ಬೆಂಗಳೂರು: ಕೆಪಿಸಿಸಿಯ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲ ಅವರನ್ನು ನೇಮಕ ಮಾಡಲಾಗಿದೆ.
ಗುರುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಡಿ.ಕೆ ಶಿವಕುಮಾರ್, ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಕನ್ನಡ ನಾಡಿನ ಜನಮೆಚ್ಚಿನ ಕಲಾವಿದ ಸಾಧು ಕೋಕಿಲ ಅವರಿಗೆ ಹಾರ್ದಿಕ ಶುಭಾಷಯಗಳನ್ನು ಕೋರುತ್ತೇವೆ. ತಮ್ಮ ಕಲಾ ಸೇವೆಯೊಂದಿಗೆ ಜನ ಸೇವೆಯೂ ಯಶಸ್ವಿಯಾಗಿ ಮುಂದುವರೆಯಲಿ ಎಂದು ಆಶಿಸಿದ್ದಾರೆ.
ಸಾಧುಕೋಕಿಲ ಅವರು ಹಲವು ದಿನಗಳಿಂದ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದರು. ಮೇಕೆದಾಟು ಪಾದಯಾತ್ರೆಯಲ್ಲಿಯೂ ಅವರು ಕಾಣಿಸಿಕೊಂಡಿದ್ದರು.