Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಸಾರಾ ಅಬೂಬಕರ್‌ಗೆ ಸರ್ಕಾರ ಸರಿಯಾದ ಗೌರವ ಸಲ್ಲಿಸಿಲ್ಲ: ಚಿಂತಕರು, ಸಾಹಿತಿಗಳ ಕಳವಳ

ಪ್ರತಿಧ್ವನಿ

ಪ್ರತಿಧ್ವನಿ

January 13, 2023
Share on FacebookShare on Twitter

‌ಕನ್ನಡದ ಹೆಸರಾಂತ ಲೇಖಕಿ ನಾಡೋಜ ಸಾರಾ ಅಬೂಬಕರ್‌ ಅವರು ನಿಧನ ಹೊಂದಿದ ಸಂದರ್ಭದಲ್ಲಿ ಸರ್ಕಾರ ಅವರಿಗೆ ಸಲ್ಲಬೇಕಾದ ಗೌರವವನ್ನು ಸರಿಯಾಗಿ ಅರ್ಪಿಸಿಲ್ಲ ಎಂದು ಕನ್ನಡದ ಚಿಂತಕರು, ಸಾಹಿತಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ಕೋಲಾರದಲ್ಲಿ ನಿಲ್ಲಬೇಕೋ ಓಡಿ ಹೋಗಬೇಕೋ ನನಗೆ ಬಿಟಿದ್ದು, ಯಡುಯೂರಪ್ಪ ಯಾರು ಹೇಳೋಕೆ : Siddaramaiah | yediyurappa

Nalin Kumar Kateel..ಒಬ್ಬ ವಿದೂಷಕ : Siddaramaiah

Rameshjarkiholi Video ಬಿಡುಗಡೆ ಮಾಡಿದ್ದು D K Shivakumar ಅಂತೆ ..ನನಗೆ ಏನು ಗೊತ್ತಿಲ್ಲ : Siddaramaiah

ಸಾರಾ ಅಬೂಬಕರ್ ಅವರ ಕಡೆಗಣನೆ ಖಂಡನಾರ್ಹ ಎಂದು ಹೇಳಿರುವ ಚಿಂತಕರ ಗುಂಪು, “ಬರಹಗಾರ್ತಿ ಸಾರಾ ಅಬೂಬಕ್ಕರ್ ಅವರು ನಿಧನ ಹೊಂದಿದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸರಿಯಾದ ಗೌರವ ಸಲ್ಲಿಸದೆ ಕಡೆಗಣಿಸಿರುವುದು ಖೇದಕರ ಹಾಗೂ ಖಂಡನೀಯ.” ಎಂದು ಹೇಳಿದೆ.

“ಸಾರಾ ಅಬೂಬಕ್ಕರ್ ಪ್ರಖ್ಯಾತ ಕತೆಗಾರರು, ಬರಹಗಾರರು ಎಂಬಲ್ಲಿಗೆ ಅವರ ಪ್ರಾಮುಖ್ಯತೆ ಮುಗಿಯುವುದಿಲ್ಲ. ಕ‌ರ್ನಾಟಕದ ಮುಸ್ಲಿಂ ಸಮುದಾಯವು ಕನ್ನಡದಲ್ಲಿ ಸಾಹಿತ್ಯ ಕೃಷಿ ನಡೆಸುವುದೇ ಅಪರೂಪವಾಗಿದ್ದ ಕಾಲಘಟ್ಟದಲ್ಲಿ ಆ ಸಮುದಾಯದ ಹೆಣ್ಣು ಮಗಳು ಕನ್ನಡ ಸಾಹಿತ್ಯ ಲೋಕಕ್ಕೆ ಪ್ರವೇಶ ಪಡೆದದ್ದು, ಸಮಾಜದ ಕಂದಾಚಾರ, ತನ್ನದೇ ಸಮುದಾಯದ ಹೆಣ್ಣು ಮಕ್ಕಳ ಸಂಕಟಗಳನ್ನು ಕತೆಯಾಗಿಸಿದ್ದು ಸಣ್ಣ ಸಾಧನೆಯೇನೂ ಅಲ್ಲ. ಅಂತಹ ಬರವಣಿಗೆಗಳ ಕಾರಣಕ್ಕೆ ಅವರು ಎದುರಿಸಿದ ದಾಳಿ, ದಬ್ಬಾಳಿಕೆಗಳೂ ಸಣ್ಣವಲ್ಲ.

ಇಂತಹ ಗಣ್ಯ ಬರಹಗಾರ್ತಿ, ಲೇಖಕಿ ಅಗಲಿದಾಗ ಸಹಜವಾಗಿಯೇ ಅವರಿಗೆ ಸರ್ಕಾರಿ ಗೌರವ ಸಲ್ಲಬೇಕಿತ್ತು. ಸರ್ಕಾರದ, ಜಿಲ್ಲಾಡಳಿತದ ಪ್ರತಿನಿಧಿಗಳು ಅಧಿಕೃತ ಗೌರವ ಸಲ್ಲಿಸಲಿಲ್ಲ. ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ, ಶಾಸಕರು ನಗರದಲ್ಲೇ ಇದ್ದರೂ ಅಂತಿಮ ದರ್ಶನ ಪಡೆಯಲಿಲ್ಲ. ಇದು ನಮಗೆಲ್ಲಾ ಅಪಾರ ನೋವು ತಂದಿದೆ. ಈ ಕಡೆಗಣನೆ ಆಕಸ್ಮಿಕ ಆಗಿರಲಾರದು, ಸರ್ಕಾರವು ಪ್ರಗತಿಪರ, ಜಾತ್ಯತೀತ ವಿಚಾರಗಳು, ಸಾಹಿತಿ, ಬುದ್ಧಿಜೀವಿಗಳ ಕುರಿತು ಇತ್ತೀಚೆಗೆ ಹೊಂದಿರುವ ಅಸಹಿಷ್ಣು ಧೋರಣೆ, ಕೋಮುವಾದಿ ದೃಷ್ಟಿಕೋನದ ಭಾಗವಾದ ನಿಲುವೇ ಆಗಿದೆ ಎಂಬಂತೆ ತೋರುತ್ತದೆ. ಈ ಧೋರಣೆ ಆಘಾತಕಾರಿಯಾಗಿದ್ದು, ಕ‌ನ್ನಡ ನಾಡಿನ ವಿಶಾಲ, ಉದಾರ ಪ್ರಜ್ಞೆಗೆ ವಿರುದ್ಧವಾಗಿದೆ. ನಾವಿದ‌‌ನ್ನು ಬಲವಾಗಿ ಖಂಡಿಸುತ್ತೇವೆ.” ಎಂದು ಚಿಂತಕರು ಅಭಿಪ್ರಾಯಿಸಿದ್ದಾರೆ.

ಸರ್ಕಾರದ ಕ್ರಮವನ್ನು ಖಂಡಿಸಿದ ಚಿಂತಕರ ಪಟ್ಟಿ:

ಪ್ರೊ. ಪುರುಷೋತ್ತಮ ಬಿಳಿಮಲೆ, ಬಿ.ಎಂ.ರೋಹಿಣಿ, ಪ್ರೊ. ನರೇಂದ್ರ ನಾಯಕ್, ಟಿ.ಆರ್.ಭಟ್, ಚಂದ್ರಕಲಾ ನಂದಾವರ, ಪ್ರೊ. ಚಂದ್ರ ಪೂಜಾರಿ, ಪ್ರೊ. ಪಟ್ಟಾಭಿರಾಮ ಸೋಮಯಾಜಿ, ಎಂ.ದೇವದಾಸ್, ಬಿ.ಎಂ.ಹನೀಫ್, ವಾಸುದೇವ ಉಚ್ಚಿಲ, ಡಾ. ಬಿ.ಶ್ರೀನಿವಾಸ ಕಕ್ಕಿಲ್ಲಾಯ, ಗುಲಾಬಿ ಬಿಳಿಮಲೆ, ಪ್ರೊ. ಕೆ.ರಾಜೇಂದ್ರ ಉಡುಪ, ಮೋಹನ್ ಪಿ.ವಿ., ಐ.ಕೆ.ಬೊಳುವಾರು, ಯಶವಂತ ಮರೋಳಿ, ಮುನೀರ್ ಕಾಟಿಪಳ್ಳ, ಡಾ. ಕೃಷ್ಣಪ್ಪ ಕೊಂಚಾಡಿ, ಶ್ರೀನಿವಾಸ ಕಾರ್ಕಳ

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

Kumar Bangarappa: ಕಂದಾಯ ಇಲಾಖೆ, ನೌಕರ ಸಂಘದ ಅಧ್ಯಕ್ಷ ಷಡಾಕ್ಷರಿ ವಿರುದ್ಧ ಕುಮಾರ್ ಗರಂ
ರಾಜಕೀಯ

Kumar Bangarappa: ಕಂದಾಯ ಇಲಾಖೆ, ನೌಕರ ಸಂಘದ ಅಧ್ಯಕ್ಷ ಷಡಾಕ್ಷರಿ ವಿರುದ್ಧ ಕುಮಾರ್ ಗರಂ

by ಪ್ರತಿಧ್ವನಿ
January 25, 2023
Rameshjarkiholi Video ಬಿಡುಗಡೆ ಮಾಡಿದ್ದು D K Shivakumar ಅಂತೆ ..ನನಗೆ ಏನು ಗೊತ್ತಿಲ್ಲ : Siddaramaiah
ರಾಜಕೀಯ

Rameshjarkiholi Video ಬಿಡುಗಡೆ ಮಾಡಿದ್ದು D K Shivakumar ಅಂತೆ ..ನನಗೆ ಏನು ಗೊತ್ತಿಲ್ಲ : Siddaramaiah

by ಪ್ರತಿಧ್ವನಿ
January 31, 2023
ಕೋಲಾರದಲ್ಲಿ ನಿಲ್ಲಬೇಕೋ ಓಡಿ ಹೋಗಬೇಕೋ ನನಗೆ ಬಿಟಿದ್ದು, ಯಡುಯೂರಪ್ಪ ಯಾರು ಹೇಳೋಕೆ : Siddaramaiah | yediyurappa
ರಾಜಕೀಯ

ಕೋಲಾರದಲ್ಲಿ ನಿಲ್ಲಬೇಕೋ ಓಡಿ ಹೋಗಬೇಕೋ ನನಗೆ ಬಿಟಿದ್ದು, ಯಡುಯೂರಪ್ಪ ಯಾರು ಹೇಳೋಕೆ : Siddaramaiah | yediyurappa

by ಪ್ರತಿಧ್ವನಿ
January 31, 2023
RameshJarkiholi |ಡಿಕೆ ಶಿವಕುಮಾರ್ ನನ್ನತ್ರ ಇನ್ನೂ 20 ವಿಡಿಯೋಗಳು ಇದಾವೆ
ರಾಜಕೀಯ

RameshJarkiholi |ಡಿಕೆ ಶಿವಕುಮಾರ್ ನನ್ನತ್ರ ಇನ್ನೂ 20 ವಿಡಿಯೋಗಳು ಇದಾವೆ

by ಪ್ರತಿಧ್ವನಿ
January 30, 2023
kjgeorge|ನಾನು ಈ ಕ್ಷೇತ್ರದಲ್ಲಿ ಪಕ್ಷಾತೀತವಾಗಿ ಕೆಲಸ ಮಾಡುತ್ತಿದ್ದೇನೆ!
ರಾಜಕೀಯ

kjgeorge|ನಾನು ಈ ಕ್ಷೇತ್ರದಲ್ಲಿ ಪಕ್ಷಾತೀತವಾಗಿ ಕೆಲಸ ಮಾಡುತ್ತಿದ್ದೇನೆ!

by ಪ್ರತಿಧ್ವನಿ
January 27, 2023
Next Post
ಶಿವಮೊಗ್ಗ ಅಕ್ರಮ ಕಸಾಯಿಖಾನೆ 7 ಹಸುಗಳ ಬರ್ಬರ ಹತ್ಯೆ ..!

ಶಿವಮೊಗ್ಗ ಅಕ್ರಮ ಕಸಾಯಿಖಾನೆ 7 ಹಸುಗಳ ಬರ್ಬರ ಹತ್ಯೆ ..!

ಉಚಿತ ವಿದ್ಯುತ್ ಕಾಂಗ್ರೆಸ್‍ನ ಸುಳ್ಳು ಡಂಗುರ: ಸುನಿಲ್ ಕುಮಾರ್

ಉಚಿತ ವಿದ್ಯುತ್ ಕಾಂಗ್ರೆಸ್‍ನ ಸುಳ್ಳು ಡಂಗುರ: ಸುನಿಲ್ ಕುಮಾರ್

APPU | ಪುನೀತ್ ರಾಜಕುಮಾರ ಅವರು ಅದ್ಭುತ ಮಾತುಗಳು.

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist