• Home
  • About Us
  • ಕರ್ನಾಟಕ
Thursday, January 29, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನ್ಯಾಯಸಮ್ಮತವಾಗಿ ಮೀಸಲಾತಿ ನೀಡಲಾಗಿದೆ : ಸಿಎಂ ಬೊಮ್ಮಾಯಿ

Any Mind by Any Mind
March 26, 2023
in Top Story, ಕರ್ನಾಟಕ, ರಾಜಕೀಯ
0
ನ್ಯಾಯಸಮ್ಮತವಾಗಿ ಮೀಸಲಾತಿ ನೀಡಲಾಗಿದೆ :  ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram


ಹಾವೇರಿ:ಮಾ.26: ನ್ಯಾಯಸಮ್ಮತವಾಗಿ ಮೀಸಲಾತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅ ವರು ಇಂದು ಶಿಗ್ಗಾಂವಿಯಲ್ಲಿ ಆಯೋಜಿಸಿದ್ದ ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯ ಭವನ ಉದ್ಘಾಟನಾ ಹಾಗೂ ಹರಧ್ಯಾನ ಮಂದಿರ ಶಂಕುಸ್ಥಾಪನಾ ಕಾರ್ಯವನ್ನು ನೆರವೇರಿಸಿ ಮಾತನಾಡಿದರು.

ADVERTISEMENT

ನ್ಯಾಯ ನೀಡುವಾಗ ಇತರರಿಗೆ ಅನ್ಯಾಯವಾಗದಂತೆ ನ್ಯಾಯಸಮ್ಮತವಾಗಿ ಮೀಸಲಾತಿ ನೀಡಲಾಗಿದೆ. ಶ್ರೀ ವಚನಾನಂದ ಸ್ವಾಮೀಜಿಗಳು ಸೈದ್ಧಾಂತಿಕವಾಗಿ ಮಾರ್ಗದರ್ಶನ ಮಾಡಿದ್ದಾರೆ. ಭಿನ್ನಮತ ವ್ಯಕ್ತವಾದಾಗ, ಎಲ್ಲರಿಗೂ ಮನವರಿಕೆ, ಮಾರ್ಗದರ್ಶನ ಮಾಡಿದ್ದಾರೆ. ಸರಿಯಾದ ಸಂದರ್ಭದಲ್ಲಿ ಸರಿಯಾದ ತೀರ್ಮಾನ ಮಾಡಲಾಗಿದೆ. ಮುತ್ಸದ್ದಿ ತನದ ಮಾರ್ಗದರ್ಶನವನ್ನು ನಿರೀಕ್ಷೆ ಗೆ ಮೀರಿ ನೀಡಿದ್ದಾರೆ ಎಂದರು. ಜಯ ಮೃತ್ಯುಂಜಯ ಸ್ವಾಮೀಜಿಗಳ ದಿಟ್ಟ ಹೋರಾಟದಿಂದ ಸಮಾಜ ಹಾಗೂ ಸರ್ಕಾರದ ಜಾಗೃತಿ ಮೂಡಿಸಲು ಸಾಧ್ಯವಾಯಿತು ಎಂದರು.

ಯಾರಿಗೂ ಹೆದರುವುದಿಲ್ಲ..!
ಗುರುಗಳು ಯಾರ ಒತ್ತಡಕ್ಕೂ ಮಣಿಯುವುದಿಲ್ಲ. ಸ್ವಂತ ಚಿಂತನೆ ಬದ್ಧತೆ ಅವರಿಗಿದೆ. ನಮ್ಮ ಸ್ವಂತ ಚಿಂತನೆಯಿಂದ ಈ ಕೆಲಸ ಮಾಡಲಾಗಿದೆ. ಯಾವುದೇ ರೋಲ್ ಕಾಲ್ ಅಥವಾ ಒತ್ತಡದಿಂದ ಈ ಕೆಲಸ ಮಾಡಿಲ್ಲ. ಇದನ್ನು ಜಾರಿಗೆ ತರಲು ಯಾರಿಗೂ ಹೆದರುವುದಿಲ್ಲ ಎಂದರು.

ಚುನಾವಣಾ ಲಾಭಕ್ಕಾಗಿ ರಾಜಕಾರಣ ಮಾಡುವುದಿಲ್ಲ
ನವ ಕರ್ನಾಟಕದಲ್ಲಿ ದೀನದಲಿತರು, ಆರ್ಥಿಕವಾಗಿ ಸಬಲರಾಗಬೇಕು. ವಿದ್ಯಾವಂತರಾಗಿ, ಸ್ವಾಭಿಮಾನದ ಬದುಕು ಬದುಕಬೇಕು. ಈ ಕನಸನ್ನು ಸಾಕಾರಗೊಳಿಸಲು ಹಿಂದೆಗೆಯುವುದಿಲ್ಲ ಎಂದರು. ಅವರು ಮಾಡಿದ ಅನ್ಯಾಯ ಸರಿಪಡಿಸಲು ಕ್ರಮ ವಹಿಸಲಾಗಿದೆ. ಇದು ಕರ್ನಾಟಕದ ಅಭಿವೃದ್ಧಿಯ ಪ್ರಶ್ನೆ. ಚುನಾವಣಾ ಲಾಭಕ್ಕಾಗಿ ರಾಜಕಾರಣ ಮಾಡುವುದಿಲ್ಲ. ನಾವು ಭದ್ಧತೆಯಿಂದ ನಂಬಿರುವ ವಿಚಾರಗಳ ಬಗ್ಗೆ ಕೆಲಸ ಮಾಡಿದ್ದು, ಆತ್ಮಸಾಕ್ಷಿಯಾಗಿ ಕೆಲಸ ಮಾಡಲಾಗಿದೆ. ಇದು 30 ವರ್ಷಗಳ ಬೇಡಿಕೆಯಾಗಿದ್ದು, ಸಮಸ್ಯೆಯನ್ನು ಬಗೆಹರಿಸಲಾಗಿದೆ ಎಂದರು.

ನಾಡು ಕಟ್ಟುವ ಸಂಕಲ್ಪ : ಒಗ್ಗಟ್ಟಾಗಿ, ದುಡಿಮೆ ನಂಬಿ, ನಾಡು ಕಟ್ಟುವ ಸಂಕಲ್ಪ ಮಾಡಬೇಕು. ಸಮುದಾಯದ ಬೆಂಬಲ ನಮ್ಮ ಮೇಲಿದೆ. ಸಮುದಾಯದ ಕಟ್ಟ ಕಡೆಯ ಬಡವನಿಗೆ ನ್ಯಾಯ ಕೊಡುವ ಕೆಲಸ ಮಾಡಲಾಗಿದೆ ಎಂದರು.

ಸಾಮಾಜಿಕ ಬದಲಾವಣೆಯ ಕ್ರಮಗಳ ಅನುಷ್ಠಾನ : ಜವಳಿ ಪಾರ್ಕ್ ನಿಂದ 10 ಸಾವಿರ ಉದ್ಯೋಗ, 6 ತಿಂಗಳಲ್ಲಿ ಇನ್ನೂ ಐದು ಸಾವಿರ ಉದ್ಯೋಗಗಳನ್ನು ಹೆಣ್ಣು ಮಕ್ಕಳಿಗೆ ಸೃಜಿಸಲಾಗುವುದು. ಅತ್ಯಂತ ಸಣ್ಣ ಸಣ್ಣ ಸಮುದಾಯ ಗಳಿಗೆ ನಿಗಮ ಸ್ಥಾಪನೆ ಮಾಡಲಾಗಿದೆ . ಸಾಮಾಜಿಕ ಬದಲಾವಣೆಯ ಕ್ರಮಗಳನ್ನು ಅನುಷ್ಠಾನ ಮಾಡಲಾಗುವುದು ಎಂದರು.

ಸಮನ್ವಯದ ಸಂಕೇತ : ಶಿಗ್ಗಾಂವಿ ತಾಲ್ಲೂಕಿನ ಅಭಿವೃದ್ಧಿ ಯ ಹಾಗೂ ಎಲ್ಲಾ ಸಮುದಾಯಗಳ ಸಮನ್ವಯದ ಸಂಕೇತ. ಶ್ರೀ ವಚನಾನಂದಸ್ವಾಮಿಗಳು ಪೀಠಕ್ಕೆ ಬಂದ ನಂತರ ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದ್ದಾರೆ. ಭಕ್ತರ ಹತ್ತಿರಕ್ಕೆ ಪೀಠವನ್ನು ತೆಗೆದುಕೊಂಡು ಹೋಗಿದ್ದಾರೆ. ಹೊಸ ವೈಚಾರಿಕ ಚಿಂತನೆಯನ್ನು ಸಮುದಾಯದಲ್ಲಿ ಮೂಡಿಸಲು ಪ್ರಯತ್ನಿಸಿ ಯಶಸ್ವಿಯಾಗಿದ್ದಾರೆ. ಸಮುದಾಯವನ್ನು ವಿಸ್ತರಿಸಿ ನಾವೆಲ್ಲರೂ ಕನ್ನಡ ನಾಡಿನ ಮಕ್ಕಳು ಒಂದಾಗಬೇಕು ಎಂದು ಹೇಳಿದ್ದಾರೆ. ದೇಶವಿದೇಶಗಳಲ್ಲಿ, ಹಿಮಾಲಯದಲ್ಲಿ ಯೋಗ ಸಾಧನೆಯಿಂದ ದೊಡ್ಡ ಹೆಸರು ಮಾಡಿರುವುದು ಹೆಮ್ಮೆ ಎಂದರು.

ಅನ್ನದಾತನಿಗೆ ಆರ್ಥಿಕ ಸುರಕ್ಷಾ ಚಕ್ರ : ರೈತಾಪಿ ವರ್ಗದ ಸಮುದಾಯದವರು ಪ್ರಾಮಾಣಿಕರು. ಕರ್ನಾಟಕದಲ್ಲಿ ರೈತಾಪಿ ವರ್ಗಕ್ಕೆ ಬೆಲೆ ದೊರೆಯಬೇಕೆಂಬ ಉದ್ದೇಶ ನಮ್ಮದು. ರೈತ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆಯನ್ನು ರಾಜ್ಯದ 11ಲಕ್ಷ ವಿದ್ಯಾರ್ಥಿಗಳಿಗೆ 818 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ರೈತ ಕಾರ್ಮಿಕ ಮಹಿಳೆಗೆ ಪ್ರತಿ ತಿಂಗಳು ಒಂದು ಸಾವಿರ ರೂ.ನೀಡುವ ಯೋಜನೆ ಘೋಷಿಸಲಾಗಿದೆ. ಯಶಸ್ವಿನಿ ಯೋಜನೆಯನ್ನು ಮರುಪ್ರಾರಂಭಿಸಿ 300 ಕೋಟಿ ರೂ.ಗಳನ್ನು ನೀಡಲಾಗಿದೆ. ರೈತರಿಗಾಗಿ ಜೀವನಜ್ಯೋತಿ ಜೀವವಿಮಾ ಪ್ರಾರಂಭ ಮಾಡಿ 180.ಕೋಟಿ ಮೀಸಲಿರಿಸಿದೆ.ಕಳೆದ ವರ್ಷ ರೈತ ಶಕ್ತಿ ಯೋಜನೆಗೆ 380 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. 57 ಲಕ್ಷ ರೈತರಿಗೆ ತಲುಪಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿ ಪ್ರತಿ ವರ್ಷ 2 ಸಾವಿರ ಕೋಟಿ ಗಳನ್ನು 57 ಲಕ್ಷ ರೈತರಿಗೆ ನೀಡಲಾಗುತ್ತದೆ. ಶೂನ್ಯ ಬಡ್ಡಿ ದರದಲ್ಲಿ ನೀಡುವ ಸಾಲವನ್ನು 5 ಲಕ್ಷಕ್ಕೆ ಏರಿಸಲಾಗಿದೆ. ಅನ್ನದಾತನಿಗೆ ಆರ್ಥಿಕ ಸುರಕ್ಷಾ ಚಕ್ರ ನೀಡಿ ದೇಶಕ್ಕೆ ಸಲ್ಲುವ ಕೆಲಸ ಮಾಡಲಾಗಿದೆ ಎಂದರು.

Tags: amithshaamithshahBJPBJP GovernmentbjpkarnatakaCongress PartyModiPMModiಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

D.K Shivkumar : ಮೀಸಲಾತಿ ವಿರೋಧಿಸಿ ಬಿಜೆಪಿ ವಿರುದ್ಧ ಗುಡಿಗಿದ ಕಾಂಗ್ರೆಸ್ ನಾಯಕರು #Pratidhvani

Next Post

PRIYANK GANDHI : ಮೋದಿ ಸರ್ಕಾರ ದೇಶದಲ್ಲಿನ ಪ್ರಜಾಪ್ರಭುತ್ವ ವ್ಯವಸ್ಥೆಯನ್ನ ಮುಗಿಸಲು ಮುಂದಾಗಿದೆ..! #Pratidhvani

Related Posts

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ
ಇದೀಗ

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

by ಪ್ರತಿಧ್ವನಿ
January 28, 2026
0

ಬೆಂಗಳೂರು: ರಾಜ್ಯ ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ (85) ಇಂದು ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಂಜೆ ವಿಜಯನಗರದ ತಮ್ಮ ಮನೆಯಿಂದ ಹೊರಗಡೆ ಬಂದಿದ್ದ ಸುಬ್ಬರಾವ್ ಗೆ ಹೃದಯಾಘಾತವಾಗಿದ್ದು,...

Read moreDetails
ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

January 28, 2026
ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

January 28, 2026
ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

January 28, 2026
Siddaramaiah: ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

Siddaramaiah: ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

January 28, 2026
Next Post
PRIYANK GANDHI : ಮೋದಿ ಸರ್ಕಾರ ದೇಶದಲ್ಲಿನ ಪ್ರಜಾಪ್ರಭುತ್ವ ವ್ಯವಸ್ಥೆಯನ್ನ ಮುಗಿಸಲು ಮುಂದಾಗಿದೆ..! #Pratidhvani

PRIYANK GANDHI : ಮೋದಿ ಸರ್ಕಾರ ದೇಶದಲ್ಲಿನ ಪ್ರಜಾಪ್ರಭುತ್ವ ವ್ಯವಸ್ಥೆಯನ್ನ ಮುಗಿಸಲು ಮುಂದಾಗಿದೆ..! #Pratidhvani

Please login to join discussion

Recent News

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?
Top Story

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

by ಪ್ರತಿಧ್ವನಿ
January 28, 2026
ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌
Top Story

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
January 28, 2026
‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!
Top Story

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

by ಪ್ರತಿಧ್ವನಿ
January 28, 2026
JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

January 28, 2026
ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada