ಬೆಂಗಳೂರು : ಅಖಿಲ ಭಾರತ ವೀರಶೈವ ಮಹಾಸಭೆಯ ಮಹಾಪ್ರಧಾನ ಕಾರ್ಯದರ್ಶಿಯಾಗಿ ಎಸ್.ಎಸ್. ಗಣೇಶ್ ಅವರನ್ನು ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಸಚಿವ ಈಶ್ವರ್ ಖಂಡ್ರೆ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಸಮುದಾಯದ ನಾಯಕರು ಹಾಗೂ ಹಿರಿಯ ರಾಜಕಾರಣಿಯಾಗಿದ್ದ ದಿ. ಶಾಮನೂರು ಶಿವಶಂಕರಪ್ಪ ಅವರ ಪುತ್ರರಾಗಿರುವ ಗಣೇಶ್ ಅವರಿಗೆ ಖಂಡ್ರೆ ಅಧಿಕೃತ ನೇಮಕಾತಿ ನೀಡಿ ಶುಭ ಹಾರೈಸಿದ್ದಾರೆ.
ಇನ್ನೂ ವಿಶೇಷವೆಂದರೆ ಶಾಮನೂರು ಶಿವಶಂಕರಪ್ಪ ಜನ್ಮದಿನದಂದೇ ಅವರ ಪುತ್ರನಿಗೆ ಈ ಮಹತ್ವದ ಹುದ್ದೆಯನ್ನು ನೀಡಿರುವುದು ಶಾಮನೂರು ಅಭಿಮಾನಿಗಳಲ್ಲಿ ಹಾಗೂ ಸಮುದಾಯದಲ್ಲಿ ಹೊಸ ನಿರೀಕ್ಷೆಗಳಿಗೆ ಕಾರಣವಾಗಿದೆ. ನೂತನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಗಣೇಶ್ ಅವರಿಗೆ ಎಲ್ಲರೂ ಶುಭಾಶಯಗಳನ್ನು ತಿಳಿಸಿದ್ದಾರೆ.






