• Home
  • About Us
  • ಕರ್ನಾಟಕ
Tuesday, July 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

S/o Muttanna: ಸಖತಾಗಿದೆ “s/o ಮುತ್ತಣ್ಣ” ಚಿತ್ರದ “ಮಿಡ್ ನೈಟ್ ರಸ್ತೆಯಲ್ಲಿ” ಸಾಂಗ್.

ಪ್ರತಿಧ್ವನಿ by ಪ್ರತಿಧ್ವನಿ
July 21, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ಪ್ರಣಂ ದೇವರಾಜ್ (Pranam Devaraj) – ಖುಷಿ ರವಿ (Khushi Ravi) ಅಭಿನಯದ ಈ ಚಿತ್ರ ಆಗಸ್ಟ್ 22 ರಂದು ತೆರೆಗೆ .

ADVERTISEMENT

ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು (Srikanth Hunasur) ನಿರ್ದೇಶನದ ಹಾಗೂ ಡೈನಾಮಿಕ್ ಸ್ಟಾರ್ ದೇವರಾಜ್ (Dynamic Star Devaraj) ಅವರ ದ್ವಿತೀಯ ಪುತ್ರ ಪ್ರಣಂ ದೇವರಾಜ್ ನಾಯಕನಾಗಿ ಹಾಗೂ “ದಿಯಾ” ಖ್ಯಾತಿಯ ಖುಷಿ ರವಿ ನಾಯಕಿಯಾಗಿ ನಟಿಸಿರುವ “S/O ಮುತ್ತಣ್ಣ” ಚಿತ್ರಕ್ಕಾಗಿ ಯೋಗರಾಜ್ ಭಟ್ (Yogaraj Bhat) ಅವರು ಬರೆದಿರುವ, ಸಂಜಿತ್ ಹೆಗ್ಡೆ (Sanjeeth Hegde) ಹಾಡಿರುವ ಹಾಗೂ ಸಚಿನ್ ಬಸ್ರೂರ್ (Sachin Basrur) ಸಂಗೀತ ನೀಡಿರುವ “ಮಿಡ್ ನೈಟ್ ರಸ್ತೆಯಲ್ಲಿ” ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಬಿಡುಗಡೆಯಾದ ತಕ್ಷಣದಿಂದಲೇ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

Yatnal: ಜಯಮೃತ್ಯುಂಜಯ ಸ್ವಾಮೀಜಿ ಹತ್ಯೆ ಸಂಚಿನ ಬಗ್ಗೆ ಗೊತ್ತಿಲ್ಲ..!  #pratidhvani

ನಮ್ಮ ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಇಂದು ಎರಡನೇ ಹಾಡು ಬಿಡುಗಡೆಯಾಗಿದೆ‌. ಮೊದಲು ಹಾಡು “ಕಮ್ಮಂಗಿ ನನ್ ಮಗನೇ” ಸಹ ಮೆಚ್ಚುಗೆ ಪಡೆದುಕೊಂಡಿದೆ. ಇಂದು ಬಿಡುಗಡೆಯಾಗಿರುವ “ಮಿಡ್‌ನೈಟ್ ರಸ್ತೆಯಲ್ಲಿ” ಹಾಡನ್ನು ಸಂಜಿತ್ ಹೆಗ್ಡೆ ಹಾಡಿದ್ದಾರೆ. ಯೋಗರಾಜ್ ಭಟ್ ಅವರು ಬರೆದಿದ್ದಾರೆ. ಉಳಿದ ಎರಡು ಹಾಡುಗಳು ಸಹ ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಸಚಿನ್ ಬಸ್ರೂರ್ ಮಾಹಿತಿ ನೀಡಿದರು.

Vijayanagara : ಹೋಟೆಲ್ ಗೆ ಬಂದು ಊಟ ಮಾಡಿದ ಕೋತಿ ಜನರು ಫುಲ್‌ ಖುಷ್‌..! #hagaribommanahalli #videoviral

ಪುರಾತನ ಫಿಲಂಸ್ ಸಂಸ್ಥೆ ಎಸ್ ಆರ್ ಕೆ ಫಿಲಂಸ್ ಸಹಯೋಗದೊಂದಿಗೆ ನಿರ್ಮಾಣ ಮಾಡಿರುವ ಈ ಚಿತ್ರ ಅಪ್ಪ – ಮಗನ ಬಾಂಧವ್ಯದ ಕುರಿತಾದ ಕಥಾಹಂದರ ಹೊಂದಿದೆ. ರಂಗಾಯಣ ರಘು (Rangayana Raghu) ಹಾಗೂ ಪ್ರಣಂ ದೇವರಾಜ್ ಅಪ್ಪ – ಮಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಖುಷಿರವಿ ಈ ಚಿತ್ರದ ನಾಯಕಿ. ಸಚಿನ್ ಬಸ್ರೂರ್ ಅವರ ಸಂಗೀತ ಸಂಯೋಜನೆಯ ನಾಲ್ಕು ಹಾಡುಗಳು ತುಂಬಾ ಚೆನ್ನಾಗಿದೆ. ಈಗ ಬಿಡುಗಡೆಯಾಗಿರುವ ಎರಡು ಹಾಡುಗಳನ್ನು ಯೋಗರಾಜ್ ಭಟ್ ಅವರೆ ಬರೆದಿದ್ದಾರೆ. ಅಂದುಕೊಂಡ ಹಾಗೆ ಚಿತ್ರವನ್ನು ಪೂರ್ಣಗೊಳಿಸಲು ಚಿತ್ರತಂಡದ ಸಹಕಾರವೇ ಕಾರಣ. ಇನ್ನೂ ಈ ಚಿತ್ರದ ಹೆಚ್ಚಿನ ಭಾಗದ ಚಿತ್ರೀಕರಣ ವಾರಣಾಸಿಯಲ್ಲಿ ನಡೆದಿದೆ. ಈ ಚಿತ್ರದ ಕಥೆ ಕೇಳಿ ಮೆಚ್ಚಿಕೊಂಡಿದ್ದ ಡೈನಾಮಿಕ್ ಸ್ಟಾರ್ ದೇವರಾಜ್, ಇತ್ತೀಚಿಗೆ ಸಿನಿಮಾ ನೋಡಿ ಪ್ರಶಂಸೆ ನೀಡಿದ್ದು ಬಹಳ ಖುಷಿಯಾಗಿದೆ ಎಂದು ನಿರ್ದೇಶಕ ಶ್ರೀಕಾಂತ್ ಹುಣಸೂರು ತಿಳಿಸಿದರು.

ನಿರ್ದೇಶಕರು ಕಥೆ ಹೇಳಿದ ರೀತಿಯೇ ಬಹಳ ಚೆನ್ನಾಗಿತ್ತು ಎಂದು ಮಾತನಾಡಿದ ನಾಯಕ ಪ್ರಣಂ ದೇವರಾಜ್, ಇದೊಂದು ತಂದೆ – ಮಗನ ಬಾಂಧವ್ಯದ ಚಿತ್ರ. ಜೊತೆಗೆ ಪ್ರೇಮ ಕಥಾನಕವೂ ಹೌದು. ಈ ಚಿತ್ರದ ವಿಶೇಷವೆಂದರೆ ಇದರಲ್ಲಿ ಸಾಹಸ ಸನ್ನಿವೇಶಗಳಿಲ್ಲ. ನಿರ್ದೇಶಕರೂ ಮಾಡಿಕೊಂಡಿರುವ ಕಥೆ, ಚಿತ್ರಕಥೆ ಬಹಳ ಸೊಗಸಾಗಿದೆ‌. ರಂಗಾಯಣ ರಘು ಅವರಿಂದ ಸಾಕಷ್ಟು ಕಲಿತಿದ್ದೇನೆ. ಸಚಿನ್ ಬಸ್ರೂರ್ ಸಂಗೀತ ಸಂಯೋಜನೆಯಲ್ಲಿ ಸಂಜಿತ್ ಹೆಗ್ಡೆ ಹಾಡಿರುವ ಈ “ಮಿಡ್ ನೈಟ್ ರಸ್ತೆಯಲ್ಲಿ” ಸಾಂಗ್ ಅಂತೂ ಎಲ್ಲರ ಮನಸ್ಸಿಗೂ ಹತ್ತಿರವಾಗಲಿದೆ. ಧನಂಜಯ್ ಮಾಸ್ಟರ್ ನೃತ್ಯ ನಿರ್ದೇಶನ ಕೂಡ ಹಾಡಿಗೆ ಪೂರಕವಾಗಿದೆ. ಏಳುವರೆ ವರ್ಷಗಳ ನಂತರ ನನ್ನ ಸಿನಿಮಾ ಆಗಸ್ಟ್ 22 ರಂದು ಬಿಡುಗಡೆಯಾಗುತ್ತಿದೆ. ಅವಕಾಶ ನೀಡಿದ ಪುರಾತನ ಫಿಲಂಸ್ ಸಂಸ್ಥೆಗೆ ಹಾಗೂ ನಿರ್ದೇಶಕರಿಗೆ ಧನ್ಯವಾದ. ಎಲ್ಲರು ಚಿತ್ರ ನೋಡಿ. ಪ್ರೋತ್ಸಾಹಿಸಿ ಎಂದರು.

ನಾನು ಈ ಚಿತ್ರದಲ್ಲಿ ವೈದ್ಯೆ. ಸಾಕ್ಷಿ ನನ್ನ ಪಾತ್ರದ ಹೆಸರು. ಒಂದೊಳ್ಳೆ ಚಿತ್ರದಲ್ಲಿ ನಟಿಸಿದ ಖುಷಿಯಿದೆ ಎಂದು ಮಾತನಾಡಿದ ನಾಯಕಿ ಖುಷಿ ರವಿ, ಇದು ನಾನು ನಾಯಕಿಯಾಗಿ ನಟಿಸಿರುವ ಏಳನೇ ಚಿತ್ರ. ಬೇರೆ ಭಾಷೆಗಳಲ್ಲಿ ನನಗೆ ಅವಕಾಶ ಸಿಗುತ್ತಿದೆ. ಆದರೆ ಕನ್ನಡದಲ್ಲಿ ಹೆಚ್ಚು ಅವಕಾಶಗಳು ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದರು.

ಹಾಡಿನ ನೃತ್ಯ ನಿರ್ದೇಶನದ ಬಗ್ಗೆ ಧನು ಮಾಸ್ಟರ್, ಛಾಯಾಗ್ರಹಣದ ಕುರಿತು ಛಾಯಾಗ್ರಾಹಕ ಸ್ಕೇಟಿಂಗ್ ಕೃಷ್ಣ ಮಾಹಿತಿ ನೀಡಿದರು. ಸಂಕಲನಕಾರ ಹರೀಶ್ ಕೊಮ್ಮೆ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಸಂಜಿತ್ ಹೆಗ್ಡೆ “ಮಿಡ್ ನೈಟ್ ರಸ್ತೆಯಲ್ಲಿ” ಹಾಡನ್ನು ವೇದಿಕೆಯ ಮೇಲೂ ಸುಮಧುರವಾಗಿ ಹಾಡಿದರು.

Tags: Dynamic Devarajkannada cinemaKhushi RaviPranam DevarajS/O MuttannaSachin BasrursandalwoodSanjeeth HegdeSrikanth HunasurYogaraj Bhat
Previous Post

BSY: ಎಸ್.ಐ.ಟಿ ತನಿಖೆಗೆ ನಮ್ಮ ಅಭ್ಯಂತರವಿಲ್ಲ – ಧರ್ಮಸ್ಥಳದಲ್ಲಿ ಯಾವುದೇ ತಪ್ಪು ನಡೆದಿಲಲ್ಲ..!!

Next Post

DK Shivakumar: ಬಿಜೆಪಿಯವರು ಬಾಳೆಹಣ್ಣು ತಿಂದು ನಮ್ಮ ಮೂತಿಗೆ ಒರೆಸಲು ಪ್ರಯತ್ನಿಸುತ್ತಿದ್ದಾರೆ..!!

Related Posts

ಇ.ಡಿ. ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಇ.ಡಿ. ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 21, 2025
0

"ಇ.ಡಿ. ಸಂಸ್ಥೆಯನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ನನ್ನ ಪ್ರಕರಣವೇ ಸಾಕ್ಷಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕನಕಪುರದ ಕೋಡಿಹಳ್ಳಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು...

Read moreDetails

DCM DK Shivakumar: ಕನಕಪುರದ 250ಕ್ಕೂ ಹೆಚ್ಚು ಹಳ್ಳಿಗಳಿಗೂ ಕಾವೇರಿ ಕುಡಿಯುವ ನೀರು ಪೂರೈಕೆ..!!

July 21, 2025

DK Suresh: ಮುಂದಿನ ಒಂದು ವರ್ಷದಲ್ಲಿ ಕ್ಷೇತ್ರದಾದ್ಯಂತ 10 ಸಾವಿರ ನಿವೇಶನಗಳ ಹಂಚಿಕೆ..!!

July 21, 2025

CM Siddaramaiah: ಪಾವಗಡ ಬಹುಗ್ರಾಮ ನೀರು ಸರಬರಾಜು ಯೋಜನೆ ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ.

July 21, 2025

Priyanka Kharge: ಕಿಂಚಿತ್ ನಾಚಿಕೆ ಉಳಿದುಕೊಂಡಿದ್ದರೆ ಅಶೋಕ್ ಹಾಗೂ ವಿಜಯೇಂದ್ರ ರಾಜೀನಾಮೆ ನೀಡಲಿ..!!‌

July 21, 2025
Next Post

DK Shivakumar: ಬಿಜೆಪಿಯವರು ಬಾಳೆಹಣ್ಣು ತಿಂದು ನಮ್ಮ ಮೂತಿಗೆ ಒರೆಸಲು ಪ್ರಯತ್ನಿಸುತ್ತಿದ್ದಾರೆ..!!

Recent News

ಇ.ಡಿ. ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಇ.ಡಿ. ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 21, 2025
Top Story

DCM DK Shivakumar: ಕನಕಪುರದ 250ಕ್ಕೂ ಹೆಚ್ಚು ಹಳ್ಳಿಗಳಿಗೂ ಕಾವೇರಿ ಕುಡಿಯುವ ನೀರು ಪೂರೈಕೆ..!!

by ಪ್ರತಿಧ್ವನಿ
July 21, 2025
Top Story

DK Suresh: ಮುಂದಿನ ಒಂದು ವರ್ಷದಲ್ಲಿ ಕ್ಷೇತ್ರದಾದ್ಯಂತ 10 ಸಾವಿರ ನಿವೇಶನಗಳ ಹಂಚಿಕೆ..!!

by ಪ್ರತಿಧ್ವನಿ
July 21, 2025
Top Story

CM Siddaramaiah: ಪಾವಗಡ ಬಹುಗ್ರಾಮ ನೀರು ಸರಬರಾಜು ಯೋಜನೆ ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ.

by ಪ್ರತಿಧ್ವನಿ
July 21, 2025
Top Story

Priyanka Kharge: ಕಿಂಚಿತ್ ನಾಚಿಕೆ ಉಳಿದುಕೊಂಡಿದ್ದರೆ ಅಶೋಕ್ ಹಾಗೂ ವಿಜಯೇಂದ್ರ ರಾಜೀನಾಮೆ ನೀಡಲಿ..!!‌

by ಪ್ರತಿಧ್ವನಿ
July 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಕುಂದುತ್ತಿದೆ

ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಕುಂದುತ್ತಿದೆ

July 21, 2025
ಇ.ಡಿ. ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್

ಇ.ಡಿ. ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್

July 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada