ಗೌಡ ಪರ ಬಾಲನ್ ಹಾಜರಾಗಿದ್ದಾರೆ.











