ಕಳೆದ ಕೆಲ ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ ಸದ್ದು ಮಾಡುತ್ತಿರುವ ಬಿಜೆಪಿಗೆ ರೌಡಿಶೀಟರ್ಗಳ ಸೇರ್ಪಡೆ ಇದೀಗ ವಿರೋಧ ಪಕ್ಷಗಳಿಗೆ ದೊಡ್ಡ ಆಹಾರವಾಗಿ ಪರಿಣಮಿಸಿದೆ.
ಕಳೆದ ಕೆಲ ದಿನಗಳಿಂದ ಬಿಜೆಪಿ ಜೊತೆ ಕುಖ್ಯಾತ ರೌಡಿ ಶೀಟರ್ ಸೈಲೆಂಟ್ ಸುನೀಲ, ವಿಲ್ಸನ್ ಗಾರ್ಡನ್ ನಾಗ, ಬೆತ್ತನಗರೆ ಶಂಕರ ಬಿಜೆಪಿ ನಾಯಕರ ಜೊತೆ ಗುರುತಿಸಿಕೊಂಡಿದ್ದು ಇದೀಗ ಮೈಸೂರಿನಲ್ಲಿ ರೌಡಿಶೀಟರ್ ಓರ್ವ ತನ್ನಗೂ ಟಿಕೆಟ್ ನೀಡುವಂತೆ ದುಂಬಾಲು ಬಿದ್ದಿದಾನೆ.
ಮಂಜುನಾಥ್ ಅಲಿಯಾಸ್ ಪಾನಿಪುರಿ ಮಂಜ ಮೈಸೂರು ಜಿಲ್ಲಾ ನ್ಯಾಯಾಲಯದ ಎದುರು ಬಿಜೆಪಿಯಲ್ಲಿ ತನ್ನಗೆ ಸ್ಥಾನಮಾನ ನೀಡುವಂತೆ ಏಕಾಂಗಿ ಪ್ರತಿಭಟನೆ ನಡೆಸಿದ್ದಾನೆ.
ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಟಿಕೆಟ್ ನೀಡುವಂತೆ ಅಗ್ರಹಿಸಿ ನ್ಯಾಯಾಲಯದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ಏಕಾಂಗಿ ಪ್ರತಿಭಟನೆ. ಈಗಾಗಲೇ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಮಂಜನ ವಿರುದ್ದ ರೌಡಿಶೀಟರ್ ತೆರೆಯಲಾಗಿದ್ದು 307, 420, 506, 504 ಐಪಿಸಿ ಸೆಕ್ಷನ್ಗಳ ಅಡಿ ವಿವಿಧ ಪ್ರಕರಣಗಳಡಿ ತನಿಖೆ ಎದುರಿಸುತ್ತಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಲಕ್ಷ್ಮೀಪುರಂ ಠಾಣಾ ಪೊಲೀಸರು ಮಂಜನನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ.