ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಅಡ್ಡ ಜೆಡಿಎಸ್ನ ಭಿನ್ನಮತೀಯ ಶಾಸಕರಾದ ಗುಬ್ಬಿ ಶ್ರೀನಿವಾಸ ಹಾಗೂ ಕೋಲಾರದ ಶ್ರೀನಿವಾಸ ಗೌಡರ ಹೆಸರು ಹಾಗೂ ಫೋಟೋ ಹಾಕಿ ಕೈಲಾಸ ಸಮಾರಾಧನೆಯ ಆಹ್ವಾನ ಪತ್ರಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.
ಕುಮಾರಸ್ವಾಮಿ ಫಾರ್ ಸಿಎಂ ಎಂಬ ಫೇಸ್ಬುಕ್ ಖಾತೆಯಲ್ಲಿ ಈ ಫೋಟೋಗಳನ್ನು ಹರಿಬಿಡಲಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಈ ಇಬ್ಬರು ಶಾಸಕರು ಕೋಮುವಾದಿ ಪಕ್ಷವನ್ನಗೆಲಿಸಲು ಪಕ್ಷ ಹಾಘು ಕಾರ್ಯಕರ್ತರಿಗೆ ಮೋಸ ಮಾಡಿದ್ದಾರೆ. ದುಡ್ಡಿಗಾಗಿ ಮತವಾನ್ನು ಮಾರಿಕೊಂಡು ಮತದಾರರ ಪಾಲಿಗೆ ಸತ್ತು ಹೋಗಿದ್ದಾರೆ ಎಂದು ಅಡಿಬರಹ ನೀಡಲಾಗಿದೆ.







