• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದರೆ ಪರಿಸ್ಥಿತಿ ಇದಕ್ಕಿಂತಲೂ ಹೀನಾಯವಾಗಲಿದೆ : ರಾಮಲಿಂಗ ರೆಡ್ಡಿ

ಪ್ರತಿಧ್ವನಿ by ಪ್ರತಿಧ್ವನಿ
July 20, 2022
in ಕರ್ನಾಟಕ, ರಾಜಕೀಯ
0
ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದರೆ ಪರಿಸ್ಥಿತಿ ಇದಕ್ಕಿಂತಲೂ ಹೀನಾಯವಾಗಲಿದೆ : ರಾಮಲಿಂಗ ರೆಡ್ಡಿ
Share on WhatsAppShare on FacebookShare on Telegram

ದೇಶಕ್ಕೆ ಸ್ವಾತಂತ್ರ್ಯ ಬಂದ 75 ವರ್ಷಗಳಲ್ಲಿ ಹಾಕದ ತೆರಿಗೆಗಳನ್ನು ಈಗ ಹಾಕಿದ್ದಾರೆ. ಬಡವರು ಬಳಸುವ ಆಹಾರ ಪದಾರ್ಥ, ಮೊಸರು, ಅಕ್ಕಿ, ಬೆಲ್ಲ, ಜೇನುತುಪ್ಪ, ಮಕ್ಕಳ ವಿದ್ಯಾಭ್ಯಾಸಕ್ಕೆ ಬಳಸುವ ನಕ್ಷೆ, ಪೆನ್ಸಿಲ್, ರೈತರು ಬಳಸುವ ಪಂಪ್ ಸೆಟ್, ಮೋಟಾರ್ ಸೇರಿದಂತೆ ಚೆಕ್ ಬುಕ್ ಸೇರಿದಂತೆ ಎಲ್ಲದಕ್ಕೂ ತೆರಿಗೆ ಹಾಕಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗರೆಡ್ಡಿ ಕಿಡಿಕಾರಿದ್ದಾರೆ.

ADVERTISEMENT

25 ಕೆಜಿ ಮೇಲ್ಪಟ್ಟ ಪದಾರ್ಥಗಳಿಗೆ ತೆರಿಗೆ ಇಲ್ಲ ಎಂದು ಸರ್ಕಾರ ಹೇಳುತ್ತಿದೆ. ಜನ 25 ಕೆ.ಜಿಯಷ್ಟು ಹಾಲು, ಮೊಸರು, ಬೆಲ್ಲ, ಜೇನುತುಪ್ಪ, ಮಕ್ಕಳು ಪುಸ್ತಕ, ಪೆನ್ಸಿಲ್ ಗಳನ್ನು ಖರೀದಿ ಮಾಡಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.

ಮೋದಿ 8 ವರ್ಷಗಳ ಹಿಂದೆ ಬಣ್ಣ ಬಣ್ಣದ ಮಾತುಗಳನ್ನು ಆಡಿದ್ದರು. ಆ ಮೂಲಕ ಗಿಮಿಕ್ ಮಾತುಗಳನ್ನು ಹೇಳಿದ್ದರು. ಈಗ. ಅಚ್ಛೇ ದಿನ ಕೊಡುತ್ತೇವೆ ಎಂದು ಹೇಳಿದ್ದರು. ಇದೇನಾ ಅಚ್ಛೇ ದಿನ? ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ 25 ಕೋಟಿ ಜನರನ್ನು ಬಡತನ ರೇಖೆಗಿಂತ ಮೇಲಕ್ಕೆ ಎತ್ತಿದ್ದರು. ಆದರೆ ಮೋದಿ ಅವರು ಬಂದ ನಂತರ 24 ಲಕ್ಷ ಜನ ಬಡತನ ಕೂಪಕ್ಕೆ ಹೋಗಿದ್ದಾರೆ. ಈಗ ಈ ತೆರಿಗೆ ಮೂಲಕ ಬಡವರನ್ನು ಪಾತಾಳಕ್ಕೆ ತುಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ.

ಕಾಂಗ್ರೆಸ್ ಸರ್ಕಾರಗಳು ಅನೇಕ ಸುಧಾರಣೆಗಳನ್ನು ತಂದಿದ್ದು, ಈ ಸರ್ಕಾರ ಯಾವುದೇ ಸುಧಾರಣೆ ತಂದಿಲ್ಲ. ಇದು ಶ್ರೀಮಂತರ ಪರವಾದ ಸರ್ಕಾರ. ಶ್ರೀಮಂತರು ಮತ್ತಷ್ಟು ಶ್ರೀಮಂತರಾದರೆ, ಬಡವರು ಮತ್ತಷ್ಟು ಬಡವರಾಗುತ್ತಿದ್ದಾರೆ. ಬಡವರನ್ನು ಪಾತಾಳಕ್ಕೆ ತುಳಿಯುತ್ತಿದ್ದಾರೆ.

ಮೋದಿ ಸರ್ಕಾರಕ್ಕೆ ಬಡವರ ಬಗ್ಗೆ ಕಾಳಜಿ ಇದ್ದರೆ ಕೂಡಲೇ ಈ ತೆರಿಗೆಗಳನ್ನು ಹಿಂಪಡೆಯಬೇಕು. ಅವರು ಅದಾನಿ ಅಂಬಾನಿಯಂತಹ ಶ್ರೀಮಂತ್ರಿಗೆ ಎಷ್ಟಾದರೂ ತೆರಿಗೆ ಹಾಕಲಿ. ಆದರೆ ಸರ್ಕಾರ ಇಂತಹ ದೊಡ್ಡ ಶ್ರೀಮಂತರ 12.5 ಲಕ್ಷ ಕೋಟಿಯಷ್ಟು ಸಾಲವನ್ನು ಮನ್ನಾ ಮಾಡುತ್ತದೆ. ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ 1947ರಿಂದ 2014ರವರೆಗೂ ದೇಶದ ಮೇಲೆ 53 ಲಕ್ಷ ಕೋಟಿ ಸಾಲ ಇತ್ತು. ಆದರೆ ಮೋದಿ ಅವರು ಕಳೆದ 8 ವರ್ಷಗಳಲ್ಲಿ 100 ಲಕ್ಷ ಕೋಟಿಗೂ ಹೆಚ್ಚು ಸಾಲ ಮಾಡಿ ದೇಶದ ಸಾಲದ ಪ್ರಮಾಣವನ್ನು 153 ಲಕ್ಷ ಕೋಟಿಗೂ ಹೆಚ್ಚಾಗಿದೆ. ಆ ಮೂಲಕ ದೇಶದ ಪ್ರಜೆಯ ಮೇಲೆ ಒಂದು ಮುಕ್ಕಾಲು ಲಕ್ಷ ಸಾಲವನ್ನು ಹಾಕಲಾಗಿದೆ.

ಇಂತಹ ಕೆಟ್ಟ ಸರ್ಕಾರ ತೊಲಗಬೇಕು. ಈ ಸರ್ಕಾರ ಇದ್ದಷ್ಟು ದಿನ ಬಡವರು ರೈತರು, ಕಾರ್ಮಿಕರು ಸೇರಿದಂತೆ ಯಾವುದೇ ವರ್ಗ ನೆಮ್ಮದಿಯಾಗಿ ಇರುವುದಿಲ್ಲ. ಈ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಯಾವುದೂ ಇಲ್ಲವಾಗಿದೆ. ಹೀಗಾಗಿ ಇಷ್ಟು ಕಠೋರವಾಗಿ ನಡೆದುಕೊಳ್ಳುತ್ತಿದೆ.

ಇನ್ನು ಪಕ್ಷದಲ್ಲಿ ಸಿಎಂ ವಿಚಾರವಾಗಿ ಸಾಕಷ್ಟು ಚರ್ಚೆಯಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಮಲಿಂಗ ರೆಡ್ಡಿ, ‘ಪ್ರತಿಯೊಂದು ಸಮಾಜದ ಸಮಾವೇಶಗಳಲ್ಲಿ ಆಯಾ ಸಮಾಜದ ಬೆಂಬಲವನ್ನು ಕೇಳುವುದು ಸಹಜ. ಅದೇ ರೀತಿ ಪ್ರತಿಯೊಂದು ಸಮಾಜ ತಮ್ಮ ಸಮಾಜದವರು ಸಿಎಂ ಆಗಬೇಕು ಎಂದು ಅಪೇಕ್ಷಿಸುತ್ತಾರೆ. ಆಸೆ ಪಡುವುದು ತಪ್ಪಲ್ಲ. ಪಕ್ಷವನ್ನು ಅಧಿಕಾರಕ್ಕೆ ತರಲು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಪ್ರಯತ್ನಿಸುತ್ತಿದ್ದಾರೆ. ಪಕ್ಷ ಅಧಿಕಾರಕ್ಕೆ ಬಂದ ನಂತರ ಶಾಸಕರು ಹಾಗೂ ಹೈಕಮಾಂಡ್ ಸೇರಿ ತೀರ್ಮಾನ ಕೈಗೊಳ್ಳಲಿದೆ. ಬಡವರ ಕಲ್ಯಾಣ, ಹಿತದೃಷ್ಟಿಯಿಂದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಮುಖ್ಯ. ಬಿಜೆಪಿ ಅಧಿಕಾರಕ್ಕೆ ಬಂದರೆ ಪರಿಸ್ಥಿತಿ ಇದಕ್ಕಿಂತಲೂ ಹೀನಾಯವಾಗಲಿದೆʼ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗ ರೆಡ್ಡಿ ಹೇಳಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

JEE ಮೇನ್ಸ್; ಜುಲೈ 25ಕ್ಕೆ ಪರೀಕ್ಷೆ ಮುಂದೂಡಿಕೆ

Next Post

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ​; ಕೆ.ಎಸ್​ ಈಶ್ವರಪ್ಪಗೆ ಕ್ಲೀನ್ ಚಿಟ್

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ​; ಕೆ.ಎಸ್​ ಈಶ್ವರಪ್ಪಗೆ ಕ್ಲೀನ್ ಚಿಟ್

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ​; ಕೆ.ಎಸ್​ ಈಶ್ವರಪ್ಪಗೆ ಕ್ಲೀನ್ ಚಿಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada