• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯಕ್ಕೆ ಸಮೃದ್ಧ ಬಂಡವಾಳ ಹರಿವು, ಸದ್ಯದಲ್ಲೇ ದೇಶದಲ್ಲಿ 2ನೇ ಸ್ಥಾನಕ್ಕೆ:ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
November 20, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:ಕೈಗಾರಿಕಾ ಕ್ಷೇತ್ರದ ಬಂಡವಾಳ ಹೂಡಿಕೆಯಲ್ಲಿ ರಾಜ್ಯವು ಸದ್ಯಕ್ಕೆ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದು, 2025ರ ಜೂನ್ ವೇಳೆಗೆ ದ್ವಿತೀಯ ಸ್ಥಾನಕ್ಕೆ ಏರಲಿದೆ. ಈಗ ಆಗಿರುವ 54,427 ಕೋಟಿ ರೂ. ಹೂಡಿಕೆಯ ಜತೆಗೆ ಮುಂದಿನ ಆರೇಳು ತಿಂಗಳಲ್ಲಿ ಇನ್ನೂ 19,059 ಸಾವಿರ ಕೋಟಿ ರೂ. ಬಂಡವಾಳ ಹರಿದು ಬರುವುದು ಖಾತ್ರಿಯಾಗಿದೆ. ಈ ಮೂಲಕ ರಾಜ್ಯವು 73 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಹೂಡಿಕೆಯನ್ನು ಕಾಣಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.

ADVERTISEMENT

ಅವರು ಜಿಕೆವಿಕೆ ಆವರಣದಲ್ಲಿ ಆಯೋಜನೆಗೊಂಡಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮೆಟಲ್ಸ್ ಸಂಸ್ಥೆಯ 78ನೇ ವಾರ್ಷಿಕ ತಾಂತ್ರಿಕ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯವು ಈ ವರ್ಷ ಈಗಾಗಲೇ 21 ವಿವಿಧ ಉದ್ಯಮಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ಇದರಿಂದ 46,375 ಕೋಟಿ ರೂ. ಬಂಡವಾಳ ಹರಿದು ಬರಲಿದ್ದು, 27 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ. ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಗಳ ಮೂಲಕ 90 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಹೂಡಿಕೆ ಆಗಲಿರುವಂತಹ ಒಟ್ಟು 669 ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ಕೊಡಲಾಗಿದೆ. ಇವುಗಳಿಂದಾಗಿ 1.73 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗಾವಕಾಶಗಳು ದೊರೆಯಲಿವೆ ಎಂದು ಅವರು ವಿವರಿಸಿದ್ದಾರೆ.

ಕೈಗಾರಿಕಾ ಅಭಿವೃದ್ಧಿಯ ಜತೆಯಲ್ಲೇ ಪರಿಸರ ಸಂರಕ್ಷಣೆ ಮತ್ತು ಎಲ್ಲರನ್ನೂ ಒಳಗೊಂಡಿರುವ ಬೆಳವಣಿಗೆಗಳ ಜತೆಗೆ ಸಮತೋಲನ ಸಾಧಿಸುವ ಸವಾಲು ನಮ್ಮ ಮುಂದಿದೆ. ಮೆಟಲ್ಸ್ (ಲೋಹಗಳು) ಮತ್ತು ಮೆಟಿರೀಯಲ್ಸ್ ವಲಯಗಳಲ್ಲಿ ಇವೆಲ್ಲವನ್ನೂ ಸಾಧ್ಯವಾಗಿಸುವಂತಹ ಸಂಶೋಧನೆ ಮತ್ತು ನಾವೀನ್ಯತಾ ಉಪಕ್ರಮಗಳಿಗೆ ಸರಕಾರವು ಒತ್ತು ನೀಡುತ್ತಿದೆ ಎಂದು ಅವರು ನುಡಿದಿದ್ದಾರೆ.

ಮೆಟಲ್ಸ್ ಮತ್ತು ಮೆಟೀರಿಯಲ್ಸ್ ಕ್ಷೇತ್ರವೂ ಸೇರಿದಂತೆ ಎಲ್ಲ ವಲಯಗಳಲ್ಲೂ ಕರ್ನಾಟಕವು ಪರಿಸರಸ್ನೇಹಿ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತಿದೆ. ಲೋಹ ಮತ್ತು ಅದಕ್ಕೆ ಪೂರಕವಾದ ವಲಯಗಳು ಆರ್ಥಿಕ ಅಭಿವೃದ್ಧಿಯ ಆಚೆಗೂ ತಮ್ಮ ಪ್ರಭಾವ ಬೀರುತ್ತವೆ. ಕ್ಷಿಪ್ರವಾಗಿ ಬೆಳವಣಿಗೆ ಕಾಣುತ್ತಿರುವ ಜಗತ್ತಿನಲ್ಲಿ ಉದ್ಭವಿಸುತ್ತಿರುವ ಸಂಕೀರ್ಣ ಸಮಸ್ಯೆಗಳಿಗೆ ಉದ್ಯಮಿಗಳು ಸರಿಯಾದ ಪರಿಹಾರವನ್ನು ಕಂಡುಕೊಳ್ಳಬೇಕಾದ ಅಗತ್ಯವಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿ, `ರಾಜ್ಯ ಸರಕಾರವು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮಾತ್ರವಲ್ಲದೆ ಸೆಮಿಕಂಡಕ್ಟರ್, ವಿದ್ಯುನ್ಮಾನ, ಚಿಪ್ ವಿನ್ಯಾಸ, ನವೋದ್ಯಮ, ವಿದ್ಯುಚ್ಚಾಲಿತ ವಾಹನ ಮುಂತಾದ ಕ್ಷೇತ್ರಗಳಿಗೆ ಸಂಬಂಧಿಸಿದಂತೆಯೂ ಸಮರ್ಥ ನೀತಿಗಳನ್ನು ಹೊಂದಿದೆ. ಪ್ರತಿಭಾವಂತ ಮಾನವ ಸಂಪನ್ಮೂಲವನ್ನು ಕೌಶಲಪೂರ್ಣವನ್ನಾಗಿಸಿ, ಅವರೆಲ್ಲರನ್ನೂ ಉದ್ಯೋಗಕ್ಕೆ ಅರ್ಹರನ್ನಾಗಿ ಸಜ್ಜುಗೊಳಿಸಲಾಗುವುದು’ ಎಂದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಾತನಾಡಿ, ಉದ್ಯಮ ಕ್ಷೇತ್ರದಲ್ಲಿ ಈಗ ಡಿಜಿಟಲ್ ಉತ್ಪಾದನೆ, ಕೃತಕ ಬುದ್ಧಿಮತ್ತೆ ಮತ್ತು ಆಟೋಮೇಶನ್ ನಿರ್ಣಾಯಕವಾಗಿದ್ದು ಹೊಸ ಬಗೆಯ ಶಕ್ತಿಸಾಮರ್ಥ್ಯಗಳನ್ನು ತಂದುಕೊಟ್ಟಿವೆ. ಸುಧಾರಿತ ಅಲಾಯ್ಸ್, ಅತ್ಯಧಿಕ ಸಾಮರ್ಥ್ಯದ ಉಕ್ಕು ಮತ್ತು ಸುಸ್ಥಿರ ಮೆಟೀರಿಯಲ್ ಗಳಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ. ಈ ವಲಯದಲ್ಲಿ ರಾಜ್ಯದ ಹಲವು ನವೋದ್ಯಮಗಳು ಆಟೋಮೋಟೀವ್, ವೈಮಾಂತರಿಕ್ಷ, ಹಗುರ ಅಲಾಯ್ ಗಳಲ್ಲಿ ಸಂಶೋಧನೆಯಲ್ಲಿ ತೊಡಗಿಸಿಕೊಂಡಿವೆ ಎಂದರು.

ರಾಜ್ಯವು ಹೆವಿ ಎಂಜಿನಿಯರಿಂಗ್, ವಿದ್ಯುತ್ ಉತ್ಪಾದನೆ ಮತ್ತು ಸ್ಪೆಷಲ್ ಪರ್ಪಸ್ ಮಷಿನರಿ ಕ್ಷೇತ್ರಗಳ ತಾಣವಾಗಿದೆ. ಮಶೀನ್ ಟೂಲ್ ತಯಾರಿಕೆಯಲ್ಲಿ ದೇಶದ ಒಟ್ಟು ಉತ್ಪಾದನೆಯಲ್ಲಿ ಶೇ.52ರಷ್ಟು ಕೊಡುಗೆ ನೀಡುತ್ತಿದೆ. ಈ ಮೂಲಕ ಸ್ಥಳೀಯ ಮತ್ತು ಜಾಗತಿಕ ಮಾರುಕಟ್ಟೆಯ ಬೇಡಿಕೆಗಳನ್ನು ಏಕಕಾಲಕ್ಕೆ ಪೂರೈಸಲಾಗುತ್ತಿದೆ. ಲೋಹ ಮತ್ತು ಮೆಟೀರಿಯಲ್ಸ್ ವಲಯಗಳ ಬೇಡಿಕೆಗಳನ್ನು ಸರಕಾರವು ಸಕಾರಾತ್ಮಕವಾಗಿ ಪರಿಗಣಿಸಿ, ಎಲ್ಲ ಬಗೆಯ ಪ್ರೋತ್ಸಾಹಗಳನ್ನೂ ಕೊಡಲಿದೆ ಎಂದು ಅವರು ಭರವಸೆ ನೀಡಿದರು.

ಐಐಎಂ ಅಧ್ಯಕ್ಷ ಸಜ್ಜನ್ ಜಿಂದಾಲ್, ಜಿಂದಾಲ್ ಅಧ್ಯಕ್ಷ ಪಿ.ಕೆ.ಮುರುಗನ್ ಮತ್ತಿತರರು ಈ ಸಂದರ್ಭದಲ್ಲಿ ಮಾತನಾಡಿದರು.

Tags: 2nd in countrybengaluruCM Siddaramaiah‌Congress Partycontributes 52%DCM DK ShivakumarIIM President Sajjan JindalJindal President PK MuruganMinister MB PatilRich capital flow
Previous Post

ಕನ್ನಡಿಗರ ಮೆಚ್ಚಿನ “ಸಿರಿ ಕನ್ನಡ” ವಾಹಿನಿಗೆ ಏಳನೇ ಹುಟ್ಟುಹಬ್ಬ

Next Post

ದೇಶಕ್ಕೆ ಕೀರ್ತಿ ತಂದ ಕೋಲೂರುನ ಕುಂದಾಳಪುರದ ಪ್ರಸಾದ್ ಕೆ.ಜೆ. ! ಅಂತರಾಷ್ಟ್ರೀಯ ದೇಹದಾಡ್ಯ ಸ್ಪರ್ಧೆಯಲ್ಲಿ ಕನ್ನಡಿಗನ ಮೇಲುಗೈ !

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
Top Story

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

by ಪ್ರತಿಧ್ವನಿ
April 27, 2026
0

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವು ರಾಜ್ಯದ ಭದ್ರತಾ ವ್ಯವಸ್ಥೆಯನ್ನು ಎಚ್ಚರಿಸಿದ ಪ್ರಮುಖ ಉಗ್ರ ಕೃತ್ಯಗಳಲ್ಲಿ ಒಂದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದ...

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post
ದೇಶಕ್ಕೆ ಕೀರ್ತಿ ತಂದ ಕೋಲೂರುನ ಕುಂದಾಳಪುರದ ಪ್ರಸಾದ್ ಕೆ.ಜೆ. ! ಅಂತರಾಷ್ಟ್ರೀಯ ದೇಹದಾಡ್ಯ ಸ್ಪರ್ಧೆಯಲ್ಲಿ ಕನ್ನಡಿಗನ ಮೇಲುಗೈ !

ದೇಶಕ್ಕೆ ಕೀರ್ತಿ ತಂದ ಕೋಲೂರುನ ಕುಂದಾಳಪುರದ ಪ್ರಸಾದ್ ಕೆ.ಜೆ. ! ಅಂತರಾಷ್ಟ್ರೀಯ ದೇಹದಾಡ್ಯ ಸ್ಪರ್ಧೆಯಲ್ಲಿ ಕನ್ನಡಿಗನ ಮೇಲುಗೈ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada