• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಭಾರತೀಯ ವಿದ್ಯಾರ್ಥಿಗಳಿಗೆ ಆಹಾರ, ವಸತಿ ಕಲ್ಪಿಸಿದ್ದು ನಿಮ್ಮ ಸರ್ಕಾರವಲ್ಲ: ‌ಸಚಿವ ಜ್ಯೋತಿರಾಧಿತ್ಯ ಸಿಂಧಿಯಾಗೆ ರೊಮೇನಿಯನ್‌ ಮೇಯರ್‌ ತರಾಟೆ

Any Mind by Any Mind
March 3, 2022
in ದೇಶ, ವಿದೇಶ
0
ಭಾರತೀಯ ವಿದ್ಯಾರ್ಥಿಗಳಿಗೆ ಆಹಾರ, ವಸತಿ ಕಲ್ಪಿಸಿದ್ದು ನಿಮ್ಮ ಸರ್ಕಾರವಲ್ಲ: ‌ಸಚಿವ ಜ್ಯೋತಿರಾಧಿತ್ಯ ಸಿಂಧಿಯಾಗೆ ರೊಮೇನಿಯನ್‌ ಮೇಯರ್‌ ತರಾಟೆ
Share on WhatsAppShare on FacebookShare on Telegram

ಯುದ್ಧಗ್ರಸ್ಥ ಉಕ್ರೇನ್ ನೆರೆಹೊರೆಯ ದೇಶಗಳಿಗೆ ಕಾಲ್ನಡಿಗೆ ಹಾಗೂ ಇತರೆ ಸಾರಿಗೆ ಬಳಸಿ ತಲುಪಿರುವ ಭಾರತೀಯ ವಿದ್ಯಾರ್ಥಿಗಳನ್ನು ಕರೆ ತರುವ ಆಪರೇಶನ್‌ ಗಂಗಾ ಯೋಜನೆ ಮೇಲ್ವಿಚಾರಣೆಗೆ ನರೇಂದ್ರ ಮೋದಿ ಸಂಪುಟದ ನಾಲ್ವರು ಸಚಿವರನ್ನು ಉಕ್ರೇನ್‌ ಜೊತೆ ಗಡಿ ಹಂಚಿಕೊಂಡಿರುವ ದೇಶಗಳಿಗೆ ಕಳುಹಿಸಲಾಗಿದೆ. ಅದರಂತೆ, ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ರೊಮೇನಿಯಾ ದೇಶ ತಲುಪಿದ್ದಾರೆ.

ADVERTISEMENT

 ʼಆಪರೇಷನ್‌ ಗಂಗಾʼ ಸಲುವಾಗಿ ರೊಮೇನಿಯಾಗೆ ತೆರಳಿರುವ ಸಿಂಧಿಯಾ ಅವರು, ಅಲ್ಲಿ ಮಾಡಿರುವ ಯಡವಟ್ಟು ಈಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವ್ಯಂಗ್ಯಕ್ಕೆ ಈಡಾಗಿದೆ. ಉಕ್ರೇನ್‌ ಸಂಘರ್ಷದ ಸಂತ್ರಸ್ತ ಭಾರತೀಯರಿಗೆ ಭಾರತ ಸರ್ಕಾರ ಎಲ್ಲಾ ನೆರವು ನೀಡುತ್ತದೆ ಎಂದು ಅಗ್ಗದ ಪ್ರಚಾರ ಪಡೆಯಲು ಹೋದ ಸಿಂಧಿಯಾಗೆ ರೊಮೇನಿಯಾ ಮೇಯರ್‌ ಹಿಗ್ಗಾ ಮುಗ್ಗಾ ಕ್ಲಾಸ್‌ ನೀಡಿದ್ದಾರೆ. ಈ  ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್‌ ಆಗುತ್ತಿದೆ.

ವಿಡಿಯೋದಲ್ಲಿ, ರೊಮೇನಿಯಾದ ಮೇಯರ್ ಸಚಿವ ಸಿಂಧಿಯಾ ಅವರು ಮಾತನಾಡುವಾಗ ಅಡ್ಡಿಪಡಿಸಿದ್ದು,  “ನಾವು ಈ ಭಾರತೀಯ ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿಗಾಗಿ ವ್ಯವಸ್ಥೆ ಮಾಡಿದ್ದೇವೆ, ನಿಮ್ಮ ಸರ್ಕಾರವಲ್ಲ” ಎಂದು ತರಾಟೆಗೆ ತೆಗೆದುಕೊಳ್ಳುವ ವಿಡಿಯೋ ಈಗ ಸಾಕಷ್ಟು ಸದ್ದು ಮಾಡುತ್ತಿದೆ.

https://twitter.com/JohnDoing_/status/1499375295123853312

ಆದಾಗ್ಯೂ, ಮೇಯರ್‌ ನೀಡಿದ ಮಾತಿನೇಟಿನ ಆಘಾತವನ್ನು ಮರೆಮಾಚುವ ಸಲುವಾಗಿ, ಸಿಂಧಿಯಾ ಅವರು ಭಾರತೀಯರಿಗೆ ಸಹಾಯ ಮಾಡಿದ್ದಕ್ಕಾಗಿ ರೊಮೇನಿಯನ್ ಅಧಿಕಾರಿಗಳಿಗೆ ಧನ್ಯವಾದಗಳನ್ನು ತಿಳಿಸಿ ಮಾತು ಮುಗಿಸುತ್ತಾರೆ.

ರೊಮೇನಿಯಾದ ಶಿಬಿರದಲ್ಲಿದ್ದ ಭಾರತೀಯ ವಿದ್ಯಾರ್ಥಿಗಳೊಂದಿಗೆ ಸಿಂಧಿಯಾ ಮಾತನಾಡುತ್ತಾ, ತಮ್ಮ ಸರ್ಕಾರವನ್ನು ಹೊಗಳಿದ್ದಾರೆ. ಇದು ಅಲ್ಲೇ ಇದ್ದ ರೊಮೇನಿಯಾದ ಮೇಯರ್ ಅವರ ಸಿಟ್ಟಿಗೆ ಕಾರಣವಾಗಿದೆ. ಸಿಂಧಿಯಾ ಮಾತಿಗೆ ಅಲ್ಲಿಯೇ ಅಡ್ಡಿಪಡಿಸಿದ ಮೇಯರ್‌, “ಈ ವಿದ್ಯಾರ್ಥಿಗಳಿಗೆ ವಸತಿ ಮತ್ತು ಆಹಾರಕ್ಕಾಗಿ ನಾವು ವ್ಯವಸ್ಥೆ ಮಾಡಿದ್ದೇವೆ, ನೀವು ಅಥವಾ ನಿಮ್ಮ ಸರ್ಕಾರವಲ್ಲ” ಎಂದು ಹೇಳುತ್ತಾರೆ.

ಮೇಯರ್‌ ಮಾತಿಗೆ ಸಚಿವ ಸಿಂಧಿಯಾ ಸಿಡಿಮಿಡಿಗೊಂಡಿದ್ದು, ʼನಾನೇನು ಹೇಳುತ್ತೇನೆ ಎಂಬುದನ್ನು ನಾನೇ ನಿರ್ಧರಿಸುತ್ತೇನೆʼ ಎಂದು ಹೇಳುತ್ತಾರೆ. ಆದರೆ, ಮೇಯರ್ ಮತ್ತೆ ಅವರಿಗೆ ತೀಕ್ಷ್ಣ ಉತ್ತರ ನೀಡಿ ʼನಿಮ್ಮ ಬಗ್ಗೆ ನೀವೇ ಮಾತನಾಡಿಕೊಳ್ಳಿʼ ಎಂದು ಹೇಳಿದ್ದಾರೆ. ಅಲ್ಲಿರುವ ವಿದ್ಯಾರ್ಥಿಗಳು ಮೇಯರ್‌ ಮಾತಿಗೆ ಚಪ್ಪಾಳೆ ತಟ್ಟುವ ಮೂಲಕ ಬೆಂಬಲ ನೀಡುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಇದು ಕೇಂದ್ರ ಸಚಿವರ ಇರಿಸು-ಮುರಿಸುಗೆ ಕಾರಣವಾಗಿದೆ.

ಸದ್ಯ, ಈ ವಿಡಿಯೋ ಸಾಕಷ್ಟು ವೈರಲ್‌ ಆಗಿದ್ದು, ಟ್ವಿಟರಿನಲ್ಲಿ  ಸಿಂಧಿಯಾ ಅವರ ವರ್ತನೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.  ರೊಮೇನಿಯನ್ ಅಧಿಕಾರಿಯೊಂದಿಗೆ ದಾರ್ಷ್ಟ್ಯದಿಂದ  ಮಾತನಾಡಿರುವುದು, ಭಾರತೀಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಸಹಾಯ ಪಡೆಯಲು ತೊಂದರೆ ಉಂಟುಮಾಡಬಹುದು. ಭಾರತದ ಪ್ರತಿನಿಧಿ ಆಗಿ ಹೋಗಿರುವಾಗ ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಸಿಂಧಿಯಾಗೆ ಟ್ವಿಟರ್‌ ಬಳಕೆದಾರರು ಫುಲ್‌ ಕ್ಲಾಸ್‌ ತಗೊಂಡಿದ್ದಾರೆ.

When Raja Scindia tried to attempt familiar PR antics in Romania, the Romanian Mayor rebuked him and reminded him they are the ones who arranged for food & shelter. Students seen clapping. #OperationGanga pic.twitter.com/k6RSMkXJdw

— Rofl Gandhi 2.0 🏹 (@RoflGandhi_) March 3, 2022

ದುರಂತದ ಸಂಧರ್ಭದಲ್ಲಿಯೂ ರಾಜಕೀಯ ಲಾಭ ಪಡೆಯಲು ಹವಣಿಸುವುದು ಅಸಹ್ಯಕರ ಎಂದು ಇನ್ನೊಬ್ಬ ನೆಟಿಝನ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ಯುದ್ಧ ಸಂಧರ್ಭವನ್ನು ಲಾಭಕ್ಕಾಗಿ ಬಳಸುವ ಕೇಂದ್ರ ಸರ್ಕಾರದ ಪಿಆರ್‌ ಕಾರ್ಯಾಚರಣೆ ರೊಮೇನಿಯಾದಲ್ಲಿ ನೆಲಕಚ್ಚಿದೆ ಎಂದು ನೆಟ್ಟಿಗರೊಬ್ಬರು ಪ್ರತಿಕ್ರಿಯಿಸಿದ್ದಾರೆ.
ಈ ನಡುವೆ ಆಪರೇಷನ್‌ ಗಂಗಾ ಮೂಲಕ ವಿದ್ಯಾರ್ಥೀಗಳನ್ನು ಕರೆ ತರವಾಗ ಮೋದಿಗೆ ಘೋಷಣೆ ಕೂಗಿದ್ದು, ವಿದ್ಯಾರ್ಥಿಗಳು ಮೋದಿಗೆ ಜೈಕಾರ ಹಾಕಲು ನಿರಾಕರಿಸುವ ವಿಡಿಯೋ ಕೂಡಾ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿದೆ.

PR turning into disaster … Such publicity gimmicks are only exposing Modi in front of the whole world!https://t.co/7wJq6wpuIJ

— Gaurav Pandhi (@GauravPandhi) March 3, 2022
Tags: BJPCongress Partyevacuationjyotiraditya scindiaRussiaRussianRussiaUkraineCrisisUkraineukraine presidentUkraine President Volodymyr ZelenskyUkraineConflictUkraineInvasionUkraineRussiaUkraineWarನರೇಂದ್ರ ಮೋದಿಬಿಜೆಪಿ
Previous Post

ಬೆಳ್ಳಿತೆರೆಗೆ ಜರ್ನಾಧನ ರೆಡ್ಡಿ ಪುತ್ರ ಕಿರೀಟಿ ಎಂಟ್ರಿ!

Next Post

‘ಆಪರೇಷನ್ ಗಂಗಾ’ಕ್ಕಿಂತ ಮುನ್ನ ಭಾರತ ನಡೆಸಿದ ರಕ್ಷಣಾ ಕಾರ್ಯಾಚರಣೆಗಳು ಯಾವುವು ಗೊತ್ತೇ?

Related Posts

ಶರದ್ ಪವಾರ್‌ಗೂ ಶಾಕ್..!: ಸುನೇತ್ರಾ ಡಿಸಿಎಂ ಆಯ್ಕೆಯ ಹಿಂದೆ “ಈ” ಮಾಸ್ಟರ್ ಮೈಂಡ್..!
Top Story

ಶರದ್ ಪವಾರ್‌ಗೂ ಶಾಕ್..!: ಸುನೇತ್ರಾ ಡಿಸಿಎಂ ಆಯ್ಕೆಯ ಹಿಂದೆ “ಈ” ಮಾಸ್ಟರ್ ಮೈಂಡ್..!

by ಪ್ರತಿಧ್ವನಿ
January 31, 2026
0

ಬೆಂಗಳೂರು : ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿದ್ದ ಅಜಿತ್ ಪವಾರ್(Ajit Pawar) ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಬಳಿಕ ಎನ್ ಸಿಪಿ (ರಾಷ್ಟ್ರವಾದಿ ಕಾಂಗ್ರೆಸ್) ಹಾಗೂ ಮಹಾ ರಾಜಕೀಯದಲ್ಲಿ ಸೃಷ್ಟಿಯಾಗಿದ್ದ ದೊಡ್ಡ...

Read moreDetails
ವಿಶ್ವಗುರುವೆಂಬ ಭ್ರಮೆ: ಮಾಫಿಯಾಗಳ ಗುಲಾಮರಾಗುತ್ತಿರುವ ಭಾರತೀಯ ಯುವಜನಾಂಗ!

ವಿಶ್ವಗುರುವೆಂಬ ಭ್ರಮೆ: ಮಾಫಿಯಾಗಳ ಗುಲಾಮರಾಗುತ್ತಿರುವ ಭಾರತೀಯ ಯುವಜನಾಂಗ!

January 31, 2026
Union Budget 2026: ಟ್ರಂಪ್‌ಗೆ ಗುನ್ನ: ಕೇಂದ್ರ ಬಜೆಟ್‌ನಲ್ಲಿ ಯಾರಿಗೆ ಸಿಹಿ? ಯಾರಿಗೆ ಕಹಿ..?

Union Budget 2026: ಟ್ರಂಪ್‌ಗೆ ಗುನ್ನ: ಕೇಂದ್ರ ಬಜೆಟ್‌ನಲ್ಲಿ ಯಾರಿಗೆ ಸಿಹಿ? ಯಾರಿಗೆ ಕಹಿ..?

January 30, 2026

Economic Survey 2026: ಸಂಸತ್‌ನಲ್ಲಿ ಆರ್ಥಿಕ ಸಮೀಕ್ಷೆ ವರದಿ ಮಂಡನೆ

January 29, 2026
Central Budget 2026: ಕೇಂದ್ರ ಬಜೆಟ್ ಮೇಲೆ ತೆರಿಗೆ ಹಾಗೂ ಇತರ ವಲಯದ ನಿರೀಕ್ಷೆಗಳೇನು..?

Central Budget 2026: ಕೇಂದ್ರ ಬಜೆಟ್ ಮೇಲೆ ತೆರಿಗೆ ಹಾಗೂ ಇತರ ವಲಯದ ನಿರೀಕ್ಷೆಗಳೇನು..?

January 29, 2026
Next Post
‘ಆಪರೇಷನ್ ಗಂಗಾ’ಕ್ಕಿಂತ ಮುನ್ನ ಭಾರತ ನಡೆಸಿದ ರಕ್ಷಣಾ ಕಾರ್ಯಾಚರಣೆಗಳು ಯಾವುವು ಗೊತ್ತೇ?

‘ಆಪರೇಷನ್ ಗಂಗಾ’ಕ್ಕಿಂತ ಮುನ್ನ ಭಾರತ ನಡೆಸಿದ ರಕ್ಷಣಾ ಕಾರ್ಯಾಚರಣೆಗಳು ಯಾವುವು ಗೊತ್ತೇ?

Please login to join discussion

Recent News

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!
Top Story

Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

by ಪ್ರತಿಧ್ವನಿ
February 1, 2026
ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ
Top Story

ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

by ಪ್ರತಿಧ್ವನಿ
January 31, 2026
ಶರದ್ ಪವಾರ್‌ಗೂ ಶಾಕ್..!: ಸುನೇತ್ರಾ ಡಿಸಿಎಂ ಆಯ್ಕೆಯ ಹಿಂದೆ “ಈ” ಮಾಸ್ಟರ್ ಮೈಂಡ್..!
Top Story

ಶರದ್ ಪವಾರ್‌ಗೂ ಶಾಕ್..!: ಸುನೇತ್ರಾ ಡಿಸಿಎಂ ಆಯ್ಕೆಯ ಹಿಂದೆ “ಈ” ಮಾಸ್ಟರ್ ಮೈಂಡ್..!

by ಪ್ರತಿಧ್ವನಿ
January 31, 2026
ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ
Top Story

ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ

by ಪ್ರತಿಧ್ವನಿ
January 31, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

February 1, 2026
T20 World Cup 2026: ಪಾಕಿಸ್ತಾನದ ಕಿಟ್ ಅನಾವರಣ ಕಾರ್ಯಕ್ರಮ ರದ್ದು! ಕಾರಣವೇನು?

T20 World Cup 2026: ಪಾಕಿಸ್ತಾನದ ಕಿಟ್ ಅನಾವರಣ ಕಾರ್ಯಕ್ರಮ ರದ್ದು! ಕಾರಣವೇನು?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada