ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ ಆರ್ ನಗರದಲ್ಲಿ ಕಿಡ್ನಾಪ್ ಆಗಿದ್ದ ಸಂತ್ರಸ್ತೆಯ ರಕ್ಷಣೆ ಮಾಡಲಾಗಿದೆ.
ಹುಣಸೂರು ತಾಲೂಕಿನ ಕಾಳೇನಹಳ್ಳಿಯಲ್ಲಿ ರಕ್ಷಣೆ ಮಾಡಲಾಗಿದೆ.ಸಂತ್ರಸ್ತೆಯನ್ನು ರಕ್ಷಣೆ ಮಾಡಿ ಕರೆದೊಯ್ದ ಎಸ್ಐಟಿ ಪೊಲೀಸರು, ಆರೋಗ್ಯ ತಪಾಸಣೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.ಮಾಜಿ ಸಚಿವ ಹೆಚ್ ಡಿ ರೇವಣ್ಣ ಆಪ್ತ ಸಹಾಯಕ ರಾಜಶೇಖರ್ ತೋಟದ ಮನೆಯಿಂದ ರಕ್ಷಣೆ ಮಾಡಲಾಗಿದೆ.ಏಪ್ರಿಲ್ 29ರಂದು ಸಂತ್ರಸ್ತೆಯ ಮನೆಯಿಂದ ಕರೆದೊಯ್ಯಲಾಗಿತ್ತು.ಹೆಚ್ ಡಿ ರೇವಣ್ಣ ಸಂಬಂಧಿ ಸತೀಶ್ ಬಾಬು ಕರೆದೊಯ್ದಿದ್ದ. ಅಂದಿನಿಂದಲೂ ಹುಣಸೂರು ತಾಲೂಕಿನ ಕಾಳೇನಹಳ್ಳಿಯ ರೇವಣ್ಣ ಆಪ್ತ ಸಹಾಯಕ ರಾಜಶೇಖರ್ ತೋಟದಲ್ಲಿ ಇರಿಸಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.ಸಂತ್ರಸ್ತೆಯ ಮಗ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಸಂತ್ರಸ್ತೆಯ ಪತ್ತೆಯೊಂದಿಗೆ ಮೈಸೂರು ಜಿಲ್ಲಾ ಪೊಲೀಸರು ನಿಟ್ಟುಸಿರುಬಿಟ್ಟಿದ್ದಾರೆ.