• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜನರ ತೆರಿಗೆಯಿಂದ ಜನಪ್ರತಿನಿಧಿಗಳಿಗೆ ಚಿಕಿತ್ಸೆ: ಆರೋಗ್ಯ ವಿಮೆ ಮಾಡಿಸುವಂತೆ ಸಭಾಪತಿಗಳಿಗೆ ಪತ್ರ ಬರೆದರು ಪ್ರತಿಕ್ರಿಯೆ ಇಲ್ಲ: ಸಾಮಾಜಿಕ ಹೋರಾಟಗಾರ ಹೆಚ್.ಎಂ. ವೆಂಕಟೇಶ್

ಪ್ರತಿಧ್ವನಿ by ಪ್ರತಿಧ್ವನಿ
September 15, 2021
in ಕರ್ನಾಟಕ
0
ಜನರ ತೆರಿಗೆಯಿಂದ ಜನಪ್ರತಿನಿಧಿಗಳಿಗೆ ಚಿಕಿತ್ಸೆ: ಆರೋಗ್ಯ ವಿಮೆ ಮಾಡಿಸುವಂತೆ ಸಭಾಪತಿಗಳಿಗೆ ಪತ್ರ ಬರೆದರು ಪ್ರತಿಕ್ರಿಯೆ ಇಲ್ಲ: ಸಾಮಾಜಿಕ ಹೋರಾಟಗಾರ ಹೆಚ್.ಎಂ. ವೆಂಕಟೇಶ್
Share on WhatsAppShare on FacebookShare on Telegram

ಕರ್ನಾಟಕ ಸರ್ಕಾರವು ಬಹಳ ವರ್ಷಗಳಿಂದ ರಾಜ್ಯದ ವಿಧನಸಭೆಗೆ ಅಯ್ಕೆಯಾಗುವ ಜನಪ್ರತಿನಿಧಿಗಳಿಗೆ ಮತ್ತು ಅವರ ಕುಟುಂಬ ವರ್ಗದ ಎಲ್ಲಾ ಸದಸ್ಯರುಗಳಿಗೆ ಅನಾರೋಗ್ಯದ ಸಂದರ್ಭದಲ್ಲಿ ಅವರ ಚಿಕಿತ್ಸಾ ವೆಚ್ಚವನ್ನು ಸಾರ್ವಜನಿಕರ ತೆರಿಗೆ ಹಣವನ್ನು ಬಳಸಿಕೊಳ್ಳುತ್ತಿರುವುದು ಈಗ ಪ್ರಶ್ನಾರ್ಹವಾಗಿದೆ.

ADVERTISEMENT

ಕಳೆದ ಐದಾರು ವರ್ಷಗಳಿಂದ ಈ ಬಗ್ಗೆ ಮಾಹಿತಿಗಳನ್ನು ಪಡೆದು ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮ,ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ನಾನು ಪ್ರಶ್ನಿಸುತ್ತಾ ಹೋಗುತ್ತಿದ್ದೆ. ಯಾವಾಗ ಮಾಧ್ಯಮ ಮತ್ತಿತರ ಸಾಮಾಜಿಕ ಜಾಲತಾಣದಲ್ಲಿ ವಿಧಾನಸಭಾ ಸದಸ್ಯರ ಹೆಸರುಗಳು ಜೊತೆ ಅವರು ಪಡೆದುಕೊಳ್ಳುತ್ತಿದ್ದ ಬಿಲ್ಲಿನ ಹಣ ನೋಡಿದ ಸಾರ್ವಜನಿಕರು ಹುಬ್ಬೇರಿಸಿ ತಮ್ಮ ತಮ್ಮಲ್ಲಿಯೇ ಇದು ಸರಿ ತಪ್ಪು ಎಂಬ ಬಗ್ಗೆ ವ್ಯಾಪಕ ಚರ್ಚೆ ಮಾಡಿಕೊಳ್ಳುತ್ತಿದ್ದರು.

ಪ್ರತಿ ಚುನಾವಣೆಯಲ್ಲೂ ಕೋಟಿಗಟ್ಟಲೆ ರೂಪಾಯಿಗಳನ್ನು ವೆಚ್ಚ ಮಾಡಿ ಮತದಾರರಿಗೆ ಹಲವಾರು ಅಮಿಷಗಳನ್ನು ಒಡ್ಡಿ ಹಣ ವಿತರಿಸಿ ಗೆದ್ದುಬಂದ ವ್ಯಕ್ತಿಗಳು ಅವರ ಮತ್ತು ಅವರ ಕುಟುಂಬದ ಆರೋಗ್ಯಕ್ಕೆ ಸಾರ್ವಜನಿಕರ ತೆರಿಗೆಯ ಖಜಾನೆ ಹಣ ಬೇಕಾಗಿತ್ತಾ? ಹೀಗೆ ಸಾರ್ವಜನಿಕರ ಬಾಯಿಗೆ ಎಲೆ ಅಡಿಕೆಯಂತೆ ಆಹಾರವಾಗಿತ್ತು. ಈ ಎಲ್ಲಾ ಸದಸ್ಯರಿಗೆ ಆರೋಗ್ಯ ವಿಮೆ ಮಾಡಿಸುವಂತೆ ಸ್ಪೀಕರ್ ಅವರಿಗೆ ನಾನು ಹೋದವರ್ಷ ಒಂದು ಪತ್ರವನ್ನು ಬರೆದಿದ್ದು ಅದಕ್ಕೆ ಇಲ್ಲಿಯವರೆಗೂ ಅವರಿಂದ ಯಾವುದೇ ಉತ್ತರ ಬರಲಿಲ್ಲ. ಈ ಕಾರಣಕ್ಕಾಗಿಯೇ ಸಾಕಷ್ಟು ಜನ ಸದಸ್ಯರು ಮತ್ತು ಅವರ ಕುಟುಂಬ ವರ್ಗದವರು ಅನಾರೋಗ್ಯಕ್ಕೆ ಒಳಗಾಗಿದ್ದರು ಸಹಿತ ಆಸ್ಪತ್ರೆಯ ಬಿಲ್ಲುಗಳನ್ನು ಸಾರ್ವಜನಿಕರ ತೆರಿಗೆ ಹಣದ ಖಜಾನೆಯಿಂದ ಪಡೆದುಕೊಳ್ಳುವುದನ್ನು ನಿಲ್ಲಿಸಿಬಿಟ್ಟರು.

ಕಳೆದ ನಾಲ್ಕೈದು ವರ್ಷಗಳಿಗೆ ಹೋಲಿಕೆ ಮಾಡಿದರೆ ಕೆಲವೇ ಕೆಲವು ಸದಸ್ಯರು ಮಾತ್ರ ಈಗ ಆಸ್ಪತ್ರೆಯ ಬಿಲ್ಲುಗಳನ್ನು ಪಡೆಯುತ್ತಿದ್ದಾರೆ. ಹೀಗೆ ಹೋರಾಟವನ್ನು ಮುಂದುವರಿಸಿ 224 ಸದಸ್ಯರು ಸಹಿತ ಅವರ ಕುಟುಂಬ ವರ್ಗದ ಮತ್ತು ಅವರ ಅನಾರೋಗ್ಯದ ನಿಮಿತ್ತ ಆಗುವ ಆಸ್ಪತ್ರೆಯ ಬಿಲ್ಲುಗಳನ್ನು ಸಾರ್ವಜನಿಕರ ತೆರಿಗೆ ಹಣದ ಖಜಾನೆಯಿಂದ ಪಡೆಯದಂತೆ ಮಾಡಬೇಕಾಗಿದೆ.

ಅದುದರಿಂದ ವಿಧಾನಸಭಾ ಅಧ್ಯಕ್ಷರಾದ ತಾವುಗಳು ವಿಧಾನಸಭಾ ಸದಸ್ಯರುಗಳಿಗೆ ಅರೋಗ್ಯ ವಿಮೆಯನ್ನು ಮಾಡಿಸುವ ಮೂಲಕ ಸಾರ್ವಜನಿಕರ ತೆರಿಗೆ ಹಣವನ್ನು ಆನಾವಶ್ಯಕವಾಗಿ ಬಳಿಕೆ ಮಾಡುವುದನ್ನು ತಡೆಹಿಡಿಯಬಹುದಾಗಿದೆ ಮತ್ತು ವಿಧಾನಸಭಾ ಸದಸ್ಯರುಗಳು ಆರೋಗ್ಯದ ಕಡೆ ಸರ್ಕಾರವು ಹೆಚ್ಚಿನ ಗಮನಹರಿಸಿದಂತಾಗುತ್ತದೆ.

ರಾಜ್ಯದಲ್ಲಿ ಈ ವರ್ಷ ಕೊರೋನಾ ಸಾಂಕ್ರಾಮಿಕ ರೋಗದಿಂದ ಸಾವಿರಾರು ಜನ ಮೃತಪಟ್ಟು ಚಿಕಿತ್ಸೆ ಸಿಗದೆ ಬಳಲುತ್ತಿರುವ ಹಂತದಲ್ಲಿಯೇ ಕಲ್ಯಾಣ ಕರ್ನಾಟಕದ ಹಳ್ಳಿಹಳ್ಳಿಗಳಲ್ಲಿ ಪ್ರವಾಹದಿಂದಾಗಿ ಜನರು ಮನೆಮಠಗಳನ್ನು ಕಳೆದುಕೊಂಡು ಅಹಾರಕ್ಕಾಗಿ ಹಾಹಾಕಾರ ಹಾಕುತ್ತಿರುವಂತಹ ಸಂದರ್ಭದಲ್ಲಿ ವಿಧಾನಸಭಾ ಸದಸ್ಯರು ಮತ್ತು ಅವರ ಕುಡುಂಬ ವರ್ಗದವರು ಸಾರ್ವಜನಿಕರ ತೆರಿಗೆ ಹಣದಿಂದ ಚಿಕಿತ್ಸೆ ಪಡೆಯುತ್ತಿರುವ ವಿಷಯವು ಸಾರ್ವಜನಿಕರ ಬಾಯಿಗೆ ಆಹಾರವಾಗಿದೆ.

ಈ ಹಿಂದೆ ವಿಧಾನಸಭಾ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ ಸನ್ಮಾನ ಶ್ರೀ ರಮೇಶ್ ಕುಮಾರ್ ಅವರು ಜನಪ್ರತಿನಿಧಗಳು ಮತ್ತು ಸರ್ಕಾರಿ ನೌಕರರು ಅನಾರೋಗ್ಯದಲ್ಲಿ ಚಿಕಿತ್ಸೆ ಪಡೆಯುವಂತೆ ಬಗ್ಗೆ ಒಂದು ಸುತ್ತೋಲೆಯನ್ನು ಹೊರಡಿಸಿದ್ದರು. 9964127890

ʼಜನಪ್ರತಿನಿಧಿಗಳು ಸೇರಿದಂತೆ ಸರ್ಕಾರಿ ನೌಕರರು ಅನಾರೋಗ್ಯವಾದಲ್ಲಿ ಸಾರ್ಕಾರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು. ಸರ್ಕಾರಿ ಅಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಸೌಲಭ್ಯಗಳು ದೊರೆಯದಿದ್ದ ಪಕ್ಷದಲ್ಲಿ ವೈದ್ಯಾಧಿಕಾರಿಗಳು ಖಾಸಗಿ ಅಸ್ಪತ್ರೆಗೆ ದಾಖಲಾಗುವಂತೆ ಶಿಫಾರಸ್ಸು ಮಾಡಿದ್ದಲ್ಲಿ ಖಾಸಗಿ ಅಸ್ಪತೆಯ ಚಿಕಿತ್ಸೆ ವೆಚ್ಚವನ್ನು ನಿಯಮಾನುಸಾರ ನೀಡಲಾಗುವುದುʼ ಎಂದು ಆದೇಶ ಹೊರಡಿಸಿದ ಸುತ್ತೋಲೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜಾರಿಯಾಗಬೇಕಿತ್ತು. ಆದರೆ ಅದು ನೆನೆಗುದಿಗೆ ಬಿದ್ದಿರುವುದು ದುರದೃಷ್ಟಕರ ಸಂಗತಿಯಾಗಿದೆ. ಗೌರವಾನ್ವಿತ ವಿಧಾನಸಭಾ ಅಧ್ಯಕ್ಷರಾದ ತಾವುಗಳು ಈ ನನ್ನ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ವಿಧಾನಸಭಾ ಸದಸ್ಯರುಗಳು ಮತ್ತು ಅವರ ಕುಟುಂಬದ ಆರೋಗ್ಯದ ಚಿಕಿತ್ಸೆಗಾಗಿ ಸಾರ್ವಜನಿಕರ ತೆರಿಗೆ ಹಣವನ್ನು ಬಳಿಸದಂತೆ ಮುತುವರ್ಜಿ ವಹಿಸುತ್ತೀರಿ ಎಂಬ ಆಶಯದೊಂದಿಗೆ “ಆರೋಗ್ಯ ವಿಮೆ” ಸೌಲಭ್ಯವನ್ನು ವಿಧಾನಸಭಾ ಸದಸ್ಯರಿಗೆ ಒದಗಿಸಿಕೊಡಬೇಕಾಗಿ ನನ್ನ ವಿನಮ್ರ ಪ್ರಾಥನೆ ಎಂದು ಹೆಚ್.ಎಂ. ವೆಂಕಟೇಶ್ ಅವರು ಪ್ರತದಲ್ಲಿ ಹೇಳಿದ್ದಾರೆ.

ಹೆಚ್.ಎಂ. ವೆಂಕಟೇಶ್ ಪತ್ರ ಇಲ್ಲಿದೆ:

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪಂಜಶೀರನಲ್ಲಿ 20 ಮಂದಿಯನ್ನು ಕೊಂದ ತಾಲಿಬಾನಿಗಳು; ಅಫ್ಘಾನ್ ಉಪ ಪ್ರಧಾನಿ ಬರಾದಾರ್ ನಾಪತ್ತೆ

Next Post

ಕರೋನ ಪರಿಣಾಮ: ಡಿಸೆಂಬರ್ 2022ರವರೆಗೆ ಮಾಸ್ಕ್ ಕಡ್ಡಾಯ!

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಕರೋನ ಪರಿಣಾಮ: ಡಿಸೆಂಬರ್ 2022ರವರೆಗೆ ಮಾಸ್ಕ್ ಕಡ್ಡಾಯ!

ಕರೋನ ಪರಿಣಾಮ: ಡಿಸೆಂಬರ್ 2022ರವರೆಗೆ ಮಾಸ್ಕ್ ಕಡ್ಡಾಯ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada