ಅಶ್ಲೀಲ ವಿಡಿಯೋ ಕೇಸ್ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ರಿಗೆ ಮೊಗ್ಗಲ ಮುಳ್ಳಾಗಿ ಪರಿಣಮಿಸಿದೆ. SIT ಟೀಮ್ ತನಿಖೆಯನ್ನ ತೀವ್ರಗೊಳಿಸಿದ್ದು,ವಿವಿಧ ಆಯಾಮಗಳಲ್ಲಿ ತನಿಖೆ ನಡೆಸ್ತಿದೆ.
ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಜಾಮೀನಿ ಮೊರೆ ಹೋಗಿದ್ದಾರೆ. ಬಂಧನ ಭೀತಿಯ ಕಾರಣದಿಂದ ಎಚ್.ಡಿ.ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ರೇವಣ್ಣ ಪರವಾಗಿ ಅವರ ವಕೀಲರು ಸಲ್ಲಿಸಿರುವ ಅರ್ಜಿ ಸಲ್ಲಿಕೆಯಾಗಿದ್ದು. ಇನ್ನಷ್ಟೇ ವಿಚಾರಣೆಗೆ ಬರಬೇಕಾಗಿದೆ. ಈಗಾಗಲೇ ಹೊಳೆ ನರಸೀಪುರ ಠಾಣೆಯಲ್ಲಿ ದಾಖಲಾಗಿರುವ ದೂರು ಆಧರಿಸಿ ತನಿಖೆ ಶುರುವಾಗಿದ್ದು. ಎಚ್.ಡಿ.ರೇವಣ್ಣ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ಜಾರಿಗೊಳಿಸಲಾಗಿದೆ. ಆದರೆ ರೇವಣ್ಣ ವಿಚಾರಣೆಗೆ ಹಾಜರಾಗಿಲ್ಲ.
ರೇವಣ್ಣ ಅವರ ಮನೆಯಲ್ಲಿಯೇ ಕೆಲಸ ಮಾಡುತ್ತಿದ್ದ ಮಹಿಳೆ ಮೂರು ದಿನದ ಹಿಂದೆ ಪೊಲೀಸರಿಗೆ ದೂರು ನೀಡಿದ್ದು. ದೂರಿನಂತೆ ಪ್ರಕರಣವನ್ನೂ ದಾಖಲಿಸಿಕೊಳ್ಳಲಾಗಿದೆ. ಹೊಳೆ ನರಸೀಪುರ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಘಟನೆ ಕುರಿತು ತನಿಖೆ ಆರಂಭಿಸಿದ್ದಾರೆ. ಈ ಪ್ರಕರಣದಲ್ಲಿ ಮೊದಲ ಆರೋಪಿಯಾಗಿ ಎಚ್.ಡಿ ರೇವಣ್ಣ ಹೆಸರಿದ್ದರೆ, ಎರಡನೇ ಆರೋಪಿಯಾಗಿ ಪ್ರಜ್ವಲ್ ರೇವಣ್ಣ ಹೆಸರನ್ನು ಉಲ್ಲೇಖಿಸಲಾಗಿದೆ.