ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿರುವ ಶಿವಸೇನೆ ವಕ್ತಾರ ಸಂಜಯ್ ರಾವುತ್ ಜಾರಿ ನಿರ್ದೇಶನಾಲಯದ ಎದುರು ಶುಕ್ರವಾರ ಮಧ್ಯಾಹ್ನ ಹಾಜರಾಗುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾವುತ್ ನಾನು ಇಂದು ಮಧ್ಯಹ್ನ ವಿಚಾರಣೆಗೆ ಹಾಜರಾಗಲಿದ್ದೇನೆ. ನನ್ನಗೆ ನೀಡಿರುವ ಸಮನ್ಸ್ ಅನ್ನು ಗೌರವಿಸಿ ತನಿಖಾ ಸಂಸ್ಥೆಗಳಿಗೆ ಸಹಕರಿಸುವುದು ನನ್ನ ಕರ್ತವ್ಯವಾಗಿದೆ. ದಯವಿಟ್ಟು ಶಿವಸೇನೆ ಕಾರ್ಯಕರ್ತರು ಯಾರು ಕಚೇರಿ ಮುಂದೆ ಗುಂಪುಗೂಡಬಾರದು ಎಂದು ಟ್ವೀಟ್ ಮಾಡಿ ಮನವಿ ಮಾಡಿದ್ದಾರೆ.
ತಾವು ಮಾಡಿರುವ ಟ್ವೀಟ್ನಲ್ಲಿ ಶರದ್ ಪವಾರ್, ಉದ್ದವ್ ಠಾಕ್ರೆ, ಮಮತಾ ಬ್ಯಾನರ್ಜಿ ಹಾಗು ರಾಹುಲ್ ಗಾಂಧಿರನ್ನು ಟ್ಯಾಗ್ ಮಾಡಿದ್ದು ಚಿಂತಿಸಬೇಡಿ ಎಂದು ಉಲ್ಲೇಖಿಸಿದ್ದಾರೆ.
ಜೂನ್ 28ರಂದು ವಿಚಾರಣೆಗೆ ಹಾಜರಾಗುವಂತೆ ರಾವುತ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನೋಟಿಸ್ ನೀಡಿದ್ದರು. ಆದರೆ, ಮಹಾರಾಷ್ಟ್ರದಲ್ಲಿ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟಿನಿಂದಾಗಿ ರಾವುತ್ ಪರ ವಕೀಲರು ಕಾಲಾವಕಾಶ ನೀಡುವಂತೆ ಕೋರಿದ್ದರು.