• Home
  • About Us
  • ಕರ್ನಾಟಕ
Wednesday, July 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಹಿಂದೂತ್ವದ ಕೋಮುವಾದಕ್ಕೆ ದೇಶದ ಪೊಲೀಸರು ಬಲಿಯಾಗುತ್ತಿದ್ದಾರೆಯೇ?

ಪಿಕೆ ಮಲ್ಲನಗೌಡರ್ by ಪಿಕೆ ಮಲ್ಲನಗೌಡರ್
December 10, 2021
in ದೇಶ, ರಾಜಕೀಯ
0
ಹಿಂದೂತ್ವದ ಕೋಮುವಾದಕ್ಕೆ ದೇಶದ ಪೊಲೀಸರು ಬಲಿಯಾಗುತ್ತಿದ್ದಾರೆಯೇ?
Share on WhatsAppShare on FacebookShare on Telegram

ಹೋರಾಟ ನಿರತ ರೈತರನ್ನು ಖಲಿಸ್ತಾನಿಗಳು, ದೇಶದ್ರೋಹಿಗಳು ಎಂದು ಬಿಂಬಿಸಿದ ದೇಶದ ಮುಖ್ಯವಾಹಿನಿ ಮಾಧ್ಯಮಗಳು ಪೊಲೀಸರ ವಿಷಯದಲ್ಲಿ ಮಾತ್ರ ಜಾಣತನದ ನಡೆಯನ್ನು ತೋರಿವೆ. ಪೊಲೀಸರು ಅಮಾನವೀಯತೆ ಪ್ರದರ್ಶನದ ಬಗ್ಗೆ ಅಷ್ಟಾಗಿ ಎಲ್ಲೂ ಸುದ್ದಿಯಾಗುತ್ತಿಲ್ಲ.

ADVERTISEMENT

ಮುಸ್ಲಿಮರು ಮತ್ತು ಸಿಖ್ಖರನ್ನು ಎಲ್‌ಟಿಟಿಇ ಮತ್ತು ಜೆಕೆಎಲ್‌ಎಫ್‌ನೊಂದಿಗೆ ತಳುಕು ಹಾಕುವ ಆದೇಶದ ನಂತರ ಮಧ್ಯಪ್ರದೇಶದ ಪೊಲೀಸರು ‘ಇದು ಮುದ್ರಣದೋಷ’ ಎಂದು  ಪ್ಯಾ ಪ್ಯಾ ಎನ್ನುತ್ತಿದ್ದಾರೆ.

ಸಿಖ್ ಮತ್ತು ಮುಸ್ಲಿಂ ಪದಗಳ ನಂತರ ‘ಆತಂಕವಾದಿ’ ಎಂದು ಟೈಪ್ ಮಾಡುವುದನ್ನು ಗುಮಾಸ್ತ ಮರೆತಿದ್ದಾನೆ ಎಂದು ಕಟ್ನಿ  ವಿಭಾಗದ ಎಸ್ಪಿ ಹೇಳಿದ್ದಾರೆ. ಡಿಸೆಂಬರ್ 7 ರಂದು ರಾಜ್ಯಪಾಲ ಮಂಗುಭಾಯ್ ಸಿ. ಪಟೇಲ್ ಜಿಲ್ಲೆಗೆ ಭೇಟಿ ನೀಡುವ ಮುನ್ನ ಈ ಆದೇಶವನ್ನ ಹೊರಡಿಸಲಾಗಿದೆ.

ಮಧ್ಯಪ್ರದೇಶದ ಪೊಲೀಸ್ ಅಧಿಕಾರಿಯೊಬ್ಬರು ಸಹಿ ಮಾಡಿರುವ ವಿಐಪಿ-ಭದ್ರತೆ ಸಂಬಂಧಿತ ಆದೇಶವು ಜಮ್ಮು ಕಾಶ್ಮೀರ ಲಿಬರೇಶನ್ ಫ್ರಂಟ್ (ಜೆಕೆಎಲ್‌ಎಫ್), ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ (ಎಲ್‌ಟಿಟಿಇ) ಉಗ್ರಗಾಮಿಗಳು ಮತ್ತು ನಿಷೇಧಿತ ಸಂಘಟನೆಗಳ ಮುಸ್ಲಿಮರು ಮತ್ತು ಸಿಖ್ಖರನ್ನು ಪಟ್ಟಿ ಮಾಡಲು ಬಳಸಿಕೊಂಡಿದ್ದು ವಿವಾದಕ್ಕೆ ಕಾರಣವಾಗಿದೆ.

ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸ್ಸಾಂ (ULFA) ಮತ್ತು ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ (SIMI) ಸಾಂಘಟನೆಗಳ ಜೊತೆ ಅಲ್ಪಸಂಖ್ಯಾತರನ್ನು ತಳುಕು ಹಾಕಲಾಗಿದೆ.

ಡಿಸೆಂಬರ್ 7 ರಂದು ಮಧ್ಯಪ್ರದೇಶದ ರಾಜ್ಯಪಾಲ ಮಂಗುಭಾಯ್ ಸಿ. ಪಟೇಲ್ ಜಿಲ್ಲೆಗೆ ಭೇಟಿ ನೀಡುವ ಮುನ್ನ ಕಟ್ನಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸುನಿಲ್ ಕುಮಾರ್ ಜೈನ್ ಸಹಿ ಮಾಡಿದ ಎರಡು ಪುಟಗಳ ಆದೇಶವನ್ನು ಹೊರಡಿಸಲಾಗಿದೆ. ಲಿಖಿತ ಆದೇಶದ ಆರನೇ ಅಂಶವು “ಸಿಖ್, ಮುಸಲ್ಮಾನ್, JKLF, ULFA, SIMI, LTTE aatankwadi (ಭಯೋತ್ಪಾದಕರು)” ಮೇಲೆ ಕಟ್ಟುನಿಟ್ಟಾದ ನಿಗಾ ಇರಿಸಲು ಭದ್ರತಾ ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿಗೆ ಸೂಚಿಸಿದೆ ಎಂದು ಹೇಳುತ್ತದೆ.

“ಸಿಖ್, ಮುಸಲ್ಮಾನ್, ಜೆಕೆಎಲ್‌ಎಫ್, ಉಲ್ಫಾ, ಸಿಮಿ, ಎಲ್‌ಟಿಟಿಇ ಆತಂಕ್‌ವಾದಿ  ಪರ್ ಸಖ್ತ್ ನಜರ್ ರಖಿ ಜಾಯೆ” ಎಂದು ಪೊಲೀಸ್ ಆದೇಶದಲ್ಲಿ ತಿಳಿಸಲಾಗಿದೆ.

The Print ನೊಂದಿಗೆ ಮಾತನಾಡಿದ ಎಸ್‌ಪಿ ಜೈನ್ ಇದನ್ನು “ಟೈಪಿಂಗ್ ದೋಷ” ಎಂದು ಕರೆದಿದ್ದಾರೆ ಮತ್ತು “ಎರಡೂ ಸಮುದಾಯಗಳ ಜನರ ಭಾವನೆಗಳು ನೋಯಿಸುವ ಉದ್ದೇಶವನ್ನು ಯಾರೂ ಹೊಂದಿಲ್ಲ” ಎಂದು ಹೇಳಿದ್ದಾರೆ.

“ಗುಮಾಸ್ತರು ಟೈಪ್ ಮಾಡುವಾಗ ದೋಷವನ್ನು ಮಾಡಿದ್ದಾರೆ. ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ನಾವು ಕ್ಷಮೆ ಯಾಚಿಸುತ್ತೇವೆ. ನಾನು ಕ್ಲರ್ಕ್‌ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದೇನೆ, ಆದರೆ ಅದಕ್ಕಾಗಿ ಅವರನ್ನು ಅಮಾನತು ಮಾಡದಿರಲು ನಿರ್ಧರಿಸಿದ್ದೇನೆʼ ಎಂದು ಎಸ್‌ಪಿ ಹೇಳಿದ್ದಾರೆ..

ಆದೇಶದಲ್ಲಿ ಎಲ್‌ಟಿಟಿಇ, ಜೆಕೆಎಲ್‌ಎಫ್ ಮತ್ತು ಉಲ್ಫಾವನ್ನು ಉಲ್ಲೇಖಿಸಿದ ಬಗ್ಗೆ ಕೇಳಿದಾಗ, ಎಸ್‌ಪಿ ಅವರು “ಎಲ್ಲಾ ಟ್ರ್ಯಾಕ್‌ಗಳನ್ನು ಕವರ್ ಮಾಡಲು” ಬಯಸುವುದಾಗಿ ಹೇಳಿದ್ದಾರೆ..

ಎಲ್‌ಟಿಟಿಇ ಶ್ರೀಲಂಕಾದ ತಮಿಳು ಪ್ರತ್ಯೇಕತಾವಾದಿ ಸಂಘಟನೆಯಾಗಿದ್ದು, ಜೆಕೆಎಲ್‌ಎಫ್ ಕಾಶ್ಮೀರಿ ಉಗ್ರಗಾಮಿ ಸಂಘಟನೆ ಮತ್ತು ಉಲ್ಫಾ ಅಸ್ಸಾಂ ಮೂಲದ ಪ್ರತ್ಯೇಕತಾವಾದಿ ಸಂಘಟನೆಯಾಗಿದೆ.

ಮೂಲತಃ ಏನು ಬರೆಯಲು ಉದ್ದೇಶಿಸಲಾಗಿತ್ತು ಎಂದು ಎಸ್‌ಪಿ ಜೈನ್ ಅವರನ್ನು ಕೇಳಿದಾಗ, “ಗುಮಾಸ್ತರು ನಡುವೆ ಒಂದು ಪದವನ್ನು ಬರೆಯಲು ಮರೆತಿದ್ದಾರೆ. ಅವರು ಸಿಖ್ ಮತ್ತು ಮುಸ್ಲಿಮರು ಎಂದು  ಬರೆದ ನಂತರ ಆತಂಕ್‌ವಾದಿ (ಭಯೋತ್ಪಾದಕ) ಬರೆಯಬೇಕಾಗಿತ್ತು.

“ಖಾಲಿಸ್ತಾನ್ ಪರ ಸಂಘಟನೆಗಳಂತೆ ಸಿಖ್ ಮತ್ತು ಮುಸ್ಲಿಂ ಉಗ್ರಗಾಮಿ ಸಂಘಟನೆಗಳ ಮೇಲೆ ಕಟ್ಟುನಿಟ್ಟಿನ ಕಣ್ಣು ಇಡಬೇಕು ಎಂದು ನಾವು ಉಲ್ಲೇಖಿಸಲು ಬಯಸಿದ್ದೇವೆ. ಪದ ತಪ್ಪಿಹೋಗಿದೆ, ಆದ್ದರಿಂದ ನಾವು ಸಮುದಾಯಗಳನ್ನು ಭಯೋತ್ಪಾದಕ ಸಂಘಟನೆಗಳೊಂದಿಗೆ ಸೇರಿಸಿಕೊಂಡಂತೆ ತೋರುತ್ತಿದೆʼ ಎಂದು ಎಸ್ಪಿ ಜೈನ್ ತಪ್ಪು ಒಪ್ಪಿಕೊಂಡಿದ್ದಾರೆ.

ರಾಜ್ಯಪಾಲರ ಭೇಟಿಗೆ ಮುನ್ನ ಭಯೋತ್ಪಾದಕರ ಬಗ್ಗೆ ಗಮನ ಹರಿಸುವಂತೆ ನಾವು ಎಲ್ಲರಿಗೂ ಎಚ್ಚರಿಕೆ ನೀಡಲು ಬಯಸಿದ್ದೇವೆ ಎಂದು ಆ ಅಧಿಕಾರಿ ಹೇಳಿದ್ದಾರೆ.

ಟ್ವಿಟರ್‌ನಲ್ಲಿ ಹೇಳಿಕೆಯನ್ನು ಬಿಡುಗಡೆ ಮಾಡಿದ ಕಾಂಗ್ರೆಸ್ನ ಹಿರಿಯ ನಾಯಕ ಮತ್ತು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಕೆ. ಮಿಶ್ರಾ, “ವಾವ್, ಎಸ್‌,ಪಿ  ಸಾಬ್‌, ಧನ್ಯವಾದಗಳು. ಇದುವರೆಗೂ ಬಿಜೆಪಿಯವರು ದೇಶದ ರೈತರು ಮತ್ತು ಮುಸ್ಲಿಮರನ್ನು ಭಯೋತ್ಪಾದಕರು ಎಂದು ಪರಿಗಣಿಸುತ್ತಿದ್ದರು. ಖಂಡಿತ, ಸರ್ಕಾರವು ನಿಮ್ಮನ್ನು ಶಿಕ್ಷಿಸುವುದಿಲ್ಲ, ಆದರೆ ನಿಮಗೆ ‘ಪದ್ಮಶ್ರೀ’ ಪ್ರಶಸ್ತಿಯನ್ನು ನೀಡುತ್ತದೆ, ”ಎಂದು.ವ್ಯಂಗ್ಯವಾಡಿದ್ದಾರೆ.

ನಮ್ಮ ಕರಾವಳಿ ಭಾಗದಲ್ಲೂ ಇಂತಹ ಪೊಲೀಸ್‌ ಅತಿಕ್ರಮಣ ನಡೆಯುತ್ತಲೇ ಇದ್ದು, ಈ ಬಗ್ಗೆ ಚಕಾರ  ಎತ್ತದ ಸರ್ಕಾರದ ನಡೆ ಗಮನಿಸಿದರೆ ಪೊಲೀಸರು ಖಾಕಿ ಚೆಡ್ಡಿ ಧರಿಸುತ್ತಿದ್ದಾರಾ ಎಂಬ ಅನುಮಾನ ಮೂಡದೇ ಇರದು.

Tags: Row over police order in M.P.’s Katni
Previous Post

ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧ ಕುಟುಕಿದ ಮಾಜಿ ಸಿಎಂ ಕುಮಾರಸ್ವಾಮಿ

Next Post

ದಶಕಗಳಿಂದ ಭೂಮಿಗಾಗಿ ಹೋರಾಡುತ್ತಿರುವ ಗುಜರಾತಿನ ಭೂ ರಹಿತ ದಲಿತ ಮಹಿಳೆಯರ ಮೇಲೆ ಮೇಲ್ಜಾತಿ ಜಮೀನ್ದಾರರ ಆಕ್ರಮಣ (ಭಾಗ-2)

Related Posts

Prahlad Joshi: ವ್ಯಾಪಾರಸ್ಥರಿಗೆ ಜಿಎಸ್‌ಟಿ ನೋಟಿಸ್ ಕೇಂದ್ರದ್ದಲ್ಲ: ಪ್ರಹ್ಲಾದ್ ಜೋಶಿ
Top Story

Prahlad Joshi: ವ್ಯಾಪಾರಸ್ಥರಿಗೆ ಜಿಎಸ್‌ಟಿ ನೋಟಿಸ್ ಕೇಂದ್ರದ್ದಲ್ಲ: ಪ್ರಹ್ಲಾದ್ ಜೋಶಿ

by ಪ್ರತಿಧ್ವನಿ
July 22, 2025
0

– ಬೇರೆ ಯಾವ ರಾಜ್ಯದಲ್ಲಿ ಇಲ್ಲದ ನೋಟಿಸ್ ಇಲ್ಲೇಕೆ?; ಜನರ ಕಣ್ಣಿಗೆ ಮಣ್ಣೆರೆಚೋ ಕೆಲಸವೆಂದ ಪ್ರಹ್ಲಾದ್ ಜೋಶಿ. ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೆರಿಗೆ (GST) ನೋಟಿಸ್ ನೀಡುತ್ತಿರುವುದು...

Read moreDetails
ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

July 22, 2025
ಮುಡಾ ಕೇಸ್ ನಲ್ಲಿ ಇ.ಡಿ ಗೆ ಸುಪ್ರೀಂ ಕೋರ್ಟ್ ತರಾಟೆ – ಡಿಕೆ ಬ್ರದರ್ಸ್ ಹೇಳಿದ್ದೇನು..?! 

ಮುಡಾ ಕೇಸ್ ನಲ್ಲಿ ಇ.ಡಿ ಗೆ ಸುಪ್ರೀಂ ಕೋರ್ಟ್ ತರಾಟೆ – ಡಿಕೆ ಬ್ರದರ್ಸ್ ಹೇಳಿದ್ದೇನು..?! 

July 22, 2025
ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಕರ್ ಧಿಡೀರ್ ರಾಜೀನಾಮೆ ..! 

ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಕರ್ ಧಿಡೀರ್ ರಾಜೀನಾಮೆ ..! 

July 22, 2025
ದಿಕ್ಕು ತಪ್ಪಿದ ಸಮಾಜ ಅಂತ್ಯ ಕಾಣದ ದೌರ್ಜನ್ಯಗಳು

ದಿಕ್ಕು ತಪ್ಪಿದ ಸಮಾಜ ಅಂತ್ಯ ಕಾಣದ ದೌರ್ಜನ್ಯಗಳು

July 22, 2025
Next Post
ದಶಕಗಳಿಂದ ಭೂಮಿಗಾಗಿ ಹೋರಾಡುತ್ತಿರುವ ಗುಜರಾತಿನ ಭೂ ರಹಿತ ದಲಿತರ ಮಹಿಳೆಯರು ಮತ್ತು ಮೇಲ್ಜಾತಿ ಜಮೀನ್ದಾರರ ಆಕ್ರಮಣ (ಭಾಗ-1)

ದಶಕಗಳಿಂದ ಭೂಮಿಗಾಗಿ ಹೋರಾಡುತ್ತಿರುವ ಗುಜರಾತಿನ ಭೂ ರಹಿತ ದಲಿತ ಮಹಿಳೆಯರ ಮೇಲೆ ಮೇಲ್ಜಾತಿ ಜಮೀನ್ದಾರರ ಆಕ್ರಮಣ (ಭಾಗ-2)

Please login to join discussion

Recent News

Prahlad Joshi: ವ್ಯಾಪಾರಸ್ಥರಿಗೆ ಜಿಎಸ್‌ಟಿ ನೋಟಿಸ್ ಕೇಂದ್ರದ್ದಲ್ಲ: ಪ್ರಹ್ಲಾದ್ ಜೋಶಿ
Top Story

Prahlad Joshi: ವ್ಯಾಪಾರಸ್ಥರಿಗೆ ಜಿಎಸ್‌ಟಿ ನೋಟಿಸ್ ಕೇಂದ್ರದ್ದಲ್ಲ: ಪ್ರಹ್ಲಾದ್ ಜೋಶಿ

by ಪ್ರತಿಧ್ವನಿ
July 22, 2025
ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್
Top Story

ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

by Shivakumar A
July 22, 2025
ಮುಡಾ ಕೇಸ್ ನಲ್ಲಿ ಇ.ಡಿ ಗೆ ಸುಪ್ರೀಂ ಕೋರ್ಟ್ ತರಾಟೆ – ಡಿಕೆ ಬ್ರದರ್ಸ್ ಹೇಳಿದ್ದೇನು..?! 
Top Story

ಮುಡಾ ಕೇಸ್ ನಲ್ಲಿ ಇ.ಡಿ ಗೆ ಸುಪ್ರೀಂ ಕೋರ್ಟ್ ತರಾಟೆ – ಡಿಕೆ ಬ್ರದರ್ಸ್ ಹೇಳಿದ್ದೇನು..?! 

by Chetan
July 22, 2025
ತರುಣ್‌ ಶಿವಪ್ಪ ನಿರ್ಮಾಣದಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ ʼನೆಕ್ಸ್ಟ್‌ ಲೆವೆಲ್‌ʼ ಸಿನಿಮಾ
Top Story

ತರುಣ್‌ ಶಿವಪ್ಪ ನಿರ್ಮಾಣದಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ ʼನೆಕ್ಸ್ಟ್‌ ಲೆವೆಲ್‌ʼ ಸಿನಿಮಾ

by Shivakumar A
July 22, 2025
ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಜುಲೈ 24ಕ್ಕೆ ಮುಂದೂಡಿಕೆ..! 
Top Story

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಜುಲೈ 24ಕ್ಕೆ ಮುಂದೂಡಿಕೆ..! 

by Chetan
July 22, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Prahlad Joshi: ವ್ಯಾಪಾರಸ್ಥರಿಗೆ ಜಿಎಸ್‌ಟಿ ನೋಟಿಸ್ ಕೇಂದ್ರದ್ದಲ್ಲ: ಪ್ರಹ್ಲಾದ್ ಜೋಶಿ

Prahlad Joshi: ವ್ಯಾಪಾರಸ್ಥರಿಗೆ ಜಿಎಸ್‌ಟಿ ನೋಟಿಸ್ ಕೇಂದ್ರದ್ದಲ್ಲ: ಪ್ರಹ್ಲಾದ್ ಜೋಶಿ

July 22, 2025
ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

July 22, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada