![](https://pratidhvani.com/wp-content/uploads/2024/05/images-2-6.jpeg)
ಕೆಲ ವರ್ಷಗಳ ಹಿಂದೆ ಮೈಸೂರಿನ(Mysore) ಡಿಸಿಯಾಗಿದ್ದ ರೋಹಿಣಿ ಸಿಂಧೂರಿಯವರು(Rohini Sindhuri) ಅಲ್ಲಿನ ವಸತಿ ಗೃಹದಲ್ಲಿ ತಂಗಿದ್ದರು. ಈ ಸಂದರ್ಭದಲ್ಲಿ ಅಲ್ಲಿನ ಅನೇಕ ವಸ್ತುಗಳು ನಾಪತ್ತೆಯಾಗಿದ್ದು, ಅವರ ಹಣ ಪಾವತಿಗೆ ಅಧಿಕೃತ ಸಂಸ್ಥೆ ಮನವಿ ಮಾಡಿ ಕೇಸ್(Case) ದಾಖಲಿಸಿತ್ತು. ಸದ್ಯ ರೋಹಿಣಿ ಅವರ ಸಂಬಳಕ್ಕೆ ಕತ್ತರಿ ಹಾಕಲು ಸರ್ಕಾರಕ್ಕೆ ಮನವಿ ಮಾಡಲಾಗಿದೆಜಿಲ್ಲಾಧಿಕಾರಿಯಾಗಿದ್ದಾಗ ರೋಹಿಣಿ ಸಿಂಧೂರಿ ವಾಸವಿದ್ದ ಅತಿಥಿ ಗೃಹದಲ್ಲಿ(Guest House) ಸಾಮಗ್ರಿಗಳು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಅವರ ವೇತನದಲ್ಲಿಯೇ ಮೊತ್ತವನ್ನು ಕಡಿತಗೊಳಿಸುವಂತೆ ಸರ್ಕಾರದ ಕಾರ್ಯದರ್ಶಿಗೆ ಆಡಳಿತ ತರಬೇತಿ ಸಂಸ್ಥೆ (ಎಟಿಐ) ಮನವಿ ಮಾಡಿದೆ.
![](https://pratidhvani.com/wp-content/uploads/2024/05/download-1-8.jpeg)
ಅತಿಥಿ ಗೃಹದಲ್ಲಿಕಾಣೆಯಾಗಿರುವ ಸಾಮಗ್ರಿಗಳ ಮೊತ್ತ ಸುಮಾರು 77,296 ರೂ. ಗಳನ್ನು ರೋಹಿಣಿ ಸಿಂಧೂರಿ ಅವರ ವೇತನದಲ್ಲಿದ್ದ ಕಡಿತಗೊಳಿಸಿ ಡಿಡಿ(DD) ಮೂಲಕ ಮೈಸೂರಿನ ಆಡಳಿತ ತರಬೇತಿ ಸಂಸ್ಥೆ ಮಹಾನಿರ್ದೇಶಕರ ಹೆಸರಿಗೆ ಕಳುಹಿಸುವಂತೆ ಸಂಸ್ಥೆಯ ಜಂಟಿ ನಿರ್ದೇಶಕರು ರಾಜ್ಯ ಸರ್ಕಾರ(State Government) ದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
.