• Home
  • About Us
  • ಕರ್ನಾಟಕ
Thursday, December 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಎಸ್.ಎಂ. ಕೃಷ್ಣ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ

ಪ್ರತಿಧ್ವನಿ by ಪ್ರತಿಧ್ವನಿ
December 10, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:ಅಂತಾರಾಷ್ಟ್ರೀಯ ಖ್ಯಾತೀಯ ರಾಜಕೀಯ ಮುತ್ಸದ್ದಿ, ಬೆಂಗಳೂರಿಗೆ ಸಿಲಿಕಾನ್ ಸಿಟಿ ಖ್ಯಾತಿ ತಂದ ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರೂ ಆದ ಎಸ್.ಎಂ. ಕೃಷ್ಣ ಅವರ ನಿಧನಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕಂಬನಿ ಮಿಡಿದಿದ್ದಾರೆ.

ADVERTISEMENT

ನನ್ನ ರಾಜಕೀಯ ಬದುಕಿನ ಮಾರ್ಗದರ್ಶಕ ಎಸ್ ಎಂ ಕೃಷ್ಣ ಅವರ ಅಗಲಿಕೆ ಅಪಾರ ನೋವು ತಂದಿದೆ. ಕರ್ನಾಟಕ ರಾಜಕೀಯ ರಂಗದ ಧೃವ ನಕ್ಷತ್ರ ಕಳಚಿ ಬಿದ್ದಿದೆ ಎಂದು ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ.

“ಎಸ್ ಎಂ ಕೃಷ್ಣ ಅವರು ಸಜ್ಜನ, ಸುಶಿಕ್ಷಿತ ರಾಜಕಾರಣಿ, ಅಜಾತಶತ್ರು. ದೂರದೃಷ್ಟಿಯ ಕನಸುಗಾರ. ರಾಜಕೀಯದ ಒಂದೊಂದೇ ಮೆಟ್ಟಿಲುಗಳನ್ನು ಸಾವಧಾನವಾಗಿ ಏರಿದವರು. ಕೆಂಪೇಗೌಡರು ನಿರ್ಮಿಸಿದ ಬೆಂಗಳೂರನ್ನು ಇಡೀ ಜಗತ್ತೇ ತಿರುಗಿನೋಡುವಂತೆ ಮಾರ್ಪಡಿಸಿದವರು. ಬೆಂಗಳೂರನ್ನು ಸಿಲಿಕಾನ್ ಸಿಟಿ, ಐಟಿ- ಬಿಟಿ ನಗರಿಯನ್ನಾಗಿಸಿ ದೇಶದ ಆರ್ಥಿಕತೆಗೆ ಅತಿದೊಡ್ದ ಹಾಗೂ ದೂರದೃಷ್ಟಿಯ ಕೊಡುಗೆ ನೀಡಿದವರು ಎಂದು ಡಿಸಿಎಂ ಅವರು ಸ್ಮರಿಸಿದ್ದಾರೆ.

ನಾಡಿನ ಹಲವು ಜನಪರ ಯೋಜನೆಗಳಿಗೆ ಅಡಿಗಲ್ಲು ಹಾಕಿದ ಪ್ರವರ್ತಕ. ಮೆಟ್ರೋ ರೈಲು, ದೇವನಹಳ್ಳಿ ವಿಮಾನ ನಿಲ್ದಾಣ ನಿರ್ಮಾಣದ ಹಿಂದಿನ ಶಕ್ತಿ. ಕೈಗಾರಿಕಾ ಹಾಗೂ ಕೃಷಿ ವಲಯಕ್ಕೆ ಸಮಾನ ಅವಕಾಶಗಳನ್ನು ನೀಡಿ ಅಭಿವೃದ್ಧಿಯಲ್ಲಿಯೂ ಸಮತೋಲನ ಕಾಯ್ದುಕೊಂಡ ಸಮಚಿತ್ತದ ಆಡಳಿತಗಾರ ಎಸ್ ಎಂ ಕೃಷ್ಣ ಅವರು.

ರಾಜ್ಯದ ವಿಚಾರ ಬಂದಾಗ ಬಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಎಲ್ಲಾ ಪಕ್ಷಗಳನ್ನು ಒಟ್ಟಾಗಿ ತೆಗೆದುಕೊಂಡು ಹೋಗುತ್ತಿದ್ದರು. ಸದಾ ಅಭಿವೃದ್ಧಿ, ರಾಷ್ಟ್ರ ಹಾಗೂ ರಾಜ್ಯದ ಪರವಾಗಿ ಯೋಚನೆ ಮಾಡುತ್ತಿದ್ದ ಕಾಯಕ ಜೀವಿ ಎಂದು ಶಿವಕುಮಾರ್ ಅವರು ಕೊಂಡಾಡಿದ್ದಾರೆ.

ದ್ವಾಪರಯುಗದ ಕೃಷ್ಣನ ಬಗ್ಗೆ ಕೇಳಿದ್ದೇವೆ, ಓದಿದ್ದೇವೆ. ರಾಜಕೀಯ ಮುತ್ಸದ್ದಿಯಾಗಿ ‘ಆ’ ಕೃಷ್ಣನಂತೆ ಈ ಎಸ್.ಎಂ. ಕೃಷ್ಣ ಅವರು ನಮ್ಮ ನಡುವೆ ಬದುಕಿದವರು.ಅವರ ರಾಜಕೀಯ ಉಚ್ಛ್ರಾಯ ಕಾಲದಲ್ಲಿ ಜೊತೆಯಾಗಿ ಇದ್ದವನು ನಾನು. ನನಗೆ ರಾಜಕೀಯ ಮಾರ್ಗದರ್ಶಕರಾಗಿ ಎಡವಿದಾಗ ಕೈ ಹಿಡಿಯುತ್ತಾ, ತಪ್ಪು ಮಾಡಿದಾಗ ತಿದ್ದುತ್ತಾ, ಒಳ್ಳೆಯ ಕೆಲಸ ಮಾಡಿದಾಗ ಬೆನ್ನು ತಟ್ಟುತ್ತಾ ಪ್ರೋತ್ಸಾಹ ನೀಡುತ್ತಿದ್ದ ರಾಜಕೀಯ ದಿಗ್ದರ್ಶಕ. ಅವರ ಆಲೋಚನೆಗಳು, ಚಿಂತನೆಗಳು ಹೊಸ ಜನಾಂಗಕ್ಕೆ, ಹಳೆ ತಲೆಮಾರಿನನ್ನು ಬೆಸೆಯುವ ಕೊಂಡಿಯಾಗಿದ್ದವು ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಾವೇರಿ ನೀರು ವಿಚಾರದಲ್ಲಿ ಅಧಿಕಾರ ಹೋದರೂ ಚಿಂತೆಯಿಲ್ಲ ಎಂದು ನಾಡಿನ ಹಿತಕ್ಕಾಗಿ ಹೋರಾಟ ಮಾಡಿದವರು. ಕಾವೇರಿಯ ವರಪುತ್ರನನ್ನು ಈ ನಾಡು ಕಳೆದುಕೊಂಡಿದೆ.ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಬಂಧುಗಳು, ಅಭಿಮಾನಿಗಳು, ಸ್ನೇಹಿತರು, ಹಿತೈಷಿಗಳಿಗೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Tags: *S.M. Krishna's deathBangaloreCongress PartyDCM D.K.Deepest condolences to Shivakumar.Former Chief MinisterSM Krishna
Previous Post

ನಾಳೆ ಬೆಳಿಗ್ಗೆ ಬೆಂಗಳೂರಿನಿಂದ ಮದ್ದೂರಿಗೆ ಪಾರ್ಥೀವ ಶರೀರ ರವಾನೆ ! ಹುಟ್ಟೂರಿನಲ್ಲಿ ಅಂತಿಮ ವಿಧಿ ವಿಧಾನ !

Next Post

ಮಾಜಿ ಸಿಎಂ ಎಸ್.ಎಂ.ಕೃಷ್ಣಗೆ ವಿಧಾಸಭೆ ಅಧಿವೇಶನದಲ್ಲಿ ಸಂತಾಪ ! 

Related Posts

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!
Top Story

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!

by ಪ್ರತಿಧ್ವನಿ
December 4, 2025
0

ಮೇಷ ರಾಶಿಯ ಈ ದಿನದ ಭವಿಷ್ಯ ಮೇಷ ರಾಶಿಯವರು ಇಂದು ದೂರದ ಪ್ರಯಾಣ ಹೋಗುವ ಸಾಧ್ಯತೆ ಹೆಚ್ಚಿದೆ. ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ ಹೆಚ್ಚಾಗುತ್ತದೆ. ಇಂದು ನಿಮ್ಮ...

Read moreDetails

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
Next Post
ಮಾಜಿ ಸಿಎಂ ಎಸ್.ಎಂ.ಕೃಷ್ಣಗೆ ವಿಧಾಸಭೆ ಅಧಿವೇಶನದಲ್ಲಿ ಸಂತಾಪ ! 

ಮಾಜಿ ಸಿಎಂ ಎಸ್.ಎಂ.ಕೃಷ್ಣಗೆ ವಿಧಾಸಭೆ ಅಧಿವೇಶನದಲ್ಲಿ ಸಂತಾಪ ! 

Recent News

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!
Top Story

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!

by ಪ್ರತಿಧ್ವನಿ
December 4, 2025
Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!

December 4, 2025

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada