ಕಲಬುರಗಿ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಹೊರ ಬಂದಿರುವ ಶಾಸಕ ಎಚ್.ಡಿ. ರೇವಣ್ಣ ಟೆಂಪಲ್ ರನ್ ನಡೆಸಿದ್ದಾರೆ.
![](https://pratidhvani.com/wp-content/uploads/2024/05/HD-Revanna-1-3.jpg)
ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರದ (Ganagapur) ದತ್ತನ (Dattatreya Temple) ಮೊರೆ ಹೋಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ದೇವಸ್ಥಾನದಲ್ಲಿ ದತ್ತನ ನಿರ್ಗುಣ ಪಾದುಕೆಗಳಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸುಮಾರು ಒಂದು ಗಂಟೆಗಳ ಕಾಲ ರೇವಣ್ಣ ದೇವಸ್ಥಾನದಲ್ಲಿಯೇ ದೇವರ ಸಾನಿಧ್ಯದಲ್ಲಿ ಇದ್ದರು.
ಈ ಹಿಂದೆ ಕೂಡ ಹಲವು ಬಾರಿ ರೇವಣ್ಣ ಅವರು ಗಾಣಗಾಪುರಕ್ಕೆ ಬಂದು ದತ್ತಾತ್ರೇಯನ ಆಶೀರ್ವಾದ ಪಡೆದಿದ್ದರು.