• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಾಲರ್‌ ಎದುರು ಕುಸಿದ ರೂಪಾಯಿ ಮೌಲ್ಯ : ಮೋದಿ ಸರ್ಕಾರದ ವಿರುದ್ಧ ಸಿಡಿದ ಖರ್ಗೆ

ಪ್ರತಿಧ್ವನಿ by ಪ್ರತಿಧ್ವನಿ
December 4, 2025
in Top Story, ದೇಶ, ರಾಜಕೀಯ
0
ಡಾಲರ್‌ ಎದುರು ಕುಸಿದ ರೂಪಾಯಿ ಮೌಲ್ಯ : ಮೋದಿ ಸರ್ಕಾರದ ವಿರುದ್ಧ ಸಿಡಿದ ಖರ್ಗೆ
Share on WhatsAppShare on FacebookShare on Telegram

ಬೆಂಗಳೂರು : ಭಾರತೀಯ ರೂಪಾಯಿ(Rupee)ತನ್ನ ಕುಸಿತವನ್ನು ಮುಂದುವರಿಸಿ, ಡಾಲರ್(dollar) ವಿರುದ್ಧ 90.43 ರ ಕನಿಷ್ಠ ಮಟ್ಟವನ್ನು ತಲುಪಿದೆ. ಈ ರೀತಿಯ ಕುಸಿತಕ್ಕೆ ಹಣಕಾಸು ತಜ್ಞರು ಬೇರೆ ಬೇರೆ ಆಯಾಮಗಳಲ್ಲಿ ವಿಶ್ಲೇಷಿಸುತ್ತಿದ್ದಾರೆ. ಭಾರತ-ಯುಎಸ್ ವ್ಯಾಪಾರ ಒಪ್ಪಂದದಲ್ಲಿನ ವಿಳಂಬ ಮತ್ತು ದೇಶೀಯ ಷೇರು ಮಾರುಕಟ್ಟೆಯಿಂದ ವಿದೇಶಿ ಬಂಡವಾಳ ಹೂಡಿಕೆದಾರರಿಂದ (ಎಫ್‌ಪಿಐ) ನಿರಂತರ ಹೊರಹರಿವು, ಹೂಡಿಕೆದಾರರಿಗೆ ಸಂಕಷ್ಟ ತಂದಿದೆ.

ADVERTISEMENT
DK Shivakumar: ವೋಟ್ ಚೋರಿ ಪ್ರತಿಭಟನೆಗೆ ಎಲ್ಲ ಮಂತ್ರಿಗಳು ಜನರನ್ನ ಕರೆದುಕೊಂಡು ಬರ್ಬೇಕು ಎಂದ ಡಿಕೆಶಿ..!

ಬೆಳಗಿನ ವಹಿವಾಟಿನ ಪ್ರಕಾರ, ಭಾರತೀಯ ಕರೆನ್ಸಿ 17 ಪೈಸೆ ಕುಸಿತ ಕಂಡು 99.36 ಕ್ಕೆ ವಹಿವಾಟು ಆರಂಭಿಸಿತು, ಇದು ಹಿಂದಿನ 99.19 ಕ್ಕೆ ಹೋಲಿಸಿದರೆ. ಅಂತಿಮವಾಗಿ ಅದು 90.43 ರಷ್ಟು ಕನಿಷ್ಠ ಮಟ್ಟಕ್ಕೆ ಕುಸಿತ ಕಂಡಿದೆ. ಎಫ್‌ಪಿಐಗಳಿಂದ ಸ್ಥಿರವಾದ ಹೊರಹರಿವು ಕರೆನ್ಸಿಯ ಮೇಲೆ ಒತ್ತಡ ಹೇರುವ ಪ್ರಮುಖ ಅಂಶವಾಗಿದೆ ಎಂದು ವಿಶ್ಲೇಷಕರು ನಂಬಿದ್ದಾರೆ.

ಈ ವರ್ಷ ಇಲ್ಲಿಯವರೆಗೆ, ಎಫ್‌ಪಿಐಗಳು 1.52 ಲಕ್ಷ ಕೋಟಿ ರೂ. ಷೇರುಗಳನ್ನು ಮಾರಾಟ ಮಾಡಿದ್ದಾರೆ. ಡಿಸೆಂಬರ್‌ನ ಮೊದಲ ಮೂರು ದಿನಗಳಲ್ಲಿ ಅವರು 8,369 ಕೋಟಿ ರೂಪಾಯಿ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಏತನ್ಮಧ್ಯೆ, ರೂಪಾಯಿಗೆ ತಕ್ಷಣದ ಬೆಂಬಲ 89.20 ರಷ್ಟಿದ್ದು, ನಂತರ 88.60 ರ ಬಳಿಕ ಮತ್ತೆ ಪುಟಿದೇಳುವ ಸಾಧ್ಯತೆಗಳಿವೆ. ಅಲ್ಲದೆ ಬುಧವಾರ ರೂಪಾಯಿ 90 ರ ಗಡಿ ದಾಟಿದ ರೀತಿಯು ಅದರ ಮೇಲಿನ ಒತ್ತಡ ಕಡಿಮೆಯಾಗಿಲ್ಲ ಎಂಬುದನ್ನು ಸೂಚಿಸುತ್ತದೆ. ವಾಸ್ತವವಾಗಿ, ಈ ಒತ್ತಡವು ಸ್ವಲ್ಪ ದಿನಗಳ ಕಾಲ ಮುಂದುವರೆಯುವ ಸಾಧ್ಯತೆಯಿದೆ. ಈ ಜೋಡಿಯು ಶೀಘ್ರದಲ್ಲೇ 90.70–91.00 ವಲಯದ ಕಡೆಗೆ ಚಲಿಸುವ ಸಾಧ್ಯತೆಯಿದೆ ಎಂದು ಆರ್ಥಿಕ ತಜ್ಞರ ಮಾತಾಗಿದೆ.

Siddaramaiah: ಕೇಸರಿ ಕೋಟೆ ಮಂಗಳೂರಿನಲ್ಲಿ ಸಿದ್ದರಾಮಯ್ಯ  ಹವಾ..!! #bjp

ಆದರೆ ಇದೇ ವಿಚಾರಕ್ಕೆ ಕೇಂದ್ರ ಸರ್ಕಾರದ ಮೇಲೆ ವಿಪಕ್ಷಗಳು ಮುಗಿಬೀಳುತ್ತಿವೆ. ಕರೆನ್ಸಿಯ ಕುಸಿತವು ಸರ್ಕಾರದ ವಿಫಲ ಆರ್ಥಿಕ ನೀತಿಗಳು ಮತ್ತು ಹೆಚ್ಚುತ್ತಿರುವ ವಿದೇಶಿ ಅಪಾಯಗಳನ್ನು ಪ್ರತಿಬಿಂಬಿಸುತ್ತದೆ ಎಂದು ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಮನೀಶ್ ತಿವಾರಿ ರೂಪಾಯಿ ಕುಸಿತದ ಬಗ್ಗೆ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿ ದಾಳಿ ಮಾಡಿದ್ದಾರೆ. ಹಿಂದಿನ ಕರೆನ್ಸಿ ದೌರ್ಬಲ್ಯ ಉಲ್ಲೇಖಿಸಿ ಯುಪಿಎ ಸರ್ಕಾರದ ಬಗ್ಗೆ ಬಿಜೆಪಿಯ ನಾಯಕರು ಆಡಿದ ಮಾತುಗಳಿಗೆ ಕೌಂಟರ್‌ ನೀಡಿದ್ದಾರೆ.

Nirmala Sitharaman : ನಿರ್ಮಲಾ ಸೀತಾರಾಮನ್ ಮಾತಿಗೆ ಶಾಕ್ ಆದ ಮೋದಿ, ರಾಹುಲ್ ಗಾಂಧಿ.. #pratidhvani

ಅಲ್ಲದೆ ವಿದೇಶಿ ಹೂಡಿಕೆದಾರರ ಮಾರಾಟ, ಬ್ರೆಂಟ್ ಕಚ್ಚಾ ತೈಲ ಮತ್ತು ಅಮೆರಿಕದ ಮಾರುಕಟ್ಟೆಯು ಭಾರತೀಯ ರಫ್ತುಗಳ ಮೇಲೆ ಹೆಚ್ಚು ಸುಂಕಗಳನ್ನು ವಿಧಿಸಿದ ನಂತರ ಪ್ರಸ್ತಾವಿತ ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಸುತ್ತಲಿನ ಅಸ್ಪಷ್ಟತೆಯೇ ತಕ್ಷಣದ ಪ್ರಚೋದನೆಯಾಗಿದೆ. ರೂಪಾಯಿ ಕುಸಿತವು “ನಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿಲ್ಲ ಎಂದು ತೋರಿಸುತ್ತದೆ. ಮೋದಿ ಸರ್ಕಾರದಲ್ಲಿ ಜಾಗತಿಕ ಮಾರುಕಟ್ಟೆಗಳಲ್ಲಿ ಭಾರತೀಯ ಕರೆನ್ಸಿಗೆ “ಯಾವುದೇ ಮೌಲ್ಯವಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

DK Shivakumar: ಮಂಗಳೂರಲ್ಲಿ ಸಿದ್ದರಾಮಯ್ಯ, ಕೆ ಸಿ ವೇಣುಗೋಪಾಲ್ ಮಾತುಕತೆ ಡಿಕೆಶಿ ರಿಯಾಕ್ಷನ್‌..! #pratidhvani

ಸರ್ಕಾರದ ನೀತಿಗಳು ರೂಪಾಯಿಯನ್ನು ದುರ್ಬಲಗೊಳಿಸಿವೆ. ಭಾರತದ ರೂಪಾಯಿಗಳು ಜಗತ್ತಿನಲ್ಲಿ ಯಾವುದೇ ಮೌಲ್ಯ ಹೊಂದಿಲ್ಲ ಎಂದು ದೂರಿದರು. ಇವರ ನೀತಿಗಳಿಂದಾಗಿ ರೂಪಾಯಿ ಮೌಲ್ಯ ಕುಸಿತ ಕಂಡಿದೆ. ಅವರ ನೀತಿಗಳು ಉತ್ತಮವಾಗಿದ್ದರೆ, ರೂಪಾಯಿ ಮೌಲ್ಯ ಹೆಚ್ಚಾಗಬೇಕಿತ್ತು. ಇದು ನಮ್ಮ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ ಎಂಬುದನ್ನು ತೋರಿಸಿದೆ. ನಾವು ಏನು ಬೇಕಾದರೂ ಹೇಳಬಹುದು. ನಮ್ಮನ್ನು ನಾವು ಹೊಗಳಿಕೊಳ್ಳಬಹುದು, ಆದರೆ ಇದು ನಮ್ಮ ರೂಪಾಯಿ ಜಗತ್ತಿನಲ್ಲಿ ಯಾವುದೇ ಮೌಲ್ಯವಿಲ್ಲ ಎಂದು ತೋರಿಸುತ್ತಿದೆ ಎಂದು ಖರ್ಗೆ ಹರಿಹಾಯ್ದರು.

Tags: dollarIndiaMallikarjuna KhargeNarendra Modirupee
Previous Post

ಡಾ.ಕೃತಿಕಾ ರೆಡ್ಡಿ ಕೊಲೆ ಕೇಸ್: SPPಯಾಗಿ ಪ್ರಸನ್ನ ಕುಮಾರ್ ನೇಮಕ

Next Post

ಕರ್ನಾಟಕದಲ್ಲಿ ಶೇ.63ರಷ್ಟು ಭ್ರಷ್ಟಾಚಾರ: ಕಾಂಗ್ರೆಸ್‌ ವಿರುದ್ಧ ಮುಗಿಬಿದ್ದ ಬಿಜೆಪಿ

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
Next Post
ಕರ್ನಾಟಕದಲ್ಲಿ ಶೇ.63ರಷ್ಟು ಭ್ರಷ್ಟಾಚಾರ: ಕಾಂಗ್ರೆಸ್‌ ವಿರುದ್ಧ ಮುಗಿಬಿದ್ದ ಬಿಜೆಪಿ

ಕರ್ನಾಟಕದಲ್ಲಿ ಶೇ.63ರಷ್ಟು ಭ್ರಷ್ಟಾಚಾರ: ಕಾಂಗ್ರೆಸ್‌ ವಿರುದ್ಧ ಮುಗಿಬಿದ್ದ ಬಿಜೆಪಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada