ಖ್ಯಾತ ನಟ-ನಿರ್ದೇಶಕ ರಿಷಭ್ ಶೆಟ್ಟಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿರುವುದು ಸಿನಿ ಹಾಗೂ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಈ ಬಗ್ಗೆ ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಮಾಡಿದ ರಿಷಬ್ ಶೆಟ್ಟಿ, ಅಮಿತ್ ಶಾ ಅವರನ್ನು ಭೇಟಿಯಾದುದು ತಮ್ಮ ಜೀವನದ ಅತ್ಯಂತ ಸ್ಮರಣೀಯ ಕ್ಷಣಗಳಲ್ಲಿ ಒಂದೆಂದು ಹೇಳಿದ್ದಾರೆ. ‘ಕಾಂತಾರ’ ಹಾಗೂ ‘ಕಾಂತಾರ ಚಾಪ್ಟರ್ 1’ ಸಿನಿಮಾಗಳ ಬಗ್ಗೆ ಅಮಿತ್ ಶಾ ಪ್ರಶಂಸಾತ್ಮಕವಾಗಿ ಮಾತನಾಡಿದ ವಿಚಾರವನ್ನು ಅವರು ಹಂಚಿಕೊಂಡಿದ್ದಾರೆ.

ಈ ಭೇಟಿಯ ವೇಳೆ ತಮ್ಮ ಮುಂದಿನ ಚಿತ್ರಗಳ ಕುರಿತು ಕೂಡ ಚರ್ಚೆ ನಡೆಸಿದುದಾಗಿ ರಿಷಬ್ ಶೆಟ್ಟಿ ತಿಳಿಸಿದ್ದಾರೆ. ವಿಶೇಷವಾಗಿ ಭಾರತೀಯ ಇತಿಹಾಸ, ಸಂಸ್ಕೃತಿ, ಕಲೆ ಮತ್ತು ಚಿತ್ರರಂಗದ ಬಗ್ಗೆ ಅಮಿತ್ ಶಾ ಹೊಂದಿರುವ ಆಳವಾದ ತಿಳುವಳಿಕೆ ತಮ್ಮನ್ನು ಆಕರ್ಷಿಸಿತು ಎಂದು ಹೇಳಿದ್ದಾರೆ.ಸದ್ಯ ರಿಷಬ್ ಶೆಟ್ಟಿ ‘ಕಾಂತಾರ’ ಪ್ರೀಕ್ವೆಲ್ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದು, ಈ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚುತ್ತಿದೆ.

ಈ ಹಿನ್ನೆಲೆಯಲ್ಲಿ ಅಮಿತ್ ಶಾ ಜೊತೆಗಿನ ಭೇಟಿ ಚಿತ್ರರಂಗದಲ್ಲಿ ಮತ್ತಷ್ಟು ಕುತೂಹಲ ಹುಟ್ಟಿಸಿದೆ.ಈ ಬೆಳವಣಿಗೆ ‘ಕಾಂತಾರ’ ಚಿತ್ರದ ರಾಷ್ಟ್ರೀಯ ಮಟ್ಟದ ಪ್ರಭಾವವನ್ನು ಮತ್ತೊಮ್ಮೆ ತೋರಿಸಿದ್ದು, ಕನ್ನಡ ಸಿನೆಮಾ ಖ್ಯಾತಿಯನ್ನು ಹೆಚ್ಚಿಸುವಲ್ಲಿ ಮಹತ್ವದ ಘಟ್ಟವೆಂದು ಪರಿಗಣಿಸಲಾಗುತ್ತಿದೆ.





