• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಚುನಾವಣೆ ಸೋತ ಕಾರಣಕ್ಕೆ ಕರೋನಾ ಬಗ್ಗೆ ತಲೆಕೆಡಿಸಿಕೊಂಡಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್!

ಯದುನಂದನ by ಯದುನಂದನ
May 11, 2021
in ದೇಶ
0
ಚುನಾವಣೆ ಸೋತ ಕಾರಣಕ್ಕೆ ಕರೋನಾ ಬಗ್ಗೆ ತಲೆಕೆಡಿಸಿಕೊಂಡಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್!
Share on WhatsAppShare on FacebookShare on Telegram

ದೇಶವನ್ನು ದುರ್ದಿನಗಳಿಗೆ ದೂಡಿದ ಕರೋನಾ ಎಂಬ‌ ಕರಾಳತೆ ಬಗ್ಗೆ‌ ಬಿಜೆಪಿ ಮತ್ತು ಅದರ ಮಾರ್ಗದರ್ಶಕ ಸಂಸ್ಥೆ ಆರ್‌ಎಸ್‌ಎಸ್ ಇಷ್ಟೆಲ್ಲಾ ಅನಾಹುತ ಆದ ಬಳಿಕ ಈಗ ಆತ್ಮಾವಲೋಕನ ಮಾಡಿಕೊಳ್ಳತೊಡಗಿವೆ. ಈಗಲೂ ಬಿಜೆಪಿ ಮತ್ತು ಆರ್‌ಎಸ್‌ಎಸ್ ಇಂಥದೊಂದು‌ ಚರ್ಚೆಗೆ ಅಥವಾ ಪರಮಾರ್ಶೆಗೆ ತೆರೆದುಕೊಂಡಿರುವುದು ಕರೋನಾ ಸೋಂಕು ಪ್ರತಿ ದಿನ ಲಕ್ಷಾಂತರ ಜನರನ್ನು ವಕ್ಕರಿಸಿ ದೇಶಕ್ಕೆ ದೇಶವನ್ನೇ ನಡುಗಿಸುತ್ತಿದೆ ಎಂಬ ಕಾರಣಕ್ಕಲ್ಲ. ಪ್ರತಿ ದಿನ ನಾಲ್ಕೈದು ಸಾವಿರ ಜನ ಸಾಯುತ್ತಿದ್ದಾರೆ ಎಂಬ ಕಾರಣಕ್ಕಲ್ಲ.‌ ಕರೋನಾ ಕಷ್ಟ ಕಾಲದಲ್ಲಿ ನಡೆದ ಚುನಾವಣೆಗಳಲ್ಲಿ ಬಿಜೆಪಿ ಸೋತಿದೆ ಎಂಬ ಕಾರಣಕ್ಕೆ!

ADVERTISEMENT

ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು ಪಶ್ಚಿಮ ಬಂಗಾಳದಲ್ಲಿ ಗೆದ್ದೇ ಬಿಟ್ಟಿದ್ದೇವೆ ಎಂದು ಬೀಗಿದ್ದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಸ್ಥಾನದ ಘನತೆ ಮರೆತು ಚುನಾವಣಾ ಪ್ರಚಾರದ ವೇಳೆ ಮಮತಾ ಬ್ಯಾನರ್ಜಿ ಅವರನ್ನು ‘ದೀದಿ ಓ ದೀದಿ, ಸೋಲು ನಿಮ್ಮ ಮುಂದಿದೆ…’ ಎಂದು ಮೂದಲಿಸಿದ್ದರು. ‘ಬಂಗಾಳದಲ್ಲಿ ಬಿಜೆಪಿ ಮೂರಂಕಿ ದಾಟುವುದಿಲ್ಲ, ಒಂದೊಮ್ಮೆ ದಾಟಿದರೆ ತಾನು ಈ ಕೆಲಸವನ್ನೇ ಬಿಟ್ಟುಬಿಡುತ್ತೇನೆ’ ಎಂದು ಭವಿಷ್ಯ ನುಡಿದಿದ್ದ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರನ್ನು ‘ಪ್ಯಾಕಪ್ ಮಾಡಿ, ಗೆಲುವು ನಮ್ಮದೇ’ ಎಂದು ಅಣಕಿಸಿದ್ದರು. ದಕ್ಷಿಣ ಭಾರತದಲ್ಲಿ ಈ ಬಾರಿ ಮೋದಿ-ಶಾ ನೇತೃತ್ವದಲ್ಲಿ ಬಿಜೆಪಿ ‘ಘನ ಸಾಧನೆ’ ಮಾಡಲಿದೆ ಎಂದುಕೊಂಡಿದ್ದರು. ಅಲ್ಲದೆ ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ‘ಹಿಂದುತ್ವದ ಐಕಾನ್’ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಭರ್ಜರಿ ಜಯ ಸಾಧಿಸಿ ಮುಂದಿನ ವರ್ಷ ನಡೆಯುವ ವಿಧಾನಸಭಾ ಚುನಾವಣೆಗೆ ಅಣಿಯಾಗುವ ಆಲೋಚನೆ ಇತ್ತು.‌ ಆದರೆ ಎಲ್ಲೆಡೆಯೂ ಸಂಭವಿಸಿದ್ದು ಮರ್ಮಾಘಾತ. ಇದೇ ಈಗ ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರನ್ನು ‘ಚಿಂತನ-ಮಂಥನ’ಕ್ಕೆ ಹಚ್ಚಿರುವುದು.

ಬಿಜೆಪಿ ಮತ್ತು ಆರ್‌ಎಸ್‌ಎಸ್  ನಾಯಕರಿಗೆ ತಮ್ಮ ಸೋಲಿಗೆ ಕರೋನಾವೇ ಕಾರಣ ಎನಿಸಿದೆ. ಕರೋನಾ ಎರಡನೇ ಅಲೆಯನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನಿಭಾಯಿಸುತ್ತಿರುವ ರೀತಿ ಸರಿ ಇಲ್ಲ‌. ಇದೇ ಕಾರಣಕ್ಕೆ ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಬಿಜೆಪಿ ಸೋತಿದೆ ಎಂಬುದು ಆರ್‌ಎಸ್‌ಎಸ್ ಅಸಮಾಧಾನ ಎಂದು ದೇಶದ ಪ್ರಮುಖ ವಾಹಿನಿಯಾದ ‘ಎನ್ ಡಿ ಟಿವಿ’ ವರದಿ ಮಾಡಿದೆ. ‌ನರೇಂದ್ರ ಮೋದಿ ಪ್ರಧಾನ ಮಂತ್ರಿ ಆದ ಬಳಿಕ ಏಳು ವರ್ಷಗಳಿಂದ ಯಾವೊಂದು ವಿಚಾರದಲ್ಲೂ ಬಿಜೆಪಿ ಮತ್ತು ಆರ್‌ಎಸ್‌ಎಸ್ ನಡುವೆ ಈ ಪರಿ ಅಸಮಾಧಾನ ಇರಲಿಲ್ಲ. ಈಗ ಇದೇ ಮೊದಲ ಬಾರಿಗೆ ಆರ್‌ಎಸ್‌ಎಸ್ ಪ್ರಧಾನಿ ಮೋದಿ, ಕೇಂದ್ರ ಸರ್ಕಾರ ಮತ್ತು ಬಿಜೆಪಿ ನಡೆಗಳ ಬಗ್ಗೆ ತೀವ್ರ ತೆರನಾದ ಅಸಮಾಧಾನವನ್ನು ಹೊರಹಾಕಿದೆ ಎಂದು ಮೂಲಗಳು ತಿಳಿಸಿರುವುದಾಗಿ ಕೂಡ ‘ಎನ್ ಡಿ ಟಿವಿ’ ವರದಿ ಮಾಡಿದೆ. 

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಈಗ ತನ್ನ ವೈಫಲ್ಯಗಳಿಗೆಲ್ಲಾ ಕೋವಿಡ್ ಪರಿಸ್ಥಿತಿಯ ಕಾರಣ ಕೊಡುತ್ತಿದೆ. ಆದರೆ ವಾಸ್ತವವಾಗಿ ಕೋವಿಡ್ ಪರಿಸ್ಥಿತಿ ನಿರ್ವಹಿಸುವುದರಲ್ಲಿ ತನ್ನ ಜವಾಬ್ದಾರಿಯನ್ನು ಮರೆತಿದೆ. ಪರಿಣಾಮವಾಗಿ ಬಿಜೆಪಿಯ ಮತಬ್ಯಾಂಕ್ ಎಂದೇ ಹೇಳಲಾಗುವ ಮಧ್ಯಮ ವರ್ಗದವರು ಹೆಚ್ಚು ಹಾನಿಗೊಳಗಾಗಿದ್ದಾರೆ. ಕರೋನಾ ಸೋಂಕು ಹಳ್ಳಿಗಳಿಗೂ ಹರಡಿದೆ. ವಿಶೇಷವಾಗಿ ಅತಿಹೆಚ್ಚು ಜನಸಂಖ್ಯೆ ಇರುವ ಮತ್ತು ಬಿಜೆಪಿ ಆಡಳಿತ ಇರುವ ಉತ್ತರ ಪ್ರದೇಶ ಹಾಗೂ ಬಿಹಾರದ ಹಳ್ಳಿಗಳಿಗೆ ಹರಡಿದೆ. ಇದಕ್ಕೆ ಯಾರು ಕಾರಣ ಎಂದು ಆರ್‌ಎಸ್‌ಎಸ್ ಅಸಮಾಧಾನ ಹೊರಹಾಕಿರುವ ಮಾಹಿತಿಗಳು ಲಭಿಸುತ್ತಿವೆ. ಕರೋನಾದಿಂದ ತಮ್ಮವರನ್ನು ಕಳೆದುಕೊಂಡವರ ದುಃಖ ಮತ್ತು ಕೋಪ ದೀರ್ಘಕಾಲದವರೆಗೆ ಇರುತ್ತದೆ. ಅದು ಯಾವುದೇ ರೂಪದಲ್ಲಾದರೂ ವ್ಯಕ್ತವಾಗಬಹುದು. ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಬಿಜೆಪಿಗೆ ಉಂಟಾಗಿರುವ ಹಿನ್ನಡೆಯೂ ನಿಜಕ್ಕೂ ಕೂಡ ಗಂಭೀರವಾದುದಾಗಿದೆ. ಇದು ಚಿಂತೆಗೆ ಕಾರಣವಾಗಿದೆ ಇದೆ ಎಂದು ನಾಯಕರೊಬ್ಬರು ಅಭಿಪ್ರಾಯಪಟ್ಟಿದ್ದಾರೆ ಎನ್ನಲಾಗಿದೆ.

ಇಂಥದೊಂದು ‘ಚಿಂತೆ’ ಹುಟ್ಟಿಕೊಳ್ಳುವುದಕ್ಕೆ ಕಾರಣಗಳೂ ಇವೆ. 2024ಕ್ಕೆ ಲೋಕಸಭಾ ಚುನಾವಣೆ ಬರಲಿದೆ. ಉಳಿದಿರುವುದು ಮೂರು ವರ್ಷ. ಮೂರು ವರ್ಷದ ಬಳಿಕ ಪ್ರಧಾನಿ ಮೋದಿ ಮೂರನೇ ಅವಧಿಗೆ ಪ್ರಯತ್ನಿಸಲಿದ್ದಾರೆ. ಆದರೆ ಅದಕ್ಕೂ ಮೊದಲೇ ದೇಶದ ದೊಡ್ಡ ರಾಜ್ಯ ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಆದರೀಗ ಉತ್ತರ ಪ್ರದೇಶದ ಪಂಚಾಯತ್ ಚುನಾವಣೆ ಫಲಿತಾಂಶ ವಿಧಾನಸಭಾ ಚುನಾವಣೆಯ ಫಲಿತಾಂಶದ ಮೇಲೆ ಪರಿಣಾಮ ಬೀರಬಹುದು.‌ ವಿಧಾನಸಭಾ ಚುನಾವಣೆಯ ಫಲಿತಾಂಶ ಲೋಕಸಭಾ ಚುನಾವಣೆಯ ಫಲಿತಾಂಶದ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಲಾಗುತ್ತಿದೆ. ಕರೋನಾ ವ್ಯಾಪಕವಾಗಿ ಹರಡುತ್ತಿದ್ದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಪ್ರಚಾರ ನಡೆಸಿದ್ದು ದೇಶಾದ್ಯಂತ ಬಿಜೆಪಿ ವಿರುದ್ಧ ಜನಾಭಿಪ್ರಾಯ ರೂಪುಗೊಳ್ಳಲು ಕಾರಣವಾಯಿತು. ಇದರಿಂದ ದೇಶದೊಳಗೆ ಮಾತ್ರವಲ್ಲ ಅಂತಾರಾಷ್ಟ್ರೀಯ ಸಮುದಾಯ ಕೂಡ ಭಾರತದತ್ತ ಬೊಟ್ಟು ಮಾಡಿತು. ಆ ಸಂದರ್ಭದಲ್ಲಿ ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವರು ಆಮ್ಲಜನಕ, ಲಸಿಕೆ ಮತ್ತಿತರ ಔಷಧೀಯ ಸಾಮಗ್ರಿಗಳ ಕೊರತೆ ಬಗ್ಗೆ ಗಮನ ಹರಿಸಬೇಕಾಗಿತ್ತು ಎಂದು ಆರ್‌ಎಸ್‌ಎಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಒಂದೆಡೆ ಹೀಗೆ ಆರ್‌ಎಸ್‌ಎಸ್ ನಾಯಕರು ಪ್ರಧಾನಿ ಮೋದಿಯಿಂದ ಹಿಡಿದು ಬಿಜೆಪಿಯ ಹಿರಿಯ-ಕಿರಿಯ ಮುಖಂಡರ ಮೇಲೆ‌ ಮುಗಿಬಿದ್ದಿದ್ದರೆ ಇನ್ನೊಂದೆಡೆ ಬಿಜೆಪಿ ನಾಯಕರು ತಮ್ಮ ನಡೆಗಳನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ಕೂಡ ತಿಳಿದುಬಂದಿದೆ. ಕೇಂದ್ರ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಕೆ. ವಿಜಯ ರಾಘವನ್ ಈಗ ಕರೋನಾ ಮೂರನೇ ಅಲೆ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಆದರೆ ಅವರು ಎರಡನೇ ಅಲೆ ಬಗ್ಗೆ ಎಂದಿಗೂ ಮಾತನಾಡಿರಲಿಲ್ಲ. ಯಾವುದೇ ‌ಮುನ್ಸೂಚನೆ ಇಲ್ಲದ ಕಾರಣ ಎರಡನೇ ಅಲೆ ಎದುರಿಸಲು ಸರ್ಕಾರ ಸಿದ್ಧವಾಗಿರಲಿಲ್ಲ ಎಂಬುದು ಸತ್ಯ. ಆದುದರಿಂದ ಪರಿಸ್ಥಿತಿ ಕೈಮೀರಿದೆ ಎಂದು ಸಚಿವರೊಬ್ಬರು ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಪ್ರಧಾನಿ ಮೋದಿ ತಮ್ಮ ಗಮನಕ್ಕೆ ಬಂದ ಕೂಡಲೇ ಬಂಗಾಳ ಪ್ರವಾಸವನ್ನು ಮೊಟಕುಗೊಳಿಸಿದರು. ಕರೋನಾ ಸೂಪರ್ ಸ್ಪ್ರೆಡ್ಡರ್ ಆದ ಕುಂಭ ಮೇಳವನ್ನು ನಿಲ್ಲಿಸಲು ಸಂಬಂಧಪಟ್ಟವರನ್ನು ಮನವೊಲಿಸಿದರು. ವಿರೋಧ ಪಕ್ಷ ಆಡಳಿತ ಇರುವ ರಾಜ್ಯಗಳು ರಾಜಕೀಯ ಮಾಡುತ್ತಿವೆ.‌ ಆರೋಗ್ಯವು ರಾಜ್ಯ ಸರ್ಕಾರ ನಿಭಾಯಿಸಬೇಕಾದ ವಿಷಯ.‌ ಆದರೂ ರಾಷ್ಟ್ರಮಟ್ಟದ ಸಮನ್ವಯ ಮತ್ತು ಗಣನೀಯ ಸಂಪನ್ಮೂಲಗಳು ಬೇಕಾಗಿರುವುದರಿಂದ ಕೇಂದ್ರ ಸರ್ಕಾರವು ಕೋವಿಡ್ ನಿರ್ವಹಣೆಯಲ್ಲಿ ಯಶಸ್ವಿಯಾಗಿ ತೊಡಗಿಸಿಕೊಂಡಿದೆ ಎಂದು ಇನ್ನೊಬ್ಬರು ಸಮರ್ಥಿಸಿಕೊಂಡಿರುವುದಾಗಿ ತಿಳಿದುಬಂದಿದೆ. ಒಟ್ಟಿನಲ್ಲಿ ಚುನಾವಣೆ ಗೆಲ್ಲದ ಕಾರಣಕ್ಕಾದರೂ ಬಿಜೆಪಿ ಮತ್ತು ಆರ್‌ಎಸ್‌ಎಸ್ ಕರೋನಾ ಬಗ್ಗೆ ಗಮನಹರಿಸಿರುವುದೇ ಸದ್ಯದ ಪುಣ್ಯ.

Previous Post

ಮೊದಲ ದಿನವೇ ನರಕದರ್ಶನ ಮಾಡಿಸಿದ ಅಮಾನುಷ ಲಾಕ್ ಡೌನ್!

Next Post

ಪ್ರಧಾನಿಯವರೇ ಗಂಗೆಯಲ್ಲಿ ರಾಶಿರಾಶಿ ಹೆಣಗಳು ತೇಲುತ್ತಿವೆ, ಈ ಸಂಧರ್ಭದಲ್ಲಿ ನಿಮ್ಮ ಅನುಪಸ್ಥಿತಿ ಕಾಡುತ್ತಿದೆ ಎಲ್ಲಿದ್ದೀರಿ?

Related Posts

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
0

ಮೋದಿ ಸರ್ಕಾರದ ಬದ್ಧತೆ ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಉದ್ಯಮ ವಲಯದ ಸಾಧಕ ಕಂಪನಿಗಳಿಗೆ ಗೋಲ್ಡನ್ ಪೀಕಾಕ್ ಪ್ರಶಸ್ತಿ ಪ್ರದಾನ ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಪರಿಸರ...

Read moreDetails

Tiger: ಮಲೆ ಮಹದೇಶ್ವರ ವನ್ಯಧಾಮದಲ್ಲಿ ತಾಯಿ ಹುಲಿ ಸೇರಿ ಮೂರು ಹುಲಿ ಮರಿಗಳ ಅಸಹಜ ಸಾವು ತನಿಖೆಗೆ ಸಚಿವರ ಆದೇಶ

June 26, 2025

Santosh Lad: ಅನ್ನದಾತನಿಗೆ ಜೋಡಿ ಎತ್ತು ಕೊಡಿಸಿ ಮಾನವೀಯತೆ ಮೆರೆದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 26, 2025

Heartattack:1 ತಿಂಗಳಲ್ಲಿ 14 ಜನ ಸಾವು, 24 ಗಂಟೆಗಳಲ್ಲಿ ಹಾಸನದ ಇಬ್ಬರು ಹೃದಯಾಘಾತಕ್ಕೆ ಬಲಿ.

June 26, 2025

BJP Ex Renukacharya vs Congress MLA Shivaganga: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದ ರೇಣುಕಾಚಾರ್ಯ: ಎಂಎಲ್‌ಎ ಶಿವಗಂಗಾ

June 26, 2025
Next Post
ಪ್ರಧಾನಿಯವರೇ ಗಂಗೆಯಲ್ಲಿ ರಾಶಿರಾಶಿ ಹೆಣಗಳು ತೇಲುತ್ತಿವೆ, ಈ ಸಂಧರ್ಭದಲ್ಲಿ ನಿಮ್ಮ ಅನುಪಸ್ಥಿತಿ ಕಾಡುತ್ತಿದೆ ಎಲ್ಲಿದ್ದೀರಿ?

ಪ್ರಧಾನಿಯವರೇ ಗಂಗೆಯಲ್ಲಿ ರಾಶಿರಾಶಿ ಹೆಣಗಳು ತೇಲುತ್ತಿವೆ, ಈ ಸಂಧರ್ಭದಲ್ಲಿ ನಿಮ್ಮ ಅನುಪಸ್ಥಿತಿ ಕಾಡುತ್ತಿದೆ ಎಲ್ಲಿದ್ದೀರಿ?

Please login to join discussion

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada