• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಳ್ಳಾರಿಯಲ್ಲಿ ಮರಳು ದಂಧೆ; ಟ್ರಾಕ್ಟರ್ ಸೀಜ್ ಮಾಡಿದ ಅಧಿಕಾರಿ ಮೇಲೆಯೇ ಹಲ್ಲೆ

ನಚಿಕೇತು by ನಚಿಕೇತು
December 3, 2021
in ಕರ್ನಾಟಕ
0
ಬಳ್ಳಾರಿಯಲ್ಲಿ ಮರಳು ದಂಧೆ; ಟ್ರಾಕ್ಟರ್ ಸೀಜ್ ಮಾಡಿದ ಅಧಿಕಾರಿ ಮೇಲೆಯೇ ಹಲ್ಲೆ
Share on WhatsAppShare on FacebookShare on Telegram

ಮೈನಿಂಗ್ ಮಾಫಿಯಾದಿಂದ ಸದ್ದು ಮಾಡಿದ್ದ ಬಳ್ಳಾರಿ ಜಿಲ್ಲೆ ಸದ್ಯ ಮರಳು ಮಾಫಿಯಾದ ಕಪಿಮುಷ್ಠಿಗೆ ಸಿಲುಕಿದೆ. ಅಕ್ರಮ ತಡೆಯಲು ಹೋದ ಅಧಿಕಾರಿ ಮೇಲೆಯೇ ದುಷ್ಟರು ಅಟ್ಟಹಾಸ ಮೆರೆದಿದ್ದಾರೆ. ಮರಳು ಮಾಫಿಯಾದ ಹಿಡಿತ ಬಿಗಿಯಾಗುತ್ತಿದ್ದು, ಸರ್ಕಾರಿ ಅಧಿಕಾರಿಗೆ ಹೀಗಾದ್ರೆ ಜನಸಾಮಾನ್ಯರ ಗತಿಯೇನು ಅನ್ನೋ ಪ್ರಶ್ನೆಯೂ ಹುಟ್ಟಿಕೊಂಡಿದೆ.

ಗಾಯಗೊಂಡಿರೋ ಕೈಗೆ ಬ್ಯಾಂಡೇಜ್ ಸುತ್ತಿಕೊಂಡು ಆಸ್ಪತ್ರೆ ಬೆಡ್ ಪಾಲಾಗಿರೋ ಇವರು ಬಳ್ಳಾರಿಯ ಪ್ರಭಾರ ಕಂದಾಯ ನಿರೀಕ್ಷಕ ವೆಂಕಟಸ್ವಾಮಿ. ಇನ್ನೊಂದು ಬೆಡ್ ಮೇಲೆ ಮಲಗಿರೋ ಮಹಿಳೆ, ವೆಂಕಟಸ್ವಾಮಿ ಅವರ ಪತ್ನಿ ಸರಸ್ವತಿ. ವೆಂಕಟಸ್ವಾಮಿ ಅವರ ಪ್ರಾಮಾಣಿಕ ಸೇವೆಯೇ ಇಂದು ಈ ದಂಪತಿಯನ್ನು ಆಸ್ಪತ್ರೆ ಬೆಡ್ ಮೇಲೆ ಮಲಗುವಂತೆ ಮಾಡಿದೆ.

ಬಳ್ಳಾರಿ ತಾಲೂಕಿನ ತೋಳಮಾಮಿಡಿ ಬಳಿ ಅಕ್ರಮ ಮರಳು ದಂಧೆ ನಡೆಯುತ್ತಿತ್ತು. ಹೀಗಾಗಿ ಪ್ರಭಾರ ಕಂದಾಯ ನಿರೀಕ್ಷಕ ವೆಂಕಟಸ್ವಾಮಿ ಅಕ್ರಮ ಮರಳುಗಾರಿಕೆ ತಡೆಯಲು  ಮುಂದಾಗಿದ್ದಾರೆ. ಮರಳು ಸಾಗಾಟಕ್ಕೆ ಬಳಸುತ್ತಿದ್ದ ಟ್ರ್ಯಾಕ್ಟರ್ ಸೀಜ್ ಮಾಡಿದ್ದಾರೆ. ಟ್ರ್ಯಾಕ್ಟರ್ ಸೀಜ್ ಮಾಡಿದ್ದಕ್ಕೆ ಕೋಪಗೊಂಡ ಮಾಫಿಯಾ ಗ್ಯಾಂಗ್ ವೆಂಕಟಸ್ವಾಮಿ ಮೇಲೆ ದಾಳಿ ಮಾಡಿದೆ. ಮನೆಗೆ ನುಗ್ಗಿ ವೆಂಕಟಸ್ವಾಮಿ ಹಾಗೂ ಕುಟುಂಬಸ್ಥರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ.

ADVERTISEMENT

ಕಂದಾಯ ನಿರೀಕ್ಷಕ ವೆಂಕಟಸ್ವಾಮಿ ಮೇಲೆ ನಡೆದಿರುವ ದಾಳಿಯನ್ನು ನೌಕರರ ಸಂಘಟನೆಗಳು ಖಂಡಿಸಿವೆ. ಬಳ್ಳಾರಿಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಹಲ್ಲೆ ಮಾಡಿರೋ ಮಾಫಿಯಾ ಗ್ಯಾಂಗ್ ಬಂಧನಕ್ಕೆ ಆಗ್ರಹಿಸಿವೆ. ಈ ರೀತಿ ದಾಳಿ ನಡೆದ್ರೆ ಅಧಿಕಾರಿಗಳ ಆತ್ಮಸ್ಥೈರ್ಯವೇ ಕುಗ್ಗಲಿದೆ ಅಂತಾರೆ ಬಳ್ಳಾರಿ ತಹಶೀಲ್ದಾರ್ ರೆಹಾನ್ ಭಾಷಾ.

ಹಲ್ಲೆ ಸಂಬಂಧ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಅಧಿಕಾರಿಗಳ ಮೇಲೆಯೇ ದಾಳಿ ನಡೆಸುವಷ್ಟು ಮರಳು ಮಾಫಿಯಾ ಪ್ರಬಲವಾಗಿದೆ. ಈ ಮಾಫಿಯಾಗೆ ಜನಪ್ರತಿನಿಧಿಗಳ ಕುಮ್ಮಕ್ಕಿರೋ ಶಂಕೆಯನ್ನೂ ವ್ಯಕ್ತಪಡಿಸಲಾಗುತ್ತಿದೆ. ಅದೆಷ್ಟೇ ಪ್ರಭಾವಿಗಳು ಇದರ ಹಿಂದಿದ್ರೂ ಲೆಕ್ಕಿಸದೇ ನದಿಯ ಒಡಲಿಗೆ ಕನ್ನ ಹಾಕೋ ದಂಧೆಕೋರರನ್ನ ಮಟ್ಟ ಹಾಕಬೇಕಿದೆ.

Tags: Revenue officer attacked by sand mafia in Ballari
Previous Post

ಓಮಿಕ್ರಾನ್ ರೂಪಾಂತರಿ ಹೊಂದಿದ ಪ್ರಯಾಣಿಕ ವಿದೇಶಕ್ಕೆ: ತನಿಖೆಗೆ ಆದೇಶಿಸಿದ ಸರ್ಕಾರ

Next Post

ಸಂಸತ್ ಕಟ್ಟಡ ಪ್ರವೇಶಕ್ಕೆ ನಿರ್ಬಂಧ: ಪತ್ರಕರ್ತರಿಂದ ತೀವ್ರ ಪ್ರತಿಭಟನೆ

Related Posts

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
0

ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಿ: ಸಚಿವ ಸಂತೋಷ್‌ ಲಾಡ್ ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು...

Read moreDetails
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣ

July 1, 2025
Next Post
ಸಂಸತ್ ಕಟ್ಟಡ  ಪ್ರವೇಶಕ್ಕೆ ನಿರ್ಬಂಧ: ಪತ್ರಕರ್ತರಿಂದ ತೀವ್ರ ಪ್ರತಿಭಟನೆ

ಸಂಸತ್ ಕಟ್ಟಡ ಪ್ರವೇಶಕ್ಕೆ ನಿರ್ಬಂಧ: ಪತ್ರಕರ್ತರಿಂದ ತೀವ್ರ ಪ್ರತಿಭಟನೆ

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada