• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Santhosh Lad: ಅಲೆಮಾರಿಗಳ ಸೂರಿಗೆ ಭರವಸೆ ನೀಡಿದ ಸಂತೋಷ ಲಾಡ್..!!

ಪ್ರತಿಧ್ವನಿ by ಪ್ರತಿಧ್ವನಿ
September 2, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಪೌರಾಡಳಿತ ಇಲಾಖೆಯಿಂದ ನಗರೋತ್ಥಾನ ಯೋಜನೆಯಡಿ ಕಲಘಟಗಿ ಪಟ್ಟಣ ಪಂಚಾಯತ ಕಟ್ಟಡ ಹಾಗೂ ಗ್ರಂಥಾಲಯ ನಿರ್ಮಾಣಕ್ಕೆ ನಗರದಲ್ಲಿ ಮೀಸಲಿರುವ ಜಾಗದಲ್ಲಿ ಅನಧಿಕೃತವಾಗಿ ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿದ್ದ ಅಲೆಮಾರಿ ಜನಾಂಗದವರಿಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು ಭರವಸೆ ನೀಡಿದರು.

ADVERTISEMENT

ಅಲೆಮಾರಿ ಜನಾಂಗದವರು ವಾಸಿಸುತ್ತಿದ್ದ ಸ್ಥಳ ಒತ್ತುವರಿಯನ್ನು ಪಟ್ಟಣ ಪಂಚಾಯತ ಅಧಿಕಾರಿಗಳು ಇತ್ತೀಚೆಗೆ ತೆರವುಗೊಳಿಸಿದ್ದರು. ಈ ಕುರಿತು ಸಂತ್ರಸ್ತರಿಂದ ಸಚಿವ ಸಂತೋಷ ಲಾಡ ಅವರು, ಕಲಘಟಗಿ ಪಟ್ಟಣದಲ್ಲಿ ಮನವಿ ಸ್ವೀಕರಿಸಿ, ಮಾತನಾಡಿದರು.

ಈಗಾಗಲೇ ಹಲವು ಬಾರಿ ಅಲೆಮಾರಿ ಕುಟುಂಬಗಳಿಗೆ ಶಾಶ್ವತ ಮನೆ ಹೊಂದಲು ಪಟ್ಟಣ ಪಂಚಾಯತಗೆ ಮನವಿ ಸಲ್ಲಿಸಲು ಸೂಚಿಸಲಾಗಿತ್ತು. ಅದರೆ ಯಾರು ಸಹ ಇಲ್ಲಿವರೆಗೆ ಮನೆ ಕೇಳಿ ಅರ್ಜಿ ಸಲ್ಲಿಸಿಲ್ಲ. ಪಟ್ಟಣದ ಖಾಲಿ ಇರುವ ಜಾಗೆಗಳಲ್ಲಿ ಈ ರೀತಿ ಗುಡಿಸಲು ಹಾಕಿ ಇರುವುದು ತಪ್ಪು. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ, ಸರಕಾರಿ ಕಟ್ಟಡಗಳಿಗೆ ಮೀಸಲಿಟ್ಟಿ ಸ್ಥಳ ಒತ್ತುವರಿ, ಅನಧಿಕೃತ ಬಳಕೆ ಮಾಡಿದರೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸುತ್ತಾರೆ ಎಂದರು.

ಅನಧಿಕೃತವಾಗಿ ಶೆಡ್‌ ನಿರ್ಮಿಸಿದ್ದ, ತೆರವುಗೊಳಿಸಿದ ಕುಟುಂಬಗಳಿಗೆ ಗಾಂಧಿನಗರ ಹಾಗೂ ಇತರ ಸ್ಥಳಗಳಲ್ಲಿ ತಾತ್ಕಾಲಿಕ ಆಶ್ರಯ ಕಲ್ಪಿಸಲಾಗಿದೆ. ಅಲೆಮಾರಿ ಜನಾಂಗದ ಬಾಧಿತ 13 ಕುಟುಂಬಗಳ ವಾಸಸ್ಥಳ ಹಾಗೂ ಇತರ ಅಧಿಕೃತ ದಾಖಲೆಗಳನ್ನು ಪಡೆದುಕೊಂಡು, ಸ್ಥಾನಿಕ ಚೌಕಸಿ ಮಾಡಿಕೊಂಡು ಪಟ್ಟಣ ಪಂಚಾಯತ ಆಡಳಿತಮಂಡಳಿ ಸಭೆಯಲ್ಲಿ ಅನುಮೋದಿಸಿ, ನಿವೇಶನ ನೀಡಲು ತಕ್ಷಣ ಕ್ರಮ ವಹಿಸಲು ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಅಲೆಮಾರಿ ಕುಟುಂಬಗಳು ಈಗ ತಾತ್ಕಾಲಿಕವಾಗಿ ನೆಲೆಸಿರುವ ಸ್ಥಳಗಳಿಂದ ಒಕ್ಕಲೆಬ್ಬಿಸದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು, ಅರ್ಹರಿಗೆ ಅದಷ್ಟು ಬೇಗ ನಿವೇಶನ ನೀಡಲು ಕ್ರಮವಹಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ತಹಸಿಲ್ದಾರ ಬಸವರಾಜ, ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಚಂದ್ರಶೇಖರ. ಬಿ. ಹಾಗೂ ಇತರರು ಇದ್ದರು

Tags: congress mla santhosh ladlabor minister santhosh ladMinister Santhosh Ladsanthosh ladsanthosh lad about modisanthosh lad about pm modisanthosh lad angry onsanthosh lad lashes out at pm modisanthosh lad latest newssanthosh lad latest statementsanthosh lad newssanthosh lad news todaysanthosh lad on bjpsanthosh lad questioned modisanthosh lad speechsanthosh lad statementsanthosh lad today newssanthosh lad vs narendra modiSantosh Ladsantosh lad agesantosh lad mlasantosh lad news
Previous Post

ಡಿಕೆಶಿ ಭೇಟಿಯಾದ ವೀರಪ್ಪ ಮೊಯ್ಲಿ – ಬಿಜೆಪಿ ಧರ್ಮ ರಾಜಕಾರಣದ ವಿರುದ್ಧ ಮಾಜಿ ಸಿಎಂ ಗರಂ ! 

Next Post

ನ್ಯಾ.ನಾಗಮೋಹನ್‍ದಾಸ್ ಅಥವಾ ಮಾಧುಸ್ವಾಮಿ ವರದಿಗೆ ಅನುಮೋದನೆ- ಗೋವಿಂದ ಕಾರಜೋಳ ಆಗ್ರಹ

Related Posts

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ
ರಾಜಕೀಯ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

by ಪ್ರತಿಧ್ವನಿ
March 3, 2026
0

ಫೋನ್ ಕದ್ದಾಲಿಕೆ ಆರೋಪದ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರಕಟಿಸಿದ...

Read moreDetails
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
Next Post

ನ್ಯಾ.ನಾಗಮೋಹನ್‍ದಾಸ್ ಅಥವಾ ಮಾಧುಸ್ವಾಮಿ ವರದಿಗೆ ಅನುಮೋದನೆ- ಗೋವಿಂದ ಕಾರಜೋಳ ಆಗ್ರಹ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada