• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಾಮರಾಜಪೇಟೆಯಲ್ಲಿ ಕಣಕ್ಕಿಳಿದು ಅಚ್ಚರಿ ಮೂಡಿಸಿದ್ದ ಎಸ್‌. ಎಂ. ಕೃಷ್ಣ

ಪ್ರತಿಧ್ವನಿ by ಪ್ರತಿಧ್ವನಿ
December 10, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು,: ಕೇಂದ್ರದ ಮಾಜಿ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕಷ್ಣ (92) ಹೃದಯಾಘಾತದಿಂದ ನಿಧನ ಹೊಂದಿದರು. ಎಸ್. ಎಂ. ಕೃಷ್ಣ ರಾಜ್ಯ ಮತ್ತು ರಾಷ್ಟ್ರ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಮಂಡ್ಯದಿಂದ ದೆಹಲಿ ತನಕ ರಾಜಕೀಯ ಮಾಡಿದ ಎಸ್.

ADVERTISEMENT

ಎಂ. ಕೃಷ್ಣ ಅವರು ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರದಲ್ಲಿ ಚುನಾವಣಾ ಕಣಕ್ಕಿಳಿದು ಗೆಲುವು ಸಾಧಿಸಿದ್ದರು.ಈ ತೀರ್ಮಾನ ರಾಜ್ಯ ರಾಜಕೀಯದಲ್ಲಿ ಅಚ್ಚರಿಗೆ ಕಾರಣವಾಗಿತ್ತು.

ಸದಾಶಿವ ನಗರದ ನಿವಾಸದಲ್ಲಿ ಮಂಗಳವಾರ ಮುಂಜಾನೆ ಎಸ್. ಎಂ. ಕೃಷ್ಣ ವಿಧಿವಶರಾದರು. ಸದ್ಯ ನಿವಾಸದಲ್ಲಿಯೇ ಪಾರ್ಥೀವ ಶರೀರವಿದೆ. ಅಂತ್ಯಕ್ರಿಯೆ ಯಾವಾಗ, ಎಲ್ಲಿ? ಎಂಬ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಆಗಮಿಸಿದ ಬಳಿಕ ಅಂತಿಮ ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ.

ಎಸ್. ಎಂ. ಕೃಷ್ಣ ಮೂಲತಃ ಮಂಡ್ಯದವರು. ಮಂಡ್ಯದ ಮದ್ದೂರಿನಿಂದ ಅವರು ಚುನಾವಣೆಗೆ ಸ್ಪರ್ಧಿಸುತ್ತಿದ್ದರು. 1999ರ ವಿಧಾನಸಭೆ ಚುನಾವಣೆಯಲ್ಲಿ ಅವ ಅವರ ನೇತೃತ್ವದಲ್ಲಿಯೇ ಕಾಂಗ್ರೆಸ್ ಚುನಾವಣೆ ಎದುರಿಸಿತು. ಪಕ್ಷ 132 ಸೀಟುಗಳಲ್ಲಿ ಜಯಗಳಿಸಿತ್ತು. ಎಸ್. ಎಂ. ಕೃಷ್ಣ ಅವರನ್ನೇ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿತ್ತು.

ಎಸ್. ಎಂ. ಕೃಷ್ಣ ರಾಜ್ಯ ಮತ್ತು ರಾಷ್ಟ್ರ ರಾಜಕೀಯ ಕಂಡವರು. 2004ರಲ್ಲಿ ಅವರು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಕಣಕ್ಕಿಳಿಯುವ ತೀರ್ಮಾನ ಕೈಗೊಂಡಿದ್ದು, ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸಹ ಇದಕ್ಕೆ ಸಹಮತ ಸೂಚಿಸಿದ್ದು, ಇಂದಿಗೂ ಸಹ ಅಚ್ಚರಿಗೆ ಕಾರಣವಾಗಿದೆ.

1999ರ ಚುನಾವಣೆಯಲ್ಲಿ ಎಸ್. ಎಂ. ಕೃಷ್ಣ ಮದ್ದೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಅವರು 56,907 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಎದುರಾಳಿಯಾಗಿದ್ದ ಜೆಡಿಎಸ್‌ನ ಎಂ. ಮಹೇಶ್ ಚಂದ್ 27,448, ಕರ್ನಾಟಕ ರಾಜ್ಯ ರೈತ ಸಂಘದ ವಿ. ಅಶೋಕ 11,775 ಮತಗಳನ್ನು ಪಡೆದಿದ್ದರು. ಚುನಾವಣೆಯಲ್ಲಿ ಗೆದ್ದ ಎಸ್. ಎಂ. ಕೃಷ್ಣ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.

Siddaramaiah: ನಾನು ಕಾಂಗ್ರೇಸ್‌ ಗೆ ಸೇರಬೇಕಾದ್ರೆ SM ಕೃಷ್ಣ ಅವರ ಸಲಹೆ ಕೇಳಿದ್ದೆ ಅವರು ಹೇಳಿದ್ರು.! #smkrishna

ಚಾಮರಾಜಪೇಟೆಯಲ್ಲಿ ಕಣಕ್ಕೆ: 2004ರಲ್ಲಿ ಎಸ್. ಎಂ. ಕೃಷ್ಣ ಚಾಮರಾಜಪೇಟೆ ಕ್ಷೇತ್ರದಿಂದ ವಿಧಾನಸಭೆ ಚುನಾವಣಾ ಕಣಕ್ಕಿಳಿದು ಗೆಲುವು ಸಾಧಿಸಿದ್ದರು. ಇದು ರಾಜ್ಯದಲ್ಲಿ ಅವರು ಎದುರಿಸಿದ ಕೊನೆಯ ಚುನಾವಣೆಯಾಗಿದೆ.

2004ರ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಅಂತಿಮ ಗಡುವು ಸಮೀಪಿಸುತ್ತಿತ್ತು. ಆದರೆ ಚಾಮರಾಜಪೇಟೆಯ ಕಾಂಗ್ರೆಸ್ ಅಭ್ಯರ್ಥಿ ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿತ್ತು. ಎಸ್‌. ಎಂ. ಕೃಷ್ಣ ಸಾತನೂರು ಅಥವ ಶ್ರೀನಿವಾಸಪುರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಅಂದಾಜಿಸಲಾಗಿತ್ತು. ಆದರೆ ಅವರು ಚಾಮರಾಜಪೇಟೆಯನ್ನು ಆಯ್ಕೆ ಮಾಡಿಕೊಂಡರು.

ಈ ಕುರಿತು ರಾಜ್ಯದ ಕಾಂಗ್ರೆಸ್ ನಾಯಕರು ಬಿಡಿ, ಸ್ವತಃ ಕೆಪಿಸಿಸಿ ಅಧ್ಯಕ್ಷರಾಗಿದ್ದ ಜನಾರ್ದನ ಪೂಜಾರಿ ಅವರಿಗೆ ಸಹ ಸುಳಿವು ಇರಲಿಲ್ಲ. ಎಸ್. ಎಂ. ಕೃಷ್ಣ ತೀರ್ಮಾನಕ್ಕೆ ಹೈಕಮಾಂಡ್ ನಾಯಕರು ಹಸಿರು ನಿಶಾನೆ ತೋರಿಸಿದರು.

ಬುಧವಾರ 12.30 ರಿಂದ 1.30ರ ನಡುವಿನ ರಾಹುಕಾಲದಲ್ಲಿ ಚಾಮರಾಪೇಟೆಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಸ್. ಎಂ. ಕೃಷ್ಣ ನಾಮಪತ್ರ ಸಲ್ಲಿಕೆ ಮಾಡಿದರು. ಅಲ್ಲಿಯ ತನಕ ಕ್ಷೇತ್ರಕ್ಕೆ ಆರ್. ವಿ. ದೇವರಾಜ್ ಕಾಂಗ್ರೆಸ್ ಅಭ್ಯರ್ಥಿ ಎಂದು ಅಂದಾಜಿಸಲಾಗಿತ್ತು.

ಎಸ್. ಎಂ. ಕೃಷ್ಣ ವಿರುದ್ಧ ಜೆಡಿಎಸ್‌ನಿಂದ ನಟ ಅನಂತ್‌ ನಾಗ್ ಕಣಕ್ಕಿಳಿದರು. ಬಿಜೆಪಿ ಪ್ರಮೀಳಾ ನೇಸರ್ಗಿ ಬದಲು ಎಂಎಲ್‌ಸಿಯಾಗಿದ್ದ ಮುಖ್ಯಮಂತ್ರಿ ಚಂದ್ರು ಅವರನ್ನು ಅಭ್ಯರ್ಥಿಯಾಗಿ ಮಾಡಿತು. ಚುನಾವಣೆ ರಾಜ್ಯದ ಗಮನ ಸೆಳೆದಿತ್ತು.

ಚುನಾವಣೆಯಲ್ಲಿ ಎಸ್. ಎಂ. ಕೃಷ್ಣ 27,695 ಮತಗಳನ್ನು ಪಡೆದು ಗೆಲುವು ಸಾಧಿಸಿದರು. ಬಿಜೆಪಿಯ ಮುಖ್ಯಮಂತ್ರಿ ಚಂದ್ರು 14,010 ಮತಗ, ಜೆಡಿಎಸ್‌ನ ಅನಂತ್‌ ನಾಗ್‌ 5,052 ಮತಗಳನ್ನು ಪಡೆದು ಸೋಲು ಕಂಡರು. ಆದರೆ ಶಾಸಕ ಸ್ಥಾನದ ಅವಧಿಯನ್ನು ಎಸ್. ಎಂ. ಕೃಷ್ಣ ಪೂರ್ಣಗೊಳಿಸಲಿಲ್ಲ.

1962- ವಿಧಾನಸಭೆಗೆ ಮೊದಲ ಬಾರಿ ಆಯ್ಕೆ.

1965- ಭಾರತದ ಪ್ರತಿನಿಧಿಯಾಗಿ ಕಾಮನ್​ವಲ್ತ್ ಒಕ್ಕೂಟದಲ್ಲಿ ಭಾಗಿ.

1968- ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸಂಸದರಾಗಿ ಆಯ್ಕೆ.

1968- ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸಂಸದರಾಗಿ ಆಯ್ಕೆ.

1971- ಮಂಡ್ಯ ಕ್ಷೇತ್ರದಿಂದಲೇ ಮರು ಆಯ್ಕೆಯಾದ ಎಸ್.ಎಂ.ಕೃಷ್ಣ.

1972- ವಿಧಾನಪರಿಷತ್​ ಸದಸ್ಯರಾಗಿ ಎಸ್.ಎಂ.ಕೃಷ್ಣ ಆಯ್ಕೆ.

1977- ಕರ್ನಾಟಕದ ವಿಧಾನ ಪರಿಷತ್ತಿಗೆ ಚುನಾಯಿತರಾದ ಎಸ್​.ಎಂ.ಕೃಷ್ಣ.

1983- ಉದ್ಯಮ ಖಾತೆ ಸಚಿವರಾಗಿ ಎಸ್.ಎಂ.ಕೃಷ್ಣ ಆಯ್ಕೆ.

1984 – ವಿತ್ತ ಖಾತೆಯ ಸಚಿವರಾಗಿದ್ದ ಎಸ್.ಎಂ.ಕೃಷ್ಣ.

1989- 1992ರವರೆಗೆ ವಿಧಾನಸಭೆಯ ಸ್ಪೀಕರ್ .

1992 – 1994ರ ವರೆಗೆ ಕರ್ನಾಟಕದ ಡಿಸಿಎಂ.

1996- ರಾಜ್ಯಸಭೆಗೆ ನೇಮಕಗೊಂಡ ಎಸ್.ಎಂ.ಕೃಷ್ಣ.

1999 -ಕರ್ನಾಟಕದ 16ನೇ ಮುಖ್ಯಮಂತ್ರಿಯಾಗಿ ಸೇವೆ.

1999- ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ.

1999-2004 ರವರೆಗೆ ಕರ್ನಾಟಕದ ಮುಖ್ಯಮಂತ್ರಿ.

2004- 2008ರವರೆಗೆ ಮಹಾರಾಷ್ಟ್ರ ರಾಜ್ಯಪಾಲರಾಗಿ ಆಯ್ಕೆ.

2008-2014ರವರೆಗೆ ಕರ್ನಾಟಕದ ರಾಜ್ಯಸಭಾ ಸದಸ್ಯರು.

2009 – 2012ರವರೆಗೆ ವಿದೇಶಾಂಗ ಸಚಿವರಾಗಿ ಕಾರ್ಯ.

2017ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆ.

2023ರಲ್ಲಿ ರಾಜಕೀಯ ನಿವೃತ್ತಿ ಘೋಷಿಸಿದ್ದ ಎಸ್ ಎಂ ಕೆ

Tags: 16th Chief MinisterBangaloreBangalore an IT-BT hub.congressDecember 1989Karnataka Legislative AssemblyMaharaja CollegeMysoreSM Krishna Death
Previous Post

ಶರಣ್ ಅಭಿನಯದ “ಛೂಮಂತರ್” ಜನವರಿ 10ರಂದು ಬಿಡುಗಡೆ..!!

Next Post

ಸೋನು ಕಕ್ಕರ್ ಕಂಠಸಿರಿಯಲ್ಲಿ “ಫುಲ್ ಮೀಲ್ಸ್” ಹಾಡು .

Related Posts

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್
Top Story

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

by ಪ್ರತಿಧ್ವನಿ
February 7, 2026
0

ಹುಬ್ಬಳ್ಳಿ, ಫೆಬ್ರುವರಿ 7: ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಶಂಕುಸ್ಥಾಪನೆ ಹಾಗೂ ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನಾ ಮತ್ತು ಭೂಮಿಪೂಜಾ ಸಮಾರಂಭ ನಾಳೆ (8th...

Read moreDetails
ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

February 7, 2026
Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

February 7, 2026
BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

February 7, 2026
ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

February 7, 2026
Next Post

ಸೋನು ಕಕ್ಕರ್ ಕಂಠಸಿರಿಯಲ್ಲಿ "ಫುಲ್ ಮೀಲ್ಸ್" ಹಾಡು .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada