• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನ್ಯಾಯಸಮ್ಮತವಾಗಿ ಮೀಸಲಾತಿ ನೀಡಲಾಗಿದೆ : ಸಿಎಂ ಬೊಮ್ಮಾಯಿ

Any Mind by Any Mind
March 26, 2023
in Top Story, ಕರ್ನಾಟಕ, ರಾಜಕೀಯ
0
ನ್ಯಾಯಸಮ್ಮತವಾಗಿ ಮೀಸಲಾತಿ ನೀಡಲಾಗಿದೆ :  ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram


ಹಾವೇರಿ:ಮಾ.26: ನ್ಯಾಯಸಮ್ಮತವಾಗಿ ಮೀಸಲಾತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅ ವರು ಇಂದು ಶಿಗ್ಗಾಂವಿಯಲ್ಲಿ ಆಯೋಜಿಸಿದ್ದ ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯ ಭವನ ಉದ್ಘಾಟನಾ ಹಾಗೂ ಹರಧ್ಯಾನ ಮಂದಿರ ಶಂಕುಸ್ಥಾಪನಾ ಕಾರ್ಯವನ್ನು ನೆರವೇರಿಸಿ ಮಾತನಾಡಿದರು.

ADVERTISEMENT

ನ್ಯಾಯ ನೀಡುವಾಗ ಇತರರಿಗೆ ಅನ್ಯಾಯವಾಗದಂತೆ ನ್ಯಾಯಸಮ್ಮತವಾಗಿ ಮೀಸಲಾತಿ ನೀಡಲಾಗಿದೆ. ಶ್ರೀ ವಚನಾನಂದ ಸ್ವಾಮೀಜಿಗಳು ಸೈದ್ಧಾಂತಿಕವಾಗಿ ಮಾರ್ಗದರ್ಶನ ಮಾಡಿದ್ದಾರೆ. ಭಿನ್ನಮತ ವ್ಯಕ್ತವಾದಾಗ, ಎಲ್ಲರಿಗೂ ಮನವರಿಕೆ, ಮಾರ್ಗದರ್ಶನ ಮಾಡಿದ್ದಾರೆ. ಸರಿಯಾದ ಸಂದರ್ಭದಲ್ಲಿ ಸರಿಯಾದ ತೀರ್ಮಾನ ಮಾಡಲಾಗಿದೆ. ಮುತ್ಸದ್ದಿ ತನದ ಮಾರ್ಗದರ್ಶನವನ್ನು ನಿರೀಕ್ಷೆ ಗೆ ಮೀರಿ ನೀಡಿದ್ದಾರೆ ಎಂದರು. ಜಯ ಮೃತ್ಯುಂಜಯ ಸ್ವಾಮೀಜಿಗಳ ದಿಟ್ಟ ಹೋರಾಟದಿಂದ ಸಮಾಜ ಹಾಗೂ ಸರ್ಕಾರದ ಜಾಗೃತಿ ಮೂಡಿಸಲು ಸಾಧ್ಯವಾಯಿತು ಎಂದರು.

ಯಾರಿಗೂ ಹೆದರುವುದಿಲ್ಲ..!
ಗುರುಗಳು ಯಾರ ಒತ್ತಡಕ್ಕೂ ಮಣಿಯುವುದಿಲ್ಲ. ಸ್ವಂತ ಚಿಂತನೆ ಬದ್ಧತೆ ಅವರಿಗಿದೆ. ನಮ್ಮ ಸ್ವಂತ ಚಿಂತನೆಯಿಂದ ಈ ಕೆಲಸ ಮಾಡಲಾಗಿದೆ. ಯಾವುದೇ ರೋಲ್ ಕಾಲ್ ಅಥವಾ ಒತ್ತಡದಿಂದ ಈ ಕೆಲಸ ಮಾಡಿಲ್ಲ. ಇದನ್ನು ಜಾರಿಗೆ ತರಲು ಯಾರಿಗೂ ಹೆದರುವುದಿಲ್ಲ ಎಂದರು.

ಚುನಾವಣಾ ಲಾಭಕ್ಕಾಗಿ ರಾಜಕಾರಣ ಮಾಡುವುದಿಲ್ಲ
ನವ ಕರ್ನಾಟಕದಲ್ಲಿ ದೀನದಲಿತರು, ಆರ್ಥಿಕವಾಗಿ ಸಬಲರಾಗಬೇಕು. ವಿದ್ಯಾವಂತರಾಗಿ, ಸ್ವಾಭಿಮಾನದ ಬದುಕು ಬದುಕಬೇಕು. ಈ ಕನಸನ್ನು ಸಾಕಾರಗೊಳಿಸಲು ಹಿಂದೆಗೆಯುವುದಿಲ್ಲ ಎಂದರು. ಅವರು ಮಾಡಿದ ಅನ್ಯಾಯ ಸರಿಪಡಿಸಲು ಕ್ರಮ ವಹಿಸಲಾಗಿದೆ. ಇದು ಕರ್ನಾಟಕದ ಅಭಿವೃದ್ಧಿಯ ಪ್ರಶ್ನೆ. ಚುನಾವಣಾ ಲಾಭಕ್ಕಾಗಿ ರಾಜಕಾರಣ ಮಾಡುವುದಿಲ್ಲ. ನಾವು ಭದ್ಧತೆಯಿಂದ ನಂಬಿರುವ ವಿಚಾರಗಳ ಬಗ್ಗೆ ಕೆಲಸ ಮಾಡಿದ್ದು, ಆತ್ಮಸಾಕ್ಷಿಯಾಗಿ ಕೆಲಸ ಮಾಡಲಾಗಿದೆ. ಇದು 30 ವರ್ಷಗಳ ಬೇಡಿಕೆಯಾಗಿದ್ದು, ಸಮಸ್ಯೆಯನ್ನು ಬಗೆಹರಿಸಲಾಗಿದೆ ಎಂದರು.

ನಾಡು ಕಟ್ಟುವ ಸಂಕಲ್ಪ : ಒಗ್ಗಟ್ಟಾಗಿ, ದುಡಿಮೆ ನಂಬಿ, ನಾಡು ಕಟ್ಟುವ ಸಂಕಲ್ಪ ಮಾಡಬೇಕು. ಸಮುದಾಯದ ಬೆಂಬಲ ನಮ್ಮ ಮೇಲಿದೆ. ಸಮುದಾಯದ ಕಟ್ಟ ಕಡೆಯ ಬಡವನಿಗೆ ನ್ಯಾಯ ಕೊಡುವ ಕೆಲಸ ಮಾಡಲಾಗಿದೆ ಎಂದರು.

ಸಾಮಾಜಿಕ ಬದಲಾವಣೆಯ ಕ್ರಮಗಳ ಅನುಷ್ಠಾನ : ಜವಳಿ ಪಾರ್ಕ್ ನಿಂದ 10 ಸಾವಿರ ಉದ್ಯೋಗ, 6 ತಿಂಗಳಲ್ಲಿ ಇನ್ನೂ ಐದು ಸಾವಿರ ಉದ್ಯೋಗಗಳನ್ನು ಹೆಣ್ಣು ಮಕ್ಕಳಿಗೆ ಸೃಜಿಸಲಾಗುವುದು. ಅತ್ಯಂತ ಸಣ್ಣ ಸಣ್ಣ ಸಮುದಾಯ ಗಳಿಗೆ ನಿಗಮ ಸ್ಥಾಪನೆ ಮಾಡಲಾಗಿದೆ . ಸಾಮಾಜಿಕ ಬದಲಾವಣೆಯ ಕ್ರಮಗಳನ್ನು ಅನುಷ್ಠಾನ ಮಾಡಲಾಗುವುದು ಎಂದರು.

ಸಮನ್ವಯದ ಸಂಕೇತ : ಶಿಗ್ಗಾಂವಿ ತಾಲ್ಲೂಕಿನ ಅಭಿವೃದ್ಧಿ ಯ ಹಾಗೂ ಎಲ್ಲಾ ಸಮುದಾಯಗಳ ಸಮನ್ವಯದ ಸಂಕೇತ. ಶ್ರೀ ವಚನಾನಂದಸ್ವಾಮಿಗಳು ಪೀಠಕ್ಕೆ ಬಂದ ನಂತರ ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದ್ದಾರೆ. ಭಕ್ತರ ಹತ್ತಿರಕ್ಕೆ ಪೀಠವನ್ನು ತೆಗೆದುಕೊಂಡು ಹೋಗಿದ್ದಾರೆ. ಹೊಸ ವೈಚಾರಿಕ ಚಿಂತನೆಯನ್ನು ಸಮುದಾಯದಲ್ಲಿ ಮೂಡಿಸಲು ಪ್ರಯತ್ನಿಸಿ ಯಶಸ್ವಿಯಾಗಿದ್ದಾರೆ. ಸಮುದಾಯವನ್ನು ವಿಸ್ತರಿಸಿ ನಾವೆಲ್ಲರೂ ಕನ್ನಡ ನಾಡಿನ ಮಕ್ಕಳು ಒಂದಾಗಬೇಕು ಎಂದು ಹೇಳಿದ್ದಾರೆ. ದೇಶವಿದೇಶಗಳಲ್ಲಿ, ಹಿಮಾಲಯದಲ್ಲಿ ಯೋಗ ಸಾಧನೆಯಿಂದ ದೊಡ್ಡ ಹೆಸರು ಮಾಡಿರುವುದು ಹೆಮ್ಮೆ ಎಂದರು.

ಅನ್ನದಾತನಿಗೆ ಆರ್ಥಿಕ ಸುರಕ್ಷಾ ಚಕ್ರ : ರೈತಾಪಿ ವರ್ಗದ ಸಮುದಾಯದವರು ಪ್ರಾಮಾಣಿಕರು. ಕರ್ನಾಟಕದಲ್ಲಿ ರೈತಾಪಿ ವರ್ಗಕ್ಕೆ ಬೆಲೆ ದೊರೆಯಬೇಕೆಂಬ ಉದ್ದೇಶ ನಮ್ಮದು. ರೈತ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆಯನ್ನು ರಾಜ್ಯದ 11ಲಕ್ಷ ವಿದ್ಯಾರ್ಥಿಗಳಿಗೆ 818 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ರೈತ ಕಾರ್ಮಿಕ ಮಹಿಳೆಗೆ ಪ್ರತಿ ತಿಂಗಳು ಒಂದು ಸಾವಿರ ರೂ.ನೀಡುವ ಯೋಜನೆ ಘೋಷಿಸಲಾಗಿದೆ. ಯಶಸ್ವಿನಿ ಯೋಜನೆಯನ್ನು ಮರುಪ್ರಾರಂಭಿಸಿ 300 ಕೋಟಿ ರೂ.ಗಳನ್ನು ನೀಡಲಾಗಿದೆ. ರೈತರಿಗಾಗಿ ಜೀವನಜ್ಯೋತಿ ಜೀವವಿಮಾ ಪ್ರಾರಂಭ ಮಾಡಿ 180.ಕೋಟಿ ಮೀಸಲಿರಿಸಿದೆ.ಕಳೆದ ವರ್ಷ ರೈತ ಶಕ್ತಿ ಯೋಜನೆಗೆ 380 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. 57 ಲಕ್ಷ ರೈತರಿಗೆ ತಲುಪಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿ ಪ್ರತಿ ವರ್ಷ 2 ಸಾವಿರ ಕೋಟಿ ಗಳನ್ನು 57 ಲಕ್ಷ ರೈತರಿಗೆ ನೀಡಲಾಗುತ್ತದೆ. ಶೂನ್ಯ ಬಡ್ಡಿ ದರದಲ್ಲಿ ನೀಡುವ ಸಾಲವನ್ನು 5 ಲಕ್ಷಕ್ಕೆ ಏರಿಸಲಾಗಿದೆ. ಅನ್ನದಾತನಿಗೆ ಆರ್ಥಿಕ ಸುರಕ್ಷಾ ಚಕ್ರ ನೀಡಿ ದೇಶಕ್ಕೆ ಸಲ್ಲುವ ಕೆಲಸ ಮಾಡಲಾಗಿದೆ ಎಂದರು.

Tags: amithshaamithshahBJPBJP GovernmentbjpkarnatakaCongress PartyModiPMModiಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

D.K Shivkumar : ಮೀಸಲಾತಿ ವಿರೋಧಿಸಿ ಬಿಜೆಪಿ ವಿರುದ್ಧ ಗುಡಿಗಿದ ಕಾಂಗ್ರೆಸ್ ನಾಯಕರು #Pratidhvani

Next Post

PRIYANK GANDHI : ಮೋದಿ ಸರ್ಕಾರ ದೇಶದಲ್ಲಿನ ಪ್ರಜಾಪ್ರಭುತ್ವ ವ್ಯವಸ್ಥೆಯನ್ನ ಮುಗಿಸಲು ಮುಂದಾಗಿದೆ..! #Pratidhvani

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
PRIYANK GANDHI : ಮೋದಿ ಸರ್ಕಾರ ದೇಶದಲ್ಲಿನ ಪ್ರಜಾಪ್ರಭುತ್ವ ವ್ಯವಸ್ಥೆಯನ್ನ ಮುಗಿಸಲು ಮುಂದಾಗಿದೆ..! #Pratidhvani

PRIYANK GANDHI : ಮೋದಿ ಸರ್ಕಾರ ದೇಶದಲ್ಲಿನ ಪ್ರಜಾಪ್ರಭುತ್ವ ವ್ಯವಸ್ಥೆಯನ್ನ ಮುಗಿಸಲು ಮುಂದಾಗಿದೆ..! #Pratidhvani

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada